HomeಮುಖಪುಟAIDMK ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ ವಿ.ಕೆ ಶಶಿಕಲಾ

AIDMK ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ ವಿ.ಕೆ ಶಶಿಕಲಾ

- Advertisement -
- Advertisement -

ಅಕ್ರಮ ಆಸ್ತಿ ಗಳಿಕೆಯ ಪ್ರಕರಣದಲ್ಲಿ ಜೈಲಿನಲ್ಲಿದ್ದ ದಿ. ಜಯಲಲಿತಾ ಆಪ್ತೆ ವಿ.ಕೆ ಶಶಿಕಲಾ ಕಳೆದ ತಿಂಗಳು ಬಿಡುಗಡೆಯಾಗಿದ್ದು, ಈಗ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇಟ್ರ ಕಳಗಂ (AIDMK) ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಜೈಲಿಗೆ ತೆರಳುವ ಮೊದಲು, ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ತನ್ನ ಬೆಂಬಲಿಗ ಪಳಿನಿಸ್ವಾಮಿ (ಇಪಿಎಸ್) ಅವರನ್ನು ಆಯ್ಕೆ ಮಾಡಿದ್ದರು ಆದರೆ ಅವರ ಅನುಪಸ್ಥಿತಿಯಲ್ಲಿ ಇಪಿಎಸ್, ಶಶಿಕಲಾ ಅವರ ನಾಯಕತ್ವದ ವಿರುದ್ಧ ದಂಗೆ ಎದ್ದಿದ್ದ ಪನ್ನೀರ್‌ಸೆಲ್ವಂ (ಒಪಿಎಸ್) ಜೊತೆ ಹೊಂದಾಣಿಕೆ ಮಾಡಿಕೊಂಡರು. ಇಪಿಎಸ್ ಮತ್ತು ಒಪಿಎಸ್ ಇಬ್ಬರೂ ಸೇರಿ ಶಶಿಕಲಾರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮತ್ತು ಪಕ್ಷದಿಂದ ಉಚ್ಛಾಟಿಸಿದ್ದರು.) ಪಕ್ಷದಲ್ಲಿ ತನಗೆ ಉನ್ನತ ಹುದ್ದೆ ನೀಡಬೇಕು ಎಂದು ಶಶಿಕಲಾ ಕೋರ್ಟ್ ಮೆಟ್ಟಿಲೇರಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಶಶಿಕಲಾ ಅವರನ್ನು ವಜಾಗೊಳಿಸಲಾಗಿತ್ತು. ಇದಕ್ಕಾಗಿ ಇ ಪಳನಿಸಾಮಿ ಮತ್ತು ಒ ಪನ್ನೀರ್‌ಸೆಲ್ವಂ ಪಕ್ಷದ ಜನರಲ್ ಕೌನ್ಸಿಲ್ ಸಭೆ ಕರೆದಿದ್ದರು. ಇದರ ವಿರುದ್ಧ 2017 ರಲ್ಲಿ ಚೆನ್ನೈ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈಗ ಇದರ ತುರ್ತು ವಿಚಾರಣೆ ಮಾಡುವಂತೆ ಕೋರಿ ಮತ್ತೊಂದು ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ. ಮಾರ್ಚ್ 15 ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತ ಸಹಾಯಕರಾದ 66 ವರ್ಷದ ಶಶಿಕಲಾ, ಜಯಲಲಿತಾ ಅವರ ಮರಣದ ನಂತರ ಪಕ್ಷದ ಮುಖ್ಯಸ್ಥರಾದರು. ಆದರೆ ಭ್ರಷ್ಟಾಚಾರ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಒಳಗಾದರು, ಇದರಿಂದ ಮುಖ್ಯಮಂತ್ರಿ ಹುದ್ದೆ ಕೈತಪ್ಪಿ ಹೋಗಿತ್ತು.

ಇದನ್ನೂ ಓದಿ: ಪೆರಿಯಾರ್ ನೆಲದಲ್ಲಿ ನಡೆಯದ ಬಿಜೆಪಿ ಪ್ರಯೋಗ; ಮಾಜಿ ಐಎಎಸ್ ಸಸಿಕಾಂತ್ ಸೆಂಥಿಲ್ ಸಂದರ್ಶನ

ಜೈಲಿಗೆ ತೆರಳುವ ಮೊದಲು, ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ತನ್ನ ಬೆಂಬಲಿಗ ಪಳಿನಿಸ್ವಾಮಿ (ಇಪಿಎಸ್) ಅವರನ್ನು ಆಯ್ಕೆ ಮಾಡಿದ್ದರು ಆದರೆ ಅವರ ಅನುಪಸ್ಥಿತಿಯಲ್ಲಿ ಇಪಿಎಸ್, ಶಶಿಕಲಾ ಅವರ ನಾಯಕತ್ವದ ವಿರುದ್ಧ ದಂಗೆ ಎದ್ದಿದ್ದ ಪನ್ನೀರ್‌ಸೆಲ್ವಂ (ಒಪಿಎಸ್) ಜೊತೆ ಹೊಂದಾಣಿಕೆ ಮಾಡಿಕೊಂಡರು. ಇಪಿಎಸ್ ಮತ್ತು ಒಪಿಎಸ್ ಇಬ್ಬರೂ ಸೇರಿ ಶಶಿಕಲಾರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮತ್ತು ಪಕ್ಷದಿಂದ ಉಚ್ಛಾಟಿಸಿದ್ದರು.

ಈಗ ಶಶಿಕಲಾ ಜೈಲಿನಿಂದ ಮರಳಿ ಬಂದಿದ್ದು, ತಮಿಳುನಾಡು ರಾಜಕೀಯದಲ್ಲಿ ಪ್ರಮುಖ ಪಾತ್ರವಹಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇನ್ನೇನು ತಮಿಳುನಾಡಿನ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಲಿದ್ದು, ಕೆಲವೆ ತಿಂಗಳಿನಲ್ಲಿ ಮತದಾನ ನಡೆಯಲಿದೆ. ಹಾಗಾಗಿ ತಮಿಳುನಾಡಿನಲ್ಲಿ ರಾಜಕೀಯ ಮಹತ್ವವುಳ್ಳ ಹಲವು ಘಟನೆಗಳು ಸಂಭವಿಸುತ್ತಿವೆ.

ವರ್ಚಸ್ವಿ ಮತ್ತು ಶಕ್ತಿಯುತ ಜಯಲಲಿತಾ ಅವರ ಮರಣದ ನಂತರ ತನ್ನ ನಾಯಕತ್ವದ ನಿರ್ವಾತದಿಂದ ಎಂದೂ ಚೇತರಿಸಿಕೊಳ್ಳದ ಪಕ್ಷದಲ್ಲಿ ಈಗ ಶಶಿಕಲಾ ಕುತೂಹಲ, ಪ್ರಕ್ಷುಬ್ಧತೆ, ಗೊಂದಲಗಳ ಹೆಚ್ಚಳಕ್ಕೆ ಕಾರಣರಾಗಿದ್ದಾರೆ.

ಮುಖ್ಯಮಂತ್ರಿ ಜನವರಿಯಲ್ಲಿ ಬಿಜೆಪಿ ನಾಯಕತ್ವದ ಸಭೆಯ ನಂತರ, ಶಶಿಕಲಾ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದರು. ಆದರೆ ