Homeಮುಖಪುಟಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ ‘ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ’ ಉಂಟಾದ ಗಂಭೀರ ಹಿನ್ನಡೆ ಎಂದು ಕರೆದಿದೆ. ಅಲ್ಲದೆ, ಈ ಬೆಳವಣಿಗೆಯಿಂದ ಸ್ವಘೋಷಿತ ವಿಶ್ವಗುರು (ಮೋದಿ) ಸಂಪೂರ್ಣ ಬೆತ್ತಲಾಗಿದ್ದಾರೆ ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಮಾತನಾಡಿ, ಅಮೆರಿಕ ಮತ್ತು ಇಸ್ರೇಲ್ ಒಂದು ಕಡೆ ಹಾಗೂ ಇರಾನ್ ಇನ್ನೊಂದು ಕಡೆಯಾಗಿ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ, ಎರಡು ವಾರಗಳ ಕಾಲದ ಕದನ ವಿರಾಮವನ್ನು ಜಾಗತಿಕ ಸಮುದಾಯವು ಎಚ್ಚರಿಕೆಯಿಂದ ಸ್ವಾಗತಿಸಲಿದೆ ಎಂದು ತಿಳಿಸಿದ್ದಾರೆ.

ಇರಾನ್ ಆಡಳಿತದ ಉನ್ನತ ಮಟ್ಟದ ನಾಯಕರ ಉದ್ದೇಶಿತ ಹತ್ಯೆಗಳೊಂದಿಗೆ ಫೆಬ್ರವರಿ 28ರಂದು ಈ ಸಂಘರ್ಷ ಪ್ರಾರಂಭವಾಗಿತ್ತು. ಪ್ರಧಾನಿ ಮೋದಿಯವರು ಇಸ್ರೇಲ್‌ಗೆ ಕೈಗೊಂಡಿದ್ದ ಬಹು ಪ್ರಚಾರಿತ ಭೇಟಿ ಮುಗಿದ ಕೇವಲ ಎರಡು ದಿನಗಳ ನಂತರ ಇವು ಆರಂಭವಾಗಿದ್ದವು; ಈ ಭೇಟಿಯು ಭಾರತದ ಜಾಗತಿಕ ಘನತೆ ಮತ್ತು ಸ್ಥಾನಮಾನವನ್ನು ಕುಗ್ಗಿಸಿದೆ ಎಂದು ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

ಇಸ್ರೇಲ್‌ನ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಯವರು ಮೌನ ವಹಿಸಿರುವುದನ್ನು ಟೀಕಿಸಿ ರಮೇಶ್, ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಜನಾಂಗೀಯ ಹತ್ಯೆ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ (ವೆಸ್ಟ್ ಬ್ಯಾಂಕ್) ಅದರ ಆಕ್ರಮಣಕಾರಿ ವಿಸ್ತರಣಾ ನೀತಿಗಳ ಬಗ್ಗೆ ಪ್ರಧಾನಿ ಮೋದಿ ಏನನ್ನೂ ಹೇಳಿಲ್ಲ ಎಂದು ದೂರಿದ್ದಾರೆ.

ಕದನ ವಿರಾಮ ಏರ್ಪಡಿಸುವಲ್ಲಿ ಪಾಕಿಸ್ತಾನ ವಹಿಸಿರುವ ಪಾತ್ರವು ಮೋದಿಯವರ ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಯ ಸಾರ ಮತ್ತು ಶೈಲಿ ಎರಡಕ್ಕೂ ಬಿದ್ದಿರುವ ಗಂಭೀರ ಹೊಡೆತವಾಗಿದೆ ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ನಿರಂತರ ಬೆಂಬಲ ನೀಡುತ್ತಿರುವ ಪಾಕಿಸ್ತಾನವನ್ನು ಒಂಟಿಯಾಗಿಸುವ ಮತ್ತು ಅದು ಒಂದು ವಿಫಲ ರಾಷ್ಟ್ರ ಎಂದು ಜಗತ್ತಿಗೆ ಮನವರಿಕೆ ಮಾಡುವ ನೀತಿಯು ಸ್ಪಷ್ಟವಾಗಿ ಯಶಸ್ವಿಯಾಗಿಲ್ಲ. ಮುಂಬೈ ಭಯೋತ್ಪಾದನಾ ದಾಳಿಯ ನಂತರ ಮನಮೋಹನ್ ಸಿಂಗ್ ಅವರು ಸಾಧಿಸಿದ ಯಶಸ್ಸಿನಂತೆ, ಈಗಿನ ಪ್ರಯತ್ನಗಳು ಫಲ ನೀಡಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಪೂರ್ಣವಾಗಿ ವಿದೇಶಿ ದಾನಿಗಳ ನೆರವು ಮತ್ತು ಔದಾರ್ಯದ ಮೇಲೆ ಅವಲಂಬಿತವಾಗಿರುವ ದಿವಾಳಿಯಾದ ಆರ್ಥಿಕತೆ ಹಾಗೂ ಹಲವು ರೀತಿಯಲ್ಲಿ ಜರ್ಜರಿತವಾಗಿರುವ ದೇಶವೊಂದು (ಪಾಕಿಸ್ತಾನ) ಇಂತಹ ಮಹತ್ವದ ಪಾತ್ರ ವಹಿಸಲು ಸಾಧ್ಯವಾಗಿದೆ ಎಂದರೆ, ಅದು ಮೋದಿಯವರ ರಾಜತಾಂತ್ರಿಕ ಕಾರ್ಯತಂತ್ರ ಮತ್ತು ಅವರು ಕಟ್ಟಿಕೊಟ್ಟಿದ್ದ ನಿರೂಪಣೆಗಳನ್ನು (ನರೇಟಿವ್) ಪ್ರಶ್ನಿಸುವಂತೆ ಮಾಡಿದೆ ಜೈರಾಮ್ ರಮೇಶ್ ಹೇಳಿದ್ದಾರೆ.

