Homeಮುಖಪುಟವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ - ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

ವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ – ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

- Advertisement -
- Advertisement -

ಮೇ 07 ರಂದು ಆಂಧ್ರ ಪ್ರದೇಶದ ವಿಶಾಖಪಟ್ನಂ ಎಲ್‌ಜಿ ಪಾಲಿಮರ್ಸ್ ಸ್ಥಾವರದಿಂದ ಸ್ಟೈರೀನ್ ಅನಿಲ ಸೋರಿಕೆ ಸಂಭವಿಸಿ ಒಂದು ತಿಂಗಳಾಗುತ್ತಿದೆ. ಆದರೂ ಕಳೆದ 10 ದಿನಗಳಲ್ಲಿ ವೆಂಕಟಪುರಂನ ಇನ್ನೂ ಇಬ್ಬರು ನಿವಾಸಿಗಳು ಸಾವನ್ನಪ್ಪಿದ್ದಾರೆ. ಸಾವಿನ ಕಾರಣವನ್ನು ಕಂಡುಹಿಡಿಯಲು ಅಧಿಕಾರಿಗಳು ಮರಣೋತ್ತರ ಪರೀಕ್ಷೆಯ ವರದಿಗಳಿಗಾಗಿ ಕಾಯುತ್ತಿದ್ದಾರೆ.

ಮೇ 7 ರ ಬೆಳಿಗ್ಗೆ ಅನಿಲ ಸೋರಿಕೆಯಾಗುತ್ತಿರುವಾಗ ವೆಂಕಟಪುರಂ ಗ್ರಾಮದಲ್ಲಿರುವ ತನ್ನ ನೆರೆಹೊರೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸಹಾಯ ಮಾಡಿದ ಜನರಲ್ಲಿ46 ವರ್ಷದ ಯಲಮಂಚಿಲಿ ಕನಕರಾಜು ಸಹ ಮೂರು ವಾರಗಳ ನಂತರ ಸಾವನಪ್ಪಿದ್ದಾರೆ. ಬಡಗಿ ಕೆಲಸ ಮಾಡುತ್ತಿದ್ದ ಅವರು, ಅನಿಲ ಸೋರಿಕೆಯಿಂದಾಗಿ ನಿರಂತರವಾಗಿ ಅನಾರೋಗ್ಯಕ್ಕೆ ತುತ್ತಾಗಿ, ವಾಕರಿಕೆ, ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ಆದಾಗ್ಯೂ, ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೂ ಅವರ ಸಾವಿಗೆ ಅನಿಲ ಸೋರಿಕೆಯೇ ಕಾರಣವೆಂದು ಹೇಳಲಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಸ್ಥಳೀಯ ಕಾರ್ಯಕರ್ತರು ಮತ್ತು ಅವರ ಕುಟುಂಬ ಸದಸ್ಯರು ಸಮರ್ಪಕ ವೈದ್ಯಕೀಯ ಸೇವೆಯ ಕೊರತೆಯಿಂದಾಗಿ ಕನಕರಜು ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಅನಿಲ ಸೋರಿಕೆಯ ಸ್ಥಳಕ್ಕೆ ಸಮೀಪವಿರುವ ಗ್ರಾಮ ವೆಂಕಟಪುರಂ ನಿವಾಸಿಗಳು ಸಹ ಇದೇ ವಿಷಯವನ್ನು ಮುನ್ನಲೆಗೆ ತಂದಿದ್ದು “ನಮ್ಮಲ್ಲಿ ಹಲವರು ಸಹ ವಾಕರಿಕೆ, ತಲೆನೋವು ಮತ್ತು ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದಾರೆ. ಇಲ್ಲಿರುವ ನರ್ಸ್‌‌ಗಳು ನಮಗೆ ಕೆಲವು ಔಷಧಿಗಳನ್ನು ನೀಡುತ್ತಿದ್ದಾರೆ. ಆದರೆ ಅದು ಕೇವಲ ತಾತ್ಕಾಲಿಕ ಪರಿಹಾರವಾಗಿದ್ದು, ಆನಾರೋಗ್ಯದ ಸಮಸ್ಯೆಗಳು ಮುಂದುವರೆದಿದೆ” ಎಂದು ಆರೋಪಿಸಿದ್ದಾರೆ.

