Homeಮುಖಪುಟಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ಸರ್ಕಾರಕ್ಕೆ ಇಷ್ಟೊಂದು ಭಯ ಯಾಕೆ? ಎಂದು ಅವರು ಕೇಳಿದ್ದಾರೆ

- Advertisement -
- Advertisement -

ರೈತರ ಹತ್ಯಾಕಾಂಡ ನಡೆದ ಲಖಿಂಪುರ್‌ ಗೆ ತೆರಳಲು ಮಧ್ಯಾಹ್ನ ಲಕ್ನೋಗೆ ತೆರಳಿದ್ದ ರಾಹುಲ್ ಗಾಂಧಿ ಅವರನ್ನು ವಿಮಾನ ನಿಲ್ದಾಣಲ್ಲಿ ತಡೆಯಲಾಗಿದೆ. ಭದ್ರತಾ ಸಿಬ್ಬಂದಿಗಳು ಅವರನ್ನು ಪೊಲೀಸ್‌ ಕಾರಿನಲ್ಲಿ ತೆರಳಲು ಕೇಳಿಕೊಂಡಿದ್ದು, ಇದಕ್ಕೆ ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. ನಂತರ ರಾಹುಲ್ ಗಾಂಧಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದು, ಕೊನೆಗೆ ಅವರದೆ ಸ್ವಂತ ಕಾರಿನಲ್ಲಿ ತೆರಳಲು ಅನುಮತಿ ನೀಡಲಾಗಿದೆ.

ಉತ್ತರ ಪ್ರದೇಶದ ಭದ್ರತಾ ಸಿಬ್ಬಂದಿಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನನ್ನ ಪ್ರಯಾಣ ವ್ಯವಸ್ಥೆ ಮಾಡಲು ನೀವು ಯಾರು? ನಾನು ನನ್ನ ಕಾರಿನಲ್ಲಿ ತೆರಳಲು ಬಯಸುತ್ತೇನೆ” ಹೇಳಿದ್ದಾರೆ.

“ಅವರು 100% ಏನೋ ಕಿಡಿಗೇಡಿ ಕ್ರಮಕ್ಕೆ ಹೊಂಚು ಹಾಕಿದ್ದಾರೆ” ಎಂದು ರಾಹುಲ್ ಗಾಂಧಿ ಸುದ್ದಿಗಾರರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ಲಖಿಂಪುರಕ್ಕೆ ರಾಜಕೀಯ ನಾಯಕರ ಭೇಟಿಗೆ ಬಿಜೆಪಿ ಸರ್ಕಾರ ನಿರ್ಬಂಧಿಸಿತ್ತು ಮತ್ತು ಸೋಮವಾರದಂದು ಅಲ್ಲಿಗೆ ತೆರಳಿದ್ದ ಪ್ರಿಯಾಂಕ ಗಾಂಧಿ ಅವರನ್ನು ಗೃಹ ಬಂಧನದಲ್ಲಿ ಇಟ್ಟಿತ್ತು. ಇಂದು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ರಾಹುಲ್ ಗಾಂಧಿ ಅವರ ನಿಯೋಗಕ್ಕೆ ಲಖಿಂಪುರಕ್ಕೆ ತೆರಳಲು ಅನುಮತಿ ನೀಡಿದೆ.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಚನ್ನಿ, ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ವೇಣುಗೋಪಾಲ್‌ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಕೂತಿರುವ ಚಿತ್ರವನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಚಿತ್ರದಲ್ಲಿ ಕಾಂಗ್ರೆಸ್ ನಾಯಕರು ಸ್ಥಳವನ್ನು ಬಿಟ್ಟು ಮುಂದೆ ಬರದಂತೆ ಭದ್ರತಾ ಸಿಬ್ಬಂದಿ ಹಗ್ಗ ಹಿಡಿದು ಅಡ್ಡ ನಿಂತಿದ್ದಾರೆ. ಈ ಟ್ವೀಟ್‌ನಲ್ಲಿ, “ಇದು ಬಿಜೆಪಿ ಸರ್ಕಾರದ ‘ಅನುಮತಿ’. ಸರ್ಕಾರಕ್ಕೆ ಇಷ್ಟೊಂದು ಭಯ ಯಾಕೆ?” ಎಂದು ರಾಹುಲ್ ಗಾಂಧಿ ಬರೆದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

“ನನ್ನನ್ನು ಹೊರಡಲು ಬಿಡಿ, ಅವರು ನನ್ನನ್ನು ವಿಮಾನ ನಿಲ್ದಾಣದಿಂದ ಹೊರಡಲು ಬಿಡುತ್ತಿಲ್ಲ. ಇದನ್ನು ನೋಡಿ – ಇದು ಯಾವ ರೀತಿಯ ಅನುಮತಿ? ಯುಪಿ ಸರ್ಕಾರದ ‘ಅನುಮತಿ’ ಯ ಸ್ಥಿತಿಯನ್ನು ನೋಡಿ. ನಾನು ವಿಮಾನ ನಿಲ್ದಾಣವನ್ನು ತೊರೆಯಲು ಬಯಸುತ್ತಿದ್ದೇನೆ, ಆದರೆ ಅವರು ಅನುಮತಿಸುತ್ತಿಲ್ಲ. ಈ ದೃಶ್ಯವನ್ನು ಸರಿಯಾಗಿ ತೋರಿಸಿ” ಎಂದು ರಾಹುಲ್ ಗಾಂಧಿ ಮಾಧ್ಯಮದತ್ತ ತಿರುಗಿ ಹೇಳಿದ್ದಾರೆ.

“ನಾನು ಇಲ್ಲಿ 10 ದಿನಗಳೋ, 20 ದಿನಗಳೋ, ಎಷ್ಟಾದರೂ ಆಗಲಿ, ಇಲ್ಲೇ ಇರುತ್ತೇನೆ” ಎಂದು ಅವರು ಘೋಷಿಸಿದ್ದಾರೆ.

ಅಧಿಕಾರಿಗಳ ಜೊತೆಗೆ ರಾಹುಲ್ ಗಾಂಧಿ ವಾಗ್ವಾದ ನಡೆಸಿದ ನಂತರ, ಕೊನೆಗೆ ಅವರದೆ ಸ್ವಂತ ಕಾರಿನಲ್ಲಿ ತೆರಳಲು ಅನುಮತಿ ನೀಡಿದ್ದಾರೆ. ನಂತರ ವಿಮಾನ ನಿಲ್ದಾಣದಿಂದ ರಾಹುಲ್ ಗಾಂಧಿ ಲಿಖಿಂಪುರಕ್ಕೆ ತೆರಳಿದ್ದು, ಮೊದಲಿಗೆ ಸೋಮವಾರದಿಂದ ಬಂಧನದಲ್ಲಿದ್ದ ತನ್ನ ಸಹೊದರಿ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: RSS ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...