Homeಮುಖಪುಟಜೈಲಿನಲ್ಲಿ ಸಂದರ್ಶಕರ ಕೈಗೆ 'ಜೈ ಶ್ರೀ ರಾಮ್' ಮುದ್ರೆ ಹಾಕುತ್ತಿರುವ ಅಧಿಕಾರಿಗಳು!

ಜೈಲಿನಲ್ಲಿ ಸಂದರ್ಶಕರ ಕೈಗೆ ‘ಜೈ ಶ್ರೀ ರಾಮ್’ ಮುದ್ರೆ ಹಾಕುತ್ತಿರುವ ಅಧಿಕಾರಿಗಳು!

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ಆತಂಕಕಾರಿ ಬೆಳವಣಿಗೆ ನಡೆದಿದ್ದು, ಉತ್ತರಪ್ರದೇಶದ ಫರೂಕಾಬಾದ್‌ನಲ್ಲಿರುವ ಫತೇಘರ್ ಜೈಲಿನಲ್ಲಿ ಕೈದಿಗಳ ಸಂದರ್ಶಕರ ಕೈಗೆ  ‘ಜೈ ಶ್ರೀ ರಾಮ್’ ಎಂದು ಮುದ್ರೆ ಹಾಕಲಾಗುತ್ತಿದೆ, ಇದಲ್ಲದೆ ಜೈಲಿನಲ್ಲಿ ಭಜನೆ , ಕೀರ್ತನೆ, ರಾಮಯಾಣದ ಸುಂದರಕಾಂಡ ಪಠಣದಂತಹ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜೈಲಿನಲ್ಲಿ ವಿವಿಧ ಧರ್ಮದ ಕೈದಿಗಳಿದ್ದು, ಅವರ ಧಾರ್ಮಿಕ ಹಕ್ಕಿನ ಉಲ್ಲಂಘನೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಜೈಲು ಅಧೀಕ್ಷಕ ಭೀಮಸೇನ್ ಮುಕುಂದ್ ಅವರು ಮಾಹಿತಿಯನ್ನು ನೀಡಿದ್ದು, ಕೈದಿಗಳ ಭೇಟಿಗೆ ಆಗಮಿಸುವ ಸಂದರ್ಶಕರನ್ನು ಗುರುತಿಸಲು ಅವರ ಕೈಗಳಿಗೆ ಹಚ್ಚಲಾಗುತ್ತಿದ್ದ ಮಾಮೂಲಿ ಸ್ಟಾಂಪ್ ಮುದ್ರೆಯ ಬದಲಿಗೆ ಜೈಲಾಧಿಕಾರಿಗಳು ಕೇಸರಿ ಬಣ್ಣದ ಶಾಯಿಯಿಂದ ಬರೆದಿರುವ ‘ಜೈಶ್ರೀರಾಮ್’ ಮುದ್ರೆಯನ್ನು ಹಾಕಲಾಗುತ್ತಿದೆ. ಕಳೆದ ಒಂದು ವಾರದಿಂದ ಈ ಪದ್ದತಿ ಜಾರಿಯಲ್ಲಿದೆ ಎಂದು ಸ್ವತಃ ಜೈಲು ಅಧೀಕ್ಷಕ ಭೀಮಸೇನ್ ಮುಕುಂದ್ ಅವರು ಹೇಳಿದ್ದಾರೆ.

ಮುಕುಂದ್ ಜೈಶ್ರೀರಾಮ್‌ ಮುದ್ರೆಯನ್ನು ಹಾಕುತ್ತಿರುವುದನ್ನು ಸಮರ್ಥಿಸಿಕೊಂಡಿದ್ದು, ಕೈದಿಗಳ ಮನಪರಿವರ್ತನೆ ಪ್ರಯತ್ನಗಳ ಭಾಗವಾಗಿ ಜೈಲಿನಲ್ಲಿ ರಾಮಯಾಣದ ಸುಂದರಕಾಂಡ ಪಠಣದಂತಹ ಧಾರ್ಮಿಕ ವಿಧಿವಿಧಾನಗಳನ್ನು ಆಯೋಜಿಸಲಾಗುತ್ತಿದೆ ಮತ್ತು ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಯೋಜನೆಯಡಿ ಬ್ಲಾಕ್ ಪ್ರಿಂಟಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಹಿಂದೂ ಮತ್ತು ಮುಸ್ಲಿಂ ಕೈದಿಗಳು ಭಗವಾನ್ ರಾಮನ ಧ್ವಜಗಳನ್ನು ಬ್ಲಾಕ್ ಪ್ರಿಂಟ್ ಮಾಡುವಲ್ಲಿ ಸಹಕರಿಸುತ್ತಿದ್ದಾರೆ, ಇದನ್ನು ಸಂದರ್ಶಕರಿಗೆ ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಭದ್ರತಾ ಕಾರಣಗಳಿಗಾಗಿ ನಾವು ಸ್ಟಾಂಪ್ ವಿನ್ಯಾಸವನ್ನು ಬದಲಾಯಿಸುತ್ತಲೇ ಇದ್ದೇವೆ. ನಾವು ಇಂತಹ ಮುದ್ರೆಗಳನ್ನು ಬಳಸುತ್ತಿರುವುದು ಇದೇ ಮೊದಲಲ್ಲ. ಹಬ್ಬದ ಸಮಯದಲ್ಲಿ ನಾವು ‘ಹ್ಯಾಪಿ ದೀಪಾವಳಿ’ ಮುದ್ರೆಗಳನ್ನು ಬಳಸಿದ್ದೇವೆ. ಒಬ್ಬ ಖೈದಿಯನ್ನು ಭೇಟಿಯಾಗಲು ಅವನ ಕುಟುಂಬದ ಸದಸ್ಯರು, ಸ್ನೇಹಿತರು ಅಥವಾ ಸಂಬಂಧಿಕರು ಬಂದಾಗ ಅವರ ಕೈಯಲ್ಲಿ ‘ಜೈ ಶ್ರೀ ರಾಮ್’ ಮುದ್ರೆಯನ್ನು ಹಾಕಲಾಗುತ್ತದೆ ಎಂದು ಹೇಳಿದ್ದಾರೆ.

ಇದಲ್ಲದೆ ಜ.22ರಂದು ಕಾರಾಗೃಹದಲ್ಲಿ ಕೈದಿಗಳಿಗೆ ಪ್ರಾಣ ಪ್ರತಿಷ್ಠಾನ ಸಮಾರಂಭವನ್ನು ನೇರವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಇದಕ್ಕಾಗಿ ಸ್ಥಳದಲ್ಲಿ ದೊಡ್ಡ ಟಿವಿ ಪರದೆಯ ವ್ಯವಸ್ಥೆಯನ್ನು ಮಾಡಲಾಗಿತ್ತು. ಜೈಲಿನೊಳಗೆ ಕೈದಿಗಳು ಸುಮಾರು ಒಂದು ವಾರ ಕಾಲ ಸುಂದರ ಕಾಂಡವನ್ನು ಪಠಿಸಿದ್ದಾರೆ. ಭಜನೆ ,ಕೀರ್ತನೆ, ಪ್ರಸಾರ ವಿತರಣೆ ಹಾಗೂ ಭೋಜನಕೂಟಗಳನ್ನು ಈ ಅವಧಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೈಲು ಅಧೀಕ್ಷಕ ಭೀಮಸೇನ್ ಮುಕುಂದ್ ಅವರು ಹೇಳಿದ್ದಾರೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...