Homeಮುಖಪುಟರೇವಣ್ಣನವರ ಕುರಿತು ವ್ಯಂಗ್ಯವಾಡಲು ಹೋಗಿ ತೀವ್ರ ಟೀಕೆ-ನಿಂದನೆಗೊಳಗಾದ ವಿಶ್ವೇಶ್ವರ ಭಟ್‌!

ರೇವಣ್ಣನವರ ಕುರಿತು ವ್ಯಂಗ್ಯವಾಡಲು ಹೋಗಿ ತೀವ್ರ ಟೀಕೆ-ನಿಂದನೆಗೊಳಗಾದ ವಿಶ್ವೇಶ್ವರ ಭಟ್‌!

ಈ ಟ್ವೀಟ್‌ ಮೂಲಕ ವಿಶ್ವೇಶ್ವರ ಭಟ್ಟರು ಮಾಡಿದ್ದು ತಪ್ಪು ಎಂದು ಶೇ. 80ಕ್ಕೂ ಹೆಚ್ಚು ಜನ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಪ್ರಪಂಚದೆಲ್ಲೆಡೆ ಕೊರೊನಾ ಹಬ್ಬುತ್ತಿದೆ. ಸಾವು ನೋವುಗಳು ದಿನೇ ದಿನೇ ಹೆಚ್ಚುತ್ತಿವೆ. ಇಡೀ ವೈದ್ಯಕೀಯ ಸಮೂಹ ಅದರ ವಿರುದ್ಧ ಹೋರಾಡುತ್ತಿದೆ. ಇಂತಹ ಸಮಯದಲ್ಲಿ ಕೊರೊನಾ ವಿರುದ್ಧ ಐಕ್ಯಮತ್ಯ  ಸಾಧಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿಯವರು 9 ನಿಮಿಷಗಳ ಕಾಲ ಲೈಟ್‌ ಬಂದ್‌ ಮಾಡಿ ದೀಪ ಹಚ್ಚಲು ಕರೆ ನೀಡಿದ್ದರು.

ಪ್ರಧಾನಿಗಳ ಕರೆ ಕೇಳಿಬರುತ್ತಿದ್ದಂತೆಯೇ ಅದಕ್ಕೆ ಮತ್ತಷ್ಟು ಸುಳ್ಳುಗಳು ಪೋಣಿಸಿಕೊಳ್ಳಲಾರಂಭಿಸಿದ್ದವು. ದೀಪದ ಬೆಳಕಿಗೆ ಕೊರೊನಾ ಸಾಯುತ್ತದೆ, ದೀಪದ ಶಾಖಕ್ಕೆ ಶಕ್ತಿ ಇದೆ ಎಂದೆಲ್ಲಾ ಜನ ನಂಬಲು ಆರಂಭಿಸಿದ್ದರು. ಅಷ್ಟರಲ್ಲಿ ಮೈಸೂರಿನ ಬಿಜೆಪಿ ಶಾಸಕ ರಾಮ್‌ದಾಸ್‌ “ದೀಪ ಹಚ್ಚಿದರೆ ವೈರಸ್ ದೀಪದ ಬಳಿ ಬಂದು ಶಾಖಕ್ಕೆ ಸಾಯುತ್ತದೆ” ಎಂದು ಹೇಳಿಕೆ ನೀಡಿ ತೀವ್ರ ಮುಜುಗರಕ್ಕೊಳಗಾಗಿದ್ದರು.

ಇದನ್ನೂ  ಓದಿ: ದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದ ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

ಇನ್ನೊಂದು ಕಡೆ ದೇಶದೆಲ್ಲೆಡೆ ಪ್ರಧಾನಿಗಳ ಮನವಿಗೆ ಜನ ಸ್ಪಂದಿಸಿದ್ದರು. ಕರ್ನಾಟಕದ ಮಾಜಿ ಸಚಿವ ಎಚ್‌.ಡಿ ರೇವಣ್ಣ ಸಹ ಮೋಂಬತ್ತಿ ಹಚ್ಚಿ ಪ್ರಧಾನಿಗಳ ಕರೆಗೆ ಓಗೊಟ್ಟಿದ್ದರು. ಆದರೆ ಆ ಫೋಟೊವನ್ನೇ ಬಳಸಿ ರೇವಣ್ಣನವರ ತೇಜೋವಧೆಗೆ ಮಾಡಲು ಮುಂದಾಗಿದ್ದ ಪತ್ರಕರ್ತ ವಿಶ್ವೇಶ್ವರ ಭಟ್ ಮೇಲೆ ನೆಟ್ಟಿಗರು ಮುಗಿಬಿದ್ದಿದ್ದು ವ್ಯಾಪಕ ಟೀಕೆ-ನಿಂದನೆಗಳ ಸುರಿಮಳೆ ಸುರಿಸಿದ್ದಾರೆ.

