Homeಸಿನಿಮಾಕ್ರೀಡೆVIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ?

- Advertisement -
- Advertisement -

ಎಲ್ಲಾ ಒತ್ತಡಗಳ ನಡೆವೆಯು ಈ ವರ್ಷದ ಐಪಿಎಲ್‌ ಕ್ರಿಕೆಟ್ ಟೂರ್ನಿ ನಡೆಸುವುದಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅನುಮತಿ ನೀಡಿದೆ. ಈ ವರ್ಷದ ಐಪಿಎಲ್ ಪಂದ್ಯಗಳು ಸೆಪ್ಟೆಂಬರ್ 19 ರಿಂದ ನವೆಂಬರ್‌ 10 ರವರೆಗೆ ಯುಎಇ ಯಲ್ಲಿ ನಡೆಯಲಿದೆ.

ಕೊರೊನಾ ಆತಂಕದ ನಡುವೆ ನಡೆಯುತ್ತಿರುವ ಈ ಪಂದ್ಯಕ್ಕೆ ಹಲವಾರು ವಿರೋಧಗಳು ಕೇಳಿ ಬರುತ್ತಿವೆ. ಹಲವಾರು ಸಾಮಾಜಿಕ ಕಾರ್ಯಕರ್ತರು ಸಾಂಕ್ರಾಮಿಕದ ನಡುವೆ ಟೂರ್ನಿ ಬೇಕಿತ್ತೇ ಎಂದು ಪ್ರಶ್ನೆ ಮಾಡಿದ್ದಾರೆ.

ಒಂದೆಡೆ ಚೀನಾದ ಗಡಿ ತಂಟೆಗೆ ಚೀನಾ ಆಪ್‌ಗಳನ್ನು ನಿಷೇಧಿಸಿದ್ದು ಬಹಳ ದೊಡ್ಡ ಸಾಧನೆಯೆಂದು ಬೀಗುತ್ತಿರುವ ಕೇಂದ್ರ ಸರ್ಕಾರ, ಚೀನಾ ಕಂಪೆನಿಗಳ ಪ್ರಾಯೋಜಕತ್ವದಲ್ಲಿ ಐಪಿಎಲ್ ನಡೆಸಲು ಅವಕಾಶ ಕೊಟ್ಟಿದ್ದು ದ್ವಂದ್ವವಲ್ಲವೇ? BCCI ನಲ್ಲಿ ಬಿಜೆಪಿ ಮುಖಂಡರ ಮಕ್ಕಳೇ ಇದ್ದರೂ ಇದು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಚಿಂತಕರಾದ ಶಿವಸುಂದರ್‌, ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ”ಜಸ್ಟ್‌ ಆಸ್ಕಿಂಗ್‌” ಎಂಬ ಶಿರ್ಷೀಕೆಯ ಲೇಖನದಲ್ಲಿ ಬಿಜೆಪಿಯ ನಾಯಕರು ಹಾಗೂ ಅವರ ಬೆಂಬಲಿಗರಿಗೆ ಪ್ರಶ್ನೆಗಳ ಸರಮಾಲೆಯನ್ನೇ ಎಸೆದಿದ್ದಾರೆ.

ಅವರು ತಮ್ಮ ಬರಹದಲ್ಲಿ , ಈ “ಭಾರತೀಯ” ಪಂದ್ಯವನ್ನು ಹಲವಾರು “ಚೀನಿ ಕಂಪನಿಗಳು” ಪ್ರಾಯೋಜಕತ್ವ ಮಾಡುತ್ತಿವೆ, ಅಲ್ಲದೆ ಈ ಬಾರಿಯ ಪಂದ್ಯಾಟದ ಹೆಸರು ಕೂಡಾ “VIVO IPL 2020” ಎಂದಾಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

