Homeಮುಖಪುಟವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ - ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

ವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ – ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

- Advertisement -
- Advertisement -

ಮೇ 07 ರಂದು ಆಂಧ್ರ ಪ್ರದೇಶದ ವಿಶಾಖಪಟ್ನಂ ಎಲ್‌ಜಿ ಪಾಲಿಮರ್ಸ್ ಸ್ಥಾವರದಿಂದ ಸ್ಟೈರೀನ್ ಅನಿಲ ಸೋರಿಕೆ ಸಂಭವಿಸಿ ಒಂದು ತಿಂಗಳಾಗುತ್ತಿದೆ. ಆದರೂ ಕಳೆದ 10 ದಿನಗಳಲ್ಲಿ ವೆಂಕಟಪುರಂನ ಇನ್ನೂ ಇಬ್ಬರು ನಿವಾಸಿಗಳು ಸಾವನ್ನಪ್ಪಿದ್ದಾರೆ. ಸಾವಿನ ಕಾರಣವನ್ನು ಕಂಡುಹಿಡಿಯಲು ಅಧಿಕಾರಿಗಳು ಮರಣೋತ್ತರ ಪರೀಕ್ಷೆಯ ವರದಿಗಳಿಗಾಗಿ ಕಾಯುತ್ತಿದ್ದಾರೆ.

ಮೇ 7 ರ ಬೆಳಿಗ್ಗೆ ಅನಿಲ ಸೋರಿಕೆಯಾಗುತ್ತಿರುವಾಗ ವೆಂಕಟಪುರಂ ಗ್ರಾಮದಲ್ಲಿರುವ ತನ್ನ ನೆರೆಹೊರೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸಹಾಯ ಮಾಡಿದ ಜನರಲ್ಲಿ46 ವರ್ಷದ ಯಲಮಂಚಿಲಿ ಕನಕರಾಜು ಸಹ ಮೂರು ವಾರಗಳ ನಂತರ ಸಾವನಪ್ಪಿದ್ದಾರೆ. ಬಡಗಿ ಕೆಲಸ ಮಾಡುತ್ತಿದ್ದ ಅವರು, ಅನಿಲ ಸೋರಿಕೆಯಿಂದಾಗಿ ನಿರಂತರವಾಗಿ ಅನಾರೋಗ್ಯಕ್ಕೆ ತುತ್ತಾಗಿ, ವಾಕರಿಕೆ, ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ಆದಾಗ್ಯೂ, ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೂ ಅವರ ಸಾವಿಗೆ ಅನಿಲ ಸೋರಿಕೆಯೇ ಕಾರಣವೆಂದು ಹೇಳಲಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಸ್ಥಳೀಯ ಕಾರ್ಯಕರ್ತರು ಮತ್ತು ಅವರ ಕುಟುಂಬ ಸದಸ್ಯರು ಸಮರ್ಪಕ ವೈದ್ಯಕೀಯ ಸೇವೆಯ ಕೊರತೆಯಿಂದಾಗಿ ಕನಕರಜು ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಅನಿಲ ಸೋರಿಕೆಯ ಸ್ಥಳಕ್ಕೆ ಸಮೀಪವಿರುವ ಗ್ರಾಮ ವೆಂಕಟಪುರಂ ನಿವಾಸಿಗಳು ಸಹ ಇದೇ ವಿಷಯವನ್ನು ಮುನ್ನಲೆಗೆ ತಂದಿದ್ದು “ನಮ್ಮಲ್ಲಿ ಹಲವರು ಸಹ ವಾಕರಿಕೆ, ತಲೆನೋವು ಮತ್ತು ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದಾರೆ. ಇಲ್ಲಿರುವ ನರ್ಸ್‌‌ಗಳು ನಮಗೆ ಕೆಲವು ಔಷಧಿಗಳನ್ನು ನೀಡುತ್ತಿದ್ದಾರೆ. ಆದರೆ ಅದು ಕೇವಲ ತಾತ್ಕಾಲಿಕ ಪರಿಹಾರವಾಗಿದ್ದು, ಆನಾರೋಗ್ಯದ ಸಮಸ್ಯೆಗಳು ಮುಂದುವರೆದಿದೆ” ಎಂದು ಆರೋಪಿಸಿದ್ದಾರೆ.

ಮೇ 11 ರಿಂದ, ಮಾರಿಪಾಲೆಂನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಯನ್ನು ಅನಿಲ ಸೋರಿಕೆ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡುವ ಸ್ಥಳವೆಂದು ಗೊತ್ತುಪಡಿಸಲಾಗಿದೆ. “ಆದರೆ ಅಲ್ಲಿಗೆ ಹೋಗುವ ತುರ್ತುಸ್ಥಿತಿಯ ರೋಗಿಗಳಿಗೂ ಸಹ ಕೇವಲ ಸಾಮಾನ್ಯ ಔಷಧಿ ನೀಡಲಾಗುತ್ತಿದೆ. ಮೇ 17 ರಂದು ನಾನು ತಲೆತಿರುಗುವಿಕೆ ಮತ್ತು ಹೊಟ್ಟೆ ನೋವಿನಿಂದ ಅಲ್ಲಿಗೆ ಹೋದೆ. ನನ್ನನ್ನು 48 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ ನನ್ನ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಕೇಳಿದಾಗ ವೈದ್ಯರು ಸ್ಪಷ್ಟ ಉತ್ತರ ನೀಡಲಿಲ್ಲ. ಕನಿಷ್ಠ ಪರೀಕ್ಷಾ ವರದಿಗಳನ್ನು ಸಹ ನೀಡುತ್ತಿಲ್ಲ ಎಂದು ಸಾಗರ್‌ ಎಂಬುವವರು ದೂರಿದ್ದಾರೆ.

ಕನಕರಾಜುರವರ ಪ್ರಕರಣದಲ್ಲಿ ಅನಾರೋಗ್ಯ ಕಾಣಿಸಿಕೊಂಡಾಗ ಅವರಿಗೆ ಕೆಲ ಔಷಧಿಗಳನ್ನು ಶಿಫಾರಸು ಮಾಡಲಾಯಿತು. ಆದರೂ ಉಸಿರಾಟದ ಸಮಸ್ಯೆ, ವಾಕರಿಕೆ ಮತ್ತು ಹೊಟ್ಟೆ ಉಬ್ಬುವುದು ಮುಂತಾದ ಆರೋಗ್ಯ ಸಮಸ್ಯೆಗಳನ್ನು ಮುಂದುವರೆದಾಗ ಅವರನ್ನು ಮೇ 11 ರಂದು ಸುರಕ್ಷಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರನ್ನು ನಾಲ್ಕು ದಿನಗಳವರೆಗೆ ದಾಖಲಿಸಿಕೊಂಡು ನಂತರ ಕೆಲವು ಔಷಧಿಗಳನ್ನು ಶಿಫಾರಸು ಮಾಡಿ ಬಿಡುಗಡೆ ಮಾಡಲಾಯಿತು.

ಆದರೆ ದಿನೇ ದಿನೇ ಅವರ ಸ್ಥಿತಿ ಹದಗೆಡುತ್ತಿರುವುದರಿಂದ ಮತ್ತೆ ಅದೇ ಆಸ್ಪತ್ರೆಗೆ ದಾಖಲಿಸಲಾಯಿತು. ಜೂನ್ 1 ರಂದು ಸುರಕ್ಷಾ ಆಸ್ಪತ್ರೆಯ ಹೃದ್ರೋಗ ತಜ್ಞರು ಕುಟುಂಬಕ್ಕೆ ಎಕೋಕಾರ್ಡಿಯೋಗ್ರಾಮ್ ಪರೀಕ್ಷೆ ಮಾಡಿಸಲು ಸಲಹೆ ನೀಡಿದರು. ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಕನಕರಾಜು ಮೃತಪಟ್ಟರು ಎಂದು ಅವರ ಸೋದರ ಮಾವ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮೇ 26 ರಂದು ವೆಂಕಟಪುರಂನ ಪಾಲಾ ವೆಂಕಯಮ್ಮ ಎಂಬ 80 ವರ್ಷದ ಮಹಿಳೆ ಕಿಂಗ್ ಜಾರ್ಜ್ ಆಸ್ಪತ್ರೆಯಲ್ಲಿ ನಿಧನರಾದರು. ಅನಿಲ ಸೋರಿಕೆಯಿಂದ ಉಂಟಾದ ಕಾಯಿಲೆಗಳಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವೆಂಕಯಮ್ಮ ಅವರ ಕುಟುಂಬ ಆರೋಪಿಸಿದೆ. ಆದರೆ, ಮಹಿಳೆ ವೃದ್ಧಾಪ್ಯಕ್ಕೆ ಸಂಬಂಧಿಸಿದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾಳೆ ಎಂದು ಕಿಂಗ್ ಜಾರ್ಜ್ ಆಸ್ಪತ್ರೆಯ ಅಧೀಕ್ಷಕ ಡಾ.ಅರ್ಜುನ ಹೇಳಿದ್ದಾರೆ. ಮರಣೋತ್ತರ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಗಳು ಬಾರದೇ ಅನಿಲ ಸೋರಿಕೆಯೇ ಸಾವಿಗೆ ಕಾರಣ ಎಂದು ಹೇಳಲಾಗುವುದಿಲ್ಲ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಅರ್ಜುನ, ವೆಂಕಯಮ್ಮ ಮತ್ತು ಕನಕರಾಜು ಅವರ ಎರಡೂ ಪ್ರಕರಣಗಳಲ್ಲಿ, ಫೋರೆನ್ಸಿಕ್ ಲ್ಯಾಬ್‌ನಲ್ಲಿ ಕೆಲಸದ ಹೊರೆ ಹೆಚ್ಚಾಗಿರುವುದರಿಂದ ಮರಣೋತ್ತರ ವರದಿಗಳು ಬರಲು 15 ರಿಂದ 30 ದಿನಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಅಧಿಕೃತ ಸಂಖ್ಯೆಯ ಪ್ರಕಾರ, ಇದುವರೆಗೆ ಅನಿಲ ಸೋರಿಕೆಯಿಂದಾಗಿ 12 ಜನರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ಅನಿಲ ಸೋರಿಕೆ ಸಂತ್ರಸ್ತರೊಂದಿಗೆ ಕೆಲಸ ಮಾಡುತ್ತಿರುವ ಸಿಪಿಐ (ಎಂ) ವಿಶಾಖಪಟ್ನಂ ನಗರ ಕಾರ್ಯದರ್ಶಿ ಗಂಗ ರಾವ್ ಮಾತನಾಡಿ, ವೆಂಕಟಪುರಂ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅನೇಕ ಜನರು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಇನ್ನೂ ಆತಂಕದಲ್ಲಿದ್ದಾರೆ. ಸುರಕ್ಷಾ ಆಸ್ಪತ್ರೆಯ ಹೊರತಾಗಿ, ಪೀಡಿತ ಜನರಿಗೆ ಕಿಂಗ್‌ ಜಾರ್ಜ್‌ ಆಸ್ಪತ್ರೆ ಮಾತ್ರ ಪರ್ಯಾಯವಾಗಿದ. ಸಮರ್ಪಕ ಆಸ್ಪತ್ರೆಗಳು ಇಲ್ಲದಿರುವುದರಿಂದ ಸಾವಿನ ಸರಣಿ ಮುಂದುವರಿದಿದೆ. ಈ ಎರಡು ಆಸ್ಪತ್ರೆಗಳಲ್ಲಿ ಕೇವಲ ಔಷಧಿ ನೀಡಲಾಗುತ್ತದೆಯೇ ಹೊರತು ಸಮರ್ಪಕ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಒಟ್ಟಿನಲ್ಲಿ ವಿಶಾಖಪಟ್ನಂ ಅನಿಲ ದುರಂತದಿಂದ ದೇಶದ ಗಮನ ಸೆಳೆದ ಪ್ರಕರಣ ಒಂದು ತಿಂಗಳಿನಲ್ಲಿಯೇ ಯಾರೂ ಕೇಳದ ಪರಿಸ್ಥಿತಿಗೆ ತಲುಪಿದೆ. ಅಲ್ಲಿನ ಸಂತ್ರಸ್ತರು ಮಾತ್ರ ನಿತ್ಯ ನೋವು ಅನುಭವಿಸುತ್ತ ಸಾವಿನ ದವಡೆಗೆ ನೂಕಲ್ಪಡುತ್ತಿದ್ದಾರೆ. ಇನ್ನಾದರೂ ಸರ್ಕಾರ ಎ‌ಚ್ಚೆತ್ತುಕೊಂಡು ಸಮರ್ಪಕ ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕಿದೆ.

ಮೂಲ: ದಿ ನ್ಯೂಸ್‌ ಮಿನಿಟ್‌


ಇದನ್ನೂ ಓದಿ: ಆಂಧ್ರದಲ್ಲಿ ಅನಿಲ ಸೋರಿಕೆ : 8 ಸಾವು, 1,000 ಕ್ಕೂ ಹೆಚ್ಚು ಜನರಿಗೆ ಗಾಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...