Homeಮುಖಪುಟಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳಕ್ಕೆ ಯತ್ನ: ಬೆಂಗಳೂರಿನಲ್ಲಿ ನೂತನ ಪತ್ರಿಕೋದ್ಯಮ ಕಾಲೇಜು ಆರಂಭ

ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳಕ್ಕೆ ಯತ್ನ: ಬೆಂಗಳೂರಿನಲ್ಲಿ ನೂತನ ಪತ್ರಿಕೋದ್ಯಮ ಕಾಲೇಜು ಆರಂಭ

- Advertisement -
- Advertisement -

ಶಿಕ್ಷಣದಿಂದ ವಂಚಿತರಾದ ಮತ್ತು ಶೋಷಿತ ಸಮುದಾಯಗಳ ಅಭಿವೃದ್ಧಿಗಾಗಿ ಕಳೆದ 30 ವರ್ಷಗಳಿಂದ ಕೆಲಸ ಮಾಡುತ್ತಿರುವ ವಿಸ್ತಾರ್‌ ಟ್ರಸ್ಟ್‌, ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳ ಮತ್ತು ಮುಖ್ಯವಾಹಿನಿ ಮಾಧ್ಯಮಗಳ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಹೆಚ್ಚಾಗುವಂತೆ ಮಾಡುವ ಪ್ರಯತ್ನಕ್ಕಾಗಿ ಬೆಂಗಳೂರಿನಲ್ಲಿ ‘ವಿಸ್ತಾರ್‌ ಕಾಲೇಜ್‌ ಆಫ್‌ ಆರ್ಟ್ಸ್‌ ಫಾರ್‌ ವುಮೆನ್ಸ್‌’ (VCAW) ಎಂಬ ನೂತನ ಪದವಿ ಕಾಲೇಜನ್ನು ಪ್ರಾರಂಭಿಸಿದೆ.

ವಿದ್ಯಾರ್ಥಿನಿಯರಿಗಾಗಿ ‘ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಇಂಗ್ಲಿಷ್‌’ ನಲ್ಲಿ ಪದವಿ ತರಗತಿಗಳು ಇದೇ ನವೆಂಬರ್ ತಿಂಗಳಿನಿಂದ ಆರಂಭವಾಗಲಿದೆ. ಬೆಂಗಳೂರು ನಗರದ ಹೊರವಲಯದ ಹೆಣ್ಣೂರು ರಸ್ತೆಯಲ್ಲಿರುವ ಗುಬ್ಬಿ ಕ್ಯಾಂಪಸ್‌ನಲ್ಲಿ ತರಗತಿಗಳು ಆರಂಭವಾಗಲಿವೆ. ಇಂಗ್ಲಿಷ್ ಭಾಷೆಯಲ್ಲಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ವಿಶೇಷ ಬ್ರಿಡ್ಜ್‌ಕೋರ್ಸ್ ಸಹ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ವಿಸ್ತಾರ್‌ ಟ್ರಸ್ಟ್‌ನ ಸಂಸ್ಥಾಪಕರು ಮತ್ತು ಕಾರ್ಯನಿರ್ವಾಹಕ ಟ್ರಸ್ಟಿಯಾದ ದೇವಿಡ್‌ ಸೆಲ್ವರಾಜ್‌, “ನೂತನ ಕಾಲೇಜಿನಲ್ಲಿ ಸಮರ್ಥ ಸಿಬ್ಬಂದಿ ಮತ್ತು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೋಧಿಸುವ ಸಹಾಯಕ ಪ್ರಾಧ್ಯಪಕರು ಇದ್ದಾರೆ. ವೃತ್ತಿನಿರತ ಪತ್ರಕರ್ತರು, ನೀತಿ ನಿರೂಪಕರು ಮತ್ತು ಸಾರ್ವಜನಿಕ ಬುದ್ಧಿಜೀವಿಗಳು ಸಹ ತರಗತಿಗಳನ್ನು ತೆಗೆದುಕೊಳ್ಳುತ್ತಾರೆ. ಇಲ್ಲಿನ ವಿದ್ಯಾರ್ಥಿಗಳಿಗೆ ಮುಖ್ಯವಾಹಿನಿ ಮತ್ತು ಪರ್ಯಾಯ ಮಾಧ್ಯಮಗಳಲ್ಲಿ ಇಂಟರ್ನ್‌ಶಿಪ್ ಮಾಡಲು ಮತ್ತು ಉದ್ಯೋಗ ಒದಗಿಸಲು ನೆರವು ನೀಡಲಾಗುತ್ತದೆ. ನೇರ ತರಗತಿ ಮತ್ತು ಆನ್‌ಲೈನ್ ಮೂಲಕ ಕಲಿಕೆ ಎರಡು ರೀತಿಯಲ್ಲಿ ಕಲಿಸುತ್ತಿದ್ದು, ಬೆಂಗಳೂರಿನಲ್ಲಿರುವ ಆರು ಎಕರೆ ವಿಶಾಲ ಕ್ಯಾಂಪಸ್‌ನಲ್ಲಿ ನೇರ ತರಗತಿಗಳು ನಡೆಯುತ್ತವೆ” ಎಂದಿದ್ದಾರೆ.

