Homeಮುಖಪುಟರೇವಣ್ಣನವರ ಕುರಿತು ವ್ಯಂಗ್ಯವಾಡಲು ಹೋಗಿ ತೀವ್ರ ಟೀಕೆ-ನಿಂದನೆಗೊಳಗಾದ ವಿಶ್ವೇಶ್ವರ ಭಟ್‌!

ರೇವಣ್ಣನವರ ಕುರಿತು ವ್ಯಂಗ್ಯವಾಡಲು ಹೋಗಿ ತೀವ್ರ ಟೀಕೆ-ನಿಂದನೆಗೊಳಗಾದ ವಿಶ್ವೇಶ್ವರ ಭಟ್‌!

ಈ ಟ್ವೀಟ್‌ ಮೂಲಕ ವಿಶ್ವೇಶ್ವರ ಭಟ್ಟರು ಮಾಡಿದ್ದು ತಪ್ಪು ಎಂದು ಶೇ. 80ಕ್ಕೂ ಹೆಚ್ಚು ಜನ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಪ್ರಪಂಚದೆಲ್ಲೆಡೆ ಕೊರೊನಾ ಹಬ್ಬುತ್ತಿದೆ. ಸಾವು ನೋವುಗಳು ದಿನೇ ದಿನೇ ಹೆಚ್ಚುತ್ತಿವೆ. ಇಡೀ ವೈದ್ಯಕೀಯ ಸಮೂಹ ಅದರ ವಿರುದ್ಧ ಹೋರಾಡುತ್ತಿದೆ. ಇಂತಹ ಸಮಯದಲ್ಲಿ ಕೊರೊನಾ ವಿರುದ್ಧ ಐಕ್ಯಮತ್ಯ  ಸಾಧಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿಯವರು 9 ನಿಮಿಷಗಳ ಕಾಲ ಲೈಟ್‌ ಬಂದ್‌ ಮಾಡಿ ದೀಪ ಹಚ್ಚಲು ಕರೆ ನೀಡಿದ್ದರು.

ಪ್ರಧಾನಿಗಳ ಕರೆ ಕೇಳಿಬರುತ್ತಿದ್ದಂತೆಯೇ ಅದಕ್ಕೆ ಮತ್ತಷ್ಟು ಸುಳ್ಳುಗಳು ಪೋಣಿಸಿಕೊಳ್ಳಲಾರಂಭಿಸಿದ್ದವು. ದೀಪದ ಬೆಳಕಿಗೆ ಕೊರೊನಾ ಸಾಯುತ್ತದೆ, ದೀಪದ ಶಾಖಕ್ಕೆ ಶಕ್ತಿ ಇದೆ ಎಂದೆಲ್ಲಾ ಜನ ನಂಬಲು ಆರಂಭಿಸಿದ್ದರು. ಅಷ್ಟರಲ್ಲಿ ಮೈಸೂರಿನ ಬಿಜೆಪಿ ಶಾಸಕ ರಾಮ್‌ದಾಸ್‌ “ದೀಪ ಹಚ್ಚಿದರೆ ವೈರಸ್ ದೀಪದ ಬಳಿ ಬಂದು ಶಾಖಕ್ಕೆ ಸಾಯುತ್ತದೆ” ಎಂದು ಹೇಳಿಕೆ ನೀಡಿ ತೀವ್ರ ಮುಜುಗರಕ್ಕೊಳಗಾಗಿದ್ದರು.

ಇದನ್ನೂ  ಓದಿ: ದೀಪದ ಶಾಖಕ್ಕೆ ಕ್ರಿಮಿ ಸಾಯುತ್ತದೆ ಎಂದ ಬಿಜೆಪಿ ಶಾಸಕ ರಾಮದಾಸ್: ವ್ಯಾಪಕ ಟ್ರೋಲ್‌

