Homeಕರ್ನಾಟಕಕರ್ನಾಟಕಕ್ಕೂ ಬಂತು ವಿಸ್ಟಾಡೋಮ್ ರೈಲು: ಮಂಗಳೂರು-ಬೆಂಗಳೂರು ನಡುವೆ ಮೊದಲ ಓಡಾಟ

ಕರ್ನಾಟಕಕ್ಕೂ ಬಂತು ವಿಸ್ಟಾಡೋಮ್ ರೈಲು: ಮಂಗಳೂರು-ಬೆಂಗಳೂರು ನಡುವೆ ಮೊದಲ ಓಡಾಟ

- Advertisement -
- Advertisement -

ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಿರುವವರಿಗೆ ಅಲ್ಲಿನ ಪ್ರಕೃತಿ ಸೌಂದರ್ಯದ ಬಗ್ಗೆ ಹೇಳ ಬೇಕೆಂದಿಲ್ಲ. ಸಕಲೇಶಪುರ, ಮೂಡಿಗೆರೆ, ಸುಬ್ರಹ್ಮಣ್ಯ ವ್ಯಾಪ್ತಿಯ ಝರಿ ತೊರೆ ಗಿರಿ ಗಹ್ವರಗಳ ರುದ್ರ ರಮಣೀಯತೆಯೇ ಅಂತಹದ್ದು. ಪ್ರತಿವರ್ಷ ಪ್ರವಾಸಿಗರನ್ನು ಪಶ್ಚಿಮ ಘಟ್ಟದ ಈ ತಾಣ ತನ್ನತ್ತ ಕೈಬೀಸಿ ಕರೆಯುತ್ತದೆ.  ಪಶ್ಚಿಮ ಘಟ್ಟದ ವಿಶೇಷ ಪರಿಸರವನ್ನು ಸವಿಯಲಿಕ್ಕೆ ಈಗ ಹೊಸ ಹೊಸ ಸಾಧ್ಯತೆಗಳು ಆರಂಭವಾಗಿವೆ. ಪ್ರವಾಸೋದ್ಯಮವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಒಂದು ಹೊಸ ಪ್ರಯತ್ನಕ್ಕೆ ಕೈ ಹಾಕಿದೆ.

ಪಶ್ಚಿಮ ಘಟ್ಟದ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಇನ್ನು ಬೈಕ್ ಅಥವಾ ಕಾರಿನಲ್ಲಿಯೇ ತೆರಳ ಬೇಕೆಂದಿಲ್ಲ. ರೈಲಿನಲ್ಲಿ ಕೂಡ ಪ್ರವಾಸದ ಅದ್ಭುತ ಕ್ಷಣಗಳನ್ನು ಸವಿಯುವ ಅವಕಾಶ ಒದಗಿ ಬಂದಿದೆ. ರೈಲಿನಲ್ಲಿ ಪ್ರವಾಸ ಪಶ್ಚಿಮ ಘಟ್ಟ ಪ್ರವಾಸ ಏನಿದು ವಿಶೇಷ ಎಂಬ ಕುತೂಹಲವೇ?

