Homeಮುಖಪುಟವಿಸ್ಟ್ರಾನ್ ಬಿಕ್ಕಟ್ಟು - ಕಾರ್ಮಿಕರ ಬಳಿ ಕ್ಷಮೆಯಾಚಿಸಿದ ಕಂಪೆನಿ; ಉಪಾಧ್ಯಕ್ಷನ ವಜಾ!

ವಿಸ್ಟ್ರಾನ್ ಬಿಕ್ಕಟ್ಟು – ಕಾರ್ಮಿಕರ ಬಳಿ ಕ್ಷಮೆಯಾಚಿಸಿದ ಕಂಪೆನಿ; ಉಪಾಧ್ಯಕ್ಷನ ವಜಾ!

ನರಸಾಪುರ ಘಟಕದಲ್ಲಿ ನಡೆದ ದುರದೃಷ್ಟಕರ ಘಟನೆಗಳ ನಂತರ ಕೆಲವು ಕಾರ್ಮಿಕರಿಗೆ ಸರಿಯಾಗಿ ಸಂಬಳ ನೀಡಲಾಗಿಲ್ಲ ಎಂದು ನಾವು ಕಂಡುಕೊಂಡಿದ್ದೇವೆಂದು ಕಂಪೆನಿ ಹೇಳಿಕೊಂಡಿದೆ

- Advertisement -
- Advertisement -

ಕಳೆದ ವಾರದಿಂದ ಸುದ್ದಿಯಲ್ಲಿರುವ ತೈವಾನ್ ಮೂಲದ ಐಫೋನ್ ತಯಾರಿಕಾ ಕಂಪೆನಿ ವಿಸ್ಟ್ರಾನ್ ಕಾರ್ಪೊರೇಷನ್, ಭಾರತದ ಐಫೋನ್ ಉತ್ಪಾದನಾ ವ್ಯವಹಾರದ ಮೇಲ್ವಿಚಾರಣೆ ನಡೆಸುತ್ತಿರುವ ತನ್ನ ಉಪಾಧ್ಯಕ್ಷನನ್ನು ಕರ್ತವ್ಯದಿಂದ ವಜಾಮಾಡಿದೆ.

ಕೋಲಾರದಲ್ಲಿನ ವಿಸ್ಟ್ರಾನ್ ಕಾರ್ಮಿಕರು ತಮ್ಮ ದುಡಿಮೆಯ ವೇತನ ಪಾವತಿಸಿಲ್ಲ ಎಂದು ಕಳೆದ ವಾರ ಘಟಕದಲ್ಲಿ ದಾಂದಲೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ಕಂಪೆನಿಯು “ನರಸಾಪುರ ಘಟಕದಲ್ಲಿ ನಡೆದ ದುರದೃಷ್ಟಕರ ಘಟನೆಗಳ ನಂತರ, ಕೆಲವು ಕಾರ್ಮಿಕರಿಗೆ ಸರಿಯಾಗಿ ಅಥವಾ ಸಮಯಕ್ಕೆ ಸರಿಯಾಗಿ ಸಂಬಳ ನೀಡಲಾಗಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಈ ಬಗ್ಗೆ ನಾವು ತೀವ್ರವಾಗಿ ವಿಷಾದ ವ್ಯಕ್ತಪಡಿಸುತ್ತೇವೆ ಮತ್ತು ನಮ್ಮ ಎಲ್ಲಾ ಕಾರ್ಮಿಕರೊಂದಿಗೆ ಕ್ಷಮೆಯಾಚಿಸುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ ಎಂದು ಹಿಂದುಸ್ಥಾನ್ ಟೈಮ್ಸ್‌‌ ವರದಿ ಮಾಡಿದೆ.

“ವಿಸ್ಟ್ರಾನ್‌ನಲ್ಲಿ ಯಾವಾಗಲೂ ನಮ್ಮ ತಂಡದ ಸದಸ್ಯರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಮೊದಲ ಆದ್ಯತೆ. ಇದು ನಮ್ಮ ಪ್ರಮುಖ ಮೌಲ್ಯವಾಗಿದೆ” ಎಂದು ವಿಸ್ಟ್ರಾನ್ ಹೇಳಿದೆ.

ಇದನ್ನೂ ಓದಿ: ವಿಸ್ಟ್ರಾನ್‌ ದುರ್ಘಟನೆಗೆ ಕಂಪನಿಯೆ ಕಾರಣ: AICCTU ಸತ್ಯಶೋಧನಾ ವರದಿ

ಘಟನೆಯನ್ನು ಗಮನದಲ್ಲಿಟ್ಟುಕೊಂಡು ತಂಡಗಳನ್ನು ಪುನರ್ರಚಿಸುವುದಾಗಿ ಕಂಪನಿ ಘೋಷಿಸಿದೆ. “ಭಾರತದಲ್ಲಿ ನಮ್ಮ ವ್ಯವಹಾರದ ಮೇಲ್ವಿಚಾರಣೆಯ ಉಪಾಧ್ಯಕ್ಷರನ್ನು ವಜಾ ಮಾಡುತ್ತಿದ್ದೇವೆ. ನಾವು ನಮ್ಮ ಪ್ರಕ್ರಿಯೆಗಳನ್ನು ಹೆಚ್ಚಿಸುತ್ತಿದ್ದು, ಈ ಸಮಸ್ಯೆಗಳು ಮತ್ತೆ ಸಂಭವಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ತಂಡಗಳನ್ನು ಪುನರ್ರಚಿಸುತ್ತಿದ್ದೇವೆ” ಎಂದು ವಿಸ್ಟ್ರಾನ್ ಹೇಳಿದೆ.

ವಿಸ್ಟ್ರಾನ್ ಆಪಲ್‌‌‌ನ ಉನ್ನತ ಜಾಗತಿಕ ಪೂರೈಕೆದಾರ ಕಂಪೆನಿಯಲ್ಲಿ ಪ್ರಮುಖವಾಗಿದೆ. ಭಾರತದಲ್ಲಿ ಇದು ’ಐಫೋನ್ 7’ ಹ್ಯಾಂಡ್‌ಸೆಟ್‌ಗಳು ಮತ್ತು ’ಸೆಕೆಂಡ್ ಜನರೇಷನ್ ಐಫೋನ್ ಎಸ್‌ಇ’ ಡಿವೈಸ್‌ಗಳನ್ನು ಮಾಡುತ್ತದೆ.

ನಾಲ್ಕು ತಿಂಗಳ ಸಂಬಳಕ್ಕಾಗಿ ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಕಾರ್ಮಿಕರು ಡಿಸೆಂಬರ್ 12 ರಂದು ಬೆಳಿಗ್ಗೆ 6:30 ರ ಸುಮಾರಿಗೆ ತೀವ್ರ ಆಕ್ರೋಶಕ್ಕೆ ಒಳಗಾಗಿ ಹಿಂಸಾಚಾರಕ್ಕೆ ಇಳಿದಿದ್ದರು. ಹಿಂಸಾಚಾರದಲ್ಲಿ 437.40 ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಕಂಪನಿ ಹೇಳಿಕೊಂಡಿದೆಯಾದರೂ ಕಾರ್ಮಿಕ ಸಂಘಟನೆಗಳ ಒಕ್ಕೂಟ ಇದನ್ನು ಅಲ್ಲಗೆಳೆದಿದೆ.

ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...