Homeಕರ್ನಾಟಕವಿಟ್ಲ | ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಂಖಡನ ಬಂಧನಕ್ಕೆ ಆಗ್ರಹಿಸಿ...

ವಿಟ್ಲ | ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಂಖಡನ ಬಂಧನಕ್ಕೆ ಆಗ್ರಹಿಸಿ ಡಿಎಚ್‌ಎಸ್ ಪ್ರತಿಭಟನಾ ರ‍್ಯಾಲಿ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಸಮೀಪದ ಮುರುವ ಎಂಬಲ್ಲಿ ದಲಿತ ಬಾಲಕಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಮೆ ಆಗ್ರಹಿಸಿ, ಪ್ರಕರಣದ ಅಮೂಲಾಗ್ರ ತನಿಖೆಗೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ(ಡಿಎಚ್‌ಎಸ್) ನೇತೃತ್ವದಲ್ಲಿ ಎಡ ಹಾಗೂ ದಲಿತ ಸಂಘಟನೆಗಳು ವಿಟ್ಲ ಪೇಟೆಯಲ್ಲಿ ಗುರುವಾರ ಬೃಹತ್ ಮೆರವಣಿಗೆ ನಡೆಸಿವೆ. ಪ್ರಕರಣದಲ್ಲಿ ಪೋಕ್ಸೋ ದಾಖಲಾದರೂ ಪ್ರಭಾವಿ ಭೂಮಾಲಕನ ಬಂಧನಕ್ಕೆ ಹಿಂದೇಟು ಹಾಕುತ್ತಿರುವ ಪೊಲೀಸರ ನಡೆಯನ್ನು ಖಂಡಿಸಿದ ಹೋರಾಟಗಾರರು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಸದ್ಯದಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಎಸ್ ಪಿ ಕಚೇರಿಗೆ ಮೆರವಣಿಗೆ ನಡೆಸುವುದಾಗಿ ಎಚ್ಚರಿಸಿವೆ. ವಿಟ್ಲ | ದಲಿತ ಬಾಲಕಿ ಮೇಲೆ

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಹಕ್ಕುಗಳ ರಾಜ್ಯ ಸಮಿತಿ ಸದಸ್ಯೆ ಈಶ್ವರಿ ಪದ್ಮುಂಜ, “ಪ್ರಕರಣವನ್ನು ಪೊಲೀಸರು ಮರೆಮಾಚುತ್ತಿದ್ದಾರೆ. ಹೆತ್ತವರಿಗೆ ಕೊಲೆ ಬೆದರಿಕೆ ಬಂದರೂ ಪೊಲೀಸರು ಮೌನವಾಗಿದ್ದಾರೆ. ಮುಂದೆ ನಮ್ಮ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಸಂದೇಶ ನೀಡಲು ಈ ಹೋರಾಟ ನಡೆಸಲಾಗುತ್ತಿದೆ” ಎಂದು ಹೇಳಿದರು. ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ವಿಟ್ಲದ ಮುಖ್ಯ ರಸ್ತೆಯಲ್ಲಿ ಸಂಚರಿಸಿ, ನಾಡಕಚೇರಿ ಬಳಿ ಪ್ರತಿಭಟನಾ ಸಭೆ ನಡೆಯಿತು.

ದಲಿತ ಬಾಲಕಿ, ಲೈಂಗಿಕ ದೌರ್ಜನ್ಯ, ಪೋಕ್ಸೋ, ಬಿಜೆಪಿ ಮುಖಂಡ, ಬಂಧನ, ಹೋರಾಟ, ಡಿಎಚ್‌ಎಸ್, Dalit girl, sexual assault, POCSO, BJP leader, arrest, struggle, DHS,
ಆರೋಪಿ ಮಹೇಶ್ ಭಟ್

ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಈಶ್ವರಿ ಅವರು, ಆರೋಪಿ ಮಹೇಶ್ ಭಟ್‌ನನ್ನು ತಕ್ಷಣವೇ ಬಂಧಿಸಬೇಕು. ಒಂದು ವೇಳೆ ಪೊಲೀಸರ ಮಕ್ಕಳ ಮೇಲೆ ಈ ರೀತಿಯ ದೌರ್ಜನ್ಯವಾದರೆ ಪೊಲೀಸರು ಈ ರೀತಿಯಾಗಿ ವರ್ತಿಸುತ್ತಿದ್ದರಾ? ಎಂದು ಪ್ರಶ್ನಿಸಿದರು.

ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, “ಬಾಲಕಿ ಮೇಲೆ ಕೇವಲ ಲೈಂಗಿಕ ಕಿರುಕುಳ ಮಾತ್ರ ನಡೆದಿಲ್ಲ. ಬದಲಾಗಿ, ಅತ್ಯಾಚಾರ ನಡೆದಿರುವ ಶಂಕೆ ಇದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆ ನಡೆದು ಹಲವು ದಿನಗಳು ಕಳೆದರೂ ಆರೋಪಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದರೆ ನಂಬಲು ಅಸಾಧ್ಯ. ಪೊಲೀಸರು ಅತ್ಯಾಚಾರಿಯನ್ನು ರಕ್ಷಣೆ ನೀಡುತ್ತಿದ್ದಾರೆ. ಆತನನ್ನು ಪತ್ತೆ ಹಚ್ಚಲು ಸಾಧ್ಯವಾಗದಿದ್ದರೆ ವಿಟ್ಲ ಪೊಲೀಸರು ಖಾಕಿ ಕಳಚಿ ಭೂ ಮಾಲಕನ ತೋಟದಲ್ಲಿ ಕೂಲಿ ಕೆಲಸ ಮಾಡಲಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹೆಣ್ಮಕ್ಕಳೆಂದರೆ ಮೇಲ್ವರ್ಗದ ಕಾಮುಕರಿಗೆ ಬೋಗದ ವಸ್ತು ಮಾತ್ರವಾಗಿದೆ. ಇದಕ್ಕೆ ಅವರ ಮನುವಾದ ಸಂಸ್ಕೃತಿ ಕೂಡಾ ಕಾರಣ. ಡಾ.ಬಿ.ಆರ್. ಅಂಬೇಡ್ಕರ್ ಮನುಸ್ಮೃತಿಯನ್ನು ಸುಟ್ಟಿದ್ದು ಕೇವಲ ಜಾತಿ ವಿರೋಧಿ ಎಂಬ ಕಾರಣಕಷ್ಟೇ ಅಲ್ಲ, ಅದು ಸ್ರೀ ವಿರೋಧಿ ಎಂಬ ಕಾರಣಕ್ಕೂ ಆಗಿದೆ. ಧರ್ಮ‌ರಕ್ಷಣೆಯ ಹೆಸರಲ್ಲಿ ಅನ್ಯ ಧರ್ಮೀಯರ ಮೇಲೆ ಎತ್ತಿಕಟ್ಟಲು ಓಡೋಡಿ ಬರುವ ಬಿಜೆಪಿ ಶಾಸಕರುಗಳು ಮಾಣಿಲ ಗ್ರಾಮದ ಕಡೆ ಯಾಕೆ ಬರಲಿಲ್ಲ” ಎಂದು ಪ್ರಶ್ನಿಸಿದರು.

ವಿಟ್ಲ ಪೇಟೆಯಲ್ಲಿ ನಡೆದ ಡಿಎಚ್‌ಎಸ್ ನೇತೃತ್ವದ ಪ್ರತಿಭಟನಾ ಮೆರವಣಿಗೆ

ಪೊಲೀಸರು ಪ್ರಮಾಣಿಕವಾಗಿ ತನಿಖೆ ನಡೆಸಿ ಈ ಘಟನೆಯ ಸತ್ಯಾಸತ್ಯತೆ ಹೊರಗಡೆ ತರಬೇಕು. ಇಲ್ಲದಿದ್ದಲ್ಲಿ ಮುಂದೆ ಎಸ್ಪಿ ಚಲೋ ಕಚೇರಿ ಹೋರಾಟ ನಡೆಸಲಾಗುತ್ತದೆ ಎಂದು ಸಂತೋಷ್ ಬಜಾಲ್ ಎಚ್ಚರಿಸಿದರು.

ಕಾರ್ಮಿಕ ಮುಖಂಡ ಶೇಖರ ಮಾತನಾಡಿ, ಜಾತಿ ಧರ್ಮ ಬಿಟ್ಟು ಎಲ್ಲರೂ ಇಲ್ಲಿ ಸೇರಿದ್ದೇವೆ. ನಮ್ಮೆಲ್ಲರ ಉದ್ದೇಶ ಬಡ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿದೆ. ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆಯಿಂದಾಗಿ ಜನರು ನ್ಯಾಯ ವಂಚಿತರಾಗುತ್ತಿದ್ದಾರೆ ಎಂದರು.

ವಿಟ್ಲ ಪೇಟೆಯಲ್ಲಿ ನಡೆದ ಡಿಎಚ್‌ಎಸ್ ನೇತೃತ್ವದ ಪ್ರತಿಭಟನಾ ಮೆರವಣಿಗೆ

ಮುಖಂಡ ದಿನೇಶ್ ಮೂಳೂರು ಮಾತನಾಡಿ, “ಬಿಜೆಪಿಯಲ್ಲಿರುವ ದಲಿತ ಯುವಕರು ಈ ಬಗ್ಗೆ ಮಾತನಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ನಿಮಗೆ ಅನ್ಯಾಯವಾದಾಗ ಯಾರೂ ಮುಂದೆ ಬರುವುದಿಲ್ಲ. ಪ್ರಗತಿಪರ ಮತ್ತು ದಲಿತ ಸಂಘಟನೆ ಮಾತ್ರ ಮುಂದೆ ಬರುತ್ತದೆ. ಮಹೇಶ್ ಭಟ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದರೆ ಇನ್ನಷ್ಟು ಹೋರಾಟ ಮುಂದುವರೆಯಲಿದೆ” ಎಂದರು.

ಕಾರ್ಮಿಕ ಮುಖಂಡ ಬಿ.ಎಂ. ಭಟ್ ಮಾತನಾಡಿದರು. ರೈತ ಮುಖಂಡರಾದ ಕೆ ಯಾದವ ಶೆಟ್ಟಿ, ಕಾಂಗ್ರೆಸ್ ನಾಯಕಿ ಮಂಜುಳಾ ನಾಯಕ್, ಕಾರ್ಮಿಕ ಮುಖಂಡರುಗಳಾದ ಅಶೋಕ್ ಕೊಂಚಾಡಿ, ಬಿ.ಕೆ ಇಮ್ತಿಯಾಜ್, ಸದಾಶಿವ ಪಡುಬಿದ್ರೆ, ಸರೋಜಿನಿ, ದಿನೇಶ್, ಎಸ್.ಪಿ ಆನಂದ್, ಸೇಸಪ್ಪ ಬೆದ್ರಕಾಡ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ವಿಟ್ಲ | ದಲಿತ ಬಾಲಕಿ ಮೇಲೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...