ಆಪರೇಷನ್ ಸಿಂದೂರ್ ಅನ್ನು ಮೇ 10, 2025 ರಂದು ಇದ್ದಕ್ಕಿದ್ದಂತೆ ಮತ್ತು ಅನಿರೀಕ್ಷಿತವಾಗಿ ಏಕೆ ನಿಲ್ಲಿಸಲಾಯಿತು ಎಂಬುವುದನ್ನು ಮೋದಿ ಅಥವಾ ಅವರ ತಂಡ ಎಂದಿಗೂ ವಿವರಿಸಿಲ್ಲ. ಇದರ ಮೊದಲ ಘೋಷಣೆಯು ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಿಂದ ಬಂದಿತ್ತು ಮತ್ತು ಅಂದಿನಿಂದ ಅಮೆರಿಕ ಅಧ್ಯಕ್ಷರು ಸುಮಾರು ನೂರು ಬಾರಿ ಇದರ ಕೀರ್ತಿಯನ್ನು ತಾವೇ ಪಡೆದುಕೊಂಡಿದ್ದಾರೆ ಎಂದು ರಮೇಶ್ ಪುನರುಚ್ಚರಿಸಿದ್ದಾರೆ.

ಎಲ್ಲೆಡೆ ನಿಟ್ಟುಸಿರು ಬಿಡುವಂತಹ ನೆಮ್ಮದಿಯ ವಾತಾವರಣ ಗೋಚರಿಸುತ್ತಿದೆ. ವಿದೇಶಾಂಗ ಸಚಿವರು (ಎಸ್. ಜೈಶಂಕರ್) ಪಾಕಿಸ್ತಾನವನ್ನು ಒಬ್ಬ ‘ದಳ್ಳಾಳಿ’ ಎಂದು ತಳ್ಳಿಹಾಕಿದ್ದರು. ಆದರೆ, ಈಗ ಸ್ವಯಂ ಘೋಷಿತ ವಿಶ್ವಗುರು ಸಂಪೂರ್ಣವಾಗಿ ಅನಾವರಣಗೊಂಡಿದ್ದಾರೆ ಮತ್ತು ಅವರ 56 ಇಂಚಿನ ಎದೆ ಅಕ್ಷರಶಃ ಕುಗ್ಗಿ ಹೋಗಿದೆ ಎಂದು ರಮೇಶ್ ಟೀಕಿಸಿದ್ದಾರೆ.

ಪ್ರಧಾನಮಂತ್ರಿಯವರ ಮೌನವು ಅವರ ದೌರ್ಬಲ್ಯವನ್ನು ಪ್ರತಿಬಿಂಬಿಸುತ್ತದೆ. ಇಸ್ರೇಲ್‌ನ ಆಕ್ರಮಣಕಾರಿ ಧೋರಣೆಯ ಬಗ್ಗೆ ಮಾತ್ರವಲ್ಲದೆ, ವೈಟ್ ಹೌಸ್‌ನಲ್ಲಿರುವ (ಅಮೆರಿಕ ಅಧ್ಯಕ್ಷರು) ಅವರ ಪರಮಾಪ್ತ ಸ್ನೇಹಿತ ಬಳಸುತ್ತಿರುವ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲದ ಮತ್ತು ಅವಮಾನಕರ ಭಾಷೆಯ ಬಗ್ಗೆಯೂ ಅವರು ಮೌನವಾಗಿರುವುದು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ ಎಂದು ಹರಿಹಾಯ್ದಿದ್ದಾರೆ.








ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....