Homeಮುಖಪುಟಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳಕ್ಕೆ ಯತ್ನ: ಬೆಂಗಳೂರಿನಲ್ಲಿ ನೂತನ ಪತ್ರಿಕೋದ್ಯಮ ಕಾಲೇಜು ಆರಂಭ

ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳಕ್ಕೆ ಯತ್ನ: ಬೆಂಗಳೂರಿನಲ್ಲಿ ನೂತನ ಪತ್ರಿಕೋದ್ಯಮ ಕಾಲೇಜು ಆರಂಭ

- Advertisement -
- Advertisement -

ಶಿಕ್ಷಣದಿಂದ ವಂಚಿತರಾದ ಮತ್ತು ಶೋಷಿತ ಸಮುದಾಯಗಳ ಅಭಿವೃದ್ಧಿಗಾಗಿ ಕಳೆದ 30 ವರ್ಷಗಳಿಂದ ಕೆಲಸ ಮಾಡುತ್ತಿರುವ ವಿಸ್ತಾರ್‌ ಟ್ರಸ್ಟ್‌, ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ಮಾಧ್ಯಮಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಳ ಮತ್ತು ಮುಖ್ಯವಾಹಿನಿ ಮಾಧ್ಯಮಗಳ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರು ಹೆಚ್ಚಾಗುವಂತೆ ಮಾಡುವ ಪ್ರಯತ್ನಕ್ಕಾಗಿ ಬೆಂಗಳೂರಿನಲ್ಲಿ ‘ವಿಸ್ತಾರ್‌ ಕಾಲೇಜ್‌ ಆಫ್‌ ಆರ್ಟ್ಸ್‌ ಫಾರ್‌ ವುಮೆನ್ಸ್‌’ (VCAW) ಎಂಬ ನೂತನ ಪದವಿ ಕಾಲೇಜನ್ನು ಪ್ರಾರಂಭಿಸಿದೆ.

ವಿದ್ಯಾರ್ಥಿನಿಯರಿಗಾಗಿ ‘ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಇಂಗ್ಲಿಷ್‌’ ನಲ್ಲಿ ಪದವಿ ತರಗತಿಗಳು ಇದೇ ನವೆಂಬರ್ ತಿಂಗಳಿನಿಂದ ಆರಂಭವಾಗಲಿದೆ. ಬೆಂಗಳೂರು ನಗರದ ಹೊರವಲಯದ ಹೆಣ್ಣೂರು ರಸ್ತೆಯಲ್ಲಿರುವ ಗುಬ್ಬಿ ಕ್ಯಾಂಪಸ್‌ನಲ್ಲಿ ತರಗತಿಗಳು ಆರಂಭವಾಗಲಿವೆ. ಇಂಗ್ಲಿಷ್ ಭಾಷೆಯಲ್ಲಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ವಿಶೇಷ ಬ್ರಿಡ್ಜ್‌ಕೋರ್ಸ್ ಸಹ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ವಿಸ್ತಾರ್‌ ಟ್ರಸ್ಟ್‌ನ ಸಂಸ್ಥಾಪಕರು ಮತ್ತು ಕಾರ್ಯನಿರ್ವಾಹಕ ಟ್ರಸ್ಟಿಯಾದ ದೇವಿಡ್‌ ಸೆಲ್ವರಾಜ್‌, “ನೂತನ ಕಾಲೇಜಿನಲ್ಲಿ ಸಮರ್ಥ ಸಿಬ್ಬಂದಿ ಮತ್ತು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಬೋಧಿಸುವ ಸಹಾಯಕ ಪ್ರಾಧ್ಯಪಕರು ಇದ್ದಾರೆ. ವೃತ್ತಿನಿರತ ಪತ್ರಕರ್ತರು, ನೀತಿ ನಿರೂಪಕರು ಮತ್ತು ಸಾರ್ವಜನಿಕ ಬುದ್ಧಿಜೀವಿಗಳು ಸಹ ತರಗತಿಗಳನ್ನು ತೆಗೆದುಕೊಳ್ಳುತ್ತಾರೆ. ಇಲ್ಲಿನ ವಿದ್ಯಾರ್ಥಿಗಳಿಗೆ ಮುಖ್ಯವಾಹಿನಿ ಮತ್ತು ಪರ್ಯಾಯ ಮಾಧ್ಯಮಗಳಲ್ಲಿ ಇಂಟರ್ನ್‌ಶಿಪ್ ಮಾಡಲು ಮತ್ತು ಉದ್ಯೋಗ ಒದಗಿಸಲು ನೆರವು ನೀಡಲಾಗುತ್ತದೆ. ನೇರ ತರಗತಿ ಮತ್ತು ಆನ್‌ಲೈನ್ ಮೂಲಕ ಕಲಿಕೆ ಎರಡು ರೀತಿಯಲ್ಲಿ ಕಲಿಸುತ್ತಿದ್ದು, ಬೆಂಗಳೂರಿನಲ್ಲಿರುವ ಆರು ಎಕರೆ ವಿಶಾಲ ಕ್ಯಾಂಪಸ್‌ನಲ್ಲಿ ನೇರ ತರಗತಿಗಳು ನಡೆಯುತ್ತವೆ” ಎಂದಿದ್ದಾರೆ.

“ಸಾಮಾಜಿಕ ಬದ್ದತೆ ಹೊಂದಿರುವ ಪತ್ರಕರ್ತರಿಗೆ ಈ ಕೋರ್ಸ್‌ ಅನ್ನು ಅರ್ಪಿಸುತ್ತೇವೆ. ಈ ಸಂದರ್ಭದಲ್ಲಿ ನಮಗೆ ಗೌರಿ ಲಂಕೇಶ್‌ ಮತ್ತು ರಾಮನ್‌ ಕಶ್ಯಪ್‌ ನೆನಪಾಗುತ್ತಾರೆ. ಗೌರಿ ಕರ್ನಾಟಕದ ಪ್ರಸಿದ್ಧ ಪತ್ರಕರ್ತೆಯಾಗಿದ್ದರೆ ರಾಮನ್‌ ಲಖಿಂಪುರ್‌ ಖೇರಿಯಲ್ಲಿ ರೈತರ ಹೋರಾಟವನ್ನು ವರದಿ ಮಾಡುವಾಗ ಕೊಲೆಯಾದ ಪತ್ರಕರ್ತರಾಗಿದ್ದಾರೆ. ನಮ್ಮ ಕಾಲೇಜಿನ ಪ್ರಾರಂಭದ ಸಮಯದಲ್ಲಿಯೇ ಫಿಲಿಫೈನ್ಸ್‌ನ ಪತ್ರಕರ್ತೆ ಶ್ರೀಮತಿ ಮರಿಯಾ ರೆಸ್ಸಾ ಅವರಿಗೆ 2021ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿ ಲಭಿಸಿದೆ. ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ರಕ್ಷಿಸುವ ನಿಟ್ಟಿನಲ್ಲಿ ಅವರ ನಿರಂತರ ಬದ್ಧತೆಯ ಕೆಲಸವನ್ನು ನಾವು ಪ್ರಶಂಸಿಸುತ್ತೇವೆ” ಎಂದಿದ್ದಾರೆ.

“ಪ್ರಜಾಪ್ರಭುತ್ವ ಮೌಲ್ಯಗಳನ್ನು ಹೆಚ್ಚಿಸುವುದು ನಮ್ಮ ನೈತಿಕ ಹೊಣೆಗಾರಿಕೆ ಎಂದು ನಾವು ನಂಬುತ್ತೇವೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಖಚಿತಪಡಿಸುವುದು ಅದರ ಒಂದು ಮಾರ್ಗವಾಗಿದೆ. ಮೂಲಭೂತ ಹಕ್ಕುಗಳು ಎಲ್ಲರಿಗೂ ಸಮಾನವಾಗಿ ಸಿಗುವಂತೆ ಮಾಡುವುದು ನಮ್ಮ ಯೋಜನೆಯ ಉದ್ದೇಶವಾಗಿದೆ” ಎಂದು ಅವರು ವಿವರಿಸಿದ್ದಾರೆ.