ಈ ರೀತಿಯಾಗಿ ಟ್ವಿಟ್ಟರ್‌ನಲ್ಲಿ ಎಚ್‌.ಡಿ ರೇವಣ್ಣನವರ ತೇಜೋವಧೆ ಮಾಡುವಂತಹ ಎರಡು ಪೋಸ್ಟ್‌ಗಳನ್ನು ವಿಶ್ವೇಶ್ವರ ಭಟ್‌ ಹಾಕಿದ್ದಾರೆ. ಇದು ಸಹಜವಾಗಿಯೇ ನೆಟ್ಟಿಗರನ್ನು ಕೆರಳಿಸಿದೆ. ಕೂಡಲೇ ವಿಶ್ವೇಶ್ವರ ಭಟ್‌ ಮೇಲೆ ಮುಗಿಬಿದ್ದ ಅವರು ವ್ಯಾಪಕ ಟೀಕೆ ಜೊತೆಗೆ ನಿಂದನೆಗಳ ಸುರಿಮಳೆ ಸುರಿಸಿದ್ದಾರೆ. ಕೆಲವು ಕೆಳಗಿನಂತಿವೆ ನೋಡಿ.

“ಹೌದು ನಿಮ್ಮ ಈ ಟ್ವೀಟ್ ನೋಡಿದ ಮೇಲೆ ಇಂತ ವಿಷ ಜಂತುಗಳ ಮದ್ಯೆ ನನಗೇನು ಕೆಲಸ ಅಂತ ಕೊರೊನಾ ಈ ದೇಶ ಬಿಟ್ಟು ಓಡಿ ಹೋದರು ಹೋಗಬಹುದು , atleast ನಿಮ್ಮ ಹೆಸರಿನ ಮುಂದೆ ಇರೋ ಪತ್ರಕರ್ತ ಅನ್ನೋ ಶಬ್ದಕ್ಕಾದರೂ ಬೆಲೆ ಕೊಡಿ ಭಟ್ರೆ” ಎಂದು ವಿನಾಯಕ್‌ನಾಯಕ್‌ ಟ್ವೀಟ್‌ ಮಾಡಿದ್ದಾರೆ.

“ವಿಶ್ವೇಶ್ವರ ಬಟ್ಟರೆ.. ನಾನು ನೀವೊಬ್ಬ ಪತ್ರಕರ್ತರೆಂದು ಭಾವಿಸಿ ನಿಮ್ಮನ್ನು follow ಮಾಡ್ತಿದ್ದೆ, ಆದರೆ ನೀವು ಈ ರೀತಿ ವೈಯಕ್ತಿಕವಾಗಿ ಗೌಡರ ಮನೆಯವರ ಮೇಲೆ ವ್ಯಂಗ್ಯವಾಡುವುದು ಅಸಯ್ಯದ ಸಂಗತಿ.. ನಿಮ್ಮ ಸ್ಥಾನಕ್ಕೆ ತಕ್ಕಾಗಿ ನೆಡೆದುಕೊಳ್ಳಿ.. ಮನೆಯಲ್ಲಿದ್ದಾಗ ಪಂಚೆ ಹಾಕಿಕೊಳ್ಳದೆ ಇನ್ನೇನು ಸೂಟ್, ಬೂಟ್ ಹಾಕಿಕೊಂಡು ಪೋಸ್ ಕೊಡಬೇಕೆ..” ಎಂದು ಶರತ್‌ ಕುಮಾರ್‌ ಜಿ.ಡಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಸ್ವಲ್ಪ ಅತಿಯಾಯಿತು ಭಟ್ರೇ. ಅವರು ಆಚರಿಸಿದರೂ ಅಣಕಿಸುತ್ತೀರ, ಆಚರಿಸದಿದ್ದರೂ ಅಣಕಿಸುತ್ತೀರ.. ಎಂದು ರೋಹಿತ್‌ ಸಿಂಹ ಅಭಿಪ್ರಾಯಪಟ್ಟಿದ್ದಾರೆ.

“ಭಟ್ರೇ ನಂಜು ಮೈ ಇಡೀ ತುಂಬಿದ ರೀತಿ ಕಾಣಿಸ್ತಾ ಇದೆ ನಿಮ್ಮ ಟ್ವೀಟ್ ನೋಡುವಾಗ. ಇಷ್ಟೊಂದು ವಿಷ ದೇಹದಲ್ಲಿ ಇಟ್ಕೊಂಡು ಹೇಗೆ ಜೀವಂತ ಇದ್ದೀರಿ?” ಎಂದು ಯಶ್ವಿನ್‌ಎಂಬುವವರು ಪ್ರಶ್ನಿಸಿದ್ದಾರೆ.

“ಒಂದು ಜನಾಂಗದ ಬಟ್ಟೆಯನ್ನು ಅಣುಕಿಸುವ ಮುಂಚೆ ನಿಮ್ಮ ಹಿರಿಯರ ಲಂಗೋಟಿ ಜ್ಞಾಪಸಿಕೋ” ಎಂದು ಮಂಜುನಾಥ್‌ ಜವರನಹಳ್ಳಿಯವರು ವ್ಯಂಗ್ಯವಾಡಿದ್ದಾರೆ.

Sir, ಪತ್ರಿಕೆಯೊಂದರ ಸಂಪಾದಕರಾಗಿ ನೀವು ಈ ರೀತಿ ಟ್ವೀಟ್ ಮಾಡುವುದು ಸರಿಯಲ್ಲ. ಪ್ರಧಾನಿಯ ಕರೆಗೆ ಇವರು ಸ್ಪಂದಿಸಿದ್ದಾರೆ, ಅದೇ ದೊಡ್ಡ ವಿಷಯ. ಈ ರೀತಿ ಟ್ರೋಲ್ ಮಾಡುವಷ್ಟು ಸಣ್ಣ ಸ್ಥಾನದಲ್ಲಿ ನೀವು ಇಲ್ಲ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

ದೀಪ ಹಚ್ಚಿದರೂ ಟೀಕೆ ಹಚ್ಚದಿದ್ದರೂ ಟೀಕೆ….. ವಾವ್…..ನಿಮ್ಮಂತ ನಿಷ್ಪ್ರಯೋಜಕರಿಂದ ದೇಶಕ್ಕೆ ಏನು ಪ್ರಯೋಜನವಿಲ್ಲ…ಹೊರಡು… ನೀವು 365 ದಿನ ಹಾಕೋದು ಇದೆ ಪಾಂಡಿತ್ಯದ ಬಟ್ಟೆ ಅಲ್ಲವಾ…..??? ಎಂದು ಮೋಹನ್‌ ಪ್ರಶ್ನಿಸಿದ್ದಾರೆ.

“ಪತ್ರಕರ್ತರೇನು ದೈವಪುತ್ರರಲ್ಲ ಸಲೀಸಾಗಿ ಇನ್ನೊಬ್ಬರ ತೇಜೋವಧೆ ಮಾಡಲು. ಅದು ಅವರ ಇಚ್ಛೆ. ಏಕವಚನದಿಂದ ಮಾತನಾಡುವುದನ್ನು ಬಿಡಿ. ಗೌರವ ಕೊಡಿ” ಎಂದು ದೀಪಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಟ್ಟರೆ ತಾವು ಒಂದು ಪತ್ರಿಕೆಯ ಸಂಪಾದಕರಾ ಇಲ್ಲ ರಾಜಕೀಯ ಪಕ್ಷದ ಸಾಮಾಜಿಕ ಜಾಲತಾಣ ಸಂಚಾಲಕರಾ ಅಂತ ನನಗೆ ಅನುಮಾನ ಬರತಾ ಇದೆ ಸದ್ಯಕ್ಕೆ ಯಾವುದೆ ನಾಮಕರಣಗಳು ಇಲ್ಲ ಸ್ವಲ್ಪ ತಡೆಯಿರಿ ಎಂದು ಪರಮ ಆತ್ಮ ಎಂಬುವವರು ಟೀಕಿಸಿದ್ದಾರೆ.

ಆ ಫೋಟೊದಲ್ಲಿ ತಪ್ಪೇನಿದೆ. ರಾಮದಾಸ್ ನ ಮೂರ್ಖ ಹೇಳಿಕೆನಾ ಖಂಡಿಸದ ನೀನು, ರೇವಣ್ಣನನ್ನು ಕಂಡರೆ ಯಾಕೆ ಉರಿ? ಥೂ ನೀನು ಒಬ್ಬ ಮನುಷ್ಯನಾ? ನಿನ್ನಂಥ ಜಾತಿವ್ಯಾದಿ ಕ್ರಿಮಿನಾ ನೋಡಿರಲಿಲ್ಲ.. ಥೂ ಅಯೋಗ್ಯ ಎಂದು ಮತ್ತೊಬ್ಬರು ಕಿಡಿಕಾರಿದ್ದಾರೆ.

ಈ ಟ್ವೀಟ್‌ ಮೂಲಕ ವಿಶ್ವೇಶ್ವರ ಭಟ್ಟರು ಮಾಡಿದ್ದು ತಪ್ಪು ಎಂದು ಶೇ. 80ಕ್ಕೂ ಹೆಚ್ಚು ಜನ ಅಭಿಪ್ರಾಯಪಟ್ಟಿದ್ದಾರೆ. ಇದೇ ಭಟ್ಟರು ಸಹ ಅದೇ ರೀತಿಯಲ್ಲಿ ತಾವು ಕೂಡ ದೀಪ ಹಚ್ಚಿಕೊಂಡು ತಮ್ಮ ಮಗಳ ಜೊತೆ ನಿಂತಿರುವ ವಿಡಿಯೋವನ್ನು ಕೆಲವೇ ನಿಮಿಷಗಳ ಮುಂಚೆ ಷೇರ್ ಮಾಡಿದ್ದಾರೆ. ಅಲ್ಲದೇ ಅತ್ಯಾಚಾರದ ಆರೋಪ ಹೊತ್ತಿರುವ ರಾಘವೇಶ್ವರ ಭಾರತಿ ಸ್ವಾಮಿಯವರು ದೀಪಹಿಡಿದಿರುವ ಫೋಟೊವನ್ನು ಸಹ ಅವರೇ ಷೇರ್‌ ಮಾಡಿದ್ದಾರೆ. ಆದರೆ ರೇವಣ್ಣನವರ ಮೇಲೆ ಮಾತ್ರ ಅಸೂಯೆ ವ್ಯಕ್ತಪಡಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ.

ವಿಶ್ವೇಶ್ವರ ಭಟ್ಟರು ಈ ರೀತಿ ವಯಕ್ತಿಕ ತೇಜೋವಧೇ ಮಾಡಲು ಹೋಗಿ ತಾವೇ ಮುಜುಗರಕ್ಕೊಳಗಾಗಿರುವುದು ಇದೇ ಮೊದಲನೇನಲ್ಲ. ಗೌರಿ ಲಂಕೇಶ್‌ ಹತ್ಯಾ ವಿರೋಧಿ ಕಾರ್ಯಕ್ರಮದಲ್ಲಿ ಜನರಿಲ್ಲ ಎಂದು ತೋರಿಸಲು ಹೋಗಿ ಟೀಕೆಗೆ ಒಳಗಾಗಿದ್ದರು. ಮಹಿಳೆಯರ ಒಳವಸ್ತ್ರಗಳ ಕುರಿತೆಲ್ಲಾ ತಮಾಷೆ ಮಾಡಲು ಹೋಗಿ ವ್ಯಾಪಕ ಟ್ರೋಲ್‌ಗೆ ಒಳಗಾಗಿದ್ದರು.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. Vishwanath bhatre, you showed your true colour. People like you are disgrace to the community. Instead of commenting on Revanna’s dress like an idiot, appreciate his concern about the society at this crucial stage. We need to be united at this stage. Shame on you.

  2. Ivnu obba ganji kendrada giraki.. eno sarkarda mattinalli kelsa irbeku.. 90 % mediagalu, rajakaranigalu patrakartaru ovatu enadaru success agidare, adu e gowdara kutumba dinda, avra bhage olledo, kettado mstadidre success agtini anta e papi nu hage madidane..

  3. What Mr. Revanna has done, it is what PM Mr. Modi ji wanted from him as a citizen, of India and what Mr. BHATT has done is wrong and should apologize for his misdeed.

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...