Homeಸಿನಿಮಾಕ್ರೀಡೆVIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ?

- Advertisement -
- Advertisement -

ಎಲ್ಲಾ ಒತ್ತಡಗಳ ನಡೆವೆಯು ಈ ವರ್ಷದ ಐಪಿಎಲ್‌ ಕ್ರಿಕೆಟ್ ಟೂರ್ನಿ ನಡೆಸುವುದಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅನುಮತಿ ನೀಡಿದೆ. ಈ ವರ್ಷದ ಐಪಿಎಲ್ ಪಂದ್ಯಗಳು ಸೆಪ್ಟೆಂಬರ್ 19 ರಿಂದ ನವೆಂಬರ್‌ 10 ರವರೆಗೆ ಯುಎಇ ಯಲ್ಲಿ ನಡೆಯಲಿದೆ.

ಕೊರೊನಾ ಆತಂಕದ ನಡುವೆ ನಡೆಯುತ್ತಿರುವ ಈ ಪಂದ್ಯಕ್ಕೆ ಹಲವಾರು ವಿರೋಧಗಳು ಕೇಳಿ ಬರುತ್ತಿವೆ. ಹಲವಾರು ಸಾಮಾಜಿಕ ಕಾರ್ಯಕರ್ತರು ಸಾಂಕ್ರಾಮಿಕದ ನಡುವೆ ಟೂರ್ನಿ ಬೇಕಿತ್ತೇ ಎಂದು ಪ್ರಶ್ನೆ ಮಾಡಿದ್ದಾರೆ.

ಒಂದೆಡೆ ಚೀನಾದ ಗಡಿ ತಂಟೆಗೆ ಚೀನಾ ಆಪ್‌ಗಳನ್ನು ನಿಷೇಧಿಸಿದ್ದು ಬಹಳ ದೊಡ್ಡ ಸಾಧನೆಯೆಂದು ಬೀಗುತ್ತಿರುವ ಕೇಂದ್ರ ಸರ್ಕಾರ, ಚೀನಾ ಕಂಪೆನಿಗಳ ಪ್ರಾಯೋಜಕತ್ವದಲ್ಲಿ ಐಪಿಎಲ್ ನಡೆಸಲು ಅವಕಾಶ ಕೊಟ್ಟಿದ್ದು ದ್ವಂದ್ವವಲ್ಲವೇ? BCCI ನಲ್ಲಿ ಬಿಜೆಪಿ ಮುಖಂಡರ ಮಕ್ಕಳೇ ಇದ್ದರೂ ಇದು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಚಿಂತಕರಾದ ಶಿವಸುಂದರ್‌, ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ”ಜಸ್ಟ್‌ ಆಸ್ಕಿಂಗ್‌” ಎಂಬ ಶಿರ್ಷೀಕೆಯ ಲೇಖನದಲ್ಲಿ ಬಿಜೆಪಿಯ ನಾಯಕರು ಹಾಗೂ ಅವರ ಬೆಂಬಲಿಗರಿಗೆ ಪ್ರಶ್ನೆಗಳ ಸರಮಾಲೆಯನ್ನೇ ಎಸೆದಿದ್ದಾರೆ.

ಅವರು ತಮ್ಮ ಬರಹದಲ್ಲಿ , ಈ “ಭಾರತೀಯ” ಪಂದ್ಯವನ್ನು ಹಲವಾರು “ಚೀನಿ ಕಂಪನಿಗಳು” ಪ್ರಾಯೋಜಕತ್ವ ಮಾಡುತ್ತಿವೆ, ಅಲ್ಲದೆ ಈ ಬಾರಿಯ ಪಂದ್ಯಾಟದ ಹೆಸರು ಕೂಡಾ “VIVO IPL 2020” ಎಂದಾಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

“ಚೀನಾದ ದೈತ್ಯ ಮೊಬೈಲ್ ಕಂಪನಿ VIVO ಐಪಿಎಲ್ ನ ಟೈಟಲ್ ಪ್ರಾಯೋಜನೆ ಮಾಡುತ್ತಿದೆ. ಚೀನಾದ ಅಲಿಬಾಬಾ ಕಂಪನಿಯ ಹೂಡಿಕೆ ಹೊಂದಿರುವ Pay TM “ಅಂಪೈರ್ ಪಾರ್ಟ್ನರ್” ಆಗಿದೆ. ಚೀನಾದ ಹೂಡಿಕೆಯನ್ನು ಹೊಂದಿರುವ Swiggy ಮತ್ತು Dream 11 ಕಂಪನಿಗಳು ಸಹ- ಪ್ರಯೋಜಕರಾಗಿವೆ.” ಇದಕ್ಕೆ ಭಾರತ ಸರ್ಕಾರವೇ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಐಪಿಎಲ್ ಪಂದ್ಯಗಳಿಗೆ ಅನುಮತಿ ಕೊಟ್ಟಿರುವ BCCI ನ ಪದಾಧಿಕಾರಿಗಳಲ್ಲಿ ಭಾರತದ ಗೃಹಮಂತ್ರಿ ಅಮಿತ್ ಷಾ ಅವರ ಮಗ ಜೇ ಶಾ BCCI ನ ಪ್ರಧಾನ ಕಾರ್ಯದರ್ಶಿ ಆಗದ್ದಾರೆ. ಕೇಂದ್ರ ಮಂತ್ರಿ ಅನುರಾಗ್ ಠಾಕೂರ್ ಅವರ ತಮ್ಮ ಅರುಣ್ ಧೋಮಲ್ BCCI ನ ಖಜಾಂಚಿ ಆಗಿದ್ದಾರೆ ಎಂದು ಬಿಜೆಪಿ ಮತ್ತು ಬಿಸಿಸಿಐನ ಸಂಬಂಧವನ್ನು ಉಲ್ಲೇಖಿಸಿದ್ದಾರೆ.

“ಪಾಕಿಸ್ತಾನದೊಂದಿಗೆ ಘರ್ಷಣೆ ನಡೆದಾಗಲೆಲ್ಲಾ ಅದರ ಜೊತೆ ಕ್ರೀಡಾ ಸಂಬಂಧಗಳನ್ನು ಕಡಿದುಕೊಳ್ಳಲು ಬಿಜೆಪಿ ಪಕ್ಷ ಆಗ್ರಹಿಸುತ್ತಿತ್ತು. ಪಾಕಿಸ್ತಾನ ಜನರೊಂದಿಗೆ ಸ್ನೇಹ ಸಂಬಂಧ ಇಟ್ಟುಕೊಳ್ಳಬೇಕೆನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸುತ್ತಿತ್ತು. ಈಗ ಬಿಜೆಪಿಯ ಗೌರವಾನ್ವಿತ ಸದಸ್ಯರೇ ಚೀನಾ ಕಂಪನಿಗಳ ಪ್ರಾಯೋಜನೆಯ ಐಪಿಎಲ್‌ಗೆ ಅನುಮತಿ ನೀಡಿದ್ದು ಹೇಗೆ” ಎಂದು ಶಿವಸುಂದರ್‌ ಪ್ರಶ್ನಿಸಿದ್ದಾರೆ.

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ ಎಂದು ಅವರು ಪ್ರಶ್ನಿಸಿದ್ದಾರೆ.

“ಜನರಿಗೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಬಾಯ್ಕಾಟ್ ಚೀನಾ ಅಭಿಯಾನ ನಡೆಯುತ್ತಿದೆ. ಇನ್ನೊಂದೆಡೆ ಚೀನಾ ಪ್ರಾಯೋಜಿತ ಐಪಿಎಲ್ ನಡೆಯುತ್ತಿದೆ. ಚೀನಾದ ಹಣ, ಹೂಡಿಕೆ, ಪ್ರಾಯೋಜಕತ್ವ, ಜಾಹಿರಾತನ್ನು ಹೇಗೆ ನಿರ್ವಹಿಸಬೇಕು ಎಂದು ಸರ್ಕಾರಕ್ಕೆ ತೀವ್ರ ಗೊಂದಲಗಳಿರುವಾಗ ಚೀನಾ ನಮ್ಮ ವಿಷಯಗಳಲ್ಲಿ ಮೂಗುತೂರಿಸುವುದರಲ್ಲಿ ಯಾವುದೇ ಆಶ್ಚರ್ಯವಿ‌ಲ್ಲ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಚೀನಾದ ದೊಡ್ಡ ಕಂಪನಿಗಳು ಬಿಸಿಸಿಐನ ಐಪಿಎಲ್‌ಗೆ ಜಾಹೀರಾತು ನೀಡಲು ಒಪ್ಪಿಗೆ ನೀಡಲಾಗಿದೆ. ಬಾಲ್ಕನಿಯಿಂದ ಟಿವಿ ಎಸೆದು ಚೀನಾದ ವಿರುದ್ಧ ಶೌರ್ಯ ತೋರಿದ್ದ ಈಡಿಯಟ್‌ಗಳನ್ನು ನೋಡಿ ಬೇಸರವಾಗುತ್ತಿದೆ ಎಂದು ಒಮರ್ ಅಬ್ದುಲ್ಲಾ ವ್ಯಂಗ್ಯವಾಡಿದ್ದಾರೆ.

ಅರವಿಂದ್ ಜಾ ಎಂಬವರು, ಅಮಿತ್ ಶಾ ಅವರ ಮಗ ಬಿಸಿಸಿಐನಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುವವರು ಎಂಬುದನ್ನು ಎಂದಿಗೂ ಮರೆಯಬಾರದು. ಐಪಿಎಲ್ ಚೀನಾದ ಪ್ರಾಯೋಜಕತ್ವದೊಂದಿಗೆ ಮುಂದುವರಿಯುತ್ತಿದ್ದರೆ, ಅದು ಬಿಜೆಪಿಯ ಉನ್ನತ ನಾಯಕತ್ವದ ಅನುಮೋದನೆಯೊಂದಿಗೆ ನಡೆಯುತ್ತಿದೆ. ಅಪ್ಲಿಕೇಶನ್ ನಿಷೇಧವು ನಮ್ಮ ಕಣ್ಣಿಗೆ ಮಣ್ಣೆರೆಚುವ ತಂತ್ರವಾಗಿದೆ ಎಂದು ಹೇಳಿದ್ದಾರೆ.

 

ಲಡಾಖ್‌ನಲ್ಲಿ ಭಾರತೀಯ ಸೈನಿಕರ ಮಾರಣ ಹೋಮ ನಡೆದಾಗ ಐಪಿಎಲ್‌ ಮಾಡಿದ್ದ ಟ್ವೀಟ್ ಒಂದರ ಫೋಟೋವನ್ನು ಹೆಕ್ಕಿರುವ ಪ್ರಾಧ್ಯಾಪಕ ಕಾಂಚನ್ ಗುಪ್ತಾ, “ಪೂರ್ವ ಲಡಾಕ್‌ನಲ್ಲಿ LAC ಉದ್ದಕ್ಕೂ ಚೀನಾದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಪ್ರಾಯೋಜಕತ್ವದ ಒಪ್ಪಂದಗಳನ್ನು ಪರಿಶೀಲಿಸುವುದಾಗಿ ಐಪಿಎಲ್ ಹೇಳಿತ್ತು. ಆದರೆ ಈಗ ಚೀನೀ ಪ್ರಾಯೋಜಕತ್ವವನ್ನು ಸ್ವೀಕರಿಸಲು ಅದು ನಿರ್ಧರಿಸಿದೆ. ಸಾಮಾನ್ಯ ವ್ಯಕ್ತಿಗಳನ್ನು ‘ರಾಷ್ಟ್ರ ವಿರೋಧಿ’ ಎಂದು ನಾವು ಸುಲಭವಾಗಿ ಆರೋಪಿಸುತ್ತೇವೆ. ಹಾಗಾದರೆ ಐಪಿಎಲ್ ಏನು?” ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಶಾಸಕ ಝೀಶಾನ್ ಸಿದ್ದೇಕಿ, ಚೀನಾ ನಿರ್ಮಿತ ಟಿವಿಯನ್ನು ಒಡೆದುಹಾಕಿದ ವ್ಯಕ್ತಿಗೆ ಸಂತಾಪಗಳು ಎಂದು ವ್ಯಂಗ್ಯವಾಡಿದ್ದಾರೆ.

 


ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...