Homeಮುಖಪುಟಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳಕ್ಕೆ ಯತ್ನ: ಬೆಂಗಳೂರಿನಲ್ಲಿ ನೂತನ ಪತ್ರಿಕೋದ್ಯಮ ಕಾಲೇಜು ಆರಂಭ

ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳಕ್ಕೆ ಯತ್ನ: ಬೆಂಗಳೂರಿನಲ್ಲಿ ನೂತನ ಪತ್ರಿಕೋದ್ಯಮ ಕಾಲೇಜು ಆರಂಭ

- Advertisement -
- Advertisement -

ಶಿಕ್ಷಣದಿಂದ ವಂಚಿತರಾದ ಮತ್ತು ಶೋಷಿತ ಸಮುದಾಯಗಳ ಅಭಿವೃದ್ಧಿಗಾಗಿ ಕಳೆದ 30 ವರ್ಷಗಳಿಂದ ಕೆಲಸ ಮಾಡುತ್ತಿರುವ ವಿಸ್ತಾರ್‌ ಟ್ರಸ್ಟ್‌, ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳ ಮತ್ತು ಮುಖ್ಯವಾಹಿನಿ ಮಾಧ್ಯಮಗಳ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಹೆಚ್ಚಾಗುವಂತೆ ಮಾಡುವ ಪ್ರಯತ್ನಕ್ಕಾಗಿ ಬೆಂಗಳೂರಿನಲ್ಲಿ ‘ವಿಸ್ತಾರ್‌ ಕಾಲೇಜ್‌ ಆಫ್‌ ಆರ್ಟ್ಸ್‌ ಫಾರ್‌ ವುಮೆನ್ಸ್‌’ (VCAW) ಎಂಬ ನೂತನ ಪದವಿ ಕಾಲೇಜನ್ನು ಪ್ರಾರಂಭಿಸಿದೆ.

ವಿದ್ಯಾರ್ಥಿನಿಯರಿಗಾಗಿ ‘ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಇಂಗ್ಲಿಷ್‌’ ನಲ್ಲಿ ಪದವಿ ತರಗತಿಗಳು ಇದೇ ನವೆಂಬರ್ ತಿಂಗಳಿನಿಂದ ಆರಂಭವಾಗಲಿದೆ. ಬೆಂಗಳೂರು ನಗರದ ಹೊರವಲಯದ ಹೆಣ್ಣೂರು ರಸ್ತೆಯಲ್ಲಿರುವ ಗುಬ್ಬಿ ಕ್ಯಾಂಪಸ್‌ನಲ್ಲಿ ತರಗತಿಗಳು ಆರಂಭವಾಗಲಿವೆ. ಇಂಗ್ಲಿಷ್ ಭಾಷೆಯಲ್ಲಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ವಿಶೇಷ ಬ್ರಿಡ್ಜ್‌ಕೋರ್ಸ್ ಸಹ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ವಿಸ್ತಾರ್‌ ಟ್ರಸ್ಟ್‌ನ ಸಂಸ್ಥಾಪಕರು ಮತ್ತು ಕಾರ್ಯನಿರ್ವಾಹಕ ಟ್ರಸ್ಟಿಯಾದ ದೇವಿಡ್‌ ಸೆಲ್ವರಾಜ್‌, “ನೂತನ ಕಾಲೇಜಿನಲ್ಲಿ ಸಮರ್ಥ ಸಿಬ್ಬಂದಿ ಮತ್ತು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೋಧಿಸುವ ಸಹಾಯಕ ಪ್ರಾಧ್ಯಪಕರು ಇದ್ದಾರೆ. ವೃತ್ತಿನಿರತ ಪತ್ರಕರ್ತರು, ನೀತಿ ನಿರೂಪಕರು ಮತ್ತು ಸಾರ್ವಜನಿಕ ಬುದ್ಧಿಜೀವಿಗಳು ಸಹ ತರಗತಿಗಳನ್ನು ತೆಗೆದುಕೊಳ್ಳುತ್ತಾರೆ. ಇಲ್ಲಿನ ವಿದ್ಯಾರ್ಥಿಗಳಿಗೆ ಮುಖ್ಯವಾಹಿನಿ ಮತ್ತು ಪರ್ಯಾಯ ಮಾಧ್ಯಮಗಳಲ್ಲಿ ಇಂಟರ್ನ್‌ಶಿಪ್ ಮಾಡಲು ಮತ್ತು ಉದ್ಯೋಗ ಒದಗಿಸಲು ನೆರವು ನೀಡಲಾಗುತ್ತದೆ. ನೇರ ತರಗತಿ ಮತ್ತು ಆನ್‌ಲೈನ್ ಮೂಲಕ ಕಲಿಕೆ ಎರಡು ರೀತಿಯಲ್ಲಿ ಕಲಿಸುತ್ತಿದ್ದು, ಬೆಂಗಳೂರಿನಲ್ಲಿರುವ ಆರು ಎಕರೆ ವಿಶಾಲ ಕ್ಯಾಂಪಸ್‌ನಲ್ಲಿ ನೇರ ತರಗತಿಗಳು ನಡೆಯುತ್ತವೆ” ಎಂದಿದ್ದಾರೆ.