ಇನ್ನೊಂದು ಕಡೆ ದೇಶದೆಲ್ಲೆಡೆ ಪ್ರಧಾನಿಗಳ ಮನವಿಗೆ ಜನ ಸ್ಪಂದಿಸಿದ್ದರು. ಕರ್ನಾಟಕದ ಮಾಜಿ ಸಚಿವ ಎಚ್‌.ಡಿ ರೇವಣ್ಣ ಸಹ ಮೋಂಬತ್ತಿ ಹಚ್ಚಿ ಪ್ರಧಾನಿಗಳ ಕರೆಗೆ ಓಗೊಟ್ಟಿದ್ದರು. ಆದರೆ ಆ ಫೋಟೊವನ್ನೇ ಬಳಸಿ ರೇವಣ್ಣನವರ ತೇಜೋವಧೆಗೆ ಮಾಡಲು ಮುಂದಾಗಿದ್ದ ಪತ್ರಕರ್ತ ವಿಶ್ವೇಶ್ವರ ಭಟ್ ಮೇಲೆ ನೆಟ್ಟಿಗರು ಮುಗಿಬಿದ್ದಿದ್ದು ವ್ಯಾಪಕ ಟೀಕೆ-ನಿಂದನೆಗಳ ಸುರಿಮಳೆ ಸುರಿಸಿದ್ದಾರೆ.

ಈ ರೀತಿಯಾಗಿ ಟ್ವಿಟ್ಟರ್‌ನಲ್ಲಿ ಎಚ್‌.ಡಿ ರೇವಣ್ಣನವರ ತೇಜೋವಧೆ ಮಾಡುವಂತಹ ಎರಡು ಪೋಸ್ಟ್‌ಗಳನ್ನು ವಿಶ್ವೇಶ್ವರ ಭಟ್‌ ಹಾಕಿದ್ದಾರೆ. ಇದು ಸಹಜವಾಗಿಯೇ ನೆಟ್ಟಿಗರನ್ನು ಕೆರಳಿಸಿದೆ. ಕೂಡಲೇ ವಿಶ್ವೇಶ್ವರ ಭಟ್‌ ಮೇಲೆ ಮುಗಿಬಿದ್ದ ಅವರು ವ್ಯಾಪಕ ಟೀಕೆ ಜೊತೆಗೆ ನಿಂದನೆಗಳ ಸುರಿಮಳೆ ಸುರಿಸಿದ್ದಾರೆ. ಕೆಲವು ಕೆಳಗಿನಂತಿವೆ ನೋಡಿ.

“ಹೌದು ನಿಮ್ಮ ಈ ಟ್ವೀಟ್ ನೋಡಿದ ಮೇಲೆ ಇಂತ ವಿಷ ಜಂತುಗಳ ಮದ್ಯೆ ನನಗೇನು ಕೆಲಸ ಅಂತ ಕೊರೊನಾ ಈ ದೇಶ ಬಿಟ್ಟು ಓಡಿ ಹೋದರು ಹೋಗಬಹುದು , atleast ನಿಮ್ಮ ಹೆಸರಿನ ಮುಂದೆ ಇರೋ ಪತ್ರಕರ್ತ ಅನ್ನೋ ಶಬ್ದಕ್ಕಾದರೂ ಬೆಲೆ ಕೊಡಿ ಭಟ್ರೆ” ಎಂದು ವಿನಾಯಕ್‌ನಾಯಕ್‌ ಟ್ವೀಟ್‌ ಮಾಡಿದ್ದಾರೆ.

“ವಿಶ್ವೇಶ್ವರ ಬಟ್ಟರೆ.. ನಾನು ನೀವೊಬ್ಬ ಪತ್ರಕರ್ತರೆಂದು ಭಾವಿಸಿ ನಿಮ್ಮನ್ನು follow ಮಾಡ್ತಿದ್ದೆ, ಆದರೆ ನೀವು ಈ ರೀತಿ ವೈಯಕ್ತಿಕವಾಗಿ ಗೌಡರ ಮನೆಯವರ ಮೇಲೆ ವ್ಯಂಗ್ಯವಾಡುವುದು ಅಸಯ್ಯದ ಸಂಗತಿ.. ನಿಮ್ಮ ಸ್ಥಾನಕ್ಕೆ ತಕ್ಕಾಗಿ ನೆಡೆದುಕೊಳ್ಳಿ.. ಮನೆಯಲ್ಲಿದ್ದಾಗ ಪಂಚೆ ಹಾಕಿಕೊಳ್ಳದೆ ಇನ್ನೇನು ಸೂಟ್, ಬೂಟ್ ಹಾಕಿಕೊಂಡು ಪೋಸ್ ಕೊಡಬೇಕೆ..” ಎಂದು ಶರತ್‌ ಕುಮಾರ್‌ ಜಿ.ಡಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಸ್ವಲ್ಪ ಅತಿಯಾಯಿತು ಭಟ್ರೇ. ಅವರು ಆಚರಿಸಿದರೂ ಅಣಕಿಸುತ್ತೀರ, ಆಚರಿಸದಿದ್ದರೂ ಅಣಕಿಸುತ್ತೀರ.. ಎಂದು ರೋಹಿತ್‌ ಸಿಂಹ ಅಭಿಪ್ರಾಯಪಟ್ಟಿದ್ದಾರೆ.

