Homeಮುಖಪುಟವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ - ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

ವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ – ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

- Advertisement -
- Advertisement -

ಮೇ 07 ರಂದು ಆಂಧ್ರ ಪ್ರದೇಶದ ವಿಶಾಖಪಟ್ನಂ ಎಲ್‌ಜಿ ಪಾಲಿಮರ್ಸ್ ಸ್ಥಾವರದಿಂದ ಸ್ಟೈರೀನ್ ಅನಿಲ ಸೋರಿಕೆ ಸಂಭವಿಸಿ ಒಂದು ತಿಂಗಳಾಗುತ್ತಿದೆ. ಆದರೂ ಕಳೆದ 10 ದಿನಗಳಲ್ಲಿ ವೆಂಕಟಪುರಂನ ಇನ್ನೂ ಇಬ್ಬರು ನಿವಾಸಿಗಳು ಸಾವನ್ನಪ್ಪಿದ್ದಾರೆ. ಸಾವಿನ ಕಾರಣವನ್ನು ಕಂಡುಹಿಡಿಯಲು ಅಧಿಕಾರಿಗಳು ಮರಣೋತ್ತರ ಪರೀಕ್ಷೆಯ ವರದಿಗಳಿಗಾಗಿ ಕಾಯುತ್ತಿದ್ದಾರೆ.

ಮೇ 7 ರ ಬೆಳಿಗ್ಗೆ ಅನಿಲ ಸೋರಿಕೆಯಾಗುತ್ತಿರುವಾಗ ವೆಂಕಟಪುರಂ ಗ್ರಾಮದಲ್ಲಿರುವ ತನ್ನ ನೆರೆಹೊರೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸಹಾಯ ಮಾಡಿದ ಜನರಲ್ಲಿ46 ವರ್ಷದ ಯಲಮಂಚಿಲಿ ಕನಕರಾಜು ಸಹ ಮೂರು ವಾರಗಳ ನಂತರ ಸಾವನಪ್ಪಿದ್ದಾರೆ. ಬಡಗಿ ಕೆಲಸ ಮಾಡುತ್ತಿದ್ದ ಅವರು, ಅನಿಲ ಸೋರಿಕೆಯಿಂದಾಗಿ ನಿರಂತರವಾಗಿ ಅನಾರೋಗ್ಯಕ್ಕೆ ತುತ್ತಾಗಿ, ವಾಕರಿಕೆ, ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ಆದಾಗ್ಯೂ, ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೂ ಅವರ ಸಾವಿಗೆ ಅನಿಲ ಸೋರಿಕೆಯೇ ಕಾರಣವೆಂದು ಹೇಳಲಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಸ್ಥಳೀಯ ಕಾರ್ಯಕರ್ತರು ಮತ್ತು ಅವರ ಕುಟುಂಬ ಸದಸ್ಯರು ಸಮರ್ಪಕ ವೈದ್ಯಕೀಯ ಸೇವೆಯ ಕೊರತೆಯಿಂದಾಗಿ ಕನಕರಜು ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಅನಿಲ ಸೋರಿಕೆಯ ಸ್ಥಳಕ್ಕೆ ಸಮೀಪವಿರುವ ಗ್ರಾಮ ವೆಂಕಟಪುರಂ ನಿವಾಸಿಗಳು ಸಹ ಇದೇ ವಿಷಯವನ್ನು ಮುನ್ನಲೆಗೆ ತಂದಿದ್ದು “ನಮ್ಮಲ್ಲಿ ಹಲವರು ಸಹ ವಾಕರಿಕೆ, ತಲೆನೋವು ಮತ್ತು ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದಾರೆ. ಇಲ್ಲಿರುವ ನರ್ಸ್‌‌ಗಳು ನಮಗೆ ಕೆಲವು ಔಷಧಿಗಳನ್ನು ನೀಡುತ್ತಿದ್ದಾರೆ. ಆದರೆ ಅದು ಕೇವಲ ತಾತ್ಕಾಲಿಕ ಪರಿಹಾರವಾಗಿದ್ದು, ಆನಾರೋಗ್ಯದ ಸಮಸ್ಯೆಗಳು ಮುಂದುವರೆದಿದೆ” ಎಂದು ಆರೋಪಿಸಿದ್ದಾರೆ.

