Homeಮುಖಪುಟವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ - ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

ವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ – ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

- Advertisement -
- Advertisement -

ಮೇ 07 ರಂದು ಆಂಧ್ರ ಪ್ರದೇಶದ ವಿಶಾಖಪಟ್ನಂ ಎಲ್‌ಜಿ ಪಾಲಿಮರ್ಸ್ ಸ್ಥಾವರದಿಂದ ಸ್ಟೈರೀನ್ ಅನಿಲ ಸೋರಿಕೆ ಸಂಭವಿಸಿ ಒಂದು ತಿಂಗಳಾಗುತ್ತಿದೆ. ಆದರೂ ಕಳೆದ 10 ದಿನಗಳಲ್ಲಿ ವೆಂಕಟಪುರಂನ ಇನ್ನೂ ಇಬ್ಬರು ನಿವಾಸಿಗಳು ಸಾವನ್ನಪ್ಪಿದ್ದಾರೆ. ಸಾವಿನ ಕಾರಣವನ್ನು ಕಂಡುಹಿಡಿಯಲು ಅಧಿಕಾರಿಗಳು ಮರಣೋತ್ತರ ಪರೀಕ್ಷೆಯ ವರದಿಗಳಿಗಾಗಿ ಕಾಯುತ್ತಿದ್ದಾರೆ.

ಮೇ 7 ರ ಬೆಳಿಗ್ಗೆ ಅನಿಲ ಸೋರಿಕೆಯಾಗುತ್ತಿರುವಾಗ ವೆಂಕಟಪುರಂ ಗ್ರಾಮದಲ್ಲಿರುವ ತನ್ನ ನೆರೆಹೊರೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸಹಾಯ ಮಾಡಿದ ಜನರಲ್ಲಿ46 ವರ್ಷದ ಯಲಮಂಚಿಲಿ ಕನಕರಾಜು ಸಹ ಮೂರು ವಾರಗಳ ನಂತರ ಸಾವನಪ್ಪಿದ್ದಾರೆ. ಬಡಗಿ ಕೆಲಸ ಮಾಡುತ್ತಿದ್ದ ಅವರು, ಅನಿಲ ಸೋರಿಕೆಯಿಂದಾಗಿ ನಿರಂತರವಾಗಿ ಅನಾರೋಗ್ಯಕ್ಕೆ ತುತ್ತಾಗಿ, ವಾಕರಿಕೆ, ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ಆದಾಗ್ಯೂ, ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೂ ಅವರ ಸಾವಿಗೆ ಅನಿಲ ಸೋರಿಕೆಯೇ ಕಾರಣವೆಂದು ಹೇಳಲಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಸ್ಥಳೀಯ ಕಾರ್ಯಕರ್ತರು ಮತ್ತು ಅವರ ಕುಟುಂಬ ಸದಸ್ಯರು ಸಮರ್ಪಕ ವೈದ್ಯಕೀಯ ಸೇವೆಯ ಕೊರತೆಯಿಂದಾಗಿ ಕನಕರಜು ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಅನಿಲ ಸೋರಿಕೆಯ ಸ್ಥಳಕ್ಕೆ ಸಮೀಪವಿರುವ ಗ್ರಾಮ ವೆಂಕಟಪುರಂ ನಿವಾಸಿಗಳು ಸಹ ಇದೇ ವಿಷಯವನ್ನು ಮುನ್ನಲೆಗೆ ತಂದಿದ್ದು “ನಮ್ಮಲ್ಲಿ ಹಲವರು ಸಹ ವಾಕರಿಕೆ, ತಲೆನೋವು ಮತ್ತು ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದಾರೆ. ಇಲ್ಲಿರುವ ನರ್ಸ್‌‌ಗಳು ನಮಗೆ ಕೆಲವು ಔಷಧಿಗಳನ್ನು ನೀಡುತ್ತಿದ್ದಾರೆ. ಆದರೆ ಅದು ಕೇವಲ ತಾತ್ಕಾಲಿಕ ಪರಿಹಾರವಾಗಿದ್ದು, ಆನಾರೋಗ್ಯದ ಸಮಸ್ಯೆಗಳು ಮುಂದುವರೆದಿದೆ” ಎಂದು ಆರೋಪಿಸಿದ್ದಾರೆ.

ಮೇ 11 ರಿಂದ, ಮಾರಿಪಾಲೆಂನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಯನ್ನು ಅನಿಲ ಸೋರಿಕೆ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡುವ ಸ್ಥಳವೆಂದು ಗೊತ್ತುಪಡಿಸಲಾಗಿದೆ. “ಆದರೆ ಅಲ್ಲಿಗೆ ಹೋಗುವ ತುರ್ತುಸ್ಥಿತಿಯ ರೋಗಿಗಳಿಗೂ ಸಹ ಕೇವಲ ಸಾಮಾನ್ಯ ಔಷಧಿ ನೀಡಲಾಗುತ್ತಿದೆ. ಮೇ 17 ರಂದು ನಾನು ತಲೆತಿರುಗುವಿಕೆ ಮತ್ತು ಹೊಟ್ಟೆ ನೋವಿನಿಂದ ಅಲ್ಲಿಗೆ ಹೋದೆ. ನನ್ನನ್ನು 48 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ ನನ್ನ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಕೇಳಿದಾಗ ವೈದ್ಯರು ಸ್ಪಷ್ಟ ಉತ್ತರ ನೀಡಲಿಲ್ಲ. ಕನಿಷ್ಠ ಪರೀಕ್ಷಾ ವರದಿಗಳನ್ನು ಸಹ ನೀಡುತ್ತಿಲ್ಲ ಎಂದು ಸಾಗರ್‌ ಎಂಬುವವರು ದೂರಿದ್ದಾರೆ.

ಕನಕರಾಜುರವರ ಪ್ರಕರಣದಲ್ಲಿ ಅನಾರೋಗ್ಯ ಕಾಣಿಸಿಕೊಂಡಾಗ ಅವರಿಗೆ ಕೆಲ ಔಷಧಿಗಳನ್ನು ಶಿಫಾರಸು ಮಾಡಲಾಯಿತು. ಆದರೂ ಉಸಿರಾಟದ ಸಮಸ್ಯೆ, ವಾಕರಿಕೆ ಮತ್ತು ಹೊಟ್ಟೆ ಉಬ್ಬುವುದು ಮುಂತಾದ ಆರೋಗ್ಯ ಸಮಸ್ಯೆಗಳನ್ನು ಮುಂದುವರೆದಾಗ ಅವರನ್ನು ಮೇ 11 ರಂದು ಸುರಕ್ಷಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರನ್ನು ನಾಲ್ಕು ದಿನಗಳವರೆಗೆ ದಾಖಲಿಸಿಕೊಂಡು ನಂತರ ಕೆಲವು ಔಷಧಿಗಳನ್ನು ಶಿಫಾರಸು ಮಾಡಿ ಬಿಡುಗಡೆ ಮಾಡಲಾಯಿತು.

ಆದರೆ ದಿನೇ ದಿನೇ ಅವರ ಸ್ಥಿತಿ ಹದಗೆಡುತ್ತಿರುವುದರಿಂದ ಮತ್ತೆ ಅದೇ ಆಸ್ಪತ್ರೆಗೆ ದಾಖಲಿಸಲಾಯಿತು. ಜೂನ್ 1 ರಂದು ಸುರಕ್ಷಾ ಆಸ್ಪತ್ರೆಯ ಹೃದ್ರೋಗ ತಜ್ಞರು ಕುಟುಂಬಕ್ಕೆ ಎಕೋಕಾರ್ಡಿಯೋಗ್ರಾಮ್ ಪರೀಕ್ಷೆ ಮಾಡಿಸಲು ಸಲಹೆ ನೀಡಿದರು. ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಕನಕರಾಜು ಮೃತಪಟ್ಟರು ಎಂದು ಅವರ ಸೋದರ ಮಾವ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮೇ 26 ರಂದು ವೆಂಕಟಪುರಂನ ಪಾಲಾ ವೆಂಕಯಮ್ಮ ಎಂಬ 80 ವರ್ಷದ ಮಹಿಳೆ ಕಿಂಗ್ ಜಾರ್ಜ್ ಆಸ್ಪತ್ರೆಯಲ್ಲಿ ನಿಧನರಾದರು. ಅನಿಲ ಸೋರಿಕೆಯಿಂದ ಉಂಟಾದ ಕಾಯಿಲೆಗಳಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವೆಂಕಯಮ್ಮ ಅವರ ಕುಟುಂಬ ಆರೋಪಿಸಿದೆ. ಆದರೆ, ಮಹಿಳೆ ವೃದ್ಧಾಪ್ಯಕ್ಕೆ ಸಂಬಂಧಿಸಿದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾಳೆ ಎಂದು ಕಿಂಗ್ ಜಾರ್ಜ್ ಆಸ್ಪತ್ರೆಯ ಅಧೀಕ್ಷಕ ಡಾ.ಅರ್ಜುನ ಹೇಳಿದ್ದಾರೆ. ಮರಣೋತ್ತರ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಗಳು ಬಾರದೇ ಅನಿಲ ಸೋರಿಕೆಯೇ ಸಾವಿಗೆ ಕಾರಣ ಎಂದು ಹೇಳಲಾಗುವುದಿಲ್ಲ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಅರ್ಜುನ, ವೆಂಕಯಮ್ಮ ಮತ್ತು ಕನಕರಾಜು ಅವರ ಎರಡೂ ಪ್ರಕರಣಗಳಲ್ಲಿ, ಫೋರೆನ್ಸಿಕ್ ಲ್ಯಾಬ್‌ನಲ್ಲಿ ಕೆಲಸದ ಹೊರೆ ಹೆಚ್ಚಾಗಿರುವುದರಿಂದ ಮರಣೋತ್ತರ ವರದಿಗಳು ಬರಲು 15 ರಿಂದ 30 ದಿನಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಅಧಿಕೃತ ಸಂಖ್ಯೆಯ ಪ್ರಕಾರ, ಇದುವರೆಗೆ ಅನಿಲ ಸೋರಿಕೆಯಿಂದಾಗಿ 12 ಜನರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ಅನಿಲ ಸೋರಿಕೆ ಸಂತ್ರಸ್ತರೊಂದಿಗೆ ಕೆಲಸ ಮಾಡುತ್ತಿರುವ ಸಿಪಿಐ (ಎಂ) ವಿಶಾಖಪಟ್ನಂ ನಗರ ಕಾರ್ಯದರ್ಶಿ ಗಂಗ ರಾವ್ ಮಾತನಾಡಿ, ವೆಂಕಟಪುರಂ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅನೇಕ ಜನರು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಇನ್ನೂ ಆತಂಕದಲ್ಲಿದ್ದಾರೆ. ಸುರಕ್ಷಾ ಆಸ್ಪತ್ರೆಯ ಹೊರತಾಗಿ, ಪೀಡಿತ ಜನರಿಗೆ ಕಿಂಗ್‌ ಜಾರ್ಜ್‌ ಆಸ್ಪತ್ರೆ ಮಾತ್ರ ಪರ್ಯಾಯವಾಗಿದ. ಸಮರ್ಪಕ ಆಸ್ಪತ್ರೆಗಳು ಇಲ್ಲದಿರುವುದರಿಂದ ಸಾವಿನ ಸರಣಿ ಮುಂದುವರಿದಿದೆ. ಈ ಎರಡು ಆಸ್ಪತ್ರೆಗಳಲ್ಲಿ ಕೇವಲ ಔಷಧಿ ನೀಡಲಾಗುತ್ತದೆಯೇ ಹೊರತು ಸಮರ್ಪಕ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಒಟ್ಟಿನಲ್ಲಿ ವಿಶಾಖಪಟ್ನಂ ಅನಿಲ ದುರಂತದಿಂದ ದೇಶದ ಗಮನ ಸೆಳೆದ ಪ್ರಕರಣ ಒಂದು ತಿಂಗಳಿನಲ್ಲಿಯೇ ಯಾರೂ ಕೇಳದ ಪರಿಸ್ಥಿತಿಗೆ ತಲುಪಿದೆ. ಅಲ್ಲಿನ ಸಂತ್ರಸ್ತರು ಮಾತ್ರ ನಿತ್ಯ ನೋವು ಅನುಭವಿಸುತ್ತ ಸಾವಿನ ದವಡೆಗೆ ನೂಕಲ್ಪಡುತ್ತಿದ್ದಾರೆ. ಇನ್ನಾದರೂ ಸರ್ಕಾರ ಎ‌ಚ್ಚೆತ್ತುಕೊಂಡು ಸಮರ್ಪಕ ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕಿದೆ.

ಮೂಲ: ದಿ ನ್ಯೂಸ್‌ ಮಿನಿಟ್‌


ಇದನ್ನೂ ಓದಿ: ಆಂಧ್ರದಲ್ಲಿ ಅನಿಲ ಸೋರಿಕೆ : 8 ಸಾವು, 1,000 ಕ್ಕೂ ಹೆಚ್ಚು ಜನರಿಗೆ ಗಾಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...