Homeಕರ್ನಾಟಕವಿಟ್ಲ | ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಂಖಡನ ಬಂಧನಕ್ಕೆ ಆಗ್ರಹಿಸಿ...

ವಿಟ್ಲ | ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಂಖಡನ ಬಂಧನಕ್ಕೆ ಆಗ್ರಹಿಸಿ ಡಿಎಚ್‌ಎಸ್ ಪ್ರತಿಭಟನಾ ರ‍್ಯಾಲಿ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಸಮೀಪದ ಮುರುವ ಎಂಬಲ್ಲಿ ದಲಿತ ಬಾಲಕಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಮೆ ಆಗ್ರಹಿಸಿ, ಪ್ರಕರಣದ ಅಮೂಲಾಗ್ರ ತನಿಖೆಗೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ(ಡಿಎಚ್‌ಎಸ್) ನೇತೃತ್ವದಲ್ಲಿ ಎಡ ಹಾಗೂ ದಲಿತ ಸಂಘಟನೆಗಳು ವಿಟ್ಲ ಪೇಟೆಯಲ್ಲಿ ಗುರುವಾರ ಬೃಹತ್ ಮೆರವಣಿಗೆ ನಡೆಸಿವೆ. ಪ್ರಕರಣದಲ್ಲಿ ಪೋಕ್ಸೋ ದಾಖಲಾದರೂ ಪ್ರಭಾವಿ ಭೂಮಾಲಕನ ಬಂಧನಕ್ಕೆ ಹಿಂದೇಟು ಹಾಕುತ್ತಿರುವ ಪೊಲೀಸರ ನಡೆಯನ್ನು ಖಂಡಿಸಿದ ಹೋರಾಟಗಾರರು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಸದ್ಯದಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಎಸ್ ಪಿ ಕಚೇರಿಗೆ ಮೆರವಣಿಗೆ ನಡೆಸುವುದಾಗಿ ಎಚ್ಚರಿಸಿವೆ. ವಿಟ್ಲ | ದಲಿತ ಬಾಲಕಿ ಮೇಲೆ

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಹಕ್ಕುಗಳ ರಾಜ್ಯ ಸಮಿತಿ ಸದಸ್ಯೆ ಈಶ್ವರಿ ಪದ್ಮುಂಜ, “ಪ್ರಕರಣವನ್ನು ಪೊಲೀಸರು ಮರೆಮಾಚುತ್ತಿದ್ದಾರೆ. ಹೆತ್ತವರಿಗೆ ಕೊಲೆ ಬೆದರಿಕೆ ಬಂದರೂ ಪೊಲೀಸರು ಮೌನವಾಗಿದ್ದಾರೆ. ಮುಂದೆ ನಮ್ಮ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಸಂದೇಶ ನೀಡಲು ಈ ಹೋರಾಟ ನಡೆಸಲಾಗುತ್ತಿದೆ” ಎಂದು ಹೇಳಿದರು. ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ವಿಟ್ಲದ ಮುಖ್ಯ ರಸ್ತೆಯಲ್ಲಿ ಸಂಚರಿಸಿ, ನಾಡಕಚೇರಿ ಬಳಿ ಪ್ರತಿಭಟನಾ ಸಭೆ ನಡೆಯಿತು.

ದಲಿತ ಬಾಲಕಿ, ಲೈಂಗಿಕ ದೌರ್ಜನ್ಯ, ಪೋಕ್ಸೋ, ಬಿಜೆಪಿ ಮುಖಂಡ, ಬಂಧನ, ಹೋರಾಟ, ಡಿಎಚ್‌ಎಸ್, Dalit girl, sexual assault, POCSO, BJP leader, arrest, struggle, DHS,
ಆರೋಪಿ ಮಹೇಶ್ ಭಟ್

ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಈಶ್ವರಿ ಅವರು, ಆರೋಪಿ ಮಹೇಶ್ ಭಟ್‌ನನ್ನು ತಕ್ಷಣವೇ ಬಂಧಿಸಬೇಕು. ಒಂದು ವೇಳೆ ಪೊಲೀಸರ ಮಕ್ಕಳ ಮೇಲೆ ಈ ರೀತಿಯ ದೌರ್ಜನ್ಯವಾದರೆ ಪೊಲೀಸರು ಈ ರೀತಿಯಾಗಿ ವರ್ತಿಸುತ್ತಿದ್ದರಾ? ಎಂದು ಪ್ರಶ್ನಿಸಿದರು.

ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, “ಬಾಲಕಿ ಮೇಲೆ ಕೇವಲ ಲೈಂಗಿಕ ಕಿರುಕುಳ ಮಾತ್ರ ನಡೆದಿಲ್ಲ. ಬದಲಾಗಿ, ಅತ್ಯಾಚಾರ ನಡೆದಿರುವ ಶಂಕೆ ಇದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆ ನಡೆದು ಹಲವು ದಿನಗಳು ಕಳೆದರೂ ಆರೋಪಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದರೆ ನಂಬಲು ಅಸಾಧ್ಯ. ಪೊಲೀಸರು ಅತ್ಯಾಚಾರಿಯನ್ನು ರಕ್ಷಣೆ ನೀಡುತ್ತಿದ್ದಾರೆ. ಆತನನ್ನು ಪತ್ತೆ ಹಚ್ಚಲು ಸಾಧ್ಯವಾಗದಿದ್ದರೆ ವಿಟ್ಲ ಪೊಲೀಸರು ಖಾಕಿ ಕಳಚಿ ಭೂ ಮಾಲಕನ ತೋಟದಲ್ಲಿ ಕೂಲಿ ಕೆಲಸ ಮಾಡಲಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಹೆಣ್ಮಕ್ಕಳೆಂದರೆ ಮೇಲ್ವರ್ಗದ ಕಾಮುಕರಿಗೆ ಬೋಗದ ವಸ್ತು ಮಾತ್ರವಾಗಿದೆ. ಇದಕ್ಕೆ ಅವರ ಮನುವಾದ ಸಂಸ್ಕೃತಿ ಕೂಡಾ ಕಾರಣ. ಡಾ.ಬಿ.ಆರ್. ಅಂಬೇಡ್ಕರ್ ಮನುಸ್ಮೃತಿಯನ್ನು ಸುಟ್ಟಿದ್ದು ಕೇವಲ ಜಾತಿ ವಿರೋಧಿ ಎಂಬ ಕಾರಣಕಷ್ಟೇ ಅಲ್ಲ, ಅದು ಸ್ರೀ ವಿರೋಧಿ ಎಂಬ ಕಾರಣಕ್ಕೂ ಆಗಿದೆ. ಧರ್ಮ‌ರಕ್ಷಣೆಯ ಹೆಸರಲ್ಲಿ ಅನ್ಯ ಧರ್ಮೀಯರ ಮೇಲೆ ಎತ್ತಿಕಟ್ಟಲು ಓಡೋಡಿ ಬರುವ ಬಿಜೆಪಿ ಶಾಸಕರುಗಳು ಮಾಣಿಲ ಗ್ರಾಮದ ಕಡೆ ಯಾಕೆ ಬರಲಿಲ್ಲ” ಎಂದು ಪ್ರಶ್ನಿಸಿದರು.

ವಿಟ್ಲ ಪೇಟೆಯಲ್ಲಿ ನಡೆದ ಡಿಎಚ್‌ಎಸ್ ನೇತೃತ್ವದ ಪ್ರತಿಭಟನಾ ಮೆರವಣಿಗೆ

ಪೊಲೀಸರು ಪ್ರಮಾಣಿಕವಾಗಿ ತನಿಖೆ ನಡೆಸಿ ಈ ಘಟನೆಯ ಸತ್ಯಾಸತ್ಯತೆ ಹೊರಗಡೆ ತರಬೇಕು. ಇಲ್ಲದಿದ್ದಲ್ಲಿ ಮುಂದೆ ಎಸ್ಪಿ ಚಲೋ ಕಚೇರಿ ಹೋರಾಟ ನಡೆಸಲಾಗುತ್ತದೆ ಎಂದು ಸಂತೋಷ್ ಬಜಾಲ್ ಎಚ್ಚರಿಸಿದರು.

ಕಾರ್ಮಿಕ ಮುಖಂಡ ಶೇಖರ ಮಾತನಾಡಿ, ಜಾತಿ ಧರ್ಮ ಬಿಟ್ಟು ಎಲ್ಲರೂ ಇಲ್ಲಿ ಸೇರಿದ್ದೇವೆ. ನಮ್ಮೆಲ್ಲರ ಉದ್ದೇಶ ಬಡ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿದೆ. ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆಯಿಂದಾಗಿ ಜನರು ನ್ಯಾಯ ವಂಚಿತರಾಗುತ್ತಿದ್ದಾರೆ ಎಂದರು.

ವಿಟ್ಲ ಪೇಟೆಯಲ್ಲಿ ನಡೆದ ಡಿಎಚ್‌ಎಸ್ ನೇತೃತ್ವದ ಪ್ರತಿಭಟನಾ ಮೆರವಣಿಗೆ

ಮುಖಂಡ ದಿನೇಶ್ ಮೂಳೂರು ಮಾತನಾಡಿ, “ಬಿಜೆಪಿಯಲ್ಲಿರುವ ದಲಿತ ಯುವಕರು ಈ ಬಗ್ಗೆ ಮಾತನಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ನಿಮಗೆ ಅನ್ಯಾಯವಾದಾಗ ಯಾರೂ ಮುಂದೆ ಬರುವುದಿಲ್ಲ. ಪ್ರಗತಿಪರ ಮತ್ತು ದಲಿತ ಸಂಘಟನೆ ಮಾತ್ರ ಮುಂದೆ ಬರುತ್ತದೆ. ಮಹೇಶ್ ಭಟ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದರೆ ಇನ್ನಷ್ಟು ಹೋರಾಟ ಮುಂದುವರೆಯಲಿದೆ” ಎಂದರು.

ಕಾರ್ಮಿಕ ಮುಖಂಡ ಬಿ.ಎಂ. ಭಟ್ ಮಾತನಾಡಿದರು. ರೈತ ಮುಖಂಡರಾದ ಕೆ ಯಾದವ ಶೆಟ್ಟಿ, ಕಾಂಗ್ರೆಸ್ ನಾಯಕಿ ಮಂಜುಳಾ ನಾಯಕ್, ಕಾರ್ಮಿಕ ಮುಖಂಡರುಗಳಾದ ಅಶೋಕ್ ಕೊಂಚಾಡಿ, ಬಿ.ಕೆ ಇಮ್ತಿಯಾಜ್, ಸದಾಶಿವ ಪಡುಬಿದ್ರೆ, ಸರೋಜಿನಿ, ದಿನೇಶ್, ಎಸ್.ಪಿ ಆನಂದ್, ಸೇಸಪ್ಪ ಬೆದ್ರಕಾಡ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ವಿಟ್ಲ | ದಲಿತ ಬಾಲಕಿ ಮೇಲೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

ಬಿಜೆಪಿಯ ಮುಸ್ಲಿಮರ ಪರ ‘ಕಾಳಜಿ’ ಜಿನ್ನಾಗೆ ಮುಜುಗರ ತರಿಸುತ್ತದೆ: ಉದ್ಧವ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...