“ಸಾಮಾಜಿಕ ಬದ್ದತೆ ಹೊಂದಿರುವ ಪತ್ರಕರ್ತರಿಗೆ ಈ ಕೋರ್ಸ್‌ ಅನ್ನು ಅರ್ಪಿಸುತ್ತೇವೆ. ಈ ಸಂದರ್ಭದಲ್ಲಿ ನಮಗೆ ಗೌರಿ ಲಂಕೇಶ್‌ ಮತ್ತು ರಾಮನ್‌ ಕಶ್ಯಪ್‌ ನೆನಪಾಗುತ್ತಾರೆ. ಗೌರಿ ಕರ್ನಾಟಕದ ಪ್ರಸಿದ್ಧ ಪತ್ರಕರ್ತೆಯಾಗಿದ್ದರೆ ರಾಮನ್‌ ಲಖಿಂಪುರ್‌ ಖೇರಿಯಲ್ಲಿ ರೈತರ ಹೋರಾಟವನ್ನು ವರದಿ ಮಾಡುವಾಗ ಕೊಲೆಯಾದ ಪತ್ರಕರ್ತರಾಗಿದ್ದಾರೆ. ನಮ್ಮ ಕಾಲೇಜಿನ ಪ್ರಾರಂಭದ ಸಮಯದಲ್ಲಿಯೇ ಫಿಲಿಫೈನ್ಸ್‌ನ ಪತ್ರಕರ್ತೆ ಶ್ರೀಮತಿ ಮರಿಯಾ ರೆಸ್ಸಾ ಅವರಿಗೆ 2021ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿ ಲಭಿಸಿದೆ. ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ರಕ್ಷಿಸುವ ನಿಟ್ಟಿನಲ್ಲಿ ಅವರ ನಿರಂತರ ಬದ್ಧತೆಯ ಕೆಲಸವನ್ನು ನಾವು ಪ್ರಶಂಸಿಸುತ್ತೇವೆ” ಎಂದಿದ್ದಾರೆ.

“ಪ್ರಜಾಪ್ರಭುತ್ವ ಮೌಲ್ಯಗಳನ್ನು ಹೆಚ್ಚಿಸುವುದು ನಮ್ಮ ನೈತಿಕ ಹೊಣೆಗಾರಿಕೆ ಎಂದು ನಾವು ನಂಬುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಖಚಿತಪಡಿಸುವುದು ಅದರ ಒಂದು ಮಾರ್ಗವಾಗಿದೆ. ಮೂಲಭೂತ ಹಕ್ಕುಗಳು ಎಲ್ಲರಿಗೂ ಸಮಾನವಾಗಿ ಸಿಗುವಂತೆ ಮಾಡುವುದು ನಮ್ಮ ಯೋಜನೆಯ ಉದ್ದೇಶವಾಗಿದೆ” ಎಂದು ಅವರು ವಿವರಿಸಿದ್ದಾರೆ.

