Homeಸಿನಿಮಾಕ್ರೀಡೆVIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ?

- Advertisement -
- Advertisement -

ಎಲ್ಲಾ ಒತ್ತಡಗಳ ನಡೆವೆಯು ಈ ವರ್ಷದ ಐಪಿಎಲ್‌ ಕ್ರಿಕೆಟ್ ಟೂರ್ನಿ ನಡೆಸುವುದಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅನುಮತಿ ನೀಡಿದೆ. ಈ ವರ್ಷದ ಐಪಿಎಲ್ ಪಂದ್ಯಗಳು ಸೆಪ್ಟೆಂಬರ್ 19 ರಿಂದ ನವೆಂಬರ್‌ 10 ರವರೆಗೆ ಯುಎಇ ಯಲ್ಲಿ ನಡೆಯಲಿದೆ.

ಕೊರೊನಾ ಆತಂಕದ ನಡುವೆ ನಡೆಯುತ್ತಿರುವ ಈ ಪಂದ್ಯಕ್ಕೆ ಹಲವಾರು ವಿರೋಧಗಳು ಕೇಳಿ ಬರುತ್ತಿವೆ. ಹಲವಾರು ಸಾಮಾಜಿಕ ಕಾರ್ಯಕರ್ತರು ಸಾಂಕ್ರಾಮಿಕದ ನಡುವೆ ಟೂರ್ನಿ ಬೇಕಿತ್ತೇ ಎಂದು ಪ್ರಶ್ನೆ ಮಾಡಿದ್ದಾರೆ.

ಒಂದೆಡೆ ಚೀನಾದ ಗಡಿ ತಂಟೆಗೆ ಚೀನಾ ಆಪ್‌ಗಳನ್ನು ನಿಷೇಧಿಸಿದ್ದು ಬಹಳ ದೊಡ್ಡ ಸಾಧನೆಯೆಂದು ಬೀಗುತ್ತಿರುವ ಕೇಂದ್ರ ಸರ್ಕಾರ, ಚೀನಾ ಕಂಪೆನಿಗಳ ಪ್ರಾಯೋಜಕತ್ವದಲ್ಲಿ ಐಪಿಎಲ್ ನಡೆಸಲು ಅವಕಾಶ ಕೊಟ್ಟಿದ್ದು ದ್ವಂದ್ವವಲ್ಲವೇ? BCCI ನಲ್ಲಿ ಬಿಜೆಪಿ ಮುಖಂಡರ ಮಕ್ಕಳೇ ಇದ್ದರೂ ಇದು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಚಿಂತಕರಾದ ಶಿವಸುಂದರ್‌, ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ”ಜಸ್ಟ್‌ ಆಸ್ಕಿಂಗ್‌” ಎಂಬ ಶಿರ್ಷೀಕೆಯ ಲೇಖನದಲ್ಲಿ ಬಿಜೆಪಿಯ ನಾಯಕರು ಹಾಗೂ ಅವರ ಬೆಂಬಲಿಗರಿಗೆ ಪ್ರಶ್ನೆಗಳ ಸರಮಾಲೆಯನ್ನೇ ಎಸೆದಿದ್ದಾರೆ.

ಅವರು ತಮ್ಮ ಬರಹದಲ್ಲಿ , ಈ “ಭಾರತೀಯ” ಪಂದ್ಯವನ್ನು ಹಲವಾರು “ಚೀನಿ ಕಂಪನಿಗಳು” ಪ್ರಾಯೋಜಕತ್ವ ಮಾಡುತ್ತಿವೆ, ಅಲ್ಲದೆ ಈ ಬಾರಿಯ ಪಂದ್ಯಾಟದ ಹೆಸರು ಕೂಡಾ “VIVO IPL 2020” ಎಂದಾಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

“ಚೀನಾದ ದೈತ್ಯ ಮೊಬೈಲ್ ಕಂಪನಿ VIVO ಐಪಿಎಲ್ ನ ಟೈಟಲ್ ಪ್ರಾಯೋಜನೆ ಮಾಡುತ್ತಿದೆ. ಚೀನಾದ ಅಲಿಬಾಬಾ ಕಂಪನಿಯ ಹೂಡಿಕೆ ಹೊಂದಿರುವ Pay TM “ಅಂಪೈರ್ ಪಾರ್ಟ್ನರ್” ಆಗಿದೆ. ಚೀನಾದ ಹೂಡಿಕೆಯನ್ನು ಹೊಂದಿರುವ Swiggy ಮತ್ತು Dream 11 ಕಂಪನಿಗಳು ಸಹ- ಪ್ರಯೋಜಕರಾಗಿವೆ.” ಇದಕ್ಕೆ ಭಾರತ ಸರ್ಕಾರವೇ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಐಪಿಎಲ್ ಪಂದ್ಯಗಳಿಗೆ ಅನುಮತಿ ಕೊಟ್ಟಿರುವ BCCI ನ ಪದಾಧಿಕಾರಿಗಳಲ್ಲಿ ಭಾರತದ ಗೃಹಮಂತ್ರಿ ಅಮಿತ್ ಷಾ ಅವರ ಮಗ ಜೇ ಶಾ BCCI ನ ಪ್ರಧಾನ ಕಾರ್ಯದರ್ಶಿ ಆಗದ್ದಾರೆ. ಕೇಂದ್ರ ಮಂತ್ರಿ ಅನುರಾಗ್ ಠಾಕೂರ್ ಅವರ ತಮ್ಮ ಅರುಣ್ ಧೋಮಲ್ BCCI ನ ಖಜಾಂಚಿ ಆಗಿದ್ದಾರೆ ಎಂದು ಬಿಜೆಪಿ ಮತ್ತು ಬಿಸಿಸಿಐನ ಸಂಬಂಧವನ್ನು ಉಲ್ಲೇಖಿಸಿದ್ದಾರೆ.

“ಪಾಕಿಸ್ತಾನದೊಂದಿಗೆ ಘರ್ಷಣೆ ನಡೆದಾಗಲೆಲ್ಲಾ ಅದರ ಜೊತೆ ಕ್ರೀಡಾ ಸಂಬಂಧಗಳನ್ನು ಕಡಿದುಕೊಳ್ಳಲು ಬಿಜೆಪಿ ಪಕ್ಷ ಆಗ್ರಹಿಸುತ್ತಿತ್ತು. ಪಾಕಿಸ್ತಾನ ಜನರೊಂದಿಗೆ ಸ್ನೇಹ ಸಂಬಂಧ ಇಟ್ಟುಕೊಳ್ಳಬೇಕೆನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸುತ್ತಿತ್ತು. ಈಗ ಬಿಜೆಪಿಯ ಗೌರವಾನ್ವಿತ ಸದಸ್ಯರೇ ಚೀನಾ ಕಂಪನಿಗಳ ಪ್ರಾಯೋಜನೆಯ ಐಪಿಎಲ್‌ಗೆ ಅನುಮತಿ ನೀಡಿದ್ದು ಹೇಗೆ” ಎಂದು ಶಿವಸುಂದರ್‌ ಪ್ರಶ್ನಿಸಿದ್ದಾರೆ.

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ ಎಂದು ಅವರು ಪ್ರಶ್ನಿಸಿದ್ದಾರೆ.

“ಜನರಿಗೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಬಾಯ್ಕಾಟ್ ಚೀನಾ ಅಭಿಯಾನ ನಡೆಯುತ್ತಿದೆ. ಇನ್ನೊಂದೆಡೆ ಚೀನಾ ಪ್ರಾಯೋಜಿತ ಐಪಿಎಲ್ ನಡೆಯುತ್ತಿದೆ. ಚೀನಾದ ಹಣ, ಹೂಡಿಕೆ, ಪ್ರಾಯೋಜಕತ್ವ, ಜಾಹಿರಾತನ್ನು ಹೇಗೆ ನಿರ್ವಹಿಸಬೇಕು ಎಂದು ಸರ್ಕಾರಕ್ಕೆ ತೀವ್ರ ಗೊಂದಲಗಳಿರುವಾಗ ಚೀನಾ ನಮ್ಮ ವಿಷಯಗಳಲ್ಲಿ ಮೂಗುತೂರಿಸುವುದರಲ್ಲಿ ಯಾವುದೇ ಆಶ್ಚರ್ಯವಿ‌ಲ್ಲ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಚೀನಾದ ದೊಡ್ಡ ಕಂಪನಿಗಳು ಬಿಸಿಸಿಐನ ಐಪಿಎಲ್‌ಗೆ ಜಾಹೀರಾತು ನೀಡಲು ಒಪ್ಪಿಗೆ ನೀಡಲಾಗಿದೆ. ಬಾಲ್ಕನಿಯಿಂದ ಟಿವಿ ಎಸೆದು ಚೀನಾದ ವಿರುದ್ಧ ಶೌರ್ಯ ತೋರಿದ್ದ ಈಡಿಯಟ್‌ಗಳನ್ನು ನೋಡಿ ಬೇಸರವಾಗುತ್ತಿದೆ ಎಂದು ಒಮರ್ ಅಬ್ದುಲ್ಲಾ ವ್ಯಂಗ್ಯವಾಡಿದ್ದಾರೆ.

ಅರವಿಂದ್ ಜಾ ಎಂಬವರು, ಅಮಿತ್ ಶಾ ಅವರ ಮಗ ಬಿಸಿಸಿಐನಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುವವರು ಎಂಬುದನ್ನು ಎಂದಿಗೂ ಮರೆಯಬಾರದು. ಐಪಿಎಲ್ ಚೀನಾದ ಪ್ರಾಯೋಜಕತ್ವದೊಂದಿಗೆ ಮುಂದುವರಿಯುತ್ತಿದ್ದರೆ, ಅದು ಬಿಜೆಪಿಯ ಉನ್ನತ ನಾಯಕತ್ವದ ಅನುಮೋದನೆಯೊಂದಿಗೆ ನಡೆಯುತ್ತಿದೆ. ಅಪ್ಲಿಕೇಶನ್ ನಿಷೇಧವು ನಮ್ಮ ಕಣ್ಣಿಗೆ ಮಣ್ಣೆರೆಚುವ ತಂತ್ರವಾಗಿದೆ ಎಂದು ಹೇಳಿದ್ದಾರೆ.

 

ಲಡಾಖ್‌ನಲ್ಲಿ ಭಾರತೀಯ ಸೈನಿಕರ ಮಾರಣ ಹೋಮ ನಡೆದಾಗ ಐಪಿಎಲ್‌ ಮಾಡಿದ್ದ ಟ್ವೀಟ್ ಒಂದರ ಫೋಟೋವನ್ನು ಹೆಕ್ಕಿರುವ ಪ್ರಾಧ್ಯಾಪಕ ಕಾಂಚನ್ ಗುಪ್ತಾ, “ಪೂರ್ವ ಲಡಾಕ್‌ನಲ್ಲಿ LAC ಉದ್ದಕ್ಕೂ ಚೀನಾದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಪ್ರಾಯೋಜಕತ್ವದ ಒಪ್ಪಂದಗಳನ್ನು ಪರಿಶೀಲಿಸುವುದಾಗಿ ಐಪಿಎಲ್ ಹೇಳಿತ್ತು. ಆದರೆ ಈಗ ಚೀನೀ ಪ್ರಾಯೋಜಕತ್ವವನ್ನು ಸ್ವೀಕರಿಸಲು ಅದು ನಿರ್ಧರಿಸಿದೆ. ಸಾಮಾನ್ಯ ವ್ಯಕ್ತಿಗಳನ್ನು ‘ರಾಷ್ಟ್ರ ವಿರೋಧಿ’ ಎಂದು ನಾವು ಸುಲಭವಾಗಿ ಆರೋಪಿಸುತ್ತೇವೆ. ಹಾಗಾದರೆ ಐಪಿಎಲ್ ಏನು?” ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಶಾಸಕ ಝೀಶಾನ್ ಸಿದ್ದೇಕಿ, ಚೀನಾ ನಿರ್ಮಿತ ಟಿವಿಯನ್ನು ಒಡೆದುಹಾಕಿದ ವ್ಯಕ್ತಿಗೆ ಸಂತಾಪಗಳು ಎಂದು ವ್ಯಂಗ್ಯವಾಡಿದ್ದಾರೆ.

 


ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...