Homeಸಿನಿಮಾಕ್ರೀಡೆVIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ?

- Advertisement -
- Advertisement -

ಎಲ್ಲಾ ಒತ್ತಡಗಳ ನಡೆವೆಯು ಈ ವರ್ಷದ ಐಪಿಎಲ್‌ ಕ್ರಿಕೆಟ್ ಟೂರ್ನಿ ನಡೆಸುವುದಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅನುಮತಿ ನೀಡಿದೆ. ಈ ವರ್ಷದ ಐಪಿಎಲ್ ಪಂದ್ಯಗಳು ಸೆಪ್ಟೆಂಬರ್ 19 ರಿಂದ ನವೆಂಬರ್‌ 10 ರವರೆಗೆ ಯುಎಇ ಯಲ್ಲಿ ನಡೆಯಲಿದೆ.

ಕೊರೊನಾ ಆತಂಕದ ನಡುವೆ ನಡೆಯುತ್ತಿರುವ ಈ ಪಂದ್ಯಕ್ಕೆ ಹಲವಾರು ವಿರೋಧಗಳು ಕೇಳಿ ಬರುತ್ತಿವೆ. ಹಲವಾರು ಸಾಮಾಜಿಕ ಕಾರ್ಯಕರ್ತರು ಸಾಂಕ್ರಾಮಿಕದ ನಡುವೆ ಟೂರ್ನಿ ಬೇಕಿತ್ತೇ ಎಂದು ಪ್ರಶ್ನೆ ಮಾಡಿದ್ದಾರೆ.

ಒಂದೆಡೆ ಚೀನಾದ ಗಡಿ ತಂಟೆಗೆ ಚೀನಾ ಆಪ್‌ಗಳನ್ನು ನಿಷೇಧಿಸಿದ್ದು ಬಹಳ ದೊಡ್ಡ ಸಾಧನೆಯೆಂದು ಬೀಗುತ್ತಿರುವ ಕೇಂದ್ರ ಸರ್ಕಾರ, ಚೀನಾ ಕಂಪೆನಿಗಳ ಪ್ರಾಯೋಜಕತ್ವದಲ್ಲಿ ಐಪಿಎಲ್ ನಡೆಸಲು ಅವಕಾಶ ಕೊಟ್ಟಿದ್ದು ದ್ವಂದ್ವವಲ್ಲವೇ? BCCI ನಲ್ಲಿ ಬಿಜೆಪಿ ಮುಖಂಡರ ಮಕ್ಕಳೇ ಇದ್ದರೂ ಇದು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಚಿಂತಕರಾದ ಶಿವಸುಂದರ್‌, ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ”ಜಸ್ಟ್‌ ಆಸ್ಕಿಂಗ್‌” ಎಂಬ ಶಿರ್ಷೀಕೆಯ ಲೇಖನದಲ್ಲಿ ಬಿಜೆಪಿಯ ನಾಯಕರು ಹಾಗೂ ಅವರ ಬೆಂಬಲಿಗರಿಗೆ ಪ್ರಶ್ನೆಗಳ ಸರಮಾಲೆಯನ್ನೇ ಎಸೆದಿದ್ದಾರೆ.

ಅವರು ತಮ್ಮ ಬರಹದಲ್ಲಿ , ಈ “ಭಾರತೀಯ” ಪಂದ್ಯವನ್ನು ಹಲವಾರು “ಚೀನಿ ಕಂಪನಿಗಳು” ಪ್ರಾಯೋಜಕತ್ವ ಮಾಡುತ್ತಿವೆ, ಅಲ್ಲದೆ ಈ ಬಾರಿಯ ಪಂದ್ಯಾಟದ ಹೆಸರು ಕೂಡಾ “VIVO IPL 2020” ಎಂದಾಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

“ಚೀನಾದ ದೈತ್ಯ ಮೊಬೈಲ್ ಕಂಪನಿ VIVO ಐಪಿಎಲ್ ನ ಟೈಟಲ್ ಪ್ರಾಯೋಜನೆ ಮಾಡುತ್ತಿದೆ. ಚೀನಾದ ಅಲಿಬಾಬಾ ಕಂಪನಿಯ ಹೂಡಿಕೆ ಹೊಂದಿರುವ Pay TM “ಅಂಪೈರ್ ಪಾರ್ಟ್ನರ್” ಆಗಿದೆ. ಚೀನಾದ ಹೂಡಿಕೆಯನ್ನು ಹೊಂದಿರುವ Swiggy ಮತ್ತು Dream 11 ಕಂಪನಿಗಳು ಸಹ- ಪ್ರಯೋಜಕರಾಗಿವೆ.” ಇದಕ್ಕೆ ಭಾರತ ಸರ್ಕಾರವೇ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಐಪಿಎಲ್ ಪಂದ್ಯಗಳಿಗೆ ಅನುಮತಿ ಕೊಟ್ಟಿರುವ BCCI ನ ಪದಾಧಿಕಾರಿಗಳಲ್ಲಿ ಭಾರತದ ಗೃಹಮಂತ್ರಿ ಅಮಿತ್ ಷಾ ಅವರ ಮಗ ಜೇ ಶಾ BCCI ನ ಪ್ರಧಾನ ಕಾರ್ಯದರ್ಶಿ ಆಗದ್ದಾರೆ. ಕೇಂದ್ರ ಮಂತ್ರಿ ಅನುರಾಗ್ ಠಾಕೂರ್ ಅವರ ತಮ್ಮ ಅರುಣ್ ಧೋಮಲ್ BCCI ನ ಖಜಾಂಚಿ ಆಗಿದ್ದಾರೆ ಎಂದು ಬಿಜೆಪಿ ಮತ್ತು ಬಿಸಿಸಿಐನ ಸಂಬಂಧವನ್ನು ಉಲ್ಲೇಖಿಸಿದ್ದಾರೆ.

“ಪಾಕಿಸ್ತಾನದೊಂದಿಗೆ ಘರ್ಷಣೆ ನಡೆದಾಗಲೆಲ್ಲಾ ಅದರ ಜೊತೆ ಕ್ರೀಡಾ ಸಂಬಂಧಗಳನ್ನು ಕಡಿದುಕೊಳ್ಳಲು ಬಿಜೆಪಿ ಪಕ್ಷ ಆಗ್ರಹಿಸುತ್ತಿತ್ತು. ಪಾಕಿಸ್ತಾನ ಜನರೊಂದಿಗೆ ಸ್ನೇಹ ಸಂಬಂಧ ಇಟ್ಟುಕೊಳ್ಳಬೇಕೆನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸುತ್ತಿತ್ತು. ಈಗ ಬಿಜೆಪಿಯ ಗೌರವಾನ್ವಿತ ಸದಸ್ಯರೇ ಚೀನಾ ಕಂಪನಿಗಳ ಪ್ರಾಯೋಜನೆಯ ಐಪಿಎಲ್‌ಗೆ ಅನುಮತಿ ನೀಡಿದ್ದು ಹೇಗೆ” ಎಂದು ಶಿವಸುಂದರ್‌ ಪ್ರಶ್ನಿಸಿದ್ದಾರೆ.

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ ಎಂದು ಅವರು ಪ್ರಶ್ನಿಸಿದ್ದಾರೆ.

“ಜನರಿಗೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಬಾಯ್ಕಾಟ್ ಚೀನಾ ಅಭಿಯಾನ ನಡೆಯುತ್ತಿದೆ. ಇನ್ನೊಂದೆಡೆ ಚೀನಾ ಪ್ರಾಯೋಜಿತ ಐಪಿಎಲ್ ನಡೆಯುತ್ತಿದೆ. ಚೀನಾದ ಹಣ, ಹೂಡಿಕೆ, ಪ್ರಾಯೋಜಕತ್ವ, ಜಾಹಿರಾತನ್ನು ಹೇಗೆ ನಿರ್ವಹಿಸಬೇಕು ಎಂದು ಸರ್ಕಾರಕ್ಕೆ ತೀವ್ರ ಗೊಂದಲಗಳಿರುವಾಗ ಚೀನಾ ನಮ್ಮ ವಿಷಯಗಳಲ್ಲಿ ಮೂಗುತೂರಿಸುವುದರಲ್ಲಿ ಯಾವುದೇ ಆಶ್ಚರ್ಯವಿ‌ಲ್ಲ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಚೀನಾದ ದೊಡ್ಡ ಕಂಪನಿಗಳು ಬಿಸಿಸಿಐನ ಐಪಿಎಲ್‌ಗೆ ಜಾಹೀರಾತು ನೀಡಲು ಒಪ್ಪಿಗೆ ನೀಡಲಾಗಿದೆ. ಬಾಲ್ಕನಿಯಿಂದ ಟಿವಿ ಎಸೆದು ಚೀನಾದ ವಿರುದ್ಧ ಶೌರ್ಯ ತೋರಿದ್ದ ಈಡಿಯಟ್‌ಗಳನ್ನು ನೋಡಿ ಬೇಸರವಾಗುತ್ತಿದೆ ಎಂದು ಒಮರ್ ಅಬ್ದುಲ್ಲಾ ವ್ಯಂಗ್ಯವಾಡಿದ್ದಾರೆ.

ಅರವಿಂದ್ ಜಾ ಎಂಬವರು, ಅಮಿತ್ ಶಾ ಅವರ ಮಗ ಬಿಸಿಸಿಐನಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುವವರು ಎಂಬುದನ್ನು ಎಂದಿಗೂ ಮರೆಯಬಾರದು. ಐಪಿಎಲ್ ಚೀನಾದ ಪ್ರಾಯೋಜಕತ್ವದೊಂದಿಗೆ ಮುಂದುವರಿಯುತ್ತಿದ್ದರೆ, ಅದು ಬಿಜೆಪಿಯ ಉನ್ನತ ನಾಯಕತ್ವದ ಅನುಮೋದನೆಯೊಂದಿಗೆ ನಡೆಯುತ್ತಿದೆ. ಅಪ್ಲಿಕೇಶನ್ ನಿಷೇಧವು ನಮ್ಮ ಕಣ್ಣಿಗೆ ಮಣ್ಣೆರೆಚುವ ತಂತ್ರವಾಗಿದೆ ಎಂದು ಹೇಳಿದ್ದಾರೆ.

 

ಲಡಾಖ್‌ನಲ್ಲಿ ಭಾರತೀಯ ಸೈನಿಕರ ಮಾರಣ ಹೋಮ ನಡೆದಾಗ ಐಪಿಎಲ್‌ ಮಾಡಿದ್ದ ಟ್ವೀಟ್ ಒಂದರ ಫೋಟೋವನ್ನು ಹೆಕ್ಕಿರುವ ಪ್ರಾಧ್ಯಾಪಕ ಕಾಂಚನ್ ಗುಪ್ತಾ, “ಪೂರ್ವ ಲಡಾಕ್‌ನಲ್ಲಿ LAC ಉದ್ದಕ್ಕೂ ಚೀನಾದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಪ್ರಾಯೋಜಕತ್ವದ ಒಪ್ಪಂದಗಳನ್ನು ಪರಿಶೀಲಿಸುವುದಾಗಿ ಐಪಿಎಲ್ ಹೇಳಿತ್ತು. ಆದರೆ ಈಗ ಚೀನೀ ಪ್ರಾಯೋಜಕತ್ವವನ್ನು ಸ್ವೀಕರಿಸಲು ಅದು ನಿರ್ಧರಿಸಿದೆ. ಸಾಮಾನ್ಯ ವ್ಯಕ್ತಿಗಳನ್ನು ‘ರಾಷ್ಟ್ರ ವಿರೋಧಿ’ ಎಂದು ನಾವು ಸುಲಭವಾಗಿ ಆರೋಪಿಸುತ್ತೇವೆ. ಹಾಗಾದರೆ ಐಪಿಎಲ್ ಏನು?” ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಶಾಸಕ ಝೀಶಾನ್ ಸಿದ್ದೇಕಿ, ಚೀನಾ ನಿರ್ಮಿತ ಟಿವಿಯನ್ನು ಒಡೆದುಹಾಕಿದ ವ್ಯಕ್ತಿಗೆ ಸಂತಾಪಗಳು ಎಂದು ವ್ಯಂಗ್ಯವಾಡಿದ್ದಾರೆ.

 


ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...