“ಚೀನಾದ ದೈತ್ಯ ಮೊಬೈಲ್ ಕಂಪನಿ VIVO ಐಪಿಎಲ್ ನ ಟೈಟಲ್ ಪ್ರಾಯೋಜನೆ ಮಾಡುತ್ತಿದೆ. ಚೀನಾದ ಅಲಿಬಾಬಾ ಕಂಪನಿಯ ಹೂಡಿಕೆ ಹೊಂದಿರುವ Pay TM “ಅಂಪೈರ್ ಪಾರ್ಟ್ನರ್” ಆಗಿದೆ. ಚೀನಾದ ಹೂಡಿಕೆಯನ್ನು ಹೊಂದಿರುವ Swiggy ಮತ್ತು Dream 11 ಕಂಪನಿಗಳು ಸಹ- ಪ್ರಯೋಜಕರಾಗಿವೆ.” ಇದಕ್ಕೆ ಭಾರತ ಸರ್ಕಾರವೇ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಐಪಿಎಲ್ ಪಂದ್ಯಗಳಿಗೆ ಅನುಮತಿ ಕೊಟ್ಟಿರುವ BCCI ನ ಪದಾಧಿಕಾರಿಗಳಲ್ಲಿ ಭಾರತದ ಗೃಹಮಂತ್ರಿ ಅಮಿತ್ ಷಾ ಅವರ ಮಗ ಜೇ ಶಾ BCCI ನ ಪ್ರಧಾನ ಕಾರ್ಯದರ್ಶಿ ಆಗದ್ದಾರೆ. ಕೇಂದ್ರ ಮಂತ್ರಿ ಅನುರಾಗ್ ಠಾಕೂರ್ ಅವರ ತಮ್ಮ ಅರುಣ್ ಧೋಮಲ್ BCCI ನ ಖಜಾಂಚಿ ಆಗಿದ್ದಾರೆ ಎಂದು ಬಿಜೆಪಿ ಮತ್ತು ಬಿಸಿಸಿಐನ ಸಂಬಂಧವನ್ನು ಉಲ್ಲೇಖಿಸಿದ್ದಾರೆ.

“ಪಾಕಿಸ್ತಾನದೊಂದಿಗೆ ಘರ್ಷಣೆ ನಡೆದಾಗಲೆಲ್ಲಾ ಅದರ ಜೊತೆ ಕ್ರೀಡಾ ಸಂಬಂಧಗಳನ್ನು ಕಡಿದುಕೊಳ್ಳಲು ಬಿಜೆಪಿ ಪಕ್ಷ ಆಗ್ರಹಿಸುತ್ತಿತ್ತು. ಪಾಕಿಸ್ತಾನ ಜನರೊಂದಿಗೆ ಸ್ನೇಹ ಸಂಬಂಧ ಇಟ್ಟುಕೊಳ್ಳಬೇಕೆನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸುತ್ತಿತ್ತು. ಈಗ ಬಿಜೆಪಿಯ ಗೌರವಾನ್ವಿತ ಸದಸ್ಯರೇ ಚೀನಾ ಕಂಪನಿಗಳ ಪ್ರಾಯೋಜನೆಯ ಐಪಿಎಲ್‌ಗೆ ಅನುಮತಿ ನೀಡಿದ್ದು ಹೇಗೆ” ಎಂದು ಶಿವಸುಂದರ್‌ ಪ್ರಶ್ನಿಸಿದ್ದಾರೆ.

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ ಎಂದು ಅವರು ಪ್ರಶ್ನಿಸಿದ್ದಾರೆ.

“ಜನರಿಗೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಬಾಯ್ಕಾಟ್ ಚೀನಾ ಅಭಿಯಾನ ನಡೆಯುತ್ತಿದೆ. ಇನ್ನೊಂದೆಡೆ ಚೀನಾ ಪ್ರಾಯೋಜಿತ ಐಪಿಎಲ್ ನಡೆಯುತ್ತಿದೆ. ಚೀನಾದ ಹಣ, ಹೂಡಿಕೆ, ಪ್ರಾಯೋಜಕತ್ವ, ಜಾಹಿರಾತನ್ನು ಹೇಗೆ ನಿರ್ವಹಿಸಬೇಕು ಎಂದು ಸರ್ಕಾರಕ್ಕೆ ತೀವ್ರ ಗೊಂದಲಗಳಿರುವಾಗ ಚೀನಾ ನಮ್ಮ ವಿಷಯಗಳಲ್ಲಿ ಮೂಗುತೂರಿಸುವುದರಲ್ಲಿ ಯಾವುದೇ ಆಶ್ಚರ್ಯವಿ‌ಲ್ಲ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಚೀನಾದ ದೊಡ್ಡ ಕಂಪನಿಗಳು ಬಿಸಿಸಿಐನ ಐಪಿಎಲ್‌ಗೆ ಜಾಹೀರಾತು ನೀಡಲು ಒಪ್ಪಿಗೆ ನೀಡಲಾಗಿದೆ. ಬಾಲ್ಕನಿಯಿಂದ ಟಿವಿ ಎಸೆದು ಚೀನಾದ ವಿರುದ್ಧ ಶೌರ್ಯ ತೋರಿದ್ದ ಈಡಿಯಟ್‌ಗಳನ್ನು ನೋಡಿ ಬೇಸರವಾಗುತ್ತಿದೆ ಎಂದು ಒಮರ್ ಅಬ್ದುಲ್ಲಾ ವ್ಯಂಗ್ಯವಾಡಿದ್ದಾರೆ.

