Homeಮುಖಪುಟಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳಕ್ಕೆ ಯತ್ನ: ಬೆಂಗಳೂರಿನಲ್ಲಿ ನೂತನ ಪತ್ರಿಕೋದ್ಯಮ ಕಾಲೇಜು ಆರಂಭ

ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳಕ್ಕೆ ಯತ್ನ: ಬೆಂಗಳೂರಿನಲ್ಲಿ ನೂತನ ಪತ್ರಿಕೋದ್ಯಮ ಕಾಲೇಜು ಆರಂಭ

- Advertisement -
- Advertisement -

ಶಿಕ್ಷಣದಿಂದ ವಂಚಿತರಾದ ಮತ್ತು ಶೋಷಿತ ಸಮುದಾಯಗಳ ಅಭಿವೃದ್ಧಿಗಾಗಿ ಕಳೆದ 30 ವರ್ಷಗಳಿಂದ ಕೆಲಸ ಮಾಡುತ್ತಿರುವ ವಿಸ್ತಾರ್‌ ಟ್ರಸ್ಟ್‌, ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳ ಮತ್ತು ಮುಖ್ಯವಾಹಿನಿ ಮಾಧ್ಯಮಗಳ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಹೆಚ್ಚಾಗುವಂತೆ ಮಾಡುವ ಪ್ರಯತ್ನಕ್ಕಾಗಿ ಬೆಂಗಳೂರಿನಲ್ಲಿ ‘ವಿಸ್ತಾರ್‌ ಕಾಲೇಜ್‌ ಆಫ್‌ ಆರ್ಟ್ಸ್‌ ಫಾರ್‌ ವುಮೆನ್ಸ್‌’ (VCAW) ಎಂಬ ನೂತನ ಪದವಿ ಕಾಲೇಜನ್ನು ಪ್ರಾರಂಭಿಸಿದೆ.

ವಿದ್ಯಾರ್ಥಿನಿಯರಿಗಾಗಿ ‘ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಇಂಗ್ಲಿಷ್‌’ ನಲ್ಲಿ ಪದವಿ ತರಗತಿಗಳು ಇದೇ ನವೆಂಬರ್ ತಿಂಗಳಿನಿಂದ ಆರಂಭವಾಗಲಿದೆ. ಬೆಂಗಳೂರು ನಗರದ ಹೊರವಲಯದ ಹೆಣ್ಣೂರು ರಸ್ತೆಯಲ್ಲಿರುವ ಗುಬ್ಬಿ ಕ್ಯಾಂಪಸ್‌ನಲ್ಲಿ ತರಗತಿಗಳು ಆರಂಭವಾಗಲಿವೆ. ಇಂಗ್ಲಿಷ್ ಭಾಷೆಯಲ್ಲಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ವಿಶೇಷ ಬ್ರಿಡ್ಜ್‌ಕೋರ್ಸ್ ಸಹ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ವಿಸ್ತಾರ್‌ ಟ್ರಸ್ಟ್‌ನ ಸಂಸ್ಥಾಪಕರು ಮತ್ತು ಕಾರ್ಯನಿರ್ವಾಹಕ ಟ್ರಸ್ಟಿಯಾದ ದೇವಿಡ್‌ ಸೆಲ್ವರಾಜ್‌, “ನೂತನ ಕಾಲೇಜಿನಲ್ಲಿ ಸಮರ್ಥ ಸಿಬ್ಬಂದಿ ಮತ್ತು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೋಧಿಸುವ ಸಹಾಯಕ ಪ್ರಾಧ್ಯಪಕರು ಇದ್ದಾರೆ. ವೃತ್ತಿನಿರತ ಪತ್ರಕರ್ತರು, ನೀತಿ ನಿರೂಪಕರು ಮತ್ತು ಸಾರ್ವಜನಿಕ ಬುದ್ಧಿಜೀವಿಗಳು ಸಹ ತರಗತಿಗಳನ್ನು ತೆಗೆದುಕೊಳ್ಳುತ್ತಾರೆ. ಇಲ್ಲಿನ ವಿದ್ಯಾರ್ಥಿಗಳಿಗೆ ಮುಖ್ಯವಾಹಿನಿ ಮತ್ತು ಪರ್ಯಾಯ ಮಾಧ್ಯಮಗಳಲ್ಲಿ ಇಂಟರ್ನ್‌ಶಿಪ್ ಮಾಡಲು ಮತ್ತು ಉದ್ಯೋಗ ಒದಗಿಸಲು ನೆರವು ನೀಡಲಾಗುತ್ತದೆ. ನೇರ ತರಗತಿ ಮತ್ತು ಆನ್‌ಲೈನ್ ಮೂಲಕ ಕಲಿಕೆ ಎರಡು ರೀತಿಯಲ್ಲಿ ಕಲಿಸುತ್ತಿದ್ದು, ಬೆಂಗಳೂರಿನಲ್ಲಿರುವ ಆರು ಎಕರೆ ವಿಶಾಲ ಕ್ಯಾಂಪಸ್‌ನಲ್ಲಿ ನೇರ ತರಗತಿಗಳು ನಡೆಯುತ್ತವೆ” ಎಂದಿದ್ದಾರೆ.

“ಸಾಮಾಜಿಕ ಬದ್ದತೆ ಹೊಂದಿರುವ ಪತ್ರಕರ್ತರಿಗೆ ಈ ಕೋರ್ಸ್‌ ಅನ್ನು ಅರ್ಪಿಸುತ್ತೇವೆ. ಈ ಸಂದರ್ಭದಲ್ಲಿ ನಮಗೆ ಗೌರಿ ಲಂಕೇಶ್‌ ಮತ್ತು ರಾಮನ್‌ ಕಶ್ಯಪ್‌ ನೆನಪಾಗುತ್ತಾರೆ. ಗೌರಿ ಕರ್ನಾಟಕದ ಪ್ರಸಿದ್ಧ ಪತ್ರಕರ್ತೆಯಾಗಿದ್ದರೆ ರಾಮನ್‌ ಲಖಿಂಪುರ್‌ ಖೇರಿಯಲ್ಲಿ ರೈತರ ಹೋರಾಟವನ್ನು ವರದಿ ಮಾಡುವಾಗ ಕೊಲೆಯಾದ ಪತ್ರಕರ್ತರಾಗಿದ್ದಾರೆ. ನಮ್ಮ ಕಾಲೇಜಿನ ಪ್ರಾರಂಭದ ಸಮಯದಲ್ಲಿಯೇ ಫಿಲಿಫೈನ್ಸ್‌ನ ಪತ್ರಕರ್ತೆ ಶ್ರೀಮತಿ ಮರಿಯಾ ರೆಸ್ಸಾ ಅವರಿಗೆ 2021ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿ ಲಭಿಸಿದೆ. ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ರಕ್ಷಿಸುವ ನಿಟ್ಟಿನಲ್ಲಿ ಅವರ ನಿರಂತರ ಬದ್ಧತೆಯ ಕೆಲಸವನ್ನು ನಾವು ಪ್ರಶಂಸಿಸುತ್ತೇವೆ” ಎಂದಿದ್ದಾರೆ.

“ಪ್ರಜಾಪ್ರಭುತ್ವ ಮೌಲ್ಯಗಳನ್ನು ಹೆಚ್ಚಿಸುವುದು ನಮ್ಮ ನೈತಿಕ ಹೊಣೆಗಾರಿಕೆ ಎಂದು ನಾವು ನಂಬುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಖಚಿತಪಡಿಸುವುದು ಅದರ ಒಂದು ಮಾರ್ಗವಾಗಿದೆ. ಮೂಲಭೂತ ಹಕ್ಕುಗಳು ಎಲ್ಲರಿಗೂ ಸಮಾನವಾಗಿ ಸಿಗುವಂತೆ ಮಾಡುವುದು ನಮ್ಮ ಯೋಜನೆಯ ಉದ್ದೇಶವಾಗಿದೆ” ಎಂದು ಅವರು ವಿವರಿಸಿದ್ದಾರೆ.

