Homeಮುಖಪುಟಜೈಲಿನಲ್ಲಿ ಸಂದರ್ಶಕರ ಕೈಗೆ 'ಜೈ ಶ್ರೀ ರಾಮ್' ಮುದ್ರೆ ಹಾಕುತ್ತಿರುವ ಅಧಿಕಾರಿಗಳು!

ಜೈಲಿನಲ್ಲಿ ಸಂದರ್ಶಕರ ಕೈಗೆ ‘ಜೈ ಶ್ರೀ ರಾಮ್’ ಮುದ್ರೆ ಹಾಕುತ್ತಿರುವ ಅಧಿಕಾರಿಗಳು!

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ಆತಂಕಕಾರಿ ಬೆಳವಣಿಗೆ ನಡೆದಿದ್ದು, ಉತ್ತರಪ್ರದೇಶದ ಫರೂಕಾಬಾದ್‌ನಲ್ಲಿರುವ ಫತೇಘರ್ ಜೈಲಿನಲ್ಲಿ ಕೈದಿಗಳ ಸಂದರ್ಶಕರ ಕೈಗೆ  ‘ಜೈ ಶ್ರೀ ರಾಮ್’ ಎಂದು ಮುದ್ರೆ ಹಾಕಲಾಗುತ್ತಿದೆ, ಇದಲ್ಲದೆ ಜೈಲಿನಲ್ಲಿ ಭಜನೆ , ಕೀರ್ತನೆ, ರಾಮಯಾಣದ ಸುಂದರಕಾಂಡ ಪಠಣದಂತಹ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜೈಲಿನಲ್ಲಿ ವಿವಿಧ ಧರ್ಮದ ಕೈದಿಗಳಿದ್ದು, ಅವರ ಧಾರ್ಮಿಕ ಹಕ್ಕಿನ ಉಲ್ಲಂಘನೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಜೈಲು ಅಧೀಕ್ಷಕ ಭೀಮಸೇನ್ ಮುಕುಂದ್ ಅವರು ಮಾಹಿತಿಯನ್ನು ನೀಡಿದ್ದು, ಕೈದಿಗಳ ಭೇಟಿಗೆ ಆಗಮಿಸುವ ಸಂದರ್ಶಕರನ್ನು ಗುರುತಿಸಲು ಅವರ ಕೈಗಳಿಗೆ ಹಚ್ಚಲಾಗುತ್ತಿದ್ದ ಮಾಮೂಲಿ ಸ್ಟಾಂಪ್ ಮುದ್ರೆಯ ಬದಲಿಗೆ ಜೈಲಾಧಿಕಾರಿಗಳು ಕೇಸರಿ ಬಣ್ಣದ ಶಾಯಿಯಿಂದ ಬರೆದಿರುವ ‘ಜೈಶ್ರೀರಾಮ್’ ಮುದ್ರೆಯನ್ನು ಹಾಕಲಾಗುತ್ತಿದೆ. ಕಳೆದ ಒಂದು ವಾರದಿಂದ ಈ ಪದ್ದತಿ ಜಾರಿಯಲ್ಲಿದೆ ಎಂದು ಸ್ವತಃ ಜೈಲು ಅಧೀಕ್ಷಕ ಭೀಮಸೇನ್ ಮುಕುಂದ್ ಅವರು ಹೇಳಿದ್ದಾರೆ.

ಮುಕುಂದ್ ಜೈಶ್ರೀರಾಮ್‌ ಮುದ್ರೆಯನ್ನು ಹಾಕುತ್ತಿರುವುದನ್ನು ಸಮರ್ಥಿಸಿಕೊಂಡಿದ್ದು, ಕೈದಿಗಳ ಮನಪರಿವರ್ತನೆ ಪ್ರಯತ್ನಗಳ ಭಾಗವಾಗಿ ಜೈಲಿನಲ್ಲಿ ರಾಮಯಾಣದ ಸುಂದರಕಾಂಡ ಪಠಣದಂತಹ ಧಾರ್ಮಿಕ ವಿಧಿವಿಧಾನಗಳನ್ನು ಆಯೋಜಿಸಲಾಗುತ್ತಿದೆ ಮತ್ತು ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಯೋಜನೆಯಡಿ ಬ್ಲಾಕ್ ಪ್ರಿಂಟಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಹಿಂದೂ ಮತ್ತು ಮುಸ್ಲಿಂ ಕೈದಿಗಳು ಭಗವಾನ್ ರಾಮನ ಧ್ವಜಗಳನ್ನು ಬ್ಲಾಕ್ ಪ್ರಿಂಟ್ ಮಾಡುವಲ್ಲಿ ಸಹಕರಿಸುತ್ತಿದ್ದಾರೆ, ಇದನ್ನು ಸಂದರ್ಶಕರಿಗೆ ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಭದ್ರತಾ ಕಾರಣಗಳಿಗಾಗಿ ನಾವು ಸ್ಟಾಂಪ್ ವಿನ್ಯಾಸವನ್ನು ಬದಲಾಯಿಸುತ್ತಲೇ ಇದ್ದೇವೆ. ನಾವು ಇಂತಹ ಮುದ್ರೆಗಳನ್ನು ಬಳಸುತ್ತಿರುವುದು ಇದೇ ಮೊದಲಲ್ಲ. ಹಬ್ಬದ ಸಮಯದಲ್ಲಿ ನಾವು ‘ಹ್ಯಾಪಿ ದೀಪಾವಳಿ’ ಮುದ್ರೆಗಳನ್ನು ಬಳಸಿದ್ದೇವೆ. ಒಬ್ಬ ಖೈದಿಯನ್ನು ಭೇಟಿಯಾಗಲು ಅವನ ಕುಟುಂಬದ ಸದಸ್ಯರು, ಸ್ನೇಹಿತರು ಅಥವಾ ಸಂಬಂಧಿಕರು ಬಂದಾಗ ಅವರ ಕೈಯಲ್ಲಿ ‘ಜೈ ಶ್ರೀ ರಾಮ್’ ಮುದ್ರೆಯನ್ನು ಹಾಕಲಾಗುತ್ತದೆ ಎಂದು ಹೇಳಿದ್ದಾರೆ.

ಇದಲ್ಲದೆ ಜ.22ರಂದು ಕಾರಾಗೃಹದಲ್ಲಿ ಕೈದಿಗಳಿಗೆ ಪ್ರಾಣ ಪ್ರತಿಷ್ಠಾನ ಸಮಾರಂಭವನ್ನು ನೇರವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಇದಕ್ಕಾಗಿ ಸ್ಥಳದಲ್ಲಿ ದೊಡ್ಡ ಟಿವಿ ಪರದೆಯ ವ್ಯವಸ್ಥೆಯನ್ನು ಮಾಡಲಾಗಿತ್ತು. ಜೈಲಿನೊಳಗೆ ಕೈದಿಗಳು ಸುಮಾರು ಒಂದು ವಾರ ಕಾಲ ಸುಂದರ ಕಾಂಡವನ್ನು ಪಠಿಸಿದ್ದಾರೆ. ಭಜನೆ ,ಕೀರ್ತನೆ, ಪ್ರಸಾರ ವಿತರಣೆ ಹಾಗೂ ಭೋಜನಕೂಟಗಳನ್ನು ಈ ಅವಧಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೈಲು ಅಧೀಕ್ಷಕ ಭೀಮಸೇನ್ ಮುಕುಂದ್ ಅವರು ಹೇಳಿದ್ದಾರೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...