Homeಕರ್ನಾಟಕವಿಟ್ಲ | ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಂಖಡನ ಬಂಧನಕ್ಕೆ ಆಗ್ರಹಿಸಿ...

ವಿಟ್ಲ | ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಂಖಡನ ಬಂಧನಕ್ಕೆ ಆಗ್ರಹಿಸಿ ಡಿಎಚ್‌ಎಸ್ ಪ್ರತಿಭಟನಾ ರ‍್ಯಾಲಿ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಸಮೀಪದ ಮುರುವ ಎಂಬಲ್ಲಿ ದಲಿತ ಬಾಲಕಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಮೆ ಆಗ್ರಹಿಸಿ, ಪ್ರಕರಣದ ಅಮೂಲಾಗ್ರ ತನಿಖೆಗೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ(ಡಿಎಚ್‌ಎಸ್) ನೇತೃತ್ವದಲ್ಲಿ ಎಡ ಹಾಗೂ ದಲಿತ ಸಂಘಟನೆಗಳು ವಿಟ್ಲ ಪೇಟೆಯಲ್ಲಿ ಗುರುವಾರ ಬೃಹತ್ ಮೆರವಣಿಗೆ ನಡೆಸಿವೆ. ಪ್ರಕರಣದಲ್ಲಿ ಪೋಕ್ಸೋ ದಾಖಲಾದರೂ ಪ್ರಭಾವಿ ಭೂಮಾಲಕನ ಬಂಧನಕ್ಕೆ ಹಿಂದೇಟು ಹಾಕುತ್ತಿರುವ ಪೊಲೀಸರ ನಡೆಯನ್ನು ಖಂಡಿಸಿದ ಹೋರಾಟಗಾರರು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಸದ್ಯದಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಎಸ್ ಪಿ ಕಚೇರಿಗೆ ಮೆರವಣಿಗೆ ನಡೆಸುವುದಾಗಿ ಎಚ್ಚರಿಸಿವೆ. ವಿಟ್ಲ | ದಲಿತ ಬಾಲಕಿ ಮೇಲೆ

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಹಕ್ಕುಗಳ ರಾಜ್ಯ ಸಮಿತಿ ಸದಸ್ಯೆ ಈಶ್ವರಿ ಪದ್ಮುಂಜ, “ಪ್ರಕರಣವನ್ನು ಪೊಲೀಸರು ಮರೆಮಾಚುತ್ತಿದ್ದಾರೆ. ಹೆತ್ತವರಿಗೆ ಕೊಲೆ ಬೆದರಿಕೆ ಬಂದರೂ ಪೊಲೀಸರು ಮೌನವಾಗಿದ್ದಾರೆ. ಮುಂದೆ ನಮ್ಮ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಸಂದೇಶ ನೀಡಲು ಈ ಹೋರಾಟ ನಡೆಸಲಾಗುತ್ತಿದೆ” ಎಂದು ಹೇಳಿದರು. ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ವಿಟ್ಲದ ಮುಖ್ಯ ರಸ್ತೆಯಲ್ಲಿ ಸಂಚರಿಸಿ, ನಾಡಕಚೇರಿ ಬಳಿ ಪ್ರತಿಭಟನಾ ಸಭೆ ನಡೆಯಿತು.

ದಲಿತ ಬಾಲಕಿ, ಲೈಂಗಿಕ ದೌರ್ಜನ್ಯ, ಪೋಕ್ಸೋ, ಬಿಜೆಪಿ ಮುಖಂಡ, ಬಂಧನ, ಹೋರಾಟ, ಡಿಎಚ್‌ಎಸ್, Dalit girl, sexual assault, POCSO, BJP leader, arrest, struggle, DHS,
ಆರೋಪಿ ಮಹೇಶ್ ಭಟ್

ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಈಶ್ವರಿ ಅವರು, ಆರೋಪಿ ಮಹೇಶ್ ಭಟ್‌ನನ್ನು ತಕ್ಷಣವೇ ಬಂಧಿಸಬೇಕು. ಒಂದು ವೇಳೆ ಪೊಲೀಸರ ಮಕ್ಕಳ ಮೇಲೆ ಈ ರೀತಿಯ ದೌರ್ಜನ್ಯವಾದರೆ ಪೊಲೀಸರು ಈ ರೀತಿಯಾಗಿ ವರ್ತಿಸುತ್ತಿದ್ದರಾ? ಎಂದು ಪ್ರಶ್ನಿಸಿದರು.

ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, “ಬಾಲಕಿ ಮೇಲೆ ಕೇವಲ ಲೈಂಗಿಕ ಕಿರುಕುಳ ಮಾತ್ರ ನಡೆದಿಲ್ಲ. ಬದಲಾಗಿ, ಅತ್ಯಾಚಾರ ನಡೆದಿರುವ ಶಂಕೆ ಇದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆ ನಡೆದು ಹಲವು ದಿನಗಳು ಕಳೆದರೂ ಆರೋಪಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದರೆ ನಂಬಲು ಅಸಾಧ್ಯ. ಪೊಲೀಸರು ಅತ್ಯಾಚಾರಿಯನ್ನು ರಕ್ಷಣೆ ನೀಡುತ್ತಿದ್ದಾರೆ. ಆತನನ್ನು ಪತ್ತೆ ಹಚ್ಚಲು ಸಾಧ್ಯವಾಗದಿದ್ದರೆ ವಿಟ್ಲ ಪೊಲೀಸರು ಖಾಕಿ ಕಳಚಿ ಭೂ ಮಾಲಕನ ತೋಟದಲ್ಲಿ ಕೂಲಿ ಕೆಲಸ ಮಾಡಲಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹೆಣ್ಮಕ್ಕಳೆಂದರೆ ಮೇಲ್ವರ್ಗದ ಕಾಮುಕರಿಗೆ ಬೋಗದ ವಸ್ತು ಮಾತ್ರವಾಗಿದೆ. ಇದಕ್ಕೆ ಅವರ ಮನುವಾದ ಸಂಸ್ಕೃತಿ ಕೂಡಾ ಕಾರಣ. ಡಾ.ಬಿ.ಆರ್. ಅಂಬೇಡ್ಕರ್ ಮನುಸ್ಮೃತಿಯನ್ನು ಸುಟ್ಟಿದ್ದು ಕೇವಲ ಜಾತಿ ವಿರೋಧಿ ಎಂಬ ಕಾರಣಕಷ್ಟೇ ಅಲ್ಲ, ಅದು ಸ್ರೀ ವಿರೋಧಿ ಎಂಬ ಕಾರಣಕ್ಕೂ ಆಗಿದೆ. ಧರ್ಮ‌ರಕ್ಷಣೆಯ ಹೆಸರಲ್ಲಿ ಅನ್ಯ ಧರ್ಮೀಯರ ಮೇಲೆ ಎತ್ತಿಕಟ್ಟಲು ಓಡೋಡಿ ಬರುವ ಬಿಜೆಪಿ ಶಾಸಕರುಗಳು ಮಾಣಿಲ ಗ್ರಾಮದ ಕಡೆ ಯಾಕೆ ಬರಲಿಲ್ಲ” ಎಂದು ಪ್ರಶ್ನಿಸಿದರು.

ವಿಟ್ಲ ಪೇಟೆಯಲ್ಲಿ ನಡೆದ ಡಿಎಚ್‌ಎಸ್ ನೇತೃತ್ವದ ಪ್ರತಿಭಟನಾ ಮೆರವಣಿಗೆ

ಪೊಲೀಸರು ಪ್ರಮಾಣಿಕವಾಗಿ ತನಿಖೆ ನಡೆಸಿ ಈ ಘಟನೆಯ ಸತ್ಯಾಸತ್ಯತೆ ಹೊರಗಡೆ ತರಬೇಕು. ಇಲ್ಲದಿದ್ದಲ್ಲಿ ಮುಂದೆ ಎಸ್ಪಿ ಚಲೋ ಕಚೇರಿ ಹೋರಾಟ ನಡೆಸಲಾಗುತ್ತದೆ ಎಂದು ಸಂತೋಷ್ ಬಜಾಲ್ ಎಚ್ಚರಿಸಿದರು.

ಕಾರ್ಮಿಕ ಮುಖಂಡ ಶೇಖರ ಮಾತನಾಡಿ, ಜಾತಿ ಧರ್ಮ ಬಿಟ್ಟು ಎಲ್ಲರೂ ಇಲ್ಲಿ ಸೇರಿದ್ದೇವೆ. ನಮ್ಮೆಲ್ಲರ ಉದ್ದೇಶ ಬಡ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿದೆ. ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆಯಿಂದಾಗಿ ಜನರು ನ್ಯಾಯ ವಂಚಿತರಾಗುತ್ತಿದ್ದಾರೆ ಎಂದರು.

ವಿಟ್ಲ ಪೇಟೆಯಲ್ಲಿ ನಡೆದ ಡಿಎಚ್‌ಎಸ್ ನೇತೃತ್ವದ ಪ್ರತಿಭಟನಾ ಮೆರವಣಿಗೆ

ಮುಖಂಡ ದಿನೇಶ್ ಮೂಳೂರು ಮಾತನಾಡಿ, “ಬಿಜೆಪಿಯಲ್ಲಿರುವ ದಲಿತ ಯುವಕರು ಈ ಬಗ್ಗೆ ಮಾತನಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ನಿಮಗೆ ಅನ್ಯಾಯವಾದಾಗ ಯಾರೂ ಮುಂದೆ ಬರುವುದಿಲ್ಲ. ಪ್ರಗತಿಪರ ಮತ್ತು ದಲಿತ ಸಂಘಟನೆ ಮಾತ್ರ ಮುಂದೆ ಬರುತ್ತದೆ. ಮಹೇಶ್ ಭಟ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದರೆ ಇನ್ನಷ್ಟು ಹೋರಾಟ ಮುಂದುವರೆಯಲಿದೆ” ಎಂದರು.

ಕಾರ್ಮಿಕ ಮುಖಂಡ ಬಿ.ಎಂ. ಭಟ್ ಮಾತನಾಡಿದರು. ರೈತ ಮುಖಂಡರಾದ ಕೆ ಯಾದವ ಶೆಟ್ಟಿ, ಕಾಂಗ್ರೆಸ್ ನಾಯಕಿ ಮಂಜುಳಾ ನಾಯಕ್, ಕಾರ್ಮಿಕ ಮುಖಂಡರುಗಳಾದ ಅಶೋಕ್ ಕೊಂಚಾಡಿ, ಬಿ.ಕೆ ಇಮ್ತಿಯಾಜ್, ಸದಾಶಿವ ಪಡುಬಿದ್ರೆ, ಸರೋಜಿನಿ, ದಿನೇಶ್, ಎಸ್.ಪಿ ಆನಂದ್, ಸೇಸಪ್ಪ ಬೆದ್ರಕಾಡ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ವಿಟ್ಲ | ದಲಿತ ಬಾಲಕಿ ಮೇಲೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...