ಹೌದು ರೈಲ್ವೆ ಇಲಖೆ ವಿಸ್ಟೊಡೋಮ್ ರೈಲ್ವೆ ಸೇವೆಯನ್ನು ಕರ್ನಾಟಕಕ್ಕೂ ವಿಸ್ತರಿಸಿದೆ. ಅದೂ ಮಂಗಳೂರು ಬೆಂಗಳೂರು ಮಾರ್ಗದಲ್ಲಿ. ವಿಸ್ಟೋಡಾಮ್ ಎಂಬ ಹೊಸ ಮಾದರಿಯ ರೈಲು ಈಗಾಗಲೇ ಡಾರ್ಜಿಲಿಂಗ್, ಶಿಮ್ಲಾ ಸೇರಿದಂತೆ ರಮ್ಯ ಮನೋಹರ ಪ್ರವಾಸಿ ತಾಣಗಳಲ್ಲಿ ಯಶಸ್ವಿಯಾಗಿ ಸಂಚರಿಸುತ್ತಿವೆ. ದಕ್ಷಿಣ ಭಾರತದಲ್ಲಿ ಇದುವರೆಗೆ ಇಂತಹ ರೈಲಿನ ವ್ಯವಸ್ಥೆ ಇದುವರೆಗೆ ಇರಲಿಲ್ಲ. ಮಂಗಳೂರು ಬೆಂಗಳೂರು ಮಾರ್ಗದಲ್ಲಿ ಈ ಹೊಸ ಮಾದರಿಯ ಪ್ರವಾಸಿ ವಶೇಷ ರೈಲಿನ ವ್ಯವಸ್ಥೆ ಭಾನುವಾರ ಆರಂಭವಾಗಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಜುಲೈ 11 ರ ಭಾನುವಾರದಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್‌ ನಿಲ್ಧಾಣದಲ್ಲಿ ಈ ರೈಲಿಗೆ ಹಸಿರು ನಿಶಾನೆಯನ್ನು ನೀಡಲಿದ್ದಾರೆ. ಈ ರೈಲು ವಾರದಲ್ಲಿ ಒಮ್ಮೆ ಮಂಗಳೂರು-ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ.

ವಿಸ್ಟಾಡೋಮ್ ಬೋಗಿಯ ವಿಶೇಷ 

ವಿಸ್ಟಾಡೋಮ್ ಬೋಗಿಗಳು ಸಂಪೂರ್ಣ ಪಾರದರ್ಶಕ ಗಾಜಿನಿಂದ ಮಾಡಲ್ಪಟ್ಟಿರುತ್ತವೆ. ವಿಶೇಷ ಪಾರದರ್ಶಕ ಗಾಜಿನ ಮೇಲ್ಛಾವಣಿ, ವಿಶೇಷ ಗಾಜಿನ ಕಿಟಕಿಗಳು, ಹೊರ ದೃಶ್ಯವನ್ನು ಬಿತ್ತರಿಸುವ ವಿಶೇಷ ಪರದೆ ಹೀಗೆ ಪ್ರಕೃತಿ ಸೌಂದರ್ಯವನ್ನು ಸವಿಯುವ ವಿಶೇಷ ವಿನ್ಯಾಸವನ್ನು ಹೊಂದಿದೆ. ವಿಸ್ಟಾಡೋಮ್  ಬೋಗಿಯಲ್ಲಿ ವಿಶೇಷ ಸಿಸಿಟಿವಿ, ಏಸಿ, ರೆಫ್ರಿಜಿರೇಟರ್‌, ಓವನ್, ಅಗ್ನಿಶಾಮಕ ಉಪಕರಣಗಳು, ಮೊಬೈಲ್ ಚಾರ್ಜಿಂಗ್ ಸಾಕೆಟ್, ಸ್ಟೀಲ್ ಲಗೇಜ್ ಕಪಾಟುಗಳು, ಮಿನಿ ಪ್ಯಾಂಟ್ರಿ, ಜೈವಿಕ ಶೌಚಾಲಯ ಸೇರಿದಂತೆ ಇನ್ನಿತರ ಅತ್ಯಾಧುನಿಕ ಸೌಲಭ್ಯ ಲಭ್ಯವಿದೆ.

ಸದ್ಯ ಬೆಂಗಳೂರು ಮಂಗಳೂರು ನಡುವಿನ ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿಗೆ ಎರಡು ವಿಸ್ಟಾಡೋಮ್ ಬೋಗಿಗಳನ್ನು ಅಳವಡಿಸಲಾಗಿದ್ದು ಪ್ರತಿ ಬೋಗಿಯಲ್ಲಿ 44 ಜನರಿಗೆ ಪ್ರಯಾಣಿಸುವ ಅವಕಾಶವಿದೆ.

ಇದನ್ನೂ ಓದಿ: ಮೈದುಂಬಿ ಹರಿಯುವ ನದಿಗಳು, ಧುಮ್ಮಿಕ್ಕುತ್ತಿರುವ ಜಲಪಾತಗಳ ನಡುವೆ ಬಣಗುಡುತ್ತಿರುವ ಮಲೆನಾಡಿನ ಪ್ರವಾಸಿ ತಾಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...