ಮೇ 11 ರಿಂದ, ಮಾರಿಪಾಲೆಂನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಯನ್ನು ಅನಿಲ ಸೋರಿಕೆ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡುವ ಸ್ಥಳವೆಂದು ಗೊತ್ತುಪಡಿಸಲಾಗಿದೆ. “ಆದರೆ ಅಲ್ಲಿಗೆ ಹೋಗುವ ತುರ್ತುಸ್ಥಿತಿಯ ರೋಗಿಗಳಿಗೂ ಸಹ ಕೇವಲ ಸಾಮಾನ್ಯ ಔಷಧಿ ನೀಡಲಾಗುತ್ತಿದೆ. ಮೇ 17 ರಂದು ನಾನು ತಲೆತಿರುಗುವಿಕೆ ಮತ್ತು ಹೊಟ್ಟೆ ನೋವಿನಿಂದ ಅಲ್ಲಿಗೆ ಹೋದೆ. ನನ್ನನ್ನು 48 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ ನನ್ನ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಕೇಳಿದಾಗ ವೈದ್ಯರು ಸ್ಪಷ್ಟ ಉತ್ತರ ನೀಡಲಿಲ್ಲ. ಕನಿಷ್ಠ ಪರೀಕ್ಷಾ ವರದಿಗಳನ್ನು ಸಹ ನೀಡುತ್ತಿಲ್ಲ ಎಂದು ಸಾಗರ್‌ ಎಂಬುವವರು ದೂರಿದ್ದಾರೆ.

ಕನಕರಾಜುರವರ ಪ್ರಕರಣದಲ್ಲಿ ಅನಾರೋಗ್ಯ ಕಾಣಿಸಿಕೊಂಡಾಗ ಅವರಿಗೆ ಕೆಲ ಔಷಧಿಗಳನ್ನು ಶಿಫಾರಸು ಮಾಡಲಾಯಿತು. ಆದರೂ ಉಸಿರಾಟದ ಸಮಸ್ಯೆ, ವಾಕರಿಕೆ ಮತ್ತು ಹೊಟ್ಟೆ ಉಬ್ಬುವುದು ಮುಂತಾದ ಆರೋಗ್ಯ ಸಮಸ್ಯೆಗಳನ್ನು ಮುಂದುವರೆದಾಗ ಅವರನ್ನು ಮೇ 11 ರಂದು ಸುರಕ್ಷಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರನ್ನು ನಾಲ್ಕು ದಿನಗಳವರೆಗೆ ದಾಖಲಿಸಿಕೊಂಡು ನಂತರ ಕೆಲವು ಔಷಧಿಗಳನ್ನು ಶಿಫಾರಸು ಮಾಡಿ ಬಿಡುಗಡೆ ಮಾಡಲಾಯಿತು.

ಆದರೆ ದಿನೇ ದಿನೇ ಅವರ ಸ್ಥಿತಿ ಹದಗೆಡುತ್ತಿರುವುದರಿಂದ ಮತ್ತೆ ಅದೇ ಆಸ್ಪತ್ರೆಗೆ ದಾಖಲಿಸಲಾಯಿತು. ಜೂನ್ 1 ರಂದು ಸುರಕ್ಷಾ ಆಸ್ಪತ್ರೆಯ ಹೃದ್ರೋಗ ತಜ್ಞರು ಕುಟುಂಬಕ್ಕೆ ಎಕೋಕಾರ್ಡಿಯೋಗ್ರಾಮ್ ಪರೀಕ್ಷೆ ಮಾಡಿಸಲು ಸಲಹೆ ನೀಡಿದರು. ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಕನಕರಾಜು ಮೃತಪಟ್ಟರು ಎಂದು ಅವರ ಸೋದರ ಮಾವ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮೇ 26 ರಂದು ವೆಂಕಟಪುರಂನ ಪಾಲಾ ವೆಂಕಯಮ್ಮ ಎಂಬ 80 ವರ್ಷದ ಮಹಿಳೆ ಕಿಂಗ್ ಜಾರ್ಜ್ ಆಸ್ಪತ್ರೆಯಲ್ಲಿ ನಿಧನರಾದರು. ಅನಿಲ ಸೋರಿಕೆಯಿಂದ ಉಂಟಾದ ಕಾಯಿಲೆಗಳಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವೆಂಕಯಮ್ಮ ಅವರ ಕುಟುಂಬ ಆರೋಪಿಸಿದೆ. ಆದರೆ, ಮಹಿಳೆ ವೃದ್ಧಾಪ್ಯಕ್ಕೆ ಸಂಬಂಧಿಸಿದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾಳೆ ಎಂದು ಕಿಂಗ್ ಜಾರ್ಜ್ ಆಸ್ಪತ್ರೆಯ ಅಧೀಕ್ಷಕ ಡಾ.ಅರ್ಜುನ ಹೇಳಿದ್ದಾರೆ. ಮರಣೋತ್ತರ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಗಳು ಬಾರದೇ ಅನಿಲ ಸೋರಿಕೆಯೇ ಸಾವಿಗೆ ಕಾರಣ ಎಂದು ಹೇಳಲಾಗುವುದಿಲ್ಲ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಅರ್ಜುನ, ವೆಂಕಯಮ್ಮ ಮತ್ತು ಕನಕರಾಜು ಅವರ ಎರಡೂ ಪ್ರಕರಣಗಳಲ್ಲಿ, ಫೋರೆನ್ಸಿಕ್ ಲ್ಯಾಬ್‌ನಲ್ಲಿ ಕೆಲಸದ ಹೊರೆ ಹೆಚ್ಚಾಗಿರುವುದರಿಂದ ಮರಣೋತ್ತರ ವರದಿಗಳು ಬರಲು 15 ರಿಂದ 30 ದಿನಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಅಧಿಕೃತ ಸಂಖ್ಯೆಯ ಪ್ರಕಾರ, ಇದುವರೆಗೆ ಅನಿಲ ಸೋರಿಕೆಯಿಂದಾಗಿ 12 ಜನರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ಅನಿಲ ಸೋರಿಕೆ ಸಂತ್ರಸ್ತರೊಂದಿಗೆ ಕೆಲಸ ಮಾಡುತ್ತಿರುವ ಸಿಪಿಐ (ಎಂ) ವಿಶಾಖಪಟ್ನಂ ನಗರ ಕಾರ್ಯದರ್ಶಿ ಗಂಗ ರಾವ್ ಮಾತನಾಡಿ, ವೆಂಕಟಪುರಂ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅನೇಕ ಜನರು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಇನ್ನೂ ಆತಂಕದಲ್ಲಿದ್ದಾರೆ. ಸುರಕ್ಷಾ ಆಸ್ಪತ್ರೆಯ ಹೊರತಾಗಿ, ಪೀಡಿತ ಜನರಿಗೆ ಕಿಂಗ್‌ ಜಾರ್ಜ್‌ ಆಸ್ಪತ್ರೆ ಮಾತ್ರ ಪರ್ಯಾಯವಾಗಿದ. ಸಮರ್ಪಕ ಆಸ್ಪತ್ರೆಗಳು ಇಲ್ಲದಿರುವುದರಿಂದ ಸಾವಿನ ಸರಣಿ ಮುಂದುವರಿದಿದೆ. ಈ ಎರಡು ಆಸ್ಪತ್ರೆಗಳಲ್ಲಿ ಕೇವಲ ಔಷಧಿ ನೀಡಲಾಗುತ್ತದೆಯೇ ಹೊರತು ಸಮರ್ಪಕ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಒಟ್ಟಿನಲ್ಲಿ ವಿಶಾಖಪಟ್ನಂ ಅನಿಲ ದುರಂತದಿಂದ ದೇಶದ ಗಮನ ಸೆಳೆದ ಪ್ರಕರಣ ಒಂದು ತಿಂಗಳಿನಲ್ಲಿಯೇ ಯಾರೂ ಕೇಳದ ಪರಿಸ್ಥಿತಿಗೆ ತಲುಪಿದೆ. ಅಲ್ಲಿನ ಸಂತ್ರಸ್ತರು ಮಾತ್ರ ನಿತ್ಯ ನೋವು ಅನುಭವಿಸುತ್ತ ಸಾವಿನ ದವಡೆಗೆ ನೂಕಲ್ಪಡುತ್ತಿದ್ದಾರೆ. ಇನ್ನಾದರೂ ಸರ್ಕಾರ ಎ‌ಚ್ಚೆತ್ತುಕೊಂಡು ಸಮರ್ಪಕ ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕಿದೆ.

ಮೂಲ: ದಿ ನ್ಯೂಸ್‌ ಮಿನಿಟ್‌


ಇದನ್ನೂ ಓದಿ: ಆಂಧ್ರದಲ್ಲಿ ಅನಿಲ ಸೋರಿಕೆ : 8 ಸಾವು, 1,000 ಕ್ಕೂ ಹೆಚ್ಚು ಜನರಿಗೆ ಗಾಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...