ಅರವಿಂದ್ ಜಾ ಎಂಬವರು, ಅಮಿತ್ ಶಾ ಅವರ ಮಗ ಬಿಸಿಸಿಐನಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುವವರು ಎಂಬುದನ್ನು ಎಂದಿಗೂ ಮರೆಯಬಾರದು. ಐಪಿಎಲ್ ಚೀನಾದ ಪ್ರಾಯೋಜಕತ್ವದೊಂದಿಗೆ ಮುಂದುವರಿಯುತ್ತಿದ್ದರೆ, ಅದು ಬಿಜೆಪಿಯ ಉನ್ನತ ನಾಯಕತ್ವದ ಅನುಮೋದನೆಯೊಂದಿಗೆ ನಡೆಯುತ್ತಿದೆ. ಅಪ್ಲಿಕೇಶನ್ ನಿಷೇಧವು ನಮ್ಮ ಕಣ್ಣಿಗೆ ಮಣ್ಣೆರೆಚುವ ತಂತ್ರವಾಗಿದೆ ಎಂದು ಹೇಳಿದ್ದಾರೆ.

 

ಲಡಾಖ್‌ನಲ್ಲಿ ಭಾರತೀಯ ಸೈನಿಕರ ಮಾರಣ ಹೋಮ ನಡೆದಾಗ ಐಪಿಎಲ್‌ ಮಾಡಿದ್ದ ಟ್ವೀಟ್ ಒಂದರ ಫೋಟೋವನ್ನು ಹೆಕ್ಕಿರುವ ಪ್ರಾಧ್ಯಾಪಕ ಕಾಂಚನ್ ಗುಪ್ತಾ, “ಪೂರ್ವ ಲಡಾಕ್‌ನಲ್ಲಿ LAC ಉದ್ದಕ್ಕೂ ಚೀನಾದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಪ್ರಾಯೋಜಕತ್ವದ ಒಪ್ಪಂದಗಳನ್ನು ಪರಿಶೀಲಿಸುವುದಾಗಿ ಐಪಿಎಲ್ ಹೇಳಿತ್ತು. ಆದರೆ ಈಗ ಚೀನೀ ಪ್ರಾಯೋಜಕತ್ವವನ್ನು ಸ್ವೀಕರಿಸಲು ಅದು ನಿರ್ಧರಿಸಿದೆ. ಸಾಮಾನ್ಯ ವ್ಯಕ್ತಿಗಳನ್ನು ‘ರಾಷ್ಟ್ರ ವಿರೋಧಿ’ ಎಂದು ನಾವು ಸುಲಭವಾಗಿ ಆರೋಪಿಸುತ್ತೇವೆ. ಹಾಗಾದರೆ ಐಪಿಎಲ್ ಏನು?” ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಶಾಸಕ ಝೀಶಾನ್ ಸಿದ್ದೇಕಿ, ಚೀನಾ ನಿರ್ಮಿತ ಟಿವಿಯನ್ನು ಒಡೆದುಹಾಕಿದ ವ್ಯಕ್ತಿಗೆ ಸಂತಾಪಗಳು ಎಂದು ವ್ಯಂಗ್ಯವಾಡಿದ್ದಾರೆ.

 


ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...