Homeಮುಖಪುಟಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ಲಖಿಂಪುರ್‌ ಭೇಟಿ: ರಾಹುಲ್‌ ಗಾಂಧಿಗೆ ಅನುಮತಿ ನೀಡಿ ಏರ್‌ಪೋರ್ಟ್‌ನಲ್ಲಿ ತಡೆದ ಆದಿತ್ಯನಾಥ್‌ ಸರ್ಕಾರ

ಸರ್ಕಾರಕ್ಕೆ ಇಷ್ಟೊಂದು ಭಯ ಯಾಕೆ? ಎಂದು ಅವರು ಕೇಳಿದ್ದಾರೆ

- Advertisement -
- Advertisement -

ರೈತರ ಹತ್ಯಾಕಾಂಡ ನಡೆದ ಲಖಿಂಪುರ್‌ ಗೆ ತೆರಳಲು ಮಧ್ಯಾಹ್ನ ಲಕ್ನೋಗೆ ತೆರಳಿದ್ದ ರಾಹುಲ್ ಗಾಂಧಿ ಅವರನ್ನು ವಿಮಾನ ನಿಲ್ದಾಣಲ್ಲಿ ತಡೆಯಲಾಗಿದೆ. ಭದ್ರತಾ ಸಿಬ್ಬಂದಿಗಳು ಅವರನ್ನು ಪೊಲೀಸ್‌ ಕಾರಿನಲ್ಲಿ ತೆರಳಲು ಕೇಳಿಕೊಂಡಿದ್ದು, ಇದಕ್ಕೆ ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. ನಂತರ ರಾಹುಲ್ ಗಾಂಧಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದು, ಕೊನೆಗೆ ಅವರದೆ ಸ್ವಂತ ಕಾರಿನಲ್ಲಿ ತೆರಳಲು ಅನುಮತಿ ನೀಡಲಾಗಿದೆ.

ಉತ್ತರ ಪ್ರದೇಶದ ಭದ್ರತಾ ಸಿಬ್ಬಂದಿಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನನ್ನ ಪ್ರಯಾಣ ವ್ಯವಸ್ಥೆ ಮಾಡಲು ನೀವು ಯಾರು? ನಾನು ನನ್ನ ಕಾರಿನಲ್ಲಿ ತೆರಳಲು ಬಯಸುತ್ತೇನೆ” ಹೇಳಿದ್ದಾರೆ.

“ಅವರು 100% ಏನೋ ಕಿಡಿಗೇಡಿ ಕ್ರಮಕ್ಕೆ ಹೊಂಚು ಹಾಕಿದ್ದಾರೆ” ಎಂದು ರಾಹುಲ್ ಗಾಂಧಿ ಸುದ್ದಿಗಾರರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಭೇಟಿಗೆ ರಾಹುಲ್ ಗಾಂಧಿ ನೇತೃತ್ವದ ನಿಯೋಗಕ್ಕೆ ಅನುಮತಿ ನೀಡದ ಯುಪಿ ಸರ್ಕಾರ

ಲಖಿಂಪುರಕ್ಕೆ ರಾಜಕೀಯ ನಾಯಕರ ಭೇಟಿಗೆ ಬಿಜೆಪಿ ಸರ್ಕಾರ ನಿರ್ಬಂಧಿಸಿತ್ತು ಮತ್ತು ಸೋಮವಾರದಂದು ಅಲ್ಲಿಗೆ ತೆರಳಿದ್ದ ಪ್ರಿಯಾಂಕ ಗಾಂಧಿ ಅವರನ್ನು ಗೃಹ ಬಂಧನದಲ್ಲಿ ಇಟ್ಟಿತ್ತು. ಇಂದು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ರಾಹುಲ್ ಗಾಂಧಿ ಅವರ ನಿಯೋಗಕ್ಕೆ ಲಖಿಂಪುರಕ್ಕೆ ತೆರಳಲು ಅನುಮತಿ ನೀಡಿದೆ.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಚನ್ನಿ, ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ವೇಣುಗೋಪಾಲ್‌ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಕೂತಿರುವ ಚಿತ್ರವನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಚಿತ್ರದಲ್ಲಿ ಕಾಂಗ್ರೆಸ್ ನಾಯಕರು ಸ್ಥಳವನ್ನು ಬಿಟ್ಟು ಮುಂದೆ ಬರದಂತೆ ಭದ್ರತಾ ಸಿಬ್ಬಂದಿ ಹಗ್ಗ ಹಿಡಿದು ಅಡ್ಡ ನಿಂತಿದ್ದಾರೆ. ಈ ಟ್ವೀಟ್‌ನಲ್ಲಿ, “ಇದು ಬಿಜೆಪಿ ಸರ್ಕಾರದ ‘ಅನುಮತಿ’. ಸರ್ಕಾರಕ್ಕೆ ಇಷ್ಟೊಂದು ಭಯ ಯಾಕೆ?” ಎಂದು ರಾಹುಲ್ ಗಾಂಧಿ ಬರೆದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

“ನನ್ನನ್ನು ಹೊರಡಲು ಬಿಡಿ, ಅವರು ನನ್ನನ್ನು ವಿಮಾನ ನಿಲ್ದಾಣದಿಂದ ಹೊರಡಲು ಬಿಡುತ್ತಿಲ್ಲ. ಇದನ್ನು ನೋಡಿ – ಇದು ಯಾವ ರೀತಿಯ ಅನುಮತಿ? ಯುಪಿ ಸರ್ಕಾರದ ‘ಅನುಮತಿ’ ಯ ಸ್ಥಿತಿಯನ್ನು ನೋಡಿ. ನಾನು ವಿಮಾನ ನಿಲ್ದಾಣವನ್ನು ತೊರೆಯಲು ಬಯಸುತ್ತಿದ್ದೇನೆ, ಆದರೆ ಅವರು ಅನುಮತಿಸುತ್ತಿಲ್ಲ. ಈ ದೃಶ್ಯವನ್ನು ಸರಿಯಾಗಿ ತೋರಿಸಿ” ಎಂದು ರಾಹುಲ್ ಗಾಂಧಿ ಮಾಧ್ಯಮದತ್ತ ತಿರುಗಿ ಹೇಳಿದ್ದಾರೆ.

“ನಾನು ಇಲ್ಲಿ 10 ದಿನಗಳೋ, 20 ದಿನಗಳೋ, ಎಷ್ಟಾದರೂ ಆಗಲಿ, ಇಲ್ಲೇ ಇರುತ್ತೇನೆ” ಎಂದು ಅವರು ಘೋಷಿಸಿದ್ದಾರೆ.

ಅಧಿಕಾರಿಗಳ ಜೊತೆಗೆ ರಾಹುಲ್ ಗಾಂಧಿ ವಾಗ್ವಾದ ನಡೆಸಿದ ನಂತರ, ಕೊನೆಗೆ ಅವರದೆ ಸ್ವಂತ ಕಾರಿನಲ್ಲಿ ತೆರಳಲು ಅನುಮತಿ ನೀಡಿದ್ದಾರೆ. ನಂತರ ವಿಮಾನ ನಿಲ್ದಾಣದಿಂದ ರಾಹುಲ್ ಗಾಂಧಿ ಲಿಖಿಂಪುರಕ್ಕೆ ತೆರಳಿದ್ದು, ಮೊದಲಿಗೆ ಸೋಮವಾರದಿಂದ ಬಂಧನದಲ್ಲಿದ್ದ ತನ್ನ ಸಹೊದರಿ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: RSS ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...