Homeಸಿನಿಮಾಕ್ರೀಡೆVIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ?

- Advertisement -
- Advertisement -

ಎಲ್ಲಾ ಒತ್ತಡಗಳ ನಡೆವೆಯು ಈ ವರ್ಷದ ಐಪಿಎಲ್‌ ಕ್ರಿಕೆಟ್ ಟೂರ್ನಿ ನಡೆಸುವುದಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅನುಮತಿ ನೀಡಿದೆ. ಈ ವರ್ಷದ ಐಪಿಎಲ್ ಪಂದ್ಯಗಳು ಸೆಪ್ಟೆಂಬರ್ 19 ರಿಂದ ನವೆಂಬರ್‌ 10 ರವರೆಗೆ ಯುಎಇ ಯಲ್ಲಿ ನಡೆಯಲಿದೆ.

ಕೊರೊನಾ ಆತಂಕದ ನಡುವೆ ನಡೆಯುತ್ತಿರುವ ಈ ಪಂದ್ಯಕ್ಕೆ ಹಲವಾರು ವಿರೋಧಗಳು ಕೇಳಿ ಬರುತ್ತಿವೆ. ಹಲವಾರು ಸಾಮಾಜಿಕ ಕಾರ್ಯಕರ್ತರು ಸಾಂಕ್ರಾಮಿಕದ ನಡುವೆ ಟೂರ್ನಿ ಬೇಕಿತ್ತೇ ಎಂದು ಪ್ರಶ್ನೆ ಮಾಡಿದ್ದಾರೆ.

ಒಂದೆಡೆ ಚೀನಾದ ಗಡಿ ತಂಟೆಗೆ ಚೀನಾ ಆಪ್‌ಗಳನ್ನು ನಿಷೇಧಿಸಿದ್ದು ಬಹಳ ದೊಡ್ಡ ಸಾಧನೆಯೆಂದು ಬೀಗುತ್ತಿರುವ ಕೇಂದ್ರ ಸರ್ಕಾರ, ಚೀನಾ ಕಂಪೆನಿಗಳ ಪ್ರಾಯೋಜಕತ್ವದಲ್ಲಿ ಐಪಿಎಲ್ ನಡೆಸಲು ಅವಕಾಶ ಕೊಟ್ಟಿದ್ದು ದ್ವಂದ್ವವಲ್ಲವೇ? BCCI ನಲ್ಲಿ ಬಿಜೆಪಿ ಮುಖಂಡರ ಮಕ್ಕಳೇ ಇದ್ದರೂ ಇದು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಚಿಂತಕರಾದ ಶಿವಸುಂದರ್‌, ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ”ಜಸ್ಟ್‌ ಆಸ್ಕಿಂಗ್‌” ಎಂಬ ಶಿರ್ಷೀಕೆಯ ಲೇಖನದಲ್ಲಿ ಬಿಜೆಪಿಯ ನಾಯಕರು ಹಾಗೂ ಅವರ ಬೆಂಬಲಿಗರಿಗೆ ಪ್ರಶ್ನೆಗಳ ಸರಮಾಲೆಯನ್ನೇ ಎಸೆದಿದ್ದಾರೆ.

ಅವರು ತಮ್ಮ ಬರಹದಲ್ಲಿ , ಈ “ಭಾರತೀಯ” ಪಂದ್ಯವನ್ನು ಹಲವಾರು “ಚೀನಿ ಕಂಪನಿಗಳು” ಪ್ರಾಯೋಜಕತ್ವ ಮಾಡುತ್ತಿವೆ, ಅಲ್ಲದೆ ಈ ಬಾರಿಯ ಪಂದ್ಯಾಟದ ಹೆಸರು ಕೂಡಾ “VIVO IPL 2020” ಎಂದಾಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

“ಚೀನಾದ ದೈತ್ಯ ಮೊಬೈಲ್ ಕಂಪನಿ VIVO ಐಪಿಎಲ್ ನ ಟೈಟಲ್ ಪ್ರಾಯೋಜನೆ ಮಾಡುತ್ತಿದೆ. ಚೀನಾದ ಅಲಿಬಾಬಾ ಕಂಪನಿಯ ಹೂಡಿಕೆ ಹೊಂದಿರುವ Pay TM “ಅಂಪೈರ್ ಪಾರ್ಟ್ನರ್” ಆಗಿದೆ. ಚೀನಾದ ಹೂಡಿಕೆಯನ್ನು ಹೊಂದಿರುವ Swiggy ಮತ್ತು Dream 11 ಕಂಪನಿಗಳು ಸಹ- ಪ್ರಯೋಜಕರಾಗಿವೆ.” ಇದಕ್ಕೆ ಭಾರತ ಸರ್ಕಾರವೇ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಐಪಿಎಲ್ ಪಂದ್ಯಗಳಿಗೆ ಅನುಮತಿ ಕೊಟ್ಟಿರುವ BCCI ನ ಪದಾಧಿಕಾರಿಗಳಲ್ಲಿ ಭಾರತದ ಗೃಹಮಂತ್ರಿ ಅಮಿತ್ ಷಾ ಅವರ ಮಗ ಜೇ ಶಾ BCCI ನ ಪ್ರಧಾನ ಕಾರ್ಯದರ್ಶಿ ಆಗದ್ದಾರೆ. ಕೇಂದ್ರ ಮಂತ್ರಿ ಅನುರಾಗ್ ಠಾಕೂರ್ ಅವರ ತಮ್ಮ ಅರುಣ್ ಧೋಮಲ್ BCCI ನ ಖಜಾಂಚಿ ಆಗಿದ್ದಾರೆ ಎಂದು ಬಿಜೆಪಿ ಮತ್ತು ಬಿಸಿಸಿಐನ ಸಂಬಂಧವನ್ನು ಉಲ್ಲೇಖಿಸಿದ್ದಾರೆ.

“ಪಾಕಿಸ್ತಾನದೊಂದಿಗೆ ಘರ್ಷಣೆ ನಡೆದಾಗಲೆಲ್ಲಾ ಅದರ ಜೊತೆ ಕ್ರೀಡಾ ಸಂಬಂಧಗಳನ್ನು ಕಡಿದುಕೊಳ್ಳಲು ಬಿಜೆಪಿ ಪಕ್ಷ ಆಗ್ರಹಿಸುತ್ತಿತ್ತು. ಪಾಕಿಸ್ತಾನ ಜನರೊಂದಿಗೆ ಸ್ನೇಹ ಸಂಬಂಧ ಇಟ್ಟುಕೊಳ್ಳಬೇಕೆನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸುತ್ತಿತ್ತು. ಈಗ ಬಿಜೆಪಿಯ ಗೌರವಾನ್ವಿತ ಸದಸ್ಯರೇ ಚೀನಾ ಕಂಪನಿಗಳ ಪ್ರಾಯೋಜನೆಯ ಐಪಿಎಲ್‌ಗೆ ಅನುಮತಿ ನೀಡಿದ್ದು ಹೇಗೆ” ಎಂದು ಶಿವಸುಂದರ್‌ ಪ್ರಶ್ನಿಸಿದ್ದಾರೆ.

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ ಎಂದು ಅವರು ಪ್ರಶ್ನಿಸಿದ್ದಾರೆ.

“ಜನರಿಗೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಬಾಯ್ಕಾಟ್ ಚೀನಾ ಅಭಿಯಾನ ನಡೆಯುತ್ತಿದೆ. ಇನ್ನೊಂದೆಡೆ ಚೀನಾ ಪ್ರಾಯೋಜಿತ ಐಪಿಎಲ್ ನಡೆಯುತ್ತಿದೆ. ಚೀನಾದ ಹಣ, ಹೂಡಿಕೆ, ಪ್ರಾಯೋಜಕತ್ವ, ಜಾಹಿರಾತನ್ನು ಹೇಗೆ ನಿರ್ವಹಿಸಬೇಕು ಎಂದು ಸರ್ಕಾರಕ್ಕೆ ತೀವ್ರ ಗೊಂದಲಗಳಿರುವಾಗ ಚೀನಾ ನಮ್ಮ ವಿಷಯಗಳಲ್ಲಿ ಮೂಗುತೂರಿಸುವುದರಲ್ಲಿ ಯಾವುದೇ ಆಶ್ಚರ್ಯವಿ‌ಲ್ಲ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಚೀನಾದ ದೊಡ್ಡ ಕಂಪನಿಗಳು ಬಿಸಿಸಿಐನ ಐಪಿಎಲ್‌ಗೆ ಜಾಹೀರಾತು ನೀಡಲು ಒಪ್ಪಿಗೆ ನೀಡಲಾಗಿದೆ. ಬಾಲ್ಕನಿಯಿಂದ ಟಿವಿ ಎಸೆದು ಚೀನಾದ ವಿರುದ್ಧ ಶೌರ್ಯ ತೋರಿದ್ದ ಈಡಿಯಟ್‌ಗಳನ್ನು ನೋಡಿ ಬೇಸರವಾಗುತ್ತಿದೆ ಎಂದು ಒಮರ್ ಅಬ್ದುಲ್ಲಾ ವ್ಯಂಗ್ಯವಾಡಿದ್ದಾರೆ.

ಅರವಿಂದ್ ಜಾ ಎಂಬವರು, ಅಮಿತ್ ಶಾ ಅವರ ಮಗ ಬಿಸಿಸಿಐನಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುವವರು ಎಂಬುದನ್ನು ಎಂದಿಗೂ ಮರೆಯಬಾರದು. ಐಪಿಎಲ್ ಚೀನಾದ ಪ್ರಾಯೋಜಕತ್ವದೊಂದಿಗೆ ಮುಂದುವರಿಯುತ್ತಿದ್ದರೆ, ಅದು ಬಿಜೆಪಿಯ ಉನ್ನತ ನಾಯಕತ್ವದ ಅನುಮೋದನೆಯೊಂದಿಗೆ ನಡೆಯುತ್ತಿದೆ. ಅಪ್ಲಿಕೇಶನ್ ನಿಷೇಧವು ನಮ್ಮ ಕಣ್ಣಿಗೆ ಮಣ್ಣೆರೆಚುವ ತಂತ್ರವಾಗಿದೆ ಎಂದು ಹೇಳಿದ್ದಾರೆ.

 

ಲಡಾಖ್‌ನಲ್ಲಿ ಭಾರತೀಯ ಸೈನಿಕರ ಮಾರಣ ಹೋಮ ನಡೆದಾಗ ಐಪಿಎಲ್‌ ಮಾಡಿದ್ದ ಟ್ವೀಟ್ ಒಂದರ ಫೋಟೋವನ್ನು ಹೆಕ್ಕಿರುವ ಪ್ರಾಧ್ಯಾಪಕ ಕಾಂಚನ್ ಗುಪ್ತಾ, “ಪೂರ್ವ ಲಡಾಕ್‌ನಲ್ಲಿ LAC ಉದ್ದಕ್ಕೂ ಚೀನಾದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಪ್ರಾಯೋಜಕತ್ವದ ಒಪ್ಪಂದಗಳನ್ನು ಪರಿಶೀಲಿಸುವುದಾಗಿ ಐಪಿಎಲ್ ಹೇಳಿತ್ತು. ಆದರೆ ಈಗ ಚೀನೀ ಪ್ರಾಯೋಜಕತ್ವವನ್ನು ಸ್ವೀಕರಿಸಲು ಅದು ನಿರ್ಧರಿಸಿದೆ. ಸಾಮಾನ್ಯ ವ್ಯಕ್ತಿಗಳನ್ನು ‘ರಾಷ್ಟ್ರ ವಿರೋಧಿ’ ಎಂದು ನಾವು ಸುಲಭವಾಗಿ ಆರೋಪಿಸುತ್ತೇವೆ. ಹಾಗಾದರೆ ಐಪಿಎಲ್ ಏನು?” ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಶಾಸಕ ಝೀಶಾನ್ ಸಿದ್ದೇಕಿ, ಚೀನಾ ನಿರ್ಮಿತ ಟಿವಿಯನ್ನು ಒಡೆದುಹಾಕಿದ ವ್ಯಕ್ತಿಗೆ ಸಂತಾಪಗಳು ಎಂದು ವ್ಯಂಗ್ಯವಾಡಿದ್ದಾರೆ.

 


ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...