Homeಮುಖಪುಟಜೈಲಿನಲ್ಲಿ ಸಂದರ್ಶಕರ ಕೈಗೆ 'ಜೈ ಶ್ರೀ ರಾಮ್' ಮುದ್ರೆ ಹಾಕುತ್ತಿರುವ ಅಧಿಕಾರಿಗಳು!

ಜೈಲಿನಲ್ಲಿ ಸಂದರ್ಶಕರ ಕೈಗೆ ‘ಜೈ ಶ್ರೀ ರಾಮ್’ ಮುದ್ರೆ ಹಾಕುತ್ತಿರುವ ಅಧಿಕಾರಿಗಳು!

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ಆತಂಕಕಾರಿ ಬೆಳವಣಿಗೆ ನಡೆದಿದ್ದು, ಉತ್ತರಪ್ರದೇಶದ ಫರೂಕಾಬಾದ್‌ನಲ್ಲಿರುವ ಫತೇಘರ್ ಜೈಲಿನಲ್ಲಿ ಕೈದಿಗಳ ಸಂದರ್ಶಕರ ಕೈಗೆ  ‘ಜೈ ಶ್ರೀ ರಾಮ್’ ಎಂದು ಮುದ್ರೆ ಹಾಕಲಾಗುತ್ತಿದೆ, ಇದಲ್ಲದೆ ಜೈಲಿನಲ್ಲಿ ಭಜನೆ , ಕೀರ್ತನೆ, ರಾಮಯಾಣದ ಸುಂದರಕಾಂಡ ಪಠಣದಂತಹ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಜೈಲಿನಲ್ಲಿ ವಿವಿಧ ಧರ್ಮದ ಕೈದಿಗಳಿದ್ದು, ಅವರ ಧಾರ್ಮಿಕ ಹಕ್ಕಿನ ಉಲ್ಲಂಘನೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಜೈಲು ಅಧೀಕ್ಷಕ ಭೀಮಸೇನ್ ಮುಕುಂದ್ ಅವರು ಮಾಹಿತಿಯನ್ನು ನೀಡಿದ್ದು, ಕೈದಿಗಳ ಭೇಟಿಗೆ ಆಗಮಿಸುವ ಸಂದರ್ಶಕರನ್ನು ಗುರುತಿಸಲು ಅವರ ಕೈಗಳಿಗೆ ಹಚ್ಚಲಾಗುತ್ತಿದ್ದ ಮಾಮೂಲಿ ಸ್ಟಾಂಪ್ ಮುದ್ರೆಯ ಬದಲಿಗೆ ಜೈಲಾಧಿಕಾರಿಗಳು ಕೇಸರಿ ಬಣ್ಣದ ಶಾಯಿಯಿಂದ ಬರೆದಿರುವ ‘ಜೈಶ್ರೀರಾಮ್’ ಮುದ್ರೆಯನ್ನು ಹಾಕಲಾಗುತ್ತಿದೆ. ಕಳೆದ ಒಂದು ವಾರದಿಂದ ಈ ಪದ್ದತಿ ಜಾರಿಯಲ್ಲಿದೆ ಎಂದು ಸ್ವತಃ ಜೈಲು ಅಧೀಕ್ಷಕ ಭೀಮಸೇನ್ ಮುಕುಂದ್ ಅವರು ಹೇಳಿದ್ದಾರೆ.

ಮುಕುಂದ್ ಜೈಶ್ರೀರಾಮ್‌ ಮುದ್ರೆಯನ್ನು ಹಾಕುತ್ತಿರುವುದನ್ನು ಸಮರ್ಥಿಸಿಕೊಂಡಿದ್ದು, ಕೈದಿಗಳ ಮನಪರಿವರ್ತನೆ ಪ್ರಯತ್ನಗಳ ಭಾಗವಾಗಿ ಜೈಲಿನಲ್ಲಿ ರಾಮಯಾಣದ ಸುಂದರಕಾಂಡ ಪಠಣದಂತಹ ಧಾರ್ಮಿಕ ವಿಧಿವಿಧಾನಗಳನ್ನು ಆಯೋಜಿಸಲಾಗುತ್ತಿದೆ ಮತ್ತು ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಯೋಜನೆಯಡಿ ಬ್ಲಾಕ್ ಪ್ರಿಂಟಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಹಿಂದೂ ಮತ್ತು ಮುಸ್ಲಿಂ ಕೈದಿಗಳು ಭಗವಾನ್ ರಾಮನ ಧ್ವಜಗಳನ್ನು ಬ್ಲಾಕ್ ಪ್ರಿಂಟ್ ಮಾಡುವಲ್ಲಿ ಸಹಕರಿಸುತ್ತಿದ್ದಾರೆ, ಇದನ್ನು ಸಂದರ್ಶಕರಿಗೆ ಉಡುಗೊರೆಯಾಗಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಭದ್ರತಾ ಕಾರಣಗಳಿಗಾಗಿ ನಾವು ಸ್ಟಾಂಪ್ ವಿನ್ಯಾಸವನ್ನು ಬದಲಾಯಿಸುತ್ತಲೇ ಇದ್ದೇವೆ. ನಾವು ಇಂತಹ ಮುದ್ರೆಗಳನ್ನು ಬಳಸುತ್ತಿರುವುದು ಇದೇ ಮೊದಲಲ್ಲ. ಹಬ್ಬದ ಸಮಯದಲ್ಲಿ ನಾವು ‘ಹ್ಯಾಪಿ ದೀಪಾವಳಿ’ ಮುದ್ರೆಗಳನ್ನು ಬಳಸಿದ್ದೇವೆ. ಒಬ್ಬ ಖೈದಿಯನ್ನು ಭೇಟಿಯಾಗಲು ಅವನ ಕುಟುಂಬದ ಸದಸ್ಯರು, ಸ್ನೇಹಿತರು ಅಥವಾ ಸಂಬಂಧಿಕರು ಬಂದಾಗ ಅವರ ಕೈಯಲ್ಲಿ ‘ಜೈ ಶ್ರೀ ರಾಮ್’ ಮುದ್ರೆಯನ್ನು ಹಾಕಲಾಗುತ್ತದೆ ಎಂದು ಹೇಳಿದ್ದಾರೆ.

ಇದಲ್ಲದೆ ಜ.22ರಂದು ಕಾರಾಗೃಹದಲ್ಲಿ ಕೈದಿಗಳಿಗೆ ಪ್ರಾಣ ಪ್ರತಿಷ್ಠಾನ ಸಮಾರಂಭವನ್ನು ನೇರವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಇದಕ್ಕಾಗಿ ಸ್ಥಳದಲ್ಲಿ ದೊಡ್ಡ ಟಿವಿ ಪರದೆಯ ವ್ಯವಸ್ಥೆಯನ್ನು ಮಾಡಲಾಗಿತ್ತು. ಜೈಲಿನೊಳಗೆ ಕೈದಿಗಳು ಸುಮಾರು ಒಂದು ವಾರ ಕಾಲ ಸುಂದರ ಕಾಂಡವನ್ನು ಪಠಿಸಿದ್ದಾರೆ. ಭಜನೆ ,ಕೀರ್ತನೆ, ಪ್ರಸಾರ ವಿತರಣೆ ಹಾಗೂ ಭೋಜನಕೂಟಗಳನ್ನು ಈ ಅವಧಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೈಲು ಅಧೀಕ್ಷಕ ಭೀಮಸೇನ್ ಮುಕುಂದ್ ಅವರು ಹೇಳಿದ್ದಾರೆ.

ಇದನ್ನು ಓದಿ: ರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...