Homeಮುಖಪುಟಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ಸರ್ಕಾರಕ್ಕೆ ಇಷ್ಟೊಂದು ಭಯ ಯಾಕೆ? ಎಂದು ಅವರು ಕೇಳಿದ್ದಾರೆ

- Advertisement -
- Advertisement -

ರೈತರ ಹತ್ಯಾಕಾಂಡ ನಡೆದ ಲಖಿಂಪುರ್‌ ಗೆ ತೆರಳಲು ಮಧ್ಯಾಹ್ನ ಲಕ್ನೋಗೆ ತೆರಳಿದ್ದ ರಾಹುಲ್ ಗಾಂಧಿ ಅವರನ್ನು ವಿಮಾನ ನಿಲ್ದಾಣಲ್ಲಿ ತಡೆಯಲಾಗಿದೆ. ಭದ್ರತಾ ಸಿಬ್ಬಂದಿಗಳು ಅವರನ್ನು ಪೊಲೀಸ್‌ ಕಾರಿನಲ್ಲಿ ತೆರಳಲು ಕೇಳಿಕೊಂಡಿದ್ದು, ಇದಕ್ಕೆ ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. ನಂತರ ರಾಹುಲ್ ಗಾಂಧಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದು, ಕೊನೆಗೆ ಅವರದೆ ಸ್ವಂತ ಕಾರಿನಲ್ಲಿ ತೆರಳಲು ಅನುಮತಿ ನೀಡಲಾಗಿದೆ.

ಉತ್ತರ ಪ್ರದೇಶದ ಭದ್ರತಾ ಸಿಬ್ಬಂದಿಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನನ್ನ ಪ್ರಯಾಣ ವ್ಯವಸ್ಥೆ ಮಾಡಲು ನೀವು ಯಾರು? ನಾನು ನನ್ನ ಕಾರಿನಲ್ಲಿ ತೆರಳಲು ಬಯಸುತ್ತೇನೆ” ಹೇಳಿದ್ದಾರೆ.

“ಅವರು 100% ಏನೋ ಕಿಡಿಗೇಡಿ ಕ್ರಮಕ್ಕೆ ಹೊಂಚು ಹಾಕಿದ್ದಾರೆ” ಎಂದು ರಾಹುಲ್ ಗಾಂಧಿ ಸುದ್ದಿಗಾರರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ಲಖಿಂಪುರಕ್ಕೆ ರಾಜಕೀಯ ನಾಯಕರ ಭೇಟಿಗೆ ಬಿಜೆಪಿ ಸರ್ಕಾರ ನಿರ್ಬಂಧಿಸಿತ್ತು ಮತ್ತು ಸೋಮವಾರದಂದು ಅಲ್ಲಿಗೆ ತೆರಳಿದ್ದ ಪ್ರಿಯಾಂಕ ಗಾಂಧಿ ಅವರನ್ನು ಗೃಹ ಬಂಧನದಲ್ಲಿ ಇಟ್ಟಿತ್ತು. ಇಂದು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ರಾಹುಲ್ ಗಾಂಧಿ ಅವರ ನಿಯೋಗಕ್ಕೆ ಲಖಿಂಪುರಕ್ಕೆ ತೆರಳಲು ಅನುಮತಿ ನೀಡಿದೆ.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಚನ್ನಿ, ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ವೇಣುಗೋಪಾಲ್‌ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಕೂತಿರುವ ಚಿತ್ರವನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಚಿತ್ರದಲ್ಲಿ ಕಾಂಗ್ರೆಸ್ ನಾಯಕರು ಸ್ಥಳವನ್ನು ಬಿಟ್ಟು ಮುಂದೆ ಬರದಂತೆ ಭದ್ರತಾ ಸಿಬ್ಬಂದಿ ಹಗ್ಗ ಹಿಡಿದು ಅಡ್ಡ ನಿಂತಿದ್ದಾರೆ. ಈ ಟ್ವೀಟ್‌ನಲ್ಲಿ, “ಇದು ಬಿಜೆಪಿ ಸರ್ಕಾರದ ‘ಅನುಮತಿ’. ಸರ್ಕಾರಕ್ಕೆ ಇಷ್ಟೊಂದು ಭಯ ಯಾಕೆ?” ಎಂದು ರಾಹುಲ್ ಗಾಂಧಿ ಬರೆದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

“ನನ್ನನ್ನು ಹೊರಡಲು ಬಿಡಿ, ಅವರು ನನ್ನನ್ನು ವಿಮಾನ ನಿಲ್ದಾಣದಿಂದ ಹೊರಡಲು ಬಿಡುತ್ತಿಲ್ಲ. ಇದನ್ನು ನೋಡಿ – ಇದು ಯಾವ ರೀತಿಯ ಅನುಮತಿ? ಯುಪಿ ಸರ್ಕಾರದ ‘ಅನುಮತಿ’ ಯ ಸ್ಥಿತಿಯನ್ನು ನೋಡಿ. ನಾನು ವಿಮಾನ ನಿಲ್ದಾಣವನ್ನು ತೊರೆಯಲು ಬಯಸುತ್ತಿದ್ದೇನೆ, ಆದರೆ ಅವರು ಅನುಮತಿಸುತ್ತಿಲ್ಲ. ಈ ದೃಶ್ಯವನ್ನು ಸರಿಯಾಗಿ ತೋರಿಸಿ” ಎಂದು ರಾಹುಲ್ ಗಾಂಧಿ ಮಾಧ್ಯಮದತ್ತ ತಿರುಗಿ ಹೇಳಿದ್ದಾರೆ.

“ನಾನು ಇಲ್ಲಿ 10 ದಿನಗಳೋ, 20 ದಿನಗಳೋ, ಎಷ್ಟಾದರೂ ಆಗಲಿ, ಇಲ್ಲೇ ಇರುತ್ತೇನೆ” ಎಂದು ಅವರು ಘೋಷಿಸಿದ್ದಾರೆ.

ಅಧಿಕಾರಿಗಳ ಜೊತೆಗೆ ರಾಹುಲ್ ಗಾಂಧಿ ವಾಗ್ವಾದ ನಡೆಸಿದ ನಂತರ, ಕೊನೆಗೆ ಅವರದೆ ಸ್ವಂತ ಕಾರಿನಲ್ಲಿ ತೆರಳಲು ಅನುಮತಿ ನೀಡಿದ್ದಾರೆ. ನಂತರ ವಿಮಾನ ನಿಲ್ದಾಣದಿಂದ ರಾಹುಲ್ ಗಾಂಧಿ ಲಿಖಿಂಪುರಕ್ಕೆ ತೆರಳಿದ್ದು, ಮೊದಲಿಗೆ ಸೋಮವಾರದಿಂದ ಬಂಧನದಲ್ಲಿದ್ದ ತನ್ನ ಸಹೊದರಿ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: RSS ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...