‘ಮಾಧ್ಯಮಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಅತಿ ಕಡಿಮೆ ಮಟ್ಟದಲ್ಲಿದೆ. ಮುಖ್ಯವಾಹಿನಿ ಮಾಧ್ಯಮಗಳ ಸಂಪಾದಕರ ಮತ್ತು ಮುಖ್ಯ ಹುದ್ದೆಗಳಲ್ಲಿ ಮಹಿಳೆಯರು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ ಇದೆ. ಹಾಗಾಗಿ ಅಲ್ಲಿ ಲಿಂಗ ಸಮಾನತೆಯನ್ನು ಸಾಧಿಸುವುದು, ಅತ್ಯುತ್ತಮ ಶಿಕ್ಷಣ ನೀಡಿ, ಗುಣಮಟ್ಟದ ಮಹಿಳಾ ಪತ್ರಕರ್ತರನ್ನು ಸೃಷ್ಟಿಸುವುದು ನಮ್ಮ ಮೊದಲ ಉದ್ದೇಶವಾಗಿದೆ. ಮುಖ್ಯವಾಹಿನಿ ಮಾಧ್ಯಮಗಳಿಂದ ಹೊರಗುಳಿದಿರುವ ಜನಸಾಮಾನ್ಯರ, ಶೋಷಿತರ ಸಮಸ್ಯೆಗಳು, ಸಮಕಾಲೀನ ವಿಷಯಗಳು ಮುನ್ನೆಲೆಗೆ ಬರುವುದನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಎರಡನೆ ಉದ್ದೇಶ.  ತಳ ಸಮುದಾಯಗಳ ಯುವತಿಯರಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಡುವುದು ಮತ್ತು ಉದ್ಯೋಗದ ಸಾಧ್ಯತೆಗಳನ್ನು ವಿಸ್ತರಿಸುವುದು ನಮ್ಮ ಮೂರನೇ ಉದ್ದೇಶ. ಈ ವಿಷಯಗಳನ್ನು ಕೇಂದ್ರೀಕರಿಸಿ ಪದವಿ ಶಿಕ್ಷಣವನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

VCAW ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಸಂಯೋಜಿತವಾಗಿದೆ. ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಅರಂಭವಾಗಿದ್ದು, ಹಲವು ಪರಿಣಿತ ಪತ್ರಕರ್ತರಿಂದ ತರಗತಿಗಳು ನಡೆಯಲಿವೆ. ಕನ್ನಡ ಭಾಷೆಗೆ ಮಹತ್ವ ನೀಡಿರುವ ಕಾಲೇಜು ಕನ್ನಡ ಪ್ರಾಧ್ಯಾಪಕರಾದ ನಾಗಮಣಿ ಶಿವಾರರನ್ನು ಪ್ರಾಂಶುಪಾಲರನ್ನಾಗಿ ನೇಮಿಸಿದೆ.

ಕಾಲೇಜಿಗೆ ಸೇರಲು ಆಸಕ್ತಿ ಉಳ್ಳವರು https://visthar.org/ ಅಥವಾ ಸಂಸ್ಥೆಯ ಅಖಿಲ ವಿದ್ಯಾಸಂದ್ರ (9845250955) ಅವರನ್ನು ಸಂಪರ್ಕಿಸಬಹುದು.


ಇದನ್ನೂ ಓದಿ; ರಾಷ್ಟ್ರೀಯ ಶಿಕ್ಷಣ ನೀತಿ 2020; ಶಿಕ್ಷಕರ ಮೇಲಿನ ಪರಿಣಾಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....