“ಭಟ್ರೇ ನಂಜು ಮೈ ಇಡೀ ತುಂಬಿದ ರೀತಿ ಕಾಣಿಸ್ತಾ ಇದೆ ನಿಮ್ಮ ಟ್ವೀಟ್ ನೋಡುವಾಗ. ಇಷ್ಟೊಂದು ವಿಷ ದೇಹದಲ್ಲಿ ಇಟ್ಕೊಂಡು ಹೇಗೆ ಜೀವಂತ ಇದ್ದೀರಿ?” ಎಂದು ಯಶ್ವಿನ್‌ಎಂಬುವವರು ಪ್ರಶ್ನಿಸಿದ್ದಾರೆ.

“ಒಂದು ಜನಾಂಗದ ಬಟ್ಟೆಯನ್ನು ಅಣುಕಿಸುವ ಮುಂಚೆ ನಿಮ್ಮ ಹಿರಿಯರ ಲಂಗೋಟಿ ಜ್ಞಾಪಸಿಕೋ” ಎಂದು ಮಂಜುನಾಥ್‌ ಜವರನಹಳ್ಳಿಯವರು ವ್ಯಂಗ್ಯವಾಡಿದ್ದಾರೆ.

Sir, ಪತ್ರಿಕೆಯೊಂದರ ಸಂಪಾದಕರಾಗಿ ನೀವು ಈ ರೀತಿ ಟ್ವೀಟ್ ಮಾಡುವುದು ಸರಿಯಲ್ಲ. ಪ್ರಧಾನಿಯ ಕರೆಗೆ ಇವರು ಸ್ಪಂದಿಸಿದ್ದಾರೆ, ಅದೇ ದೊಡ್ಡ ವಿಷಯ. ಈ ರೀತಿ ಟ್ರೋಲ್ ಮಾಡುವಷ್ಟು ಸಣ್ಣ ಸ್ಥಾನದಲ್ಲಿ ನೀವು ಇಲ್ಲ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

ದೀಪ ಹಚ್ಚಿದರೂ ಟೀಕೆ ಹಚ್ಚದಿದ್ದರೂ ಟೀಕೆ….. ವಾವ್…..ನಿಮ್ಮಂತ ನಿಷ್ಪ್ರಯೋಜಕರಿಂದ ದೇಶಕ್ಕೆ ಏನು ಪ್ರಯೋಜನವಿಲ್ಲ…ಹೊರಡು… ನೀವು 365 ದಿನ ಹಾಕೋದು ಇದೆ ಪಾಂಡಿತ್ಯದ ಬಟ್ಟೆ ಅಲ್ಲವಾ…..??? ಎಂದು ಮೋಹನ್‌ ಪ್ರಶ್ನಿಸಿದ್ದಾರೆ.

“ಪತ್ರಕರ್ತರೇನು ದೈವಪುತ್ರರಲ್ಲ ಸಲೀಸಾಗಿ ಇನ್ನೊಬ್ಬರ ತೇಜೋವಧೆ ಮಾಡಲು. ಅದು ಅವರ ಇಚ್ಛೆ. ಏಕವಚನದಿಂದ ಮಾತನಾಡುವುದನ್ನು ಬಿಡಿ. ಗೌರವ ಕೊಡಿ” ಎಂದು ದೀಪಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಟ್ಟರೆ ತಾವು ಒಂದು ಪತ್ರಿಕೆಯ ಸಂಪಾದಕರಾ ಇಲ್ಲ ರಾಜಕೀಯ ಪಕ್ಷದ ಸಾಮಾಜಿಕ ಜಾಲತಾಣ ಸಂಚಾಲಕರಾ ಅಂತ ನನಗೆ ಅನುಮಾನ ಬರತಾ ಇದೆ ಸದ್ಯಕ್ಕೆ ಯಾವುದೆ ನಾಮಕರಣಗಳು ಇಲ್ಲ ಸ್ವಲ್ಪ ತಡೆಯಿರಿ ಎಂದು ಪರಮ ಆತ್ಮ ಎಂಬುವವರು ಟೀಕಿಸಿದ್ದಾರೆ.

