Homeಮುಖಪುಟವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ - ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

ವಿಶಾಖಪಟ್ನಂ ಅನಿಲ ದುರಂತ: ನಿಲ್ಲದ ಸಾವಿನ ಸರಣಿ – ಕಳಪೆ ಆರೋಗ್ಯ ವ್ಯವಸ್ಥೆ ವಿರುದ್ಧ ದೂರು

- Advertisement -
- Advertisement -

ಮೇ 07 ರಂದು ಆಂಧ್ರ ಪ್ರದೇಶದ ವಿಶಾಖಪಟ್ನಂ ಎಲ್‌ಜಿ ಪಾಲಿಮರ್ಸ್ ಸ್ಥಾವರದಿಂದ ಸ್ಟೈರೀನ್ ಅನಿಲ ಸೋರಿಕೆ ಸಂಭವಿಸಿ ಒಂದು ತಿಂಗಳಾಗುತ್ತಿದೆ. ಆದರೂ ಕಳೆದ 10 ದಿನಗಳಲ್ಲಿ ವೆಂಕಟಪುರಂನ ಇನ್ನೂ ಇಬ್ಬರು ನಿವಾಸಿಗಳು ಸಾವನ್ನಪ್ಪಿದ್ದಾರೆ. ಸಾವಿನ ಕಾರಣವನ್ನು ಕಂಡುಹಿಡಿಯಲು ಅಧಿಕಾರಿಗಳು ಮರಣೋತ್ತರ ಪರೀಕ್ಷೆಯ ವರದಿಗಳಿಗಾಗಿ ಕಾಯುತ್ತಿದ್ದಾರೆ.

ಮೇ 7 ರ ಬೆಳಿಗ್ಗೆ ಅನಿಲ ಸೋರಿಕೆಯಾಗುತ್ತಿರುವಾಗ ವೆಂಕಟಪುರಂ ಗ್ರಾಮದಲ್ಲಿರುವ ತನ್ನ ನೆರೆಹೊರೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸಹಾಯ ಮಾಡಿದ ಜನರಲ್ಲಿ46 ವರ್ಷದ ಯಲಮಂಚಿಲಿ ಕನಕರಾಜು ಸಹ ಮೂರು ವಾರಗಳ ನಂತರ ಸಾವನಪ್ಪಿದ್ದಾರೆ. ಬಡಗಿ ಕೆಲಸ ಮಾಡುತ್ತಿದ್ದ ಅವರು, ಅನಿಲ ಸೋರಿಕೆಯಿಂದಾಗಿ ನಿರಂತರವಾಗಿ ಅನಾರೋಗ್ಯಕ್ಕೆ ತುತ್ತಾಗಿ, ವಾಕರಿಕೆ, ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ಆದಾಗ್ಯೂ, ಮರಣೋತ್ತರ ಪರೀಕ್ಷೆಯ ವರದಿ ಬರುವವರೆಗೂ ಅವರ ಸಾವಿಗೆ ಅನಿಲ ಸೋರಿಕೆಯೇ ಕಾರಣವೆಂದು ಹೇಳಲಾಗುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಸ್ಥಳೀಯ ಕಾರ್ಯಕರ್ತರು ಮತ್ತು ಅವರ ಕುಟುಂಬ ಸದಸ್ಯರು ಸಮರ್ಪಕ ವೈದ್ಯಕೀಯ ಸೇವೆಯ ಕೊರತೆಯಿಂದಾಗಿ ಕನಕರಜು ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಅನಿಲ ಸೋರಿಕೆಯ ಸ್ಥಳಕ್ಕೆ ಸಮೀಪವಿರುವ ಗ್ರಾಮ ವೆಂಕಟಪುರಂ ನಿವಾಸಿಗಳು ಸಹ ಇದೇ ವಿಷಯವನ್ನು ಮುನ್ನಲೆಗೆ ತಂದಿದ್ದು “ನಮ್ಮಲ್ಲಿ ಹಲವರು ಸಹ ವಾಕರಿಕೆ, ತಲೆನೋವು ಮತ್ತು ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದಾರೆ. ಇಲ್ಲಿರುವ ನರ್ಸ್‌‌ಗಳು ನಮಗೆ ಕೆಲವು ಔಷಧಿಗಳನ್ನು ನೀಡುತ್ತಿದ್ದಾರೆ. ಆದರೆ ಅದು ಕೇವಲ ತಾತ್ಕಾಲಿಕ ಪರಿಹಾರವಾಗಿದ್ದು, ಆನಾರೋಗ್ಯದ ಸಮಸ್ಯೆಗಳು ಮುಂದುವರೆದಿದೆ” ಎಂದು ಆರೋಪಿಸಿದ್ದಾರೆ.

ಮೇ 11 ರಿಂದ, ಮಾರಿಪಾಲೆಂನ ಸುರಕ್ಷಾ ಎಂಬ ಖಾಸಗಿ ಆಸ್ಪತ್ರೆಯನ್ನು ಅನಿಲ ಸೋರಿಕೆ ಸಂತ್ರಸ್ತರಿಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡುವ ಸ್ಥಳವೆಂದು ಗೊತ್ತುಪಡಿಸಲಾಗಿದೆ. “ಆದರೆ ಅಲ್ಲಿಗೆ ಹೋಗುವ ತುರ್ತುಸ್ಥಿತಿಯ ರೋಗಿಗಳಿಗೂ ಸಹ ಕೇವಲ ಸಾಮಾನ್ಯ ಔಷಧಿ ನೀಡಲಾಗುತ್ತಿದೆ. ಮೇ 17 ರಂದು ನಾನು ತಲೆತಿರುಗುವಿಕೆ ಮತ್ತು ಹೊಟ್ಟೆ ನೋವಿನಿಂದ ಅಲ್ಲಿಗೆ ಹೋದೆ. ನನ್ನನ್ನು 48 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ ನನ್ನ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಕೇಳಿದಾಗ ವೈದ್ಯರು ಸ್ಪಷ್ಟ ಉತ್ತರ ನೀಡಲಿಲ್ಲ. ಕನಿಷ್ಠ ಪರೀಕ್ಷಾ ವರದಿಗಳನ್ನು ಸಹ ನೀಡುತ್ತಿಲ್ಲ ಎಂದು ಸಾಗರ್‌ ಎಂಬುವವರು ದೂರಿದ್ದಾರೆ.

ಕನಕರಾಜುರವರ ಪ್ರಕರಣದಲ್ಲಿ ಅನಾರೋಗ್ಯ ಕಾಣಿಸಿಕೊಂಡಾಗ ಅವರಿಗೆ ಕೆಲ ಔಷಧಿಗಳನ್ನು ಶಿಫಾರಸು ಮಾಡಲಾಯಿತು. ಆದರೂ ಉಸಿರಾಟದ ಸಮಸ್ಯೆ, ವಾಕರಿಕೆ ಮತ್ತು ಹೊಟ್ಟೆ ಉಬ್ಬುವುದು ಮುಂತಾದ ಆರೋಗ್ಯ ಸಮಸ್ಯೆಗಳನ್ನು ಮುಂದುವರೆದಾಗ ಅವರನ್ನು ಮೇ 11 ರಂದು ಸುರಕ್ಷಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರನ್ನು ನಾಲ್ಕು ದಿನಗಳವರೆಗೆ ದಾಖಲಿಸಿಕೊಂಡು ನಂತರ ಕೆಲವು ಔಷಧಿಗಳನ್ನು ಶಿಫಾರಸು ಮಾಡಿ ಬಿಡುಗಡೆ ಮಾಡಲಾಯಿತು.

ಆದರೆ ದಿನೇ ದಿನೇ ಅವರ ಸ್ಥಿತಿ ಹದಗೆಡುತ್ತಿರುವುದರಿಂದ ಮತ್ತೆ ಅದೇ ಆಸ್ಪತ್ರೆಗೆ ದಾಖಲಿಸಲಾಯಿತು. ಜೂನ್ 1 ರಂದು ಸುರಕ್ಷಾ ಆಸ್ಪತ್ರೆಯ ಹೃದ್ರೋಗ ತಜ್ಞರು ಕುಟುಂಬಕ್ಕೆ ಎಕೋಕಾರ್ಡಿಯೋಗ್ರಾಮ್ ಪರೀಕ್ಷೆ ಮಾಡಿಸಲು ಸಲಹೆ ನೀಡಿದರು. ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಕನಕರಾಜು ಮೃತಪಟ್ಟರು ಎಂದು ಅವರ ಸೋದರ ಮಾವ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮೇ 26 ರಂದು ವೆಂಕಟಪುರಂನ ಪಾಲಾ ವೆಂಕಯಮ್ಮ ಎಂಬ 80 ವರ್ಷದ ಮಹಿಳೆ ಕಿಂಗ್ ಜಾರ್ಜ್ ಆಸ್ಪತ್ರೆಯಲ್ಲಿ ನಿಧನರಾದರು. ಅನಿಲ ಸೋರಿಕೆಯಿಂದ ಉಂಟಾದ ಕಾಯಿಲೆಗಳಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವೆಂಕಯಮ್ಮ ಅವರ ಕುಟುಂಬ ಆರೋಪಿಸಿದೆ. ಆದರೆ, ಮಹಿಳೆ ವೃದ್ಧಾಪ್ಯಕ್ಕೆ ಸಂಬಂಧಿಸಿದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾಳೆ ಎಂದು ಕಿಂಗ್ ಜಾರ್ಜ್ ಆಸ್ಪತ್ರೆಯ ಅಧೀಕ್ಷಕ ಡಾ.ಅರ್ಜುನ ಹೇಳಿದ್ದಾರೆ. ಮರಣೋತ್ತರ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಗಳು ಬಾರದೇ ಅನಿಲ ಸೋರಿಕೆಯೇ ಸಾವಿಗೆ ಕಾರಣ ಎಂದು ಹೇಳಲಾಗುವುದಿಲ್ಲ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಅರ್ಜುನ, ವೆಂಕಯಮ್ಮ ಮತ್ತು ಕನಕರಾಜು ಅವರ ಎರಡೂ ಪ್ರಕರಣಗಳಲ್ಲಿ, ಫೋರೆನ್ಸಿಕ್ ಲ್ಯಾಬ್‌ನಲ್ಲಿ ಕೆಲಸದ ಹೊರೆ ಹೆಚ್ಚಾಗಿರುವುದರಿಂದ ಮರಣೋತ್ತರ ವರದಿಗಳು ಬರಲು 15 ರಿಂದ 30 ದಿನಗಳು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. ಅಧಿಕೃತ ಸಂಖ್ಯೆಯ ಪ್ರಕಾರ, ಇದುವರೆಗೆ ಅನಿಲ ಸೋರಿಕೆಯಿಂದಾಗಿ 12 ಜನರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.

ಅನಿಲ ಸೋರಿಕೆ ಸಂತ್ರಸ್ತರೊಂದಿಗೆ ಕೆಲಸ ಮಾಡುತ್ತಿರುವ ಸಿಪಿಐ (ಎಂ) ವಿಶಾಖಪಟ್ನಂ ನಗರ ಕಾರ್ಯದರ್ಶಿ ಗಂಗ ರಾವ್ ಮಾತನಾಡಿ, ವೆಂಕಟಪುರಂ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅನೇಕ ಜನರು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಇನ್ನೂ ಆತಂಕದಲ್ಲಿದ್ದಾರೆ. ಸುರಕ್ಷಾ ಆಸ್ಪತ್ರೆಯ ಹೊರತಾಗಿ, ಪೀಡಿತ ಜನರಿಗೆ ಕಿಂಗ್‌ ಜಾರ್ಜ್‌ ಆಸ್ಪತ್ರೆ ಮಾತ್ರ ಪರ್ಯಾಯವಾಗಿದ. ಸಮರ್ಪಕ ಆಸ್ಪತ್ರೆಗಳು ಇಲ್ಲದಿರುವುದರಿಂದ ಸಾವಿನ ಸರಣಿ ಮುಂದುವರಿದಿದೆ. ಈ ಎರಡು ಆಸ್ಪತ್ರೆಗಳಲ್ಲಿ ಕೇವಲ ಔಷಧಿ ನೀಡಲಾಗುತ್ತದೆಯೇ ಹೊರತು ಸಮರ್ಪಕ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಒಟ್ಟಿನಲ್ಲಿ ವಿಶಾಖಪಟ್ನಂ ಅನಿಲ ದುರಂತದಿಂದ ದೇಶದ ಗಮನ ಸೆಳೆದ ಪ್ರಕರಣ ಒಂದು ತಿಂಗಳಿನಲ್ಲಿಯೇ ಯಾರೂ ಕೇಳದ ಪರಿಸ್ಥಿತಿಗೆ ತಲುಪಿದೆ. ಅಲ್ಲಿನ ಸಂತ್ರಸ್ತರು ಮಾತ್ರ ನಿತ್ಯ ನೋವು ಅನುಭವಿಸುತ್ತ ಸಾವಿನ ದವಡೆಗೆ ನೂಕಲ್ಪಡುತ್ತಿದ್ದಾರೆ. ಇನ್ನಾದರೂ ಸರ್ಕಾರ ಎ‌ಚ್ಚೆತ್ತುಕೊಂಡು ಸಮರ್ಪಕ ಆರೋಗ್ಯ ವ್ಯವಸ್ಥೆ ಕಲ್ಪಿಸಬೇಕಿದೆ.

ಮೂಲ: ದಿ ನ್ಯೂಸ್‌ ಮಿನಿಟ್‌


ಇದನ್ನೂ ಓದಿ: ಆಂಧ್ರದಲ್ಲಿ ಅನಿಲ ಸೋರಿಕೆ : 8 ಸಾವು, 1,000 ಕ್ಕೂ ಹೆಚ್ಚು ಜನರಿಗೆ ಗಾಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....