ಮೇ 11 ರಿಂದ, ಮಾರಿಪಾಲೆಂನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಯನ್ನು ಅನಿಲ ಸೋರಿಕೆ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡುವ ಸ್ಥಳವೆಂದು ಗೊತ್ತುಪಡಿಸಲಾಗಿದೆ. “ಆದರೆ ಅಲ್ಲಿಗೆ ಹೋಗುವ ತುರ್ತುಸ್ಥಿತಿಯ ರೋಗಿಗಳಿಗೂ ಸಹ ಕೇವಲ ಸಾಮಾನ್ಯ ಔಷಧಿ ನೀಡಲಾಗುತ್ತಿದೆ. ಮೇ 17 ರಂದು ನಾನು ತಲೆತಿರುಗುವಿಕೆ ಮತ್ತು ಹೊಟ್ಟೆ ನೋವಿನಿಂದ ಅಲ್ಲಿಗೆ ಹೋದೆ. ನನ್ನನ್ನು 48 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ ನನ್ನ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಕೇಳಿದಾಗ ವೈದ್ಯರು ಸ್ಪಷ್ಟ ಉತ್ತರ ನೀಡಲಿಲ್ಲ. ಕನಿಷ್ಠ ಪರೀಕ್ಷಾ ವರದಿಗಳನ್ನು ಸಹ ನೀಡುತ್ತಿಲ್ಲ ಎಂದು ಸಾಗರ್‌ ಎಂಬುವವರು ದೂರಿದ್ದಾರೆ.

ಕನಕರಾಜುರವರ ಪ್ರಕರಣದಲ್ಲಿ ಅನಾರೋಗ್ಯ ಕಾಣಿಸಿಕೊಂಡಾಗ ಅವರಿಗೆ ಕೆಲ ಔಷಧಿಗಳನ್ನು ಶಿಫಾರಸು ಮಾಡಲಾಯಿತು. ಆದರೂ ಉಸಿರಾಟದ ಸಮಸ್ಯೆ, ವಾಕರಿಕೆ ಮತ್ತು ಹೊಟ್ಟೆ ಉಬ್ಬುವುದು ಮುಂತಾದ ಆರೋಗ್ಯ ಸಮಸ್ಯೆಗಳನ್ನು ಮುಂದುವರೆದಾಗ ಅವರನ್ನು ಮೇ 11 ರಂದು ಸುರಕ್ಷಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರನ್ನು ನಾಲ್ಕು ದಿನಗಳವರೆಗೆ ದಾಖಲಿಸಿಕೊಂಡು ನಂತರ ಕೆಲವು ಔಷಧಿಗಳನ್ನು ಶಿಫಾರಸು ಮಾಡಿ ಬಿಡುಗಡೆ ಮಾಡಲಾಯಿತು.