ಆ ಫೋಟೊದಲ್ಲಿ ತಪ್ಪೇನಿದೆ. ರಾಮದಾಸ್ ನ ಮೂರ್ಖ ಹೇಳಿಕೆನಾ ಖಂಡಿಸದ ನೀನು, ರೇವಣ್ಣನನ್ನು ಕಂಡರೆ ಯಾಕೆ ಉರಿ? ಥೂ ನೀನು ಒಬ್ಬ ಮನುಷ್ಯನಾ? ನಿನ್ನಂಥ ಜಾತಿವ್ಯಾದಿ ಕ್ರಿಮಿನಾ ನೋಡಿರಲಿಲ್ಲ.. ಥೂ ಅಯೋಗ್ಯ ಎಂದು ಮತ್ತೊಬ್ಬರು ಕಿಡಿಕಾರಿದ್ದಾರೆ.

ಈ ಟ್ವೀಟ್‌ ಮೂಲಕ ವಿಶ್ವೇಶ್ವರ ಭಟ್ಟರು ಮಾಡಿದ್ದು ತಪ್ಪು ಎಂದು ಶೇ. 80ಕ್ಕೂ ಹೆಚ್ಚು ಜನ ಅಭಿಪ್ರಾಯಪಟ್ಟಿದ್ದಾರೆ. ಇದೇ ಭಟ್ಟರು ಸಹ ಅದೇ ರೀತಿಯಲ್ಲಿ ತಾವು ಕೂಡ ದೀಪ ಹಚ್ಚಿಕೊಂಡು ತಮ್ಮ ಮಗಳ ಜೊತೆ ನಿಂತಿರುವ ವಿಡಿಯೋವನ್ನು ಕೆಲವೇ ನಿಮಿಷಗಳ ಮುಂಚೆ ಷೇರ್ ಮಾಡಿದ್ದಾರೆ. ಅಲ್ಲದೇ ಅತ್ಯಾಚಾರದ ಆರೋಪ ಹೊತ್ತಿರುವ ರಾಘವೇಶ್ವರ ಭಾರತಿ ಸ್ವಾಮಿಯವರು ದೀಪಹಿಡಿದಿರುವ ಫೋಟೊವನ್ನು ಸಹ ಅವರೇ ಷೇರ್‌ ಮಾಡಿದ್ದಾರೆ. ಆದರೆ ರೇವಣ್ಣನವರ ಮೇಲೆ ಮಾತ್ರ ಅಸೂಯೆ ವ್ಯಕ್ತಪಡಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ.

ವಿಶ್ವೇಶ್ವರ ಭಟ್ಟರು ಈ ರೀತಿ ವಯಕ್ತಿಕ ತೇಜೋವಧೇ ಮಾಡಲು ಹೋಗಿ ತಾವೇ ಮುಜುಗರಕ್ಕೊಳಗಾಗಿರುವುದು ಇದೇ ಮೊದಲನೇನಲ್ಲ. ಗೌರಿ ಲಂಕೇಶ್‌ ಹತ್ಯಾ ವಿರೋಧಿ ಕಾರ್ಯಕ್ರಮದಲ್ಲಿ ಜನರಿಲ್ಲ ಎಂದು ತೋರಿಸಲು ಹೋಗಿ ಟೀಕೆಗೆ ಒಳಗಾಗಿದ್ದರು. ಮಹಿಳೆಯರ ಒಳವಸ್ತ್ರಗಳ ಕುರಿತೆಲ್ಲಾ ತಮಾಷೆ ಮಾಡಲು ಹೋಗಿ ವ್ಯಾಪಕ ಟ್ರೋಲ್‌ಗೆ ಒಳಗಾಗಿದ್ದರು.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. Vishwanath bhatre, you showed your true colour. People like you are disgrace to the community. Instead of commenting on Revanna’s dress like an idiot, appreciate his concern about the society at this crucial stage. We need to be united at this stage. Shame on you.

  2. Ivnu obba ganji kendrada giraki.. eno sarkarda mattinalli kelsa irbeku.. 90 % mediagalu, rajakaranigalu patrakartaru ovatu enadaru success agidare, adu e gowdara kutumba dinda, avra bhage olledo, kettado mstadidre success agtini anta e papi nu hage madidane..

  3. What Mr. Revanna has done, it is what PM Mr. Modi ji wanted from him as a citizen, of India and what Mr. BHATT has done is wrong and should apologize for his misdeed.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...