“ಸಾಮಾಜಿಕ ಬದ್ದತೆ ಹೊಂದಿರುವ ಪತ್ರಕರ್ತರಿಗೆ ಈ ಕೋರ್ಸ್‌ ಅನ್ನು ಅರ್ಪಿಸುತ್ತೇವೆ. ಈ ಸಂದರ್ಭದಲ್ಲಿ ನಮಗೆ ಗೌರಿ ಲಂಕೇಶ್‌ ಮತ್ತು ರಾಮನ್‌ ಕಶ್ಯಪ್‌ ನೆನಪಾಗುತ್ತಾರೆ. ಗೌರಿ ಕರ್ನಾಟಕದ ಪ್ರಸಿದ್ಧ ಪತ್ರಕರ್ತೆಯಾಗಿದ್ದರೆ ರಾಮನ್‌ ಲಖಿಂಪುರ್‌ ಖೇರಿಯಲ್ಲಿ ರೈತರ ಹೋರಾಟವನ್ನು ವರದಿ ಮಾಡುವಾಗ ಕೊಲೆಯಾದ ಪತ್ರಕರ್ತರಾಗಿದ್ದಾರೆ. ನಮ್ಮ ಕಾಲೇಜಿನ ಪ್ರಾರಂಭದ ಸಮಯದಲ್ಲಿಯೇ ಫಿಲಿಫೈನ್ಸ್‌ನ ಪತ್ರಕರ್ತೆ ಶ್ರೀಮತಿ ಮರಿಯಾ ರೆಸ್ಸಾ ಅವರಿಗೆ 2021ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿ ಲಭಿಸಿದೆ. ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ರಕ್ಷಿಸುವ ನಿಟ್ಟಿನಲ್ಲಿ ಅವರ ನಿರಂತರ ಬದ್ಧತೆಯ ಕೆಲಸವನ್ನು ನಾವು ಪ್ರಶಂಸಿಸುತ್ತೇವೆ” ಎಂದಿದ್ದಾರೆ.

“ಪ್ರಜಾಪ್ರಭುತ್ವ ಮೌಲ್ಯಗಳನ್ನು ಹೆಚ್ಚಿಸುವುದು ನಮ್ಮ ನೈತಿಕ ಹೊಣೆಗಾರಿಕೆ ಎಂದು ನಾವು ನಂಬುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಖಚಿತಪಡಿಸುವುದು ಅದರ ಒಂದು ಮಾರ್ಗವಾಗಿದೆ. ಮೂಲಭೂತ ಹಕ್ಕುಗಳು ಎಲ್ಲರಿಗೂ ಸಮಾನವಾಗಿ ಸಿಗುವಂತೆ ಮಾಡುವುದು ನಮ್ಮ ಯೋಜನೆಯ ಉದ್ದೇಶವಾಗಿದೆ” ಎಂದು ಅವರು ವಿವರಿಸಿದ್ದಾರೆ.

