Homeಸಿನಿಮಾಕ್ರೀಡೆVIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ?

- Advertisement -
- Advertisement -

ಎಲ್ಲಾ ಒತ್ತಡಗಳ ನಡೆವೆಯು ಈ ವರ್ಷದ ಐಪಿಎಲ್‌ ಕ್ರಿಕೆಟ್ ಟೂರ್ನಿ ನಡೆಸುವುದಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅನುಮತಿ ನೀಡಿದೆ. ಈ ವರ್ಷದ ಐಪಿಎಲ್ ಪಂದ್ಯಗಳು ಸೆಪ್ಟೆಂಬರ್ 19 ರಿಂದ ನವೆಂಬರ್‌ 10 ರವರೆಗೆ ಯುಎಇ ಯಲ್ಲಿ ನಡೆಯಲಿದೆ.

ಕೊರೊನಾ ಆತಂಕದ ನಡುವೆ ನಡೆಯುತ್ತಿರುವ ಈ ಪಂದ್ಯಕ್ಕೆ ಹಲವಾರು ವಿರೋಧಗಳು ಕೇಳಿ ಬರುತ್ತಿವೆ. ಹಲವಾರು ಸಾಮಾಜಿಕ ಕಾರ್ಯಕರ್ತರು ಸಾಂಕ್ರಾಮಿಕದ ನಡುವೆ ಟೂರ್ನಿ ಬೇಕಿತ್ತೇ ಎಂದು ಪ್ರಶ್ನೆ ಮಾಡಿದ್ದಾರೆ.

ಒಂದೆಡೆ ಚೀನಾದ ಗಡಿ ತಂಟೆಗೆ ಚೀನಾ ಆಪ್‌ಗಳನ್ನು ನಿಷೇಧಿಸಿದ್ದು ಬಹಳ ದೊಡ್ಡ ಸಾಧನೆಯೆಂದು ಬೀಗುತ್ತಿರುವ ಕೇಂದ್ರ ಸರ್ಕಾರ, ಚೀನಾ ಕಂಪೆನಿಗಳ ಪ್ರಾಯೋಜಕತ್ವದಲ್ಲಿ ಐಪಿಎಲ್ ನಡೆಸಲು ಅವಕಾಶ ಕೊಟ್ಟಿದ್ದು ದ್ವಂದ್ವವಲ್ಲವೇ? BCCI ನಲ್ಲಿ ಬಿಜೆಪಿ ಮುಖಂಡರ ಮಕ್ಕಳೇ ಇದ್ದರೂ ಇದು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಚಿಂತಕರಾದ ಶಿವಸುಂದರ್‌, ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ”ಜಸ್ಟ್‌ ಆಸ್ಕಿಂಗ್‌” ಎಂಬ ಶಿರ್ಷೀಕೆಯ ಲೇಖನದಲ್ಲಿ ಬಿಜೆಪಿಯ ನಾಯಕರು ಹಾಗೂ ಅವರ ಬೆಂಬಲಿಗರಿಗೆ ಪ್ರಶ್ನೆಗಳ ಸರಮಾಲೆಯನ್ನೇ ಎಸೆದಿದ್ದಾರೆ.

ಅವರು ತಮ್ಮ ಬರಹದಲ್ಲಿ , ಈ “ಭಾರತೀಯ” ಪಂದ್ಯವನ್ನು ಹಲವಾರು “ಚೀನಿ ಕಂಪನಿಗಳು” ಪ್ರಾಯೋಜಕತ್ವ ಮಾಡುತ್ತಿವೆ, ಅಲ್ಲದೆ ಈ ಬಾರಿಯ ಪಂದ್ಯಾಟದ ಹೆಸರು ಕೂಡಾ “VIVO IPL 2020” ಎಂದಾಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

