Homeಮುಖಪುಟಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ ‘ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ’ ಉಂಟಾದ ಗಂಭೀರ ಹಿನ್ನಡೆ ಎಂದು ಕರೆದಿದೆ. ಅಲ್ಲದೆ, ಈ ಬೆಳವಣಿಗೆಯಿಂದ ಸ್ವಘೋಷಿತ ವಿಶ್ವಗುರು (ಮೋದಿ) ಸಂಪೂರ್ಣ ಬೆತ್ತಲಾಗಿದ್ದಾರೆ ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಮಾತನಾಡಿ, ಅಮೆರಿಕ ಮತ್ತು ಇಸ್ರೇಲ್ ಒಂದು ಕಡೆ ಹಾಗೂ ಇರಾನ್ ಇನ್ನೊಂದು ಕಡೆಯಾಗಿ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ, ಎರಡು ವಾರಗಳ ಕಾಲದ ಕದನ ವಿರಾಮವನ್ನು ಜಾಗತಿಕ ಸಮುದಾಯವು ಎಚ್ಚರಿಕೆಯಿಂದ ಸ್ವಾಗತಿಸಲಿದೆ ಎಂದು ತಿಳಿಸಿದ್ದಾರೆ.

ಇರಾನ್ ಆಡಳಿತದ ಉನ್ನತ ಮಟ್ಟದ ನಾಯಕರ ಉದ್ದೇಶಿತ ಹತ್ಯೆಗಳೊಂದಿಗೆ ಫೆಬ್ರವರಿ 28ರಂದು ಈ ಸಂಘರ್ಷ ಪ್ರಾರಂಭವಾಗಿತ್ತು. ಪ್ರಧಾನಿ ಮೋದಿಯವರು ಇಸ್ರೇಲ್‌ಗೆ ಕೈಗೊಂಡಿದ್ದ ಬಹು ಪ್ರಚಾರಿತ ಭೇಟಿ ಮುಗಿದ ಕೇವಲ ಎರಡು ದಿನಗಳ ನಂತರ ಇವು ಆರಂಭವಾಗಿದ್ದವು; ಈ ಭೇಟಿಯು ಭಾರತದ ಜಾಗತಿಕ ಘನತೆ ಮತ್ತು ಸ್ಥಾನಮಾನವನ್ನು ಕುಗ್ಗಿಸಿದೆ ಎಂದು ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

ಇಸ್ರೇಲ್‌ನ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಯವರು ಮೌನ ವಹಿಸಿರುವುದನ್ನು ಟೀಕಿಸಿ ರಮೇಶ್, ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಜನಾಂಗೀಯ ಹತ್ಯೆ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ (ವೆಸ್ಟ್ ಬ್ಯಾಂಕ್) ಅದರ ಆಕ್ರಮಣಕಾರಿ ವಿಸ್ತರಣಾ ನೀತಿಗಳ ಬಗ್ಗೆ ಪ್ರಧಾನಿ ಮೋದಿ ಏನನ್ನೂ ಹೇಳಿಲ್ಲ ಎಂದು ದೂರಿದ್ದಾರೆ.

ಕದನ ವಿರಾಮ ಏರ್ಪಡಿಸುವಲ್ಲಿ ಪಾಕಿಸ್ತಾನ ವಹಿಸಿರುವ ಪಾತ್ರವು ಮೋದಿಯವರ ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಯ ಸಾರ ಮತ್ತು ಶೈಲಿ ಎರಡಕ್ಕೂ ಬಿದ್ದಿರುವ ಗಂಭೀರ ಹೊಡೆತವಾಗಿದೆ ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ನಿರಂತರ ಬೆಂಬಲ ನೀಡುತ್ತಿರುವ ಪಾಕಿಸ್ತಾನವನ್ನು ಒಂಟಿಯಾಗಿಸುವ ಮತ್ತು ಅದು ಒಂದು ವಿಫಲ ರಾಷ್ಟ್ರ ಎಂದು ಜಗತ್ತಿಗೆ ಮನವರಿಕೆ ಮಾಡುವ ನೀತಿಯು ಸ್ಪಷ್ಟವಾಗಿ ಯಶಸ್ವಿಯಾಗಿಲ್ಲ. ಮುಂಬೈ ಭಯೋತ್ಪಾದನಾ ದಾಳಿಯ ನಂತರ ಮನಮೋಹನ್ ಸಿಂಗ್ ಅವರು ಸಾಧಿಸಿದ ಯಶಸ್ಸಿನಂತೆ, ಈಗಿನ ಪ್ರಯತ್ನಗಳು ಫಲ ನೀಡಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಪೂರ್ಣವಾಗಿ ವಿದೇಶಿ ದಾನಿಗಳ ನೆರವು ಮತ್ತು ಔದಾರ್ಯದ ಮೇಲೆ ಅವಲಂಬಿತವಾಗಿರುವ ದಿವಾಳಿಯಾದ ಆರ್ಥಿಕತೆ ಹಾಗೂ ಹಲವು ರೀತಿಯಲ್ಲಿ ಜರ್ಜರಿತವಾಗಿರುವ ದೇಶವೊಂದು (ಪಾಕಿಸ್ತಾನ) ಇಂತಹ ಮಹತ್ವದ ಪಾತ್ರ ವಹಿಸಲು ಸಾಧ್ಯವಾಗಿದೆ ಎಂದರೆ, ಅದು ಮೋದಿಯವರ ರಾಜತಾಂತ್ರಿಕ ಕಾರ್ಯತಂತ್ರ ಮತ್ತು ಅವರು ಕಟ್ಟಿಕೊಟ್ಟಿದ್ದ ನಿರೂಪಣೆಗಳನ್ನು (ನರೇಟಿವ್) ಪ್ರಶ್ನಿಸುವಂತೆ ಮಾಡಿದೆ ಜೈರಾಮ್ ರಮೇಶ್ ಹೇಳಿದ್ದಾರೆ.

ಆಪರೇಷನ್ ಸಿಂದೂರ್ ಅನ್ನು ಮೇ 10, 2025 ರಂದು ಇದ್ದಕ್ಕಿದ್ದಂತೆ ಮತ್ತು ಅನಿರೀಕ್ಷಿತವಾಗಿ ಏಕೆ ನಿಲ್ಲಿಸಲಾಯಿತು ಎಂಬುವುದನ್ನು ಮೋದಿ ಅಥವಾ ಅವರ ತಂಡ ಎಂದಿಗೂ ವಿವರಿಸಿಲ್ಲ. ಇದರ ಮೊದಲ ಘೋಷಣೆಯು ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಿಂದ ಬಂದಿತ್ತು ಮತ್ತು ಅಂದಿನಿಂದ ಅಮೆರಿಕ ಅಧ್ಯಕ್ಷರು ಸುಮಾರು ನೂರು ಬಾರಿ ಇದರ ಕೀರ್ತಿಯನ್ನು ತಾವೇ ಪಡೆದುಕೊಂಡಿದ್ದಾರೆ ಎಂದು ರಮೇಶ್ ಪುನರುಚ್ಚರಿಸಿದ್ದಾರೆ.

ಎಲ್ಲೆಡೆ ನಿಟ್ಟುಸಿರು ಬಿಡುವಂತಹ ನೆಮ್ಮದಿಯ ವಾತಾವರಣ ಗೋಚರಿಸುತ್ತಿದೆ. ವಿದೇಶಾಂಗ ಸಚಿವರು (ಎಸ್. ಜೈಶಂಕರ್) ಪಾಕಿಸ್ತಾನವನ್ನು ಒಬ್ಬ ‘ದಳ್ಳಾಳಿ’ ಎಂದು ತಳ್ಳಿಹಾಕಿದ್ದರು. ಆದರೆ, ಈಗ ಸ್ವಯಂ ಘೋಷಿತ ವಿಶ್ವಗುರು ಸಂಪೂರ್ಣವಾಗಿ ಅನಾವರಣಗೊಂಡಿದ್ದಾರೆ ಮತ್ತು ಅವರ 56 ಇಂಚಿನ ಎದೆ ಅಕ್ಷರಶಃ ಕುಗ್ಗಿ ಹೋಗಿದೆ ಎಂದು ರಮೇಶ್ ಟೀಕಿಸಿದ್ದಾರೆ.

ಪ್ರಧಾನಮಂತ್ರಿಯವರ ಮೌನವು ಅವರ ದೌರ್ಬಲ್ಯವನ್ನು ಪ್ರತಿಬಿಂಬಿಸುತ್ತದೆ. ಇಸ್ರೇಲ್‌ನ ಆಕ್ರಮಣಕಾರಿ ಧೋರಣೆಯ ಬಗ್ಗೆ ಮಾತ್ರವಲ್ಲದೆ, ವೈಟ್ ಹೌಸ್‌ನಲ್ಲಿರುವ (ಅಮೆರಿಕ ಅಧ್ಯಕ್ಷರು) ಅವರ ಪರಮಾಪ್ತ ಸ್ನೇಹಿತ ಬಳಸುತ್ತಿರುವ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲದ ಮತ್ತು ಅವಮಾನಕರ ಭಾಷೆಯ ಬಗ್ಗೆಯೂ ಅವರು ಮೌನವಾಗಿರುವುದು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ ಎಂದು ಹರಿಹಾಯ್ದಿದ್ದಾರೆ.








ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...