Homeಕರ್ನಾಟಕಕರ್ನಾಟಕಕ್ಕೂ ಬಂತು ವಿಸ್ಟಾಡೋಮ್ ರೈಲು: ಮಂಗಳೂರು-ಬೆಂಗಳೂರು ನಡುವೆ ಮೊದಲ ಓಡಾಟ

ಕರ್ನಾಟಕಕ್ಕೂ ಬಂತು ವಿಸ್ಟಾಡೋಮ್ ರೈಲು: ಮಂಗಳೂರು-ಬೆಂಗಳೂರು ನಡುವೆ ಮೊದಲ ಓಡಾಟ

- Advertisement -
- Advertisement -

ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಿರುವವರಿಗೆ ಅಲ್ಲಿನ ಪ್ರಕೃತಿ ಸೌಂದರ್ಯದ ಬಗ್ಗೆ ಹೇಳ ಬೇಕೆಂದಿಲ್ಲ. ಸಕಲೇಶಪುರ, ಮೂಡಿಗೆರೆ, ಸುಬ್ರಹ್ಮಣ್ಯ ವ್ಯಾಪ್ತಿಯ ಝರಿ ತೊರೆ ಗಿರಿ ಗಹ್ವರಗಳ ರುದ್ರ ರಮಣೀಯತೆಯೇ ಅಂತಹದ್ದು. ಪ್ರತಿವರ್ಷ ಪ್ರವಾಸಿಗರನ್ನು ಪಶ್ಚಿಮ ಘಟ್ಟದ ಈ ತಾಣ ತನ್ನತ್ತ ಕೈಬೀಸಿ ಕರೆಯುತ್ತದೆ.  ಪಶ್ಚಿಮ ಘಟ್ಟದ ವಿಶೇಷ ಪರಿಸರವನ್ನು ಸವಿಯಲಿಕ್ಕೆ ಈಗ ಹೊಸ ಹೊಸ ಸಾಧ್ಯತೆಗಳು ಆರಂಭವಾಗಿವೆ. ಪ್ರವಾಸೋದ್ಯಮವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಒಂದು ಹೊಸ ಪ್ರಯತ್ನಕ್ಕೆ ಕೈ ಹಾಕಿದೆ.

ಪಶ್ಚಿಮ ಘಟ್ಟದ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಇನ್ನು ಬೈಕ್ ಅಥವಾ ಕಾರಿನಲ್ಲಿಯೇ ತೆರಳ ಬೇಕೆಂದಿಲ್ಲ. ರೈಲಿನಲ್ಲಿ ಕೂಡ ಪ್ರವಾಸದ ಅದ್ಭುತ ಕ್ಷಣಗಳನ್ನು ಸವಿಯುವ ಅವಕಾಶ ಒದಗಿ ಬಂದಿದೆ. ರೈಲಿನಲ್ಲಿ ಪ್ರವಾಸ ಪಶ್ಚಿಮ ಘಟ್ಟ ಪ್ರವಾಸ ಏನಿದು ವಿಶೇಷ ಎಂಬ ಕುತೂಹಲವೇ?

ಹೌದು ರೈಲ್ವೆ ಇಲಖೆ ವಿಸ್ಟೊಡೋಮ್ ರೈಲ್ವೆ ಸೇವೆಯನ್ನು ಕರ್ನಾಟಕಕ್ಕೂ ವಿಸ್ತರಿಸಿದೆ. ಅದೂ ಮಂಗಳೂರು ಬೆಂಗಳೂರು ಮಾರ್ಗದಲ್ಲಿ. ವಿಸ್ಟೋಡಾಮ್ ಎಂಬ ಹೊಸ ಮಾದರಿಯ ರೈಲು ಈಗಾಗಲೇ ಡಾರ್ಜಿಲಿಂಗ್, ಶಿಮ್ಲಾ ಸೇರಿದಂತೆ ರಮ್ಯ ಮನೋಹರ ಪ್ರವಾಸಿ ತಾಣಗಳಲ್ಲಿ ಯಶಸ್ವಿಯಾಗಿ ಸಂಚರಿಸುತ್ತಿವೆ. ದಕ್ಷಿಣ ಭಾರತದಲ್ಲಿ ಇದುವರೆಗೆ ಇಂತಹ ರೈಲಿನ ವ್ಯವಸ್ಥೆ ಇದುವರೆಗೆ ಇರಲಿಲ್ಲ. ಮಂಗಳೂರು ಬೆಂಗಳೂರು ಮಾರ್ಗದಲ್ಲಿ ಈ ಹೊಸ ಮಾದರಿಯ ಪ್ರವಾಸಿ ವಶೇಷ ರೈಲಿನ ವ್ಯವಸ್ಥೆ ಭಾನುವಾರ ಆರಂಭವಾಗಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಜುಲೈ 11 ರ ಭಾನುವಾರದಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್‌ ನಿಲ್ಧಾಣದಲ್ಲಿ ಈ ರೈಲಿಗೆ ಹಸಿರು ನಿಶಾನೆಯನ್ನು ನೀಡಲಿದ್ದಾರೆ. ಈ ರೈಲು ವಾರದಲ್ಲಿ ಒಮ್ಮೆ ಮಂಗಳೂರು-ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ.

ವಿಸ್ಟಾಡೋಮ್ ಬೋಗಿಯ ವಿಶೇಷ 

ವಿಸ್ಟಾಡೋಮ್ ಬೋಗಿಗಳು ಸಂಪೂರ್ಣ ಪಾರದರ್ಶಕ ಗಾಜಿನಿಂದ ಮಾಡಲ್ಪಟ್ಟಿರುತ್ತವೆ. ವಿಶೇಷ ಪಾರದರ್ಶಕ ಗಾಜಿನ ಮೇಲ್ಛಾವಣಿ, ವಿಶೇಷ ಗಾಜಿನ ಕಿಟಕಿಗಳು, ಹೊರ ದೃಶ್ಯವನ್ನು ಬಿತ್ತರಿಸುವ ವಿಶೇಷ ಪರದೆ ಹೀಗೆ ಪ್ರಕೃತಿ ಸೌಂದರ್ಯವನ್ನು ಸವಿಯುವ ವಿಶೇಷ ವಿನ್ಯಾಸವನ್ನು ಹೊಂದಿದೆ. ವಿಸ್ಟಾಡೋಮ್  ಬೋಗಿಯಲ್ಲಿ ವಿಶೇಷ ಸಿಸಿಟಿವಿ, ಏಸಿ, ರೆಫ್ರಿಜಿರೇಟರ್‌, ಓವನ್, ಅಗ್ನಿಶಾಮಕ ಉಪಕರಣಗಳು, ಮೊಬೈಲ್ ಚಾರ್ಜಿಂಗ್ ಸಾಕೆಟ್, ಸ್ಟೀಲ್ ಲಗೇಜ್ ಕಪಾಟುಗಳು, ಮಿನಿ ಪ್ಯಾಂಟ್ರಿ, ಜೈವಿಕ ಶೌಚಾಲಯ ಸೇರಿದಂತೆ ಇನ್ನಿತರ ಅತ್ಯಾಧುನಿಕ ಸೌಲಭ್ಯ ಲಭ್ಯವಿದೆ.

ಸದ್ಯ ಬೆಂಗಳೂರು ಮಂಗಳೂರು ನಡುವಿನ ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿಗೆ ಎರಡು ವಿಸ್ಟಾಡೋಮ್ ಬೋಗಿಗಳನ್ನು ಅಳವಡಿಸಲಾಗಿದ್ದು ಪ್ರತಿ ಬೋಗಿಯಲ್ಲಿ 44 ಜನರಿಗೆ ಪ್ರಯಾಣಿಸುವ ಅವಕಾಶವಿದೆ.

ಇದನ್ನೂ ಓದಿ: ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...