Homeಮುಖಪುಟಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ ‘ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ’ ಉಂಟಾದ ಗಂಭೀರ ಹಿನ್ನಡೆ ಎಂದು ಕರೆದಿದೆ. ಅಲ್ಲದೆ, ಈ ಬೆಳವಣಿಗೆಯಿಂದ ಸ್ವಘೋಷಿತ ವಿಶ್ವಗುರು (ಮೋದಿ) ಸಂಪೂರ್ಣ ಬೆತ್ತಲಾಗಿದ್ದಾರೆ ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಮಾತನಾಡಿ, ಅಮೆರಿಕ ಮತ್ತು ಇಸ್ರೇಲ್ ಒಂದು ಕಡೆ ಹಾಗೂ ಇರಾನ್ ಇನ್ನೊಂದು ಕಡೆಯಾಗಿ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ, ಎರಡು ವಾರಗಳ ಕಾಲದ ಕದನ ವಿರಾಮವನ್ನು ಜಾಗತಿಕ ಸಮುದಾಯವು ಎಚ್ಚರಿಕೆಯಿಂದ ಸ್ವಾಗತಿಸಲಿದೆ ಎಂದು ತಿಳಿಸಿದ್ದಾರೆ.

ಇರಾನ್ ಆಡಳಿತದ ಉನ್ನತ ಮಟ್ಟದ ನಾಯಕರ ಉದ್ದೇಶಿತ ಹತ್ಯೆಗಳೊಂದಿಗೆ ಫೆಬ್ರವರಿ 28ರಂದು ಈ ಸಂಘರ್ಷ ಪ್ರಾರಂಭವಾಗಿತ್ತು. ಪ್ರಧಾನಿ ಮೋದಿಯವರು ಇಸ್ರೇಲ್‌ಗೆ ಕೈಗೊಂಡಿದ್ದ ಬಹು ಪ್ರಚಾರಿತ ಭೇಟಿ ಮುಗಿದ ಕೇವಲ ಎರಡು ದಿನಗಳ ನಂತರ ಇವು ಆರಂಭವಾಗಿದ್ದವು; ಈ ಭೇಟಿಯು ಭಾರತದ ಜಾಗತಿಕ ಘನತೆ ಮತ್ತು ಸ್ಥಾನಮಾನವನ್ನು ಕುಗ್ಗಿಸಿದೆ ಎಂದು ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

ಇಸ್ರೇಲ್‌ನ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಯವರು ಮೌನ ವಹಿಸಿರುವುದನ್ನು ಟೀಕಿಸಿ ರಮೇಶ್, ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಜನಾಂಗೀಯ ಹತ್ಯೆ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ (ವೆಸ್ಟ್ ಬ್ಯಾಂಕ್) ಅದರ ಆಕ್ರಮಣಕಾರಿ ವಿಸ್ತರಣಾ ನೀತಿಗಳ ಬಗ್ಗೆ ಪ್ರಧಾನಿ ಮೋದಿ ಏನನ್ನೂ ಹೇಳಿಲ್ಲ ಎಂದು ದೂರಿದ್ದಾರೆ.

ಕದನ ವಿರಾಮ ಏರ್ಪಡಿಸುವಲ್ಲಿ ಪಾಕಿಸ್ತಾನ ವಹಿಸಿರುವ ಪಾತ್ರವು ಮೋದಿಯವರ ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಯ ಸಾರ ಮತ್ತು ಶೈಲಿ ಎರಡಕ್ಕೂ ಬಿದ್ದಿರುವ ಗಂಭೀರ ಹೊಡೆತವಾಗಿದೆ ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ನಿರಂತರ ಬೆಂಬಲ ನೀಡುತ್ತಿರುವ ಪಾಕಿಸ್ತಾನವನ್ನು ಒಂಟಿಯಾಗಿಸುವ ಮತ್ತು ಅದು ಒಂದು ವಿಫಲ ರಾಷ್ಟ್ರ ಎಂದು ಜಗತ್ತಿಗೆ ಮನವರಿಕೆ ಮಾಡುವ ನೀತಿಯು ಸ್ಪಷ್ಟವಾಗಿ ಯಶಸ್ವಿಯಾಗಿಲ್ಲ. ಮುಂಬೈ ಭಯೋತ್ಪಾದನಾ ದಾಳಿಯ ನಂತರ ಮನಮೋಹನ್ ಸಿಂಗ್ ಅವರು ಸಾಧಿಸಿದ ಯಶಸ್ಸಿನಂತೆ, ಈಗಿನ ಪ್ರಯತ್ನಗಳು ಫಲ ನೀಡಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಪೂರ್ಣವಾಗಿ ವಿದೇಶಿ ದಾನಿಗಳ ನೆರವು ಮತ್ತು ಔದಾರ್ಯದ ಮೇಲೆ ಅವಲಂಬಿತವಾಗಿರುವ ದಿವಾಳಿಯಾದ ಆರ್ಥಿಕತೆ ಹಾಗೂ ಹಲವು ರೀತಿಯಲ್ಲಿ ಜರ್ಜರಿತವಾಗಿರುವ ದೇಶವೊಂದು (ಪಾಕಿಸ್ತಾನ) ಇಂತಹ ಮಹತ್ವದ ಪಾತ್ರ ವಹಿಸಲು ಸಾಧ್ಯವಾಗಿದೆ ಎಂದರೆ, ಅದು ಮೋದಿಯವರ ರಾಜತಾಂತ್ರಿಕ ಕಾರ್ಯತಂತ್ರ ಮತ್ತು ಅವರು ಕಟ್ಟಿಕೊಟ್ಟಿದ್ದ ನಿರೂಪಣೆಗಳನ್ನು (ನರೇಟಿವ್) ಪ್ರಶ್ನಿಸುವಂತೆ ಮಾಡಿದೆ ಜೈರಾಮ್ ರಮೇಶ್ ಹೇಳಿದ್ದಾರೆ.

