Homeಕರ್ನಾಟಕವಿಸ್ಟ್ರಾನ್ ಬಿಕ್ಕಟ್ಟು: 100 ಜನರನ್ನು ಬಂಧಿಸಿದ ನರಸಾಪುರ ಪೊಲೀಸರು

ವಿಸ್ಟ್ರಾನ್ ಬಿಕ್ಕಟ್ಟು: 100 ಜನರನ್ನು ಬಂಧಿಸಿದ ನರಸಾಪುರ ಪೊಲೀಸರು

ಇಂದು ಬೆಳಿಗ್ಗೆ ತಾಳ್ಮೆ ಕಳೆದುಕೊಂಡ ಸಾವಿರಾರು ಕಾರ್ಮಿಕರು ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

- Advertisement -
- Advertisement -

ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಐಫೋನ್ ತಯಾರಿಕ ಕಂಪೆನಿಯಾದ ವಿಸ್ಟ್ರಾನ್‌ನ‌ ಕಾರ್ಮಿಕರು ಕಂಪೆನಿಯು ತಮಗೆ ಸಂಬಳ ನೀಡಿಲ್ಲ ಹಾಗೂ ಅವಧಿ ಮೀರಿ ದುಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕಂಪೆನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ಸುಮಾರು 100 ಜನರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಂಪೆನಿಯು ಕಳೆದ ಮೂರು-ನಾಲ್ಕು ತಿಂಗಳಿನಿಂದ ಸಂಬಳ ನೀಡಿಲ್ಲ ಹಾಗೂ 8 ಗಂಟೆಗಳ ಬದಲು 12 ಗಂಟೆಗಳ ಕಾಲ ದುಡಿಸಿಕೊಳ್ಳುತ್ತಿದೆ ಎಂದು ಹಲವು ದಿನಗಳಿಂದ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ತಾಳ್ಮೆ ಕಳೆದುಕೊಂಡ ಸಾವಿರಾರು ಕಾರ್ಮಿಕರು ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ ನರಸಾಪುರ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ನರಸಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಕೇಶವ ಗೌಡ, ಘಟನೆಯ ಬಗ್ಗೆ ನೂರು ಜನರನ್ನು ಬಂಧಿಸಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ ಘಟನೆಯ ಬಗ್ಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, “ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿದ್ದು, ಆದಷ್ಟು ಬೇಗ ಬಿಕ್ಕಟ್ಟು ಬಗೆಹರಿಯಲಿದೆ. ಹಿರಿಯ ಅಧಿಕಾರಿಗಳು ಕೂಡ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ವಿಸ್ಟ್ರಾನ್ ಸಂಸ್ಥೆಯ ಪ್ರತಿನಿಧಿಗಳ ಜತೆಗೂ ಮಾತುಕತೆ ನಡೆಸಿ, ಬಿಕ್ಕಟ್ಟು ಶಮನ ಮಾಡಲಾಗುವುದು” ಎಂದು ಹೇಳಿದ್ದಾರೆಂದು ಪ್ರಜಾವಾಣಿ ವರದಿ ಮಾಡಿದೆ.

“ಇಂಥ ಘಟನೆ ನಡೆಯಬಾರದಿತ್ತು. ದುರದೃಷ್ಟಕರ ಘಟನೆ. ಯಾರೂ ಇಂಥ ಘಟನೆಯನ್ನು ಒಪ್ಪಲು ಸಾಧ್ಯವಿಲ್ಲ ಹಾಗೂ ಸಹಿಸುವ ಪ್ರಶ್ನೆಯೂ ಇಲ್ಲ. ಆ ಕಾರ್ಖಾನೆಯ ವಿರುದ್ಧ ದಾಳಿ ನಡೆಸಿ ಅದರ ಆಸ್ತಿ ನಷ್ಟಕ್ಕೆ ಕಾರಣವಾಗಿರುವ ಕಾರ್ಮಿಕರೇ ಇರಲಿ, ಇನ್ನು ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

“ಕಾರ್ಮಿಕರಿಗೆ ವೇತನ ನೀಡಿಲ್ಲ ಅಥವಾ ವೇತನ ಕಡಿತ ಮಾಡಿ ನೀಡಲಾಗುತ್ತಿತ್ತು ಎಂಬ ಅಂಶಗಳ ಬಗ್ಗೆಯೂ ವಿಚಾರಣೆ ನಡೆಸಲಾಗುವುದು. ಕಾರ್ಮಿಕರಿಗೆ ಅಂಥ ಸಮಸ್ಯೆ ಇದ್ದರೆ ಕಾರ್ಮಿಕ ಆಯುಕ್ತರಿಗೆ ದೂರು ನೀಡಬಹುದಿತ್ತು ಅಥವಾ ಜಿಲ್ಲಾಧಿಕಾರಿಗೆ ದೂರು ನೀಡಬಹುದಿತ್ತು. ಅದನ್ನು ಬಿಟ್ಟು ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಕಾನೂನನ್ನು ಕೈಗೆತ್ತಿಕೊಳ್ಳುವ ಇಂಥ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ವಿಸ್ಟ್ರಾನ್ ಕಾರ್ಪ್‌ನ ಫೋನ್ ಉತ್ಪಾದನಾ ಘಟಕವು ಕರ್ನಾಟಕ ಸರ್ಕಾರವು ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಮಂಜೂರು ಮಾಡಿದ 43 ಎಕರೆ ಜಮೀನಿನಲ್ಲಿದೆ. 2,9000 ಕೋಟಿ ರೂ. ಹೂಡಿಕೆ ಮಾಡುತ್ತಿರುವ ಕಂಪನಿಯು ಸುಮಾರು 15 ಸಾವಿರ ಜನರಿಗೆ ಉದ್ಯೋಗ ಕೊಡುವುದಾಗಿ ಘೋಷಿಸಿತ್ತು. ಆದರೆ ಕಂಪನಿಯ ಖಾಯಂ ಉದ್ಯೋಗಗಳನ್ನು ಬೇರೆ ರಾಜ್ಯದವರಿಗೆ ನೀಡಿ, 12 ಸಾವಿರಕ್ಕೆ ನಾಲ್ಕನೇ ದರ್ಜೆಯ ಗುತ್ತಿಗೆ ಉದ್ಯೋಗಗಳನ್ನು ಮಾತ್ರ ಸ್ಥಳೀಯರಿಗೆ ನೀಡಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...