‘ಮಾಧ್ಯಮಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಅತಿ ಕಡಿಮೆ ಮಟ್ಟದಲ್ಲಿದೆ. ಮುಖ್ಯವಾಹಿನಿ ಮಾಧ್ಯಮಗಳ ಸಂಪಾದಕರ ಮತ್ತು ಮುಖ್ಯ ಹುದ್ದೆಗಳಲ್ಲಿ ಮಹಿಳೆಯರು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ ಇದೆ. ಹಾಗಾಗಿ ಅಲ್ಲಿ ಲಿಂಗ ಸಮಾನತೆಯನ್ನು ಸಾಧಿಸುವುದು, ಅತ್ಯುತ್ತಮ ಶಿಕ್ಷಣ ನೀಡಿ, ಗುಣಮಟ್ಟದ ಮಹಿಳಾ ಪತ್ರಕರ್ತರನ್ನು ಸೃಷ್ಟಿಸುವುದು ನಮ್ಮ ಮೊದಲ ಉದ್ದೇಶವಾಗಿದೆ. ಮುಖ್ಯವಾಹಿನಿ ಮಾಧ್ಯಮಗಳಿಂದ ಹೊರಗುಳಿದಿರುವ ಜನಸಾಮಾನ್ಯರ, ಶೋಷಿತರ ಸಮಸ್ಯೆಗಳು, ಸಮಕಾಲೀನ ವಿಷಯಗಳು ಮುನ್ನೆಲೆಗೆ ಬರುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಎರಡನೆ ಉದ್ದೇಶ.  ತಳ ಸಮುದಾಯಗಳ ಯುವತಿಯರಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಡುವುದು ಮತ್ತು ಉದ್ಯೋಗದ ಸಾಧ್ಯತೆಗಳನ್ನು ವಿಸ್ತರಿಸುವುದು ನಮ್ಮ ಮೂರನೇ ಉದ್ದೇಶ. ಈ ವಿಷಯಗಳನ್ನು ಕೇಂದ್ರೀಕರಿಸಿ ಪದವಿ ಶಿಕ್ಷಣವನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

VCAW ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಸಂಯೋಜಿತವಾಗಿದೆ. ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಅರಂಭವಾಗಿದ್ದು, ಹಲವು ಪರಿಣಿತ ಪತ್ರಕರ್ತರಿಂದ ತರಗತಿಗಳು ನಡೆಯಲಿವೆ. ಕನ್ನಡ ಭಾಷೆಗೆ ಮಹತ್ವ ನೀಡಿರುವ ಕಾಲೇಜು ಕನ್ನಡ ಪ್ರಾಧ್ಯಾಪಕರಾದ ನಾಗಮಣಿ ಶಿವಾರರನ್ನು ಪ್ರಾಂಶುಪಾಲರನ್ನಾಗಿ ನೇಮಿಸಿದೆ.

ಕಾಲೇಜಿಗೆ ಸೇರಲು ಆಸಕ್ತಿ ಉಳ್ಳವರು https://visthar.org/ ಅಥವಾ ಸಂಸ್ಥೆಯ ಅಖಿಲ ವಿದ್ಯಾಸಂದ್ರ (9845250955) ಅವರನ್ನು ಸಂಪರ್ಕಿಸಬಹುದು.


ಇದನ್ನೂ ಓದಿ; ರಾಷ್ಟ್ರೀಯ ಶಿಕ್ಷಣ ನೀತಿ 2020; ಶಿಕ್ಷಕರ ಮೇಲಿನ ಪರಿಣಾಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...