Homeಸಿನಿಮಾಕ್ರೀಡೆVIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ?

- Advertisement -
- Advertisement -

ಎಲ್ಲಾ ಒತ್ತಡಗಳ ನಡೆವೆಯು ಈ ವರ್ಷದ ಐಪಿಎಲ್‌ ಕ್ರಿಕೆಟ್ ಟೂರ್ನಿ ನಡೆಸುವುದಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅನುಮತಿ ನೀಡಿದೆ. ಈ ವರ್ಷದ ಐಪಿಎಲ್ ಪಂದ್ಯಗಳು ಸೆಪ್ಟೆಂಬರ್ 19 ರಿಂದ ನವೆಂಬರ್‌ 10 ರವರೆಗೆ ಯುಎಇ ಯಲ್ಲಿ ನಡೆಯಲಿದೆ.

ಕೊರೊನಾ ಆತಂಕದ ನಡುವೆ ನಡೆಯುತ್ತಿರುವ ಈ ಪಂದ್ಯಕ್ಕೆ ಹಲವಾರು ವಿರೋಧಗಳು ಕೇಳಿ ಬರುತ್ತಿವೆ. ಹಲವಾರು ಸಾಮಾಜಿಕ ಕಾರ್ಯಕರ್ತರು ಸಾಂಕ್ರಾಮಿಕದ ನಡುವೆ ಟೂರ್ನಿ ಬೇಕಿತ್ತೇ ಎಂದು ಪ್ರಶ್ನೆ ಮಾಡಿದ್ದಾರೆ.

ಒಂದೆಡೆ ಚೀನಾದ ಗಡಿ ತಂಟೆಗೆ ಚೀನಾ ಆಪ್‌ಗಳನ್ನು ನಿಷೇಧಿಸಿದ್ದು ಬಹಳ ದೊಡ್ಡ ಸಾಧನೆಯೆಂದು ಬೀಗುತ್ತಿರುವ ಕೇಂದ್ರ ಸರ್ಕಾರ, ಚೀನಾ ಕಂಪೆನಿಗಳ ಪ್ರಾಯೋಜಕತ್ವದಲ್ಲಿ ಐಪಿಎಲ್ ನಡೆಸಲು ಅವಕಾಶ ಕೊಟ್ಟಿದ್ದು ದ್ವಂದ್ವವಲ್ಲವೇ? BCCI ನಲ್ಲಿ ಬಿಜೆಪಿ ಮುಖಂಡರ ಮಕ್ಕಳೇ ಇದ್ದರೂ ಇದು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಚಿಂತಕರಾದ ಶಿವಸುಂದರ್‌, ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ”ಜಸ್ಟ್‌ ಆಸ್ಕಿಂಗ್‌” ಎಂಬ ಶಿರ್ಷೀಕೆಯ ಲೇಖನದಲ್ಲಿ ಬಿಜೆಪಿಯ ನಾಯಕರು ಹಾಗೂ ಅವರ ಬೆಂಬಲಿಗರಿಗೆ ಪ್ರಶ್ನೆಗಳ ಸರಮಾಲೆಯನ್ನೇ ಎಸೆದಿದ್ದಾರೆ.

ಅವರು ತಮ್ಮ ಬರಹದಲ್ಲಿ , ಈ “ಭಾರತೀಯ” ಪಂದ್ಯವನ್ನು ಹಲವಾರು “ಚೀನಿ ಕಂಪನಿಗಳು” ಪ್ರಾಯೋಜಕತ್ವ ಮಾಡುತ್ತಿವೆ, ಅಲ್ಲದೆ ಈ ಬಾರಿಯ ಪಂದ್ಯಾಟದ ಹೆಸರು ಕೂಡಾ “VIVO IPL 2020” ಎಂದಾಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