ಆಪರೇಷನ್ ಸಿಂದೂರ್ ಅನ್ನು ಮೇ 10, 2025 ರಂದು ಇದ್ದಕ್ಕಿದ್ದಂತೆ ಮತ್ತು ಅನಿರೀಕ್ಷಿತವಾಗಿ ಏಕೆ ನಿಲ್ಲಿಸಲಾಯಿತು ಎಂಬುವುದನ್ನು ಮೋದಿ ಅಥವಾ ಅವರ ತಂಡ ಎಂದಿಗೂ ವಿವರಿಸಿಲ್ಲ. ಇದರ ಮೊದಲ ಘೋಷಣೆಯು ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಿಂದ ಬಂದಿತ್ತು ಮತ್ತು ಅಂದಿನಿಂದ ಅಮೆರಿಕ ಅಧ್ಯಕ್ಷರು ಸುಮಾರು ನೂರು ಬಾರಿ ಇದರ ಕೀರ್ತಿಯನ್ನು ತಾವೇ ಪಡೆದುಕೊಂಡಿದ್ದಾರೆ ಎಂದು ರಮೇಶ್ ಪುನರುಚ್ಚರಿಸಿದ್ದಾರೆ.

ಎಲ್ಲೆಡೆ ನಿಟ್ಟುಸಿರು ಬಿಡುವಂತಹ ನೆಮ್ಮದಿಯ ವಾತಾವರಣ ಗೋಚರಿಸುತ್ತಿದೆ. ವಿದೇಶಾಂಗ ಸಚಿವರು (ಎಸ್. ಜೈಶಂಕರ್) ಪಾಕಿಸ್ತಾನವನ್ನು ಒಬ್ಬ ‘ದಳ್ಳಾಳಿ’ ಎಂದು ತಳ್ಳಿಹಾಕಿದ್ದರು. ಆದರೆ, ಈಗ ಸ್ವಯಂ ಘೋಷಿತ ವಿಶ್ವಗುರು ಸಂಪೂರ್ಣವಾಗಿ ಅನಾವರಣಗೊಂಡಿದ್ದಾರೆ ಮತ್ತು ಅವರ 56 ಇಂಚಿನ ಎದೆ ಅಕ್ಷರಶಃ ಕುಗ್ಗಿ ಹೋಗಿದೆ ಎಂದು ರಮೇಶ್ ಟೀಕಿಸಿದ್ದಾರೆ.

ಪ್ರಧಾನಮಂತ್ರಿಯವರ ಮೌನವು ಅವರ ದೌರ್ಬಲ್ಯವನ್ನು ಪ್ರತಿಬಿಂಬಿಸುತ್ತದೆ. ಇಸ್ರೇಲ್‌ನ ಆಕ್ರಮಣಕಾರಿ ಧೋರಣೆಯ ಬಗ್ಗೆ ಮಾತ್ರವಲ್ಲದೆ, ವೈಟ್ ಹೌಸ್‌ನಲ್ಲಿರುವ (ಅಮೆರಿಕ ಅಧ್ಯಕ್ಷರು) ಅವರ ಪರಮಾಪ್ತ ಸ್ನೇಹಿತ ಬಳಸುತ್ತಿರುವ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲದ ಮತ್ತು ಅವಮಾನಕರ ಭಾಷೆಯ ಬಗ್ಗೆಯೂ ಅವರು ಮೌನವಾಗಿರುವುದು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ ಎಂದು ಹರಿಹಾಯ್ದಿದ್ದಾರೆ.








ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...