‘ಮಾಧ್ಯಮಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಅತಿ ಕಡಿಮೆ ಮಟ್ಟದಲ್ಲಿದೆ. ಮುಖ್ಯವಾಹಿನಿ ಮಾಧ್ಯಮಗಳ ಸಂಪಾದಕರ ಮತ್ತು ಮುಖ್ಯ ಹುದ್ದೆಗಳಲ್ಲಿ ಮಹಿಳೆಯರು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ ಇದೆ. ಹಾಗಾಗಿ ಅಲ್ಲಿ ಲಿಂಗ ಸಮಾನತೆಯನ್ನು ಸಾಧಿಸುವುದು, ಅತ್ಯುತ್ತಮ ಶಿಕ್ಷಣ ನೀಡಿ, ಗುಣಮಟ್ಟದ ಮಹಿಳಾ ಪತ್ರಕರ್ತರನ್ನು ಸೃಷ್ಟಿಸುವುದು ನಮ್ಮ ಮೊದಲ ಉದ್ದೇಶವಾಗಿದೆ. ಮುಖ್ಯವಾಹಿನಿ ಮಾಧ್ಯಮಗಳಿಂದ ಹೊರಗುಳಿದಿರುವ ಜನಸಾಮಾನ್ಯರ, ಶೋಷಿತರ ಸಮಸ್ಯೆಗಳು, ಸಮಕಾಲೀನ ವಿಷಯಗಳು ಮುನ್ನೆಲೆಗೆ ಬರುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಎರಡನೆ ಉದ್ದೇಶ.  ತಳ ಸಮುದಾಯಗಳ ಯುವತಿಯರಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಡುವುದು ಮತ್ತು ಉದ್ಯೋಗದ ಸಾಧ್ಯತೆಗಳನ್ನು ವಿಸ್ತರಿಸುವುದು ನಮ್ಮ ಮೂರನೇ ಉದ್ದೇಶ. ಈ ವಿಷಯಗಳನ್ನು ಕೇಂದ್ರೀಕರಿಸಿ ಪದವಿ ಶಿಕ್ಷಣವನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

VCAW ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಸಂಯೋಜಿತವಾಗಿದೆ. ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಅರಂಭವಾಗಿದ್ದು, ಹಲವು ಪರಿಣಿತ ಪತ್ರಕರ್ತರಿಂದ ತರಗತಿಗಳು ನಡೆಯಲಿವೆ. ಕನ್ನಡ ಭಾಷೆಗೆ ಮಹತ್ವ ನೀಡಿರುವ ಕಾಲೇಜು ಕನ್ನಡ ಪ್ರಾಧ್ಯಾಪಕರಾದ ನಾಗಮಣಿ ಶಿವಾರರನ್ನು ಪ್ರಾಂಶುಪಾಲರನ್ನಾಗಿ ನೇಮಿಸಿದೆ.

ಕಾಲೇಜಿಗೆ ಸೇರಲು ಆಸಕ್ತಿ ಉಳ್ಳವರು https://visthar.org/ ಅಥವಾ ಸಂಸ್ಥೆಯ ಅಖಿಲ ವಿದ್ಯಾಸಂದ್ರ (9845250955) ಅವರನ್ನು ಸಂಪರ್ಕಿಸಬಹುದು.


ಇದನ್ನೂ ಓದಿ; ರಾಷ್ಟ್ರೀಯ ಶಿಕ್ಷಣ ನೀತಿ 2020; ಶಿಕ್ಷಕರ ಮೇಲಿನ ಪರಿಣಾಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...