Homeಮುಖಪುಟಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ ‘ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ’ ಉಂಟಾದ ಗಂಭೀರ ಹಿನ್ನಡೆ ಎಂದು ಕರೆದಿದೆ. ಅಲ್ಲದೆ, ಈ ಬೆಳವಣಿಗೆಯಿಂದ ಸ್ವಘೋಷಿತ ವಿಶ್ವಗುರು (ಮೋದಿ) ಸಂಪೂರ್ಣ ಬೆತ್ತಲಾಗಿದ್ದಾರೆ ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಮಾತನಾಡಿ, ಅಮೆರಿಕ ಮತ್ತು ಇಸ್ರೇಲ್ ಒಂದು ಕಡೆ ಹಾಗೂ ಇರಾನ್ ಇನ್ನೊಂದು ಕಡೆಯಾಗಿ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ, ಎರಡು ವಾರಗಳ ಕಾಲದ ಕದನ ವಿರಾಮವನ್ನು ಜಾಗತಿಕ ಸಮುದಾಯವು ಎಚ್ಚರಿಕೆಯಿಂದ ಸ್ವಾಗತಿಸಲಿದೆ ಎಂದು ತಿಳಿಸಿದ್ದಾರೆ.

ಇರಾನ್ ಆಡಳಿತದ ಉನ್ನತ ಮಟ್ಟದ ನಾಯಕರ ಉದ್ದೇಶಿತ ಹತ್ಯೆಗಳೊಂದಿಗೆ ಫೆಬ್ರವರಿ 28ರಂದು ಈ ಸಂಘರ್ಷ ಪ್ರಾರಂಭವಾಗಿತ್ತು. ಪ್ರಧಾನಿ ಮೋದಿಯವರು ಇಸ್ರೇಲ್‌ಗೆ ಕೈಗೊಂಡಿದ್ದ ಬಹು ಪ್ರಚಾರಿತ ಭೇಟಿ ಮುಗಿದ ಕೇವಲ ಎರಡು ದಿನಗಳ ನಂತರ ಇವು ಆರಂಭವಾಗಿದ್ದವು; ಈ ಭೇಟಿಯು ಭಾರತದ ಜಾಗತಿಕ ಘನತೆ ಮತ್ತು ಸ್ಥಾನಮಾನವನ್ನು ಕುಗ್ಗಿಸಿದೆ ಎಂದು ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

ಇಸ್ರೇಲ್‌ನ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಯವರು ಮೌನ ವಹಿಸಿರುವುದನ್ನು ಟೀಕಿಸಿ ರಮೇಶ್, ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಜನಾಂಗೀಯ ಹತ್ಯೆ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ (ವೆಸ್ಟ್ ಬ್ಯಾಂಕ್) ಅದರ ಆಕ್ರಮಣಕಾರಿ ವಿಸ್ತರಣಾ ನೀತಿಗಳ ಬಗ್ಗೆ ಪ್ರಧಾನಿ ಮೋದಿ ಏನನ್ನೂ ಹೇಳಿಲ್ಲ ಎಂದು ದೂರಿದ್ದಾರೆ.

ಕದನ ವಿರಾಮ ಏರ್ಪಡಿಸುವಲ್ಲಿ ಪಾಕಿಸ್ತಾನ ವಹಿಸಿರುವ ಪಾತ್ರವು ಮೋದಿಯವರ ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಯ ಸಾರ ಮತ್ತು ಶೈಲಿ ಎರಡಕ್ಕೂ ಬಿದ್ದಿರುವ ಗಂಭೀರ ಹೊಡೆತವಾಗಿದೆ ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ನಿರಂತರ ಬೆಂಬಲ ನೀಡುತ್ತಿರುವ ಪಾಕಿಸ್ತಾನವನ್ನು ಒಂಟಿಯಾಗಿಸುವ ಮತ್ತು ಅದು ಒಂದು ವಿಫಲ ರಾಷ್ಟ್ರ ಎಂದು ಜಗತ್ತಿಗೆ ಮನವರಿಕೆ ಮಾಡುವ ನೀತಿಯು ಸ್ಪಷ್ಟವಾಗಿ ಯಶಸ್ವಿಯಾಗಿಲ್ಲ. ಮುಂಬೈ ಭಯೋತ್ಪಾದನಾ ದಾಳಿಯ ನಂತರ ಮನಮೋಹನ್ ಸಿಂಗ್ ಅವರು ಸಾಧಿಸಿದ ಯಶಸ್ಸಿನಂತೆ, ಈಗಿನ ಪ್ರಯತ್ನಗಳು ಫಲ ನೀಡಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಪೂರ್ಣವಾಗಿ ವಿದೇಶಿ ದಾನಿಗಳ ನೆರವು ಮತ್ತು ಔದಾರ್ಯದ ಮೇಲೆ ಅವಲಂಬಿತವಾಗಿರುವ ದಿವಾಳಿಯಾದ ಆರ್ಥಿಕತೆ ಹಾಗೂ ಹಲವು ರೀತಿಯಲ್ಲಿ ಜರ್ಜರಿತವಾಗಿರುವ ದೇಶವೊಂದು (ಪಾಕಿಸ್ತಾನ) ಇಂತಹ ಮಹತ್ವದ ಪಾತ್ರ ವಹಿಸಲು ಸಾಧ್ಯವಾಗಿದೆ ಎಂದರೆ, ಅದು ಮೋದಿಯವರ ರಾಜತಾಂತ್ರಿಕ ಕಾರ್ಯತಂತ್ರ ಮತ್ತು ಅವರು ಕಟ್ಟಿಕೊಟ್ಟಿದ್ದ ನಿರೂಪಣೆಗಳನ್ನು (ನರೇಟಿವ್) ಪ್ರಶ್ನಿಸುವಂತೆ ಮಾಡಿದೆ ಜೈರಾಮ್ ರಮೇಶ್ ಹೇಳಿದ್ದಾರೆ.

ಆಪರೇಷನ್ ಸಿಂದೂರ್ ಅನ್ನು ಮೇ 10, 2025 ರಂದು ಇದ್ದಕ್ಕಿದ್ದಂತೆ ಮತ್ತು ಅನಿರೀಕ್ಷಿತವಾಗಿ ಏಕೆ ನಿಲ್ಲಿಸಲಾಯಿತು ಎಂಬುವುದನ್ನು ಮೋದಿ ಅಥವಾ ಅವರ ತಂಡ ಎಂದಿಗೂ ವಿವರಿಸಿಲ್ಲ. ಇದರ ಮೊದಲ ಘೋಷಣೆಯು ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಿಂದ ಬಂದಿತ್ತು ಮತ್ತು ಅಂದಿನಿಂದ ಅಮೆರಿಕ ಅಧ್ಯಕ್ಷರು ಸುಮಾರು ನೂರು ಬಾರಿ ಇದರ ಕೀರ್ತಿಯನ್ನು ತಾವೇ ಪಡೆದುಕೊಂಡಿದ್ದಾರೆ ಎಂದು ರಮೇಶ್ ಪುನರುಚ್ಚರಿಸಿದ್ದಾರೆ.

ಎಲ್ಲೆಡೆ ನಿಟ್ಟುಸಿರು ಬಿಡುವಂತಹ ನೆಮ್ಮದಿಯ ವಾತಾವರಣ ಗೋಚರಿಸುತ್ತಿದೆ. ವಿದೇಶಾಂಗ ಸಚಿವರು (ಎಸ್. ಜೈಶಂಕರ್) ಪಾಕಿಸ್ತಾನವನ್ನು ಒಬ್ಬ ‘ದಳ್ಳಾಳಿ’ ಎಂದು ತಳ್ಳಿಹಾಕಿದ್ದರು. ಆದರೆ, ಈಗ ಸ್ವಯಂ ಘೋಷಿತ ವಿಶ್ವಗುರು ಸಂಪೂರ್ಣವಾಗಿ ಅನಾವರಣಗೊಂಡಿದ್ದಾರೆ ಮತ್ತು ಅವರ 56 ಇಂಚಿನ ಎದೆ ಅಕ್ಷರಶಃ ಕುಗ್ಗಿ ಹೋಗಿದೆ ಎಂದು ರಮೇಶ್ ಟೀಕಿಸಿದ್ದಾರೆ.

ಪ್ರಧಾನಮಂತ್ರಿಯವರ ಮೌನವು ಅವರ ದೌರ್ಬಲ್ಯವನ್ನು ಪ್ರತಿಬಿಂಬಿಸುತ್ತದೆ. ಇಸ್ರೇಲ್‌ನ ಆಕ್ರಮಣಕಾರಿ ಧೋರಣೆಯ ಬಗ್ಗೆ ಮಾತ್ರವಲ್ಲದೆ, ವೈಟ್ ಹೌಸ್‌ನಲ್ಲಿರುವ (ಅಮೆರಿಕ ಅಧ್ಯಕ್ಷರು) ಅವರ ಪರಮಾಪ್ತ ಸ್ನೇಹಿತ ಬಳಸುತ್ತಿರುವ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲದ ಮತ್ತು ಅವಮಾನಕರ ಭಾಷೆಯ ಬಗ್ಗೆಯೂ ಅವರು ಮೌನವಾಗಿರುವುದು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ ಎಂದು ಹರಿಹಾಯ್ದಿದ್ದಾರೆ.








ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...