Homeಮುಖಪುಟಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ ‘ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ’ ಉಂಟಾದ ಗಂಭೀರ ಹಿನ್ನಡೆ ಎಂದು ಕರೆದಿದೆ. ಅಲ್ಲದೆ, ಈ ಬೆಳವಣಿಗೆಯಿಂದ ಸ್ವಘೋಷಿತ ವಿಶ್ವಗುರು (ಮೋದಿ) ಸಂಪೂರ್ಣ ಬೆತ್ತಲಾಗಿದ್ದಾರೆ ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಮಾತನಾಡಿ, ಅಮೆರಿಕ ಮತ್ತು ಇಸ್ರೇಲ್ ಒಂದು ಕಡೆ ಹಾಗೂ ಇರಾನ್ ಇನ್ನೊಂದು ಕಡೆಯಾಗಿ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ, ಎರಡು ವಾರಗಳ ಕಾಲದ ಕದನ ವಿರಾಮವನ್ನು ಜಾಗತಿಕ ಸಮುದಾಯವು ಎಚ್ಚರಿಕೆಯಿಂದ ಸ್ವಾಗತಿಸಲಿದೆ ಎಂದು ತಿಳಿಸಿದ್ದಾರೆ.

ಇರಾನ್ ಆಡಳಿತದ ಉನ್ನತ ಮಟ್ಟದ ನಾಯಕರ ಉದ್ದೇಶಿತ ಹತ್ಯೆಗಳೊಂದಿಗೆ ಫೆಬ್ರವರಿ 28ರಂದು ಈ ಸಂಘರ್ಷ ಪ್ರಾರಂಭವಾಗಿತ್ತು. ಪ್ರಧಾನಿ ಮೋದಿಯವರು ಇಸ್ರೇಲ್‌ಗೆ ಕೈಗೊಂಡಿದ್ದ ಬಹು ಪ್ರಚಾರಿತ ಭೇಟಿ ಮುಗಿದ ಕೇವಲ ಎರಡು ದಿನಗಳ ನಂತರ ಇವು ಆರಂಭವಾಗಿದ್ದವು; ಈ ಭೇಟಿಯು ಭಾರತದ ಜಾಗತಿಕ ಘನತೆ ಮತ್ತು ಸ್ಥಾನಮಾನವನ್ನು ಕುಗ್ಗಿಸಿದೆ ಎಂದು ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದಾರೆ.

ಇಸ್ರೇಲ್‌ನ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಯವರು ಮೌನ ವಹಿಸಿರುವುದನ್ನು ಟೀಕಿಸಿ ರಮೇಶ್, ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಜನಾಂಗೀಯ ಹತ್ಯೆ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ (ವೆಸ್ಟ್ ಬ್ಯಾಂಕ್) ಅದರ ಆಕ್ರಮಣಕಾರಿ ವಿಸ್ತರಣಾ ನೀತಿಗಳ ಬಗ್ಗೆ ಪ್ರಧಾನಿ ಮೋದಿ ಏನನ್ನೂ ಹೇಳಿಲ್ಲ ಎಂದು ದೂರಿದ್ದಾರೆ.

ಕದನ ವಿರಾಮ ಏರ್ಪಡಿಸುವಲ್ಲಿ ಪಾಕಿಸ್ತಾನ ವಹಿಸಿರುವ ಪಾತ್ರವು ಮೋದಿಯವರ ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಯ ಸಾರ ಮತ್ತು ಶೈಲಿ ಎರಡಕ್ಕೂ ಬಿದ್ದಿರುವ ಗಂಭೀರ ಹೊಡೆತವಾಗಿದೆ ಎಂದು ಅವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ನಿರಂತರ ಬೆಂಬಲ ನೀಡುತ್ತಿರುವ ಪಾಕಿಸ್ತಾನವನ್ನು ಒಂಟಿಯಾಗಿಸುವ ಮತ್ತು ಅದು ಒಂದು ವಿಫಲ ರಾಷ್ಟ್ರ ಎಂದು ಜಗತ್ತಿಗೆ ಮನವರಿಕೆ ಮಾಡುವ ನೀತಿಯು ಸ್ಪಷ್ಟವಾಗಿ ಯಶಸ್ವಿಯಾಗಿಲ್ಲ. ಮುಂಬೈ ಭಯೋತ್ಪಾದನಾ ದಾಳಿಯ ನಂತರ ಮನಮೋಹನ್ ಸಿಂಗ್ ಅವರು ಸಾಧಿಸಿದ ಯಶಸ್ಸಿನಂತೆ, ಈಗಿನ ಪ್ರಯತ್ನಗಳು ಫಲ ನೀಡಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಪೂರ್ಣವಾಗಿ ವಿದೇಶಿ ದಾನಿಗಳ ನೆರವು ಮತ್ತು ಔದಾರ್ಯದ ಮೇಲೆ ಅವಲಂಬಿತವಾಗಿರುವ ದಿವಾಳಿಯಾದ ಆರ್ಥಿಕತೆ ಹಾಗೂ ಹಲವು ರೀತಿಯಲ್ಲಿ ಜರ್ಜರಿತವಾಗಿರುವ ದೇಶವೊಂದು (ಪಾಕಿಸ್ತಾನ) ಇಂತಹ ಮಹತ್ವದ ಪಾತ್ರ ವಹಿಸಲು ಸಾಧ್ಯವಾಗಿದೆ ಎಂದರೆ, ಅದು ಮೋದಿಯವರ ರಾಜತಾಂತ್ರಿಕ ಕಾರ್ಯತಂತ್ರ ಮತ್ತು ಅವರು ಕಟ್ಟಿಕೊಟ್ಟಿದ್ದ ನಿರೂಪಣೆಗಳನ್ನು (ನರೇಟಿವ್) ಪ್ರಶ್ನಿಸುವಂತೆ ಮಾಡಿದೆ ಜೈರಾಮ್ ರಮೇಶ್ ಹೇಳಿದ್ದಾರೆ.

ಆಪರೇಷನ್ ಸಿಂದೂರ್ ಅನ್ನು ಮೇ 10, 2025 ರಂದು ಇದ್ದಕ್ಕಿದ್ದಂತೆ ಮತ್ತು ಅನಿರೀಕ್ಷಿತವಾಗಿ ಏಕೆ ನಿಲ್ಲಿಸಲಾಯಿತು ಎಂಬುವುದನ್ನು ಮೋದಿ ಅಥವಾ ಅವರ ತಂಡ ಎಂದಿಗೂ ವಿವರಿಸಿಲ್ಲ. ಇದರ ಮೊದಲ ಘೋಷಣೆಯು ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಿಂದ ಬಂದಿತ್ತು ಮತ್ತು ಅಂದಿನಿಂದ ಅಮೆರಿಕ ಅಧ್ಯಕ್ಷರು ಸುಮಾರು ನೂರು ಬಾರಿ ಇದರ ಕೀರ್ತಿಯನ್ನು ತಾವೇ ಪಡೆದುಕೊಂಡಿದ್ದಾರೆ ಎಂದು ರಮೇಶ್ ಪುನರುಚ್ಚರಿಸಿದ್ದಾರೆ.

ಎಲ್ಲೆಡೆ ನಿಟ್ಟುಸಿರು ಬಿಡುವಂತಹ ನೆಮ್ಮದಿಯ ವಾತಾವರಣ ಗೋಚರಿಸುತ್ತಿದೆ. ವಿದೇಶಾಂಗ ಸಚಿವರು (ಎಸ್. ಜೈಶಂಕರ್) ಪಾಕಿಸ್ತಾನವನ್ನು ಒಬ್ಬ ‘ದಳ್ಳಾಳಿ’ ಎಂದು ತಳ್ಳಿಹಾಕಿದ್ದರು. ಆದರೆ, ಈಗ ಸ್ವಯಂ ಘೋಷಿತ ವಿಶ್ವಗುರು ಸಂಪೂರ್ಣವಾಗಿ ಅನಾವರಣಗೊಂಡಿದ್ದಾರೆ ಮತ್ತು ಅವರ 56 ಇಂಚಿನ ಎದೆ ಅಕ್ಷರಶಃ ಕುಗ್ಗಿ ಹೋಗಿದೆ ಎಂದು ರಮೇಶ್ ಟೀಕಿಸಿದ್ದಾರೆ.

ಪ್ರಧಾನಮಂತ್ರಿಯವರ ಮೌನವು ಅವರ ದೌರ್ಬಲ್ಯವನ್ನು ಪ್ರತಿಬಿಂಬಿಸುತ್ತದೆ. ಇಸ್ರೇಲ್‌ನ ಆಕ್ರಮಣಕಾರಿ ಧೋರಣೆಯ ಬಗ್ಗೆ ಮಾತ್ರವಲ್ಲದೆ, ವೈಟ್ ಹೌಸ್‌ನಲ್ಲಿರುವ (ಅಮೆರಿಕ ಅಧ್ಯಕ್ಷರು) ಅವರ ಪರಮಾಪ್ತ ಸ್ನೇಹಿತ ಬಳಸುತ್ತಿರುವ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲದ ಮತ್ತು ಅವಮಾನಕರ ಭಾಷೆಯ ಬಗ್ಗೆಯೂ ಅವರು ಮೌನವಾಗಿರುವುದು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ ಎಂದು ಹರಿಹಾಯ್ದಿದ್ದಾರೆ.








ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...