ಆದರೆ ದಿನೇ ದಿನೇ ಅವರ ಸ್ಥಿತಿ ಹದಗೆಡುತ್ತಿರುವುದರಿಂದ ಮತ್ತೆ ಅದೇ ಆಸ್ಪತ್ರೆಗೆ ದಾಖಲಿಸಲಾಯಿತು. ಜೂನ್ 1 ರಂದು ಸುರಕ್ಷಾ ಆಸ್ಪತ್ರೆಯ ಹೃದ್ರೋಗ ತಜ್ಞರು ಕುಟುಂಬಕ್ಕೆ ಎಕೋಕಾರ್ಡಿಯೋಗ್ರಾಮ್ ಪರೀಕ್ಷೆ ಮಾಡಿಸಲು ಸಲಹೆ ನೀಡಿದರು. ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಕನಕರಾಜು ಮೃತಪಟ್ಟರು ಎಂದು ಅವರ ಸೋದರ ಮಾವ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮೇ 26 ರಂದು ವೆಂಕಟಪುರಂನ ಪಾಲಾ ವೆಂಕಯಮ್ಮ ಎಂಬ 80 ವರ್ಷದ ಮಹಿಳೆ ಕಿಂಗ್ ಜಾರ್ಜ್ ಆಸ್ಪತ್ರೆಯಲ್ಲಿ ನಿಧನರಾದರು. ಅನಿಲ ಸೋರಿಕೆಯಿಂದ ಉಂಟಾದ ಕಾಯಿಲೆಗಳಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವೆಂಕಯಮ್ಮ ಅವರ ಕುಟುಂಬ ಆರೋಪಿಸಿದೆ. ಆದರೆ, ಮಹಿಳೆ ವೃದ್ಧಾಪ್ಯಕ್ಕೆ ಸಂಬಂಧಿಸಿದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾಳೆ ಎಂದು ಕಿಂಗ್ ಜಾರ್ಜ್ ಆಸ್ಪತ್ರೆಯ ಅಧೀಕ್ಷಕ ಡಾ.ಅರ್ಜುನ ಹೇಳಿದ್ದಾರೆ. ಮರಣೋತ್ತರ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಗಳು ಬಾರದೇ ಅನಿಲ ಸೋರಿಕೆಯೇ ಸಾವಿಗೆ ಕಾರಣ ಎಂದು ಹೇಳಲಾಗುವುದಿಲ್ಲ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಅರ್ಜುನ, ವೆಂಕಯಮ್ಮ ಮತ್ತು ಕನಕರಾಜು ಅವರ ಎರಡೂ ಪ್ರಕರಣಗಳಲ್ಲಿ, ಫೋರೆನ್ಸಿಕ್ ಲ್ಯಾಬ್‌ನಲ್ಲಿ ಕೆಲಸದ ಹೊರೆ ಹೆಚ್ಚಾಗಿರುವುದರಿಂದ ಮರಣೋತ್ತರ ವರದಿಗಳು ಬರಲು 15 ರಿಂದ 30 ದಿನಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಅಧಿಕೃತ ಸಂಖ್ಯೆಯ ಪ್ರಕಾರ, ಇದುವರೆಗೆ ಅನಿಲ ಸೋರಿಕೆಯಿಂದಾಗಿ 12 ಜನರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ಅನಿಲ ಸೋರಿಕೆ ಸಂತ್ರಸ್ತರೊಂದಿಗೆ ಕೆಲಸ ಮಾಡುತ್ತಿರುವ ಸಿಪಿಐ (ಎಂ) ವಿಶಾಖಪಟ್ನಂ ನಗರ ಕಾರ್ಯದರ್ಶಿ ಗಂಗ ರಾವ್ ಮಾತನಾಡಿ, ವೆಂಕಟಪುರಂ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅನೇಕ ಜನರು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಇನ್ನೂ ಆತಂಕದಲ್ಲಿದ್ದಾರೆ. ಸುರಕ್ಷಾ ಆಸ್ಪತ್ರೆಯ ಹೊರತಾಗಿ, ಪೀಡಿತ ಜನರಿಗೆ ಕಿಂಗ್‌ ಜಾರ್ಜ್‌ ಆಸ್ಪತ್ರೆ ಮಾತ್ರ ಪರ್ಯಾಯವಾಗಿದ. ಸಮರ್ಪಕ ಆಸ್ಪತ್ರೆಗಳು ಇಲ್ಲದಿರುವುದರಿಂದ ಸಾವಿನ ಸರಣಿ ಮುಂದುವರಿದಿದೆ. ಈ ಎರಡು ಆಸ್ಪತ್ರೆಗಳಲ್ಲಿ ಕೇವಲ ಔಷಧಿ ನೀಡಲಾಗುತ್ತದೆಯೇ ಹೊರತು ಸಮರ್ಪಕ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಒಟ್ಟಿನಲ್ಲಿ ವಿಶಾಖಪಟ್ನಂ ಅನಿಲ ದುರಂತದಿಂದ ದೇಶದ ಗಮನ ಸೆಳೆದ ಪ್ರಕರಣ ಒಂದು ತಿಂಗಳಿನಲ್ಲಿಯೇ ಯಾರೂ ಕೇಳದ ಪರಿಸ್ಥಿತಿಗೆ ತಲುಪಿದೆ. ಅಲ್ಲಿನ ಸಂತ್ರಸ್ತರು ಮಾತ್ರ ನಿತ್ಯ ನೋವು ಅನುಭವಿಸುತ್ತ ಸಾವಿನ ದವಡೆಗೆ ನೂಕಲ್ಪಡುತ್ತಿದ್ದಾರೆ. ಇನ್ನಾದರೂ ಸರ್ಕಾರ ಎ‌ಚ್ಚೆತ್ತುಕೊಂಡು ಸಮರ್ಪಕ ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕಿದೆ.

ಮೂಲ: ದಿ ನ್ಯೂಸ್‌ ಮಿನಿಟ್‌


ಇದನ್ನೂ ಓದಿ: ಆಂಧ್ರದಲ್ಲಿ ಅನಿಲ ಸೋರಿಕೆ : 8 ಸಾವು, 1,000 ಕ್ಕೂ ಹೆಚ್ಚು ಜನರಿಗೆ ಗಾಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...