Homeಸಿನಿಮಾಕ್ರೀಡೆVIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ?

- Advertisement -
- Advertisement -

ಎಲ್ಲಾ ಒತ್ತಡಗಳ ನಡೆವೆಯು ಈ ವರ್ಷದ ಐಪಿಎಲ್‌ ಕ್ರಿಕೆಟ್ ಟೂರ್ನಿ ನಡೆಸುವುದಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅನುಮತಿ ನೀಡಿದೆ. ಈ ವರ್ಷದ ಐಪಿಎಲ್ ಪಂದ್ಯಗಳು ಸೆಪ್ಟೆಂಬರ್ 19 ರಿಂದ ನವೆಂಬರ್‌ 10 ರವರೆಗೆ ಯುಎಇ ಯಲ್ಲಿ ನಡೆಯಲಿದೆ.

ಕೊರೊನಾ ಆತಂಕದ ನಡುವೆ ನಡೆಯುತ್ತಿರುವ ಈ ಪಂದ್ಯಕ್ಕೆ ಹಲವಾರು ವಿರೋಧಗಳು ಕೇಳಿ ಬರುತ್ತಿವೆ. ಹಲವಾರು ಸಾಮಾಜಿಕ ಕಾರ್ಯಕರ್ತರು ಸಾಂಕ್ರಾಮಿಕದ ನಡುವೆ ಟೂರ್ನಿ ಬೇಕಿತ್ತೇ ಎಂದು ಪ್ರಶ್ನೆ ಮಾಡಿದ್ದಾರೆ.

ಒಂದೆಡೆ ಚೀನಾದ ಗಡಿ ತಂಟೆಗೆ ಚೀನಾ ಆಪ್‌ಗಳನ್ನು ನಿಷೇಧಿಸಿದ್ದು ಬಹಳ ದೊಡ್ಡ ಸಾಧನೆಯೆಂದು ಬೀಗುತ್ತಿರುವ ಕೇಂದ್ರ ಸರ್ಕಾರ, ಚೀನಾ ಕಂಪೆನಿಗಳ ಪ್ರಾಯೋಜಕತ್ವದಲ್ಲಿ ಐಪಿಎಲ್ ನಡೆಸಲು ಅವಕಾಶ ಕೊಟ್ಟಿದ್ದು ದ್ವಂದ್ವವಲ್ಲವೇ? BCCI ನಲ್ಲಿ ಬಿಜೆಪಿ ಮುಖಂಡರ ಮಕ್ಕಳೇ ಇದ್ದರೂ ಇದು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಚಿಂತಕರಾದ ಶಿವಸುಂದರ್‌, ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ”ಜಸ್ಟ್‌ ಆಸ್ಕಿಂಗ್‌” ಎಂಬ ಶಿರ್ಷೀಕೆಯ ಲೇಖನದಲ್ಲಿ ಬಿಜೆಪಿಯ ನಾಯಕರು ಹಾಗೂ ಅವರ ಬೆಂಬಲಿಗರಿಗೆ ಪ್ರಶ್ನೆಗಳ ಸರಮಾಲೆಯನ್ನೇ ಎಸೆದಿದ್ದಾರೆ.

ಅವರು ತಮ್ಮ ಬರಹದಲ್ಲಿ , ಈ “ಭಾರತೀಯ” ಪಂದ್ಯವನ್ನು ಹಲವಾರು “ಚೀನಿ ಕಂಪನಿಗಳು” ಪ್ರಾಯೋಜಕತ್ವ ಮಾಡುತ್ತಿವೆ, ಅಲ್ಲದೆ ಈ ಬಾರಿಯ ಪಂದ್ಯಾಟದ ಹೆಸರು ಕೂಡಾ “VIVO IPL 2020” ಎಂದಾಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

“ಚೀನಾದ ದೈತ್ಯ ಮೊಬೈಲ್ ಕಂಪನಿ VIVO ಐಪಿಎಲ್ ನ ಟೈಟಲ್ ಪ್ರಾಯೋಜನೆ ಮಾಡುತ್ತಿದೆ. ಚೀನಾದ ಅಲಿಬಾಬಾ ಕಂಪನಿಯ ಹೂಡಿಕೆ ಹೊಂದಿರುವ Pay TM “ಅಂಪೈರ್ ಪಾರ್ಟ್ನರ್” ಆಗಿದೆ. ಚೀನಾದ ಹೂಡಿಕೆಯನ್ನು ಹೊಂದಿರುವ Swiggy ಮತ್ತು Dream 11 ಕಂಪನಿಗಳು ಸಹ- ಪ್ರಯೋಜಕರಾಗಿವೆ.” ಇದಕ್ಕೆ ಭಾರತ ಸರ್ಕಾರವೇ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಐಪಿಎಲ್ ಪಂದ್ಯಗಳಿಗೆ ಅನುಮತಿ ಕೊಟ್ಟಿರುವ BCCI ನ ಪದಾಧಿಕಾರಿಗಳಲ್ಲಿ ಭಾರತದ ಗೃಹಮಂತ್ರಿ ಅಮಿತ್ ಷಾ ಅವರ ಮಗ ಜೇ ಶಾ BCCI ನ ಪ್ರಧಾನ ಕಾರ್ಯದರ್ಶಿ ಆಗದ್ದಾರೆ. ಕೇಂದ್ರ ಮಂತ್ರಿ ಅನುರಾಗ್ ಠಾಕೂರ್ ಅವರ ತಮ್ಮ ಅರುಣ್ ಧೋಮಲ್ BCCI ನ ಖಜಾಂಚಿ ಆಗಿದ್ದಾರೆ ಎಂದು ಬಿಜೆಪಿ ಮತ್ತು ಬಿಸಿಸಿಐನ ಸಂಬಂಧವನ್ನು ಉಲ್ಲೇಖಿಸಿದ್ದಾರೆ.

“ಪಾಕಿಸ್ತಾನದೊಂದಿಗೆ ಘರ್ಷಣೆ ನಡೆದಾಗಲೆಲ್ಲಾ ಅದರ ಜೊತೆ ಕ್ರೀಡಾ ಸಂಬಂಧಗಳನ್ನು ಕಡಿದುಕೊಳ್ಳಲು ಬಿಜೆಪಿ ಪಕ್ಷ ಆಗ್ರಹಿಸುತ್ತಿತ್ತು. ಪಾಕಿಸ್ತಾನ ಜನರೊಂದಿಗೆ ಸ್ನೇಹ ಸಂಬಂಧ ಇಟ್ಟುಕೊಳ್ಳಬೇಕೆನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸುತ್ತಿತ್ತು. ಈಗ ಬಿಜೆಪಿಯ ಗೌರವಾನ್ವಿತ ಸದಸ್ಯರೇ ಚೀನಾ ಕಂಪನಿಗಳ ಪ್ರಾಯೋಜನೆಯ ಐಪಿಎಲ್‌ಗೆ ಅನುಮತಿ ನೀಡಿದ್ದು ಹೇಗೆ” ಎಂದು ಶಿವಸುಂದರ್‌ ಪ್ರಶ್ನಿಸಿದ್ದಾರೆ.

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ ಎಂದು ಅವರು ಪ್ರಶ್ನಿಸಿದ್ದಾರೆ.

“ಜನರಿಗೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಬಾಯ್ಕಾಟ್ ಚೀನಾ ಅಭಿಯಾನ ನಡೆಯುತ್ತಿದೆ. ಇನ್ನೊಂದೆಡೆ ಚೀನಾ ಪ್ರಾಯೋಜಿತ ಐಪಿಎಲ್ ನಡೆಯುತ್ತಿದೆ. ಚೀನಾದ ಹಣ, ಹೂಡಿಕೆ, ಪ್ರಾಯೋಜಕತ್ವ, ಜಾಹಿರಾತನ್ನು ಹೇಗೆ ನಿರ್ವಹಿಸಬೇಕು ಎಂದು ಸರ್ಕಾರಕ್ಕೆ ತೀವ್ರ ಗೊಂದಲಗಳಿರುವಾಗ ಚೀನಾ ನಮ್ಮ ವಿಷಯಗಳಲ್ಲಿ ಮೂಗುತೂರಿಸುವುದರಲ್ಲಿ ಯಾವುದೇ ಆಶ್ಚರ್ಯವಿ‌ಲ್ಲ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಚೀನಾದ ದೊಡ್ಡ ಕಂಪನಿಗಳು ಬಿಸಿಸಿಐನ ಐಪಿಎಲ್‌ಗೆ ಜಾಹೀರಾತು ನೀಡಲು ಒಪ್ಪಿಗೆ ನೀಡಲಾಗಿದೆ. ಬಾಲ್ಕನಿಯಿಂದ ಟಿವಿ ಎಸೆದು ಚೀನಾದ ವಿರುದ್ಧ ಶೌರ್ಯ ತೋರಿದ್ದ ಈಡಿಯಟ್‌ಗಳನ್ನು ನೋಡಿ ಬೇಸರವಾಗುತ್ತಿದೆ ಎಂದು ಒಮರ್ ಅಬ್ದುಲ್ಲಾ ವ್ಯಂಗ್ಯವಾಡಿದ್ದಾರೆ.

ಅರವಿಂದ್ ಜಾ ಎಂಬವರು, ಅಮಿತ್ ಶಾ ಅವರ ಮಗ ಬಿಸಿಸಿಐನಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುವವರು ಎಂಬುದನ್ನು ಎಂದಿಗೂ ಮರೆಯಬಾರದು. ಐಪಿಎಲ್ ಚೀನಾದ ಪ್ರಾಯೋಜಕತ್ವದೊಂದಿಗೆ ಮುಂದುವರಿಯುತ್ತಿದ್ದರೆ, ಅದು ಬಿಜೆಪಿಯ ಉನ್ನತ ನಾಯಕತ್ವದ ಅನುಮೋದನೆಯೊಂದಿಗೆ ನಡೆಯುತ್ತಿದೆ. ಅಪ್ಲಿಕೇಶನ್ ನಿಷೇಧವು ನಮ್ಮ ಕಣ್ಣಿಗೆ ಮಣ್ಣೆರೆಚುವ ತಂತ್ರವಾಗಿದೆ ಎಂದು ಹೇಳಿದ್ದಾರೆ.

 

ಲಡಾಖ್‌ನಲ್ಲಿ ಭಾರತೀಯ ಸೈನಿಕರ ಮಾರಣ ಹೋಮ ನಡೆದಾಗ ಐಪಿಎಲ್‌ ಮಾಡಿದ್ದ ಟ್ವೀಟ್ ಒಂದರ ಫೋಟೋವನ್ನು ಹೆಕ್ಕಿರುವ ಪ್ರಾಧ್ಯಾಪಕ ಕಾಂಚನ್ ಗುಪ್ತಾ, “ಪೂರ್ವ ಲಡಾಕ್‌ನಲ್ಲಿ LAC ಉದ್ದಕ್ಕೂ ಚೀನಾದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಪ್ರಾಯೋಜಕತ್ವದ ಒಪ್ಪಂದಗಳನ್ನು ಪರಿಶೀಲಿಸುವುದಾಗಿ ಐಪಿಎಲ್ ಹೇಳಿತ್ತು. ಆದರೆ ಈಗ ಚೀನೀ ಪ್ರಾಯೋಜಕತ್ವವನ್ನು ಸ್ವೀಕರಿಸಲು ಅದು ನಿರ್ಧರಿಸಿದೆ. ಸಾಮಾನ್ಯ ವ್ಯಕ್ತಿಗಳನ್ನು ‘ರಾಷ್ಟ್ರ ವಿರೋಧಿ’ ಎಂದು ನಾವು ಸುಲಭವಾಗಿ ಆರೋಪಿಸುತ್ತೇವೆ. ಹಾಗಾದರೆ ಐಪಿಎಲ್ ಏನು?” ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಶಾಸಕ ಝೀಶಾನ್ ಸಿದ್ದೇಕಿ, ಚೀನಾ ನಿರ್ಮಿತ ಟಿವಿಯನ್ನು ಒಡೆದುಹಾಕಿದ ವ್ಯಕ್ತಿಗೆ ಸಂತಾಪಗಳು ಎಂದು ವ್ಯಂಗ್ಯವಾಡಿದ್ದಾರೆ.

 


ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...