“ಚೀನಾದ ದೈತ್ಯ ಮೊಬೈಲ್ ಕಂಪನಿ VIVO ಐಪಿಎಲ್ ನ ಟೈಟಲ್ ಪ್ರಾಯೋಜನೆ ಮಾಡುತ್ತಿದೆ. ಚೀನಾದ ಅಲಿಬಾಬಾ ಕಂಪನಿಯ ಹೂಡಿಕೆ ಹೊಂದಿರುವ Pay TM “ಅಂಪೈರ್ ಪಾರ್ಟ್ನರ್” ಆಗಿದೆ. ಚೀನಾದ ಹೂಡಿಕೆಯನ್ನು ಹೊಂದಿರುವ Swiggy ಮತ್ತು Dream 11 ಕಂಪನಿಗಳು ಸಹ- ಪ್ರಯೋಜಕರಾಗಿವೆ.” ಇದಕ್ಕೆ ಭಾರತ ಸರ್ಕಾರವೇ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಐಪಿಎಲ್ ಪಂದ್ಯಗಳಿಗೆ ಅನುಮತಿ ಕೊಟ್ಟಿರುವ BCCI ನ ಪದಾಧಿಕಾರಿಗಳಲ್ಲಿ ಭಾರತದ ಗೃಹಮಂತ್ರಿ ಅಮಿತ್ ಷಾ ಅವರ ಮಗ ಜೇ ಶಾ BCCI ನ ಪ್ರಧಾನ ಕಾರ್ಯದರ್ಶಿ ಆಗದ್ದಾರೆ. ಕೇಂದ್ರ ಮಂತ್ರಿ ಅನುರಾಗ್ ಠಾಕೂರ್ ಅವರ ತಮ್ಮ ಅರುಣ್ ಧೋಮಲ್ BCCI ನ ಖಜಾಂಚಿ ಆಗಿದ್ದಾರೆ ಎಂದು ಬಿಜೆಪಿ ಮತ್ತು ಬಿಸಿಸಿಐನ ಸಂಬಂಧವನ್ನು ಉಲ್ಲೇಖಿಸಿದ್ದಾರೆ.

“ಪಾಕಿಸ್ತಾನದೊಂದಿಗೆ ಘರ್ಷಣೆ ನಡೆದಾಗಲೆಲ್ಲಾ ಅದರ ಜೊತೆ ಕ್ರೀಡಾ ಸಂಬಂಧಗಳನ್ನು ಕಡಿದುಕೊಳ್ಳಲು ಬಿಜೆಪಿ ಪಕ್ಷ ಆಗ್ರಹಿಸುತ್ತಿತ್ತು. ಪಾಕಿಸ್ತಾನ ಜನರೊಂದಿಗೆ ಸ್ನೇಹ ಸಂಬಂಧ ಇಟ್ಟುಕೊಳ್ಳಬೇಕೆನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸುತ್ತಿತ್ತು. ಈಗ ಬಿಜೆಪಿಯ ಗೌರವಾನ್ವಿತ ಸದಸ್ಯರೇ ಚೀನಾ ಕಂಪನಿಗಳ ಪ್ರಾಯೋಜನೆಯ ಐಪಿಎಲ್‌ಗೆ ಅನುಮತಿ ನೀಡಿದ್ದು ಹೇಗೆ” ಎಂದು ಶಿವಸುಂದರ್‌ ಪ್ರಶ್ನಿಸಿದ್ದಾರೆ.

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ ಎಂದು ಅವರು ಪ್ರಶ್ನಿಸಿದ್ದಾರೆ.

“ಜನರಿಗೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಬಾಯ್ಕಾಟ್ ಚೀನಾ ಅಭಿಯಾನ ನಡೆಯುತ್ತಿದೆ. ಇನ್ನೊಂದೆಡೆ ಚೀನಾ ಪ್ರಾಯೋಜಿತ ಐಪಿಎಲ್ ನಡೆಯುತ್ತಿದೆ. ಚೀನಾದ ಹಣ, ಹೂಡಿಕೆ, ಪ್ರಾಯೋಜಕತ್ವ, ಜಾಹಿರಾತನ್ನು ಹೇಗೆ ನಿರ್ವಹಿಸಬೇಕು ಎಂದು ಸರ್ಕಾರಕ್ಕೆ ತೀವ್ರ ಗೊಂದಲಗಳಿರುವಾಗ ಚೀನಾ ನಮ್ಮ ವಿಷಯಗಳಲ್ಲಿ ಮೂಗುತೂರಿಸುವುದರಲ್ಲಿ ಯಾವುದೇ ಆಶ್ಚರ್ಯವಿ‌ಲ್ಲ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಚೀನಾದ ದೊಡ್ಡ ಕಂಪನಿಗಳು ಬಿಸಿಸಿಐನ ಐಪಿಎಲ್‌ಗೆ ಜಾಹೀರಾತು ನೀಡಲು ಒಪ್ಪಿಗೆ ನೀಡಲಾಗಿದೆ. ಬಾಲ್ಕನಿಯಿಂದ ಟಿವಿ ಎಸೆದು ಚೀನಾದ ವಿರುದ್ಧ ಶೌರ್ಯ ತೋರಿದ್ದ ಈಡಿಯಟ್‌ಗಳನ್ನು ನೋಡಿ ಬೇಸರವಾಗುತ್ತಿದೆ ಎಂದು ಒಮರ್ ಅಬ್ದುಲ್ಲಾ ವ್ಯಂಗ್ಯವಾಡಿದ್ದಾರೆ.

ಅರವಿಂದ್ ಜಾ ಎಂಬವರು, ಅಮಿತ್ ಶಾ ಅವರ ಮಗ ಬಿಸಿಸಿಐನಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುವವರು ಎಂಬುದನ್ನು ಎಂದಿಗೂ ಮರೆಯಬಾರದು. ಐಪಿಎಲ್ ಚೀನಾದ ಪ್ರಾಯೋಜಕತ್ವದೊಂದಿಗೆ ಮುಂದುವರಿಯುತ್ತಿದ್ದರೆ, ಅದು ಬಿಜೆಪಿಯ ಉನ್ನತ ನಾಯಕತ್ವದ ಅನುಮೋದನೆಯೊಂದಿಗೆ ನಡೆಯುತ್ತಿದೆ. ಅಪ್ಲಿಕೇಶನ್ ನಿಷೇಧವು ನಮ್ಮ ಕಣ್ಣಿಗೆ ಮಣ್ಣೆರೆಚುವ ತಂತ್ರವಾಗಿದೆ ಎಂದು ಹೇಳಿದ್ದಾರೆ.

 

ಲಡಾಖ್‌ನಲ್ಲಿ ಭಾರತೀಯ ಸೈನಿಕರ ಮಾರಣ ಹೋಮ ನಡೆದಾಗ ಐಪಿಎಲ್‌ ಮಾಡಿದ್ದ ಟ್ವೀಟ್ ಒಂದರ ಫೋಟೋವನ್ನು ಹೆಕ್ಕಿರುವ ಪ್ರಾಧ್ಯಾಪಕ ಕಾಂಚನ್ ಗುಪ್ತಾ, “ಪೂರ್ವ ಲಡಾಕ್‌ನಲ್ಲಿ LAC ಉದ್ದಕ್ಕೂ ಚೀನಾದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಪ್ರಾಯೋಜಕತ್ವದ ಒಪ್ಪಂದಗಳನ್ನು ಪರಿಶೀಲಿಸುವುದಾಗಿ ಐಪಿಎಲ್ ಹೇಳಿತ್ತು. ಆದರೆ ಈಗ ಚೀನೀ ಪ್ರಾಯೋಜಕತ್ವವನ್ನು ಸ್ವೀಕರಿಸಲು ಅದು ನಿರ್ಧರಿಸಿದೆ. ಸಾಮಾನ್ಯ ವ್ಯಕ್ತಿಗಳನ್ನು ‘ರಾಷ್ಟ್ರ ವಿರೋಧಿ’ ಎಂದು ನಾವು ಸುಲಭವಾಗಿ ಆರೋಪಿಸುತ್ತೇವೆ. ಹಾಗಾದರೆ ಐಪಿಎಲ್ ಏನು?” ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಶಾಸಕ ಝೀಶಾನ್ ಸಿದ್ದೇಕಿ, ಚೀನಾ ನಿರ್ಮಿತ ಟಿವಿಯನ್ನು ಒಡೆದುಹಾಕಿದ ವ್ಯಕ್ತಿಗೆ ಸಂತಾಪಗಳು ಎಂದು ವ್ಯಂಗ್ಯವಾಡಿದ್ದಾರೆ.

 


ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...