‘ಮಾಧ್ಯಮಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಅತಿ ಕಡಿಮೆ ಮಟ್ಟದಲ್ಲಿದೆ. ಮುಖ್ಯವಾಹಿನಿ ಮಾಧ್ಯಮಗಳ ಸಂಪಾದಕರ ಮತ್ತು ಮುಖ್ಯ ಹುದ್ದೆಗಳಲ್ಲಿ ಮಹಿಳೆಯರು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ ಇದೆ. ಹಾಗಾಗಿ ಅಲ್ಲಿ ಲಿಂಗ ಸಮಾನತೆಯನ್ನು ಸಾಧಿಸುವುದು, ಅತ್ಯುತ್ತಮ ಶಿಕ್ಷಣ ನೀಡಿ, ಗುಣಮಟ್ಟದ ಮಹಿಳಾ ಪತ್ರಕರ್ತರನ್ನು ಸೃಷ್ಟಿಸುವುದು ನಮ್ಮ ಮೊದಲ ಉದ್ದೇಶವಾಗಿದೆ. ಮುಖ್ಯವಾಹಿನಿ ಮಾಧ್ಯಮಗಳಿಂದ ಹೊರಗುಳಿದಿರುವ ಜನಸಾಮಾನ್ಯರ, ಶೋಷಿತರ ಸಮಸ್ಯೆಗಳು, ಸಮಕಾಲೀನ ವಿಷಯಗಳು ಮುನ್ನೆಲೆಗೆ ಬರುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಎರಡನೆ ಉದ್ದೇಶ.  ತಳ ಸಮುದಾಯಗಳ ಯುವತಿಯರಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಡುವುದು ಮತ್ತು ಉದ್ಯೋಗದ ಸಾಧ್ಯತೆಗಳನ್ನು ವಿಸ್ತರಿಸುವುದು ನಮ್ಮ ಮೂರನೇ ಉದ್ದೇಶ. ಈ ವಿಷಯಗಳನ್ನು ಕೇಂದ್ರೀಕರಿಸಿ ಪದವಿ ಶಿಕ್ಷಣವನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

VCAW ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಸಂಯೋಜಿತವಾಗಿದೆ. ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಅರಂಭವಾಗಿದ್ದು, ಹಲವು ಪರಿಣಿತ ಪತ್ರಕರ್ತರಿಂದ ತರಗತಿಗಳು ನಡೆಯಲಿವೆ. ಕನ್ನಡ ಭಾಷೆಗೆ ಮಹತ್ವ ನೀಡಿರುವ ಕಾಲೇಜು ಕನ್ನಡ ಪ್ರಾಧ್ಯಾಪಕರಾದ ನಾಗಮಣಿ ಶಿವಾರರನ್ನು ಪ್ರಾಂಶುಪಾಲರನ್ನಾಗಿ ನೇಮಿಸಿದೆ.

ಕಾಲೇಜಿಗೆ ಸೇರಲು ಆಸಕ್ತಿ ಉಳ್ಳವರು https://visthar.org/ ಅಥವಾ ಸಂಸ್ಥೆಯ ಅಖಿಲ ವಿದ್ಯಾಸಂದ್ರ (9845250955) ಅವರನ್ನು ಸಂಪರ್ಕಿಸಬಹುದು.


ಇದನ್ನೂ ಓದಿ; ರಾಷ್ಟ್ರೀಯ ಶಿಕ್ಷಣ ನೀತಿ 2020; ಶಿಕ್ಷಕರ ಮೇಲಿನ ಪರಿಣಾಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...

ಮಹಾರಾಷ್ಟ್ರ: ನಾಗ್ಪುರದ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ, 17ಸಾವು, 18 ಜನರಿಗೆ ಗಂಭೀರ ಗಾಯ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದು, 18 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ನಾಗ್ಪುರ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಯುದ್ಧ ಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸ್ಥಳಾಂತರಿಸಲು ತುರ್ತು ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್, ಯುಎಇ, ಇರಾನ್ ಮತ್ತು ಕತಾರ್ ಸೇರಿದಂತೆ ಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ...