Homeಸಿನಿಮಾಕ್ರೀಡೆVIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ?

- Advertisement -
- Advertisement -

ಎಲ್ಲಾ ಒತ್ತಡಗಳ ನಡೆವೆಯು ಈ ವರ್ಷದ ಐಪಿಎಲ್‌ ಕ್ರಿಕೆಟ್ ಟೂರ್ನಿ ನಡೆಸುವುದಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅನುಮತಿ ನೀಡಿದೆ. ಈ ವರ್ಷದ ಐಪಿಎಲ್ ಪಂದ್ಯಗಳು ಸೆಪ್ಟೆಂಬರ್ 19 ರಿಂದ ನವೆಂಬರ್‌ 10 ರವರೆಗೆ ಯುಎಇ ಯಲ್ಲಿ ನಡೆಯಲಿದೆ.

ಕೊರೊನಾ ಆತಂಕದ ನಡುವೆ ನಡೆಯುತ್ತಿರುವ ಈ ಪಂದ್ಯಕ್ಕೆ ಹಲವಾರು ವಿರೋಧಗಳು ಕೇಳಿ ಬರುತ್ತಿವೆ. ಹಲವಾರು ಸಾಮಾಜಿಕ ಕಾರ್ಯಕರ್ತರು ಸಾಂಕ್ರಾಮಿಕದ ನಡುವೆ ಟೂರ್ನಿ ಬೇಕಿತ್ತೇ ಎಂದು ಪ್ರಶ್ನೆ ಮಾಡಿದ್ದಾರೆ.

ಒಂದೆಡೆ ಚೀನಾದ ಗಡಿ ತಂಟೆಗೆ ಚೀನಾ ಆಪ್‌ಗಳನ್ನು ನಿಷೇಧಿಸಿದ್ದು ಬಹಳ ದೊಡ್ಡ ಸಾಧನೆಯೆಂದು ಬೀಗುತ್ತಿರುವ ಕೇಂದ್ರ ಸರ್ಕಾರ, ಚೀನಾ ಕಂಪೆನಿಗಳ ಪ್ರಾಯೋಜಕತ್ವದಲ್ಲಿ ಐಪಿಎಲ್ ನಡೆಸಲು ಅವಕಾಶ ಕೊಟ್ಟಿದ್ದು ದ್ವಂದ್ವವಲ್ಲವೇ? BCCI ನಲ್ಲಿ ಬಿಜೆಪಿ ಮುಖಂಡರ ಮಕ್ಕಳೇ ಇದ್ದರೂ ಇದು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಚಿಂತಕರಾದ ಶಿವಸುಂದರ್‌, ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ”ಜಸ್ಟ್‌ ಆಸ್ಕಿಂಗ್‌” ಎಂಬ ಶಿರ್ಷೀಕೆಯ ಲೇಖನದಲ್ಲಿ ಬಿಜೆಪಿಯ ನಾಯಕರು ಹಾಗೂ ಅವರ ಬೆಂಬಲಿಗರಿಗೆ ಪ್ರಶ್ನೆಗಳ ಸರಮಾಲೆಯನ್ನೇ ಎಸೆದಿದ್ದಾರೆ.

ಅವರು ತಮ್ಮ ಬರಹದಲ್ಲಿ , ಈ “ಭಾರತೀಯ” ಪಂದ್ಯವನ್ನು ಹಲವಾರು “ಚೀನಿ ಕಂಪನಿಗಳು” ಪ್ರಾಯೋಜಕತ್ವ ಮಾಡುತ್ತಿವೆ, ಅಲ್ಲದೆ ಈ ಬಾರಿಯ ಪಂದ್ಯಾಟದ ಹೆಸರು ಕೂಡಾ “VIVO IPL 2020” ಎಂದಾಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

“ಚೀನಾದ ದೈತ್ಯ ಮೊಬೈಲ್ ಕಂಪನಿ VIVO ಐಪಿಎಲ್ ನ ಟೈಟಲ್ ಪ್ರಾಯೋಜನೆ ಮಾಡುತ್ತಿದೆ. ಚೀನಾದ ಅಲಿಬಾಬಾ ಕಂಪನಿಯ ಹೂಡಿಕೆ ಹೊಂದಿರುವ Pay TM “ಅಂಪೈರ್ ಪಾರ್ಟ್ನರ್” ಆಗಿದೆ. ಚೀನಾದ ಹೂಡಿಕೆಯನ್ನು ಹೊಂದಿರುವ Swiggy ಮತ್ತು Dream 11 ಕಂಪನಿಗಳು ಸಹ- ಪ್ರಯೋಜಕರಾಗಿವೆ.” ಇದಕ್ಕೆ ಭಾರತ ಸರ್ಕಾರವೇ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಐಪಿಎಲ್ ಪಂದ್ಯಗಳಿಗೆ ಅನುಮತಿ ಕೊಟ್ಟಿರುವ BCCI ನ ಪದಾಧಿಕಾರಿಗಳಲ್ಲಿ ಭಾರತದ ಗೃಹಮಂತ್ರಿ ಅಮಿತ್ ಷಾ ಅವರ ಮಗ ಜೇ ಶಾ BCCI ನ ಪ್ರಧಾನ ಕಾರ್ಯದರ್ಶಿ ಆಗದ್ದಾರೆ. ಕೇಂದ್ರ ಮಂತ್ರಿ ಅನುರಾಗ್ ಠಾಕೂರ್ ಅವರ ತಮ್ಮ ಅರುಣ್ ಧೋಮಲ್ BCCI ನ ಖಜಾಂಚಿ ಆಗಿದ್ದಾರೆ ಎಂದು ಬಿಜೆಪಿ ಮತ್ತು ಬಿಸಿಸಿಐನ ಸಂಬಂಧವನ್ನು ಉಲ್ಲೇಖಿಸಿದ್ದಾರೆ.

“ಪಾಕಿಸ್ತಾನದೊಂದಿಗೆ ಘರ್ಷಣೆ ನಡೆದಾಗಲೆಲ್ಲಾ ಅದರ ಜೊತೆ ಕ್ರೀಡಾ ಸಂಬಂಧಗಳನ್ನು ಕಡಿದುಕೊಳ್ಳಲು ಬಿಜೆಪಿ ಪಕ್ಷ ಆಗ್ರಹಿಸುತ್ತಿತ್ತು. ಪಾಕಿಸ್ತಾನ ಜನರೊಂದಿಗೆ ಸ್ನೇಹ ಸಂಬಂಧ ಇಟ್ಟುಕೊಳ್ಳಬೇಕೆನ್ನುವವರನ್ನು ದೇಶದ್ರೋಹಿಗಳೆಂದು ಘೋಷಿಸುತ್ತಿತ್ತು. ಈಗ ಬಿಜೆಪಿಯ ಗೌರವಾನ್ವಿತ ಸದಸ್ಯರೇ ಚೀನಾ ಕಂಪನಿಗಳ ಪ್ರಾಯೋಜನೆಯ ಐಪಿಎಲ್‌ಗೆ ಅನುಮತಿ ನೀಡಿದ್ದು ಹೇಗೆ” ಎಂದು ಶಿವಸುಂದರ್‌ ಪ್ರಶ್ನಿಸಿದ್ದಾರೆ.

ಈಗ ಬಿಜೆಪಿ ಹಾಗೂ ಮೋದಿ ಬೆಂಬಲಿಗರು ಬಿಸಿಸಿಐ ಪದಾಧಿಕಾರಿಗಳನ್ನು, ಆಟದಲ್ಲಿ ಭಾಗವಹಿಸುತ್ತಿರುವ ಆಟಗಾರರನ್ನು, ಮೌನವಾಗಿ ಕೂತಿರುವ ಕೇಂದ್ರ ಸರ್ಕಾರವನ್ನು ದೇಶದ್ರೋಹಿಗಳೆಂದು ಘೋಷಿಸುತ್ತಾರೆಯೇ ಅಥವಾ ಚೀನಾ ಪ್ರಾಯೋಜಿತ ಐಪಿಎಲ್ ಪಂದ್ಯಗಳ್ನನು ವೀಕ್ಷಿಸುವುದನ್ನು ಬಹಿಷ್ಕರಿಸುತ್ತಾರೆಯೆ ಎಂದು ಅವರು ಪ್ರಶ್ನಿಸಿದ್ದಾರೆ.

“ಜನರಿಗೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಬಾಯ್ಕಾಟ್ ಚೀನಾ ಅಭಿಯಾನ ನಡೆಯುತ್ತಿದೆ. ಇನ್ನೊಂದೆಡೆ ಚೀನಾ ಪ್ರಾಯೋಜಿತ ಐಪಿಎಲ್ ನಡೆಯುತ್ತಿದೆ. ಚೀನಾದ ಹಣ, ಹೂಡಿಕೆ, ಪ್ರಾಯೋಜಕತ್ವ, ಜಾಹಿರಾತನ್ನು ಹೇಗೆ ನಿರ್ವಹಿಸಬೇಕು ಎಂದು ಸರ್ಕಾರಕ್ಕೆ ತೀವ್ರ ಗೊಂದಲಗಳಿರುವಾಗ ಚೀನಾ ನಮ್ಮ ವಿಷಯಗಳಲ್ಲಿ ಮೂಗುತೂರಿಸುವುದರಲ್ಲಿ ಯಾವುದೇ ಆಶ್ಚರ್ಯವಿ‌ಲ್ಲ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಚೀನಾದ ದೊಡ್ಡ ಕಂಪನಿಗಳು ಬಿಸಿಸಿಐನ ಐಪಿಎಲ್‌ಗೆ ಜಾಹೀರಾತು ನೀಡಲು ಒಪ್ಪಿಗೆ ನೀಡಲಾಗಿದೆ. ಬಾಲ್ಕನಿಯಿಂದ ಟಿವಿ ಎಸೆದು ಚೀನಾದ ವಿರುದ್ಧ ಶೌರ್ಯ ತೋರಿದ್ದ ಈಡಿಯಟ್‌ಗಳನ್ನು ನೋಡಿ ಬೇಸರವಾಗುತ್ತಿದೆ ಎಂದು ಒಮರ್ ಅಬ್ದುಲ್ಲಾ ವ್ಯಂಗ್ಯವಾಡಿದ್ದಾರೆ.

ಅರವಿಂದ್ ಜಾ ಎಂಬವರು, ಅಮಿತ್ ಶಾ ಅವರ ಮಗ ಬಿಸಿಸಿಐನಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುವವರು ಎಂಬುದನ್ನು ಎಂದಿಗೂ ಮರೆಯಬಾರದು. ಐಪಿಎಲ್ ಚೀನಾದ ಪ್ರಾಯೋಜಕತ್ವದೊಂದಿಗೆ ಮುಂದುವರಿಯುತ್ತಿದ್ದರೆ, ಅದು ಬಿಜೆಪಿಯ ಉನ್ನತ ನಾಯಕತ್ವದ ಅನುಮೋದನೆಯೊಂದಿಗೆ ನಡೆಯುತ್ತಿದೆ. ಅಪ್ಲಿಕೇಶನ್ ನಿಷೇಧವು ನಮ್ಮ ಕಣ್ಣಿಗೆ ಮಣ್ಣೆರೆಚುವ ತಂತ್ರವಾಗಿದೆ ಎಂದು ಹೇಳಿದ್ದಾರೆ.

 

ಲಡಾಖ್‌ನಲ್ಲಿ ಭಾರತೀಯ ಸೈನಿಕರ ಮಾರಣ ಹೋಮ ನಡೆದಾಗ ಐಪಿಎಲ್‌ ಮಾಡಿದ್ದ ಟ್ವೀಟ್ ಒಂದರ ಫೋಟೋವನ್ನು ಹೆಕ್ಕಿರುವ ಪ್ರಾಧ್ಯಾಪಕ ಕಾಂಚನ್ ಗುಪ್ತಾ, “ಪೂರ್ವ ಲಡಾಕ್‌ನಲ್ಲಿ LAC ಉದ್ದಕ್ಕೂ ಚೀನಾದೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ನಂತರ ಪ್ರಾಯೋಜಕತ್ವದ ಒಪ್ಪಂದಗಳನ್ನು ಪರಿಶೀಲಿಸುವುದಾಗಿ ಐಪಿಎಲ್ ಹೇಳಿತ್ತು. ಆದರೆ ಈಗ ಚೀನೀ ಪ್ರಾಯೋಜಕತ್ವವನ್ನು ಸ್ವೀಕರಿಸಲು ಅದು ನಿರ್ಧರಿಸಿದೆ. ಸಾಮಾನ್ಯ ವ್ಯಕ್ತಿಗಳನ್ನು ‘ರಾಷ್ಟ್ರ ವಿರೋಧಿ’ ಎಂದು ನಾವು ಸುಲಭವಾಗಿ ಆರೋಪಿಸುತ್ತೇವೆ. ಹಾಗಾದರೆ ಐಪಿಎಲ್ ಏನು?” ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಶಾಸಕ ಝೀಶಾನ್ ಸಿದ್ದೇಕಿ, ಚೀನಾ ನಿರ್ಮಿತ ಟಿವಿಯನ್ನು ಒಡೆದುಹಾಕಿದ ವ್ಯಕ್ತಿಗೆ ಸಂತಾಪಗಳು ಎಂದು ವ್ಯಂಗ್ಯವಾಡಿದ್ದಾರೆ.

 


ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...