“ಚೀನಾದ ದೈತ್ಯ ಮೊಬೈಲ್ ಕಂಪನಿ VIVO ಐಪಿಎಲ್ ನ ಟೈಟಲ್ ಪ್ರಾಯೋಜನೆ ಮಾಡುತ್ತಿದೆ. ಚೀನಾದ ಅಲಿಬಾಬಾ ಕಂಪನಿಯ ಹೂಡಿಕೆ ಹೊಂದಿರುವ Pay TM “ಅಂಪೈರ್ ಪಾರ್ಟ್ನರ್” ಆಗಿದೆ. ಚೀನಾದ ಹೂಡಿಕೆಯನ್ನು ಹೊಂದಿರುವ Swiggy ಮತ್ತು Dream 11 ಕಂಪನಿಗಳು ಸಹ- ಪ್ರಯೋಜಕರಾಗಿವೆ.” ಇದಕ್ಕೆ ಭಾರತ ಸರ್ಕಾರವೇ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಐಪಿಎಲ್ ಪಂದ್ಯಗಳಿಗೆ ಅನುಮತಿ ಕೊಟ್ಟಿರುವ BCCI ನ ಪದಾಧಿಕಾರಿಗಳಲ್ಲಿ ಭಾರತದ ಗೃಹಮಂತ್ರಿ ಅಮಿತ್ ಷಾ ಅವರ ಮಗ ಜೇ ಶಾ BCCI ನ ಪ್ರಧಾನ ಕಾರ್ಯದರ್ಶಿ ಆಗದ್ದಾರೆ. ಕೇಂದ್ರ ಮಂತ್ರಿ ಅನುರಾಗ್ ಠಾಕೂರ್ ಅವರ ತಮ್ಮ ಅರುಣ್ ಧೋಮಲ್ BCCI ನ ಖಜಾಂಚಿ ಆಗಿದ್ದಾರೆ ಎಂದು ಬಿಜೆಪಿ ಮತ್ತು ಬಿಸಿಸಿಐನ ಸಂಬಂಧವನ್ನು ಉಲ್ಲೇಖಿಸಿದ್ದಾರೆ.

“ಪಾಕಿಸ್ತಾನದೊಂದಿಗೆ ಘರ್ಷಣೆ ನಡೆದಾಗಲೆಲ್ಲಾ ಅದರ ಜೊತೆ ಕ್ರೀಡಾ ಸಂಬಂಧಗಳನ್ನು ಕಡಿದುಕೊಳ್ಳಲು ಬಿಜೆಪಿ ಪಕ್ಷ ಆಗ್ರಹಿಸುತ್ತಿತ್ತು. ಪಾಕಿಸ್ತಾನ ಜನರೊಂದಿಗೆ ಸ್ನೇಹ ಸಂಬಂಧ ಇಟ್ಟುಕೊಳ್ಳಬೇಕೆನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸುತ್ತಿತ್ತು. ಈಗ ಬಿಜೆಪಿಯ ಗೌರವಾನ್ವಿತ ಸದಸ್ಯರೇ ಚೀನಾ ಕಂಪನಿಗಳ ಪ್ರಾಯೋಜನೆಯ ಐಪಿಎಲ್‌ಗೆ ಅನುಮತಿ ನೀಡಿದ್ದು ಹೇಗೆ” ಎಂದು ಶಿವಸುಂದರ್‌ ಪ್ರಶ್ನಿಸಿದ್ದಾರೆ.

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ ಎಂದು ಅವರು ಪ್ರಶ್ನಿಸಿದ್ದಾರೆ.

“ಜನರಿಗೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಬಾಯ್ಕಾಟ್ ಚೀನಾ ಅಭಿಯಾನ ನಡೆಯುತ್ತಿದೆ. ಇನ್ನೊಂದೆಡೆ ಚೀನಾ ಪ್ರಾಯೋಜಿತ ಐಪಿಎಲ್ ನಡೆಯುತ್ತಿದೆ. ಚೀನಾದ ಹಣ, ಹೂಡಿಕೆ, ಪ್ರಾಯೋಜಕತ್ವ, ಜಾಹಿರಾತನ್ನು ಹೇಗೆ ನಿರ್ವಹಿಸಬೇಕು ಎಂದು ಸರ್ಕಾರಕ್ಕೆ ತೀವ್ರ ಗೊಂದಲಗಳಿರುವಾಗ ಚೀನಾ ನಮ್ಮ ವಿಷಯಗಳಲ್ಲಿ ಮೂಗುತೂರಿಸುವುದರಲ್ಲಿ ಯಾವುದೇ ಆಶ್ಚರ್ಯವಿ‌ಲ್ಲ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಚೀನಾದ ದೊಡ್ಡ ಕಂಪನಿಗಳು ಬಿಸಿಸಿಐನ ಐಪಿಎಲ್‌ಗೆ ಜಾಹೀರಾತು ನೀಡಲು ಒಪ್ಪಿಗೆ ನೀಡಲಾಗಿದೆ. ಬಾಲ್ಕನಿಯಿಂದ ಟಿವಿ ಎಸೆದು ಚೀನಾದ ವಿರುದ್ಧ ಶೌರ್ಯ ತೋರಿದ್ದ ಈಡಿಯಟ್‌ಗಳನ್ನು ನೋಡಿ ಬೇಸರವಾಗುತ್ತಿದೆ ಎಂದು ಒಮರ್ ಅಬ್ದುಲ್ಲಾ ವ್ಯಂಗ್ಯವಾಡಿದ್ದಾರೆ.

ಅರವಿಂದ್ ಜಾ ಎಂಬವರು, ಅಮಿತ್ ಶಾ ಅವರ ಮಗ ಬಿಸಿಸಿಐನಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುವವರು ಎಂಬುದನ್ನು ಎಂದಿಗೂ ಮರೆಯಬಾರದು. ಐಪಿಎಲ್ ಚೀನಾದ ಪ್ರಾಯೋಜಕತ್ವದೊಂದಿಗೆ ಮುಂದುವರಿಯುತ್ತಿದ್ದರೆ, ಅದು ಬಿಜೆಪಿಯ ಉನ್ನತ ನಾಯಕತ್ವದ ಅನುಮೋದನೆಯೊಂದಿಗೆ ನಡೆಯುತ್ತಿದೆ. ಅಪ್ಲಿಕೇಶನ್ ನಿಷೇಧವು ನಮ್ಮ ಕಣ್ಣಿಗೆ ಮಣ್ಣೆರೆಚುವ ತಂತ್ರವಾಗಿದೆ ಎಂದು ಹೇಳಿದ್ದಾರೆ.

 

ಲಡಾಖ್‌ನಲ್ಲಿ ಭಾರತೀಯ ಸೈನಿಕರ ಮಾರಣ ಹೋಮ ನಡೆದಾಗ ಐಪಿಎಲ್‌ ಮಾಡಿದ್ದ ಟ್ವೀಟ್ ಒಂದರ ಫೋಟೋವನ್ನು ಹೆಕ್ಕಿರುವ ಪ್ರಾಧ್ಯಾಪಕ ಕಾಂಚನ್ ಗುಪ್ತಾ, “ಪೂರ್ವ ಲಡಾಕ್‌ನಲ್ಲಿ LAC ಉದ್ದಕ್ಕೂ ಚೀನಾದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಪ್ರಾಯೋಜಕತ್ವದ ಒಪ್ಪಂದಗಳನ್ನು ಪರಿಶೀಲಿಸುವುದಾಗಿ ಐಪಿಎಲ್ ಹೇಳಿತ್ತು. ಆದರೆ ಈಗ ಚೀನೀ ಪ್ರಾಯೋಜಕತ್ವವನ್ನು ಸ್ವೀಕರಿಸಲು ಅದು ನಿರ್ಧರಿಸಿದೆ. ಸಾಮಾನ್ಯ ವ್ಯಕ್ತಿಗಳನ್ನು ‘ರಾಷ್ಟ್ರ ವಿರೋಧಿ’ ಎಂದು ನಾವು ಸುಲಭವಾಗಿ ಆರೋಪಿಸುತ್ತೇವೆ. ಹಾಗಾದರೆ ಐಪಿಎಲ್ ಏನು?” ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಶಾಸಕ ಝೀಶಾನ್ ಸಿದ್ದೇಕಿ, ಚೀನಾ ನಿರ್ಮಿತ ಟಿವಿಯನ್ನು ಒಡೆದುಹಾಕಿದ ವ್ಯಕ್ತಿಗೆ ಸಂತಾಪಗಳು ಎಂದು ವ್ಯಂಗ್ಯವಾಡಿದ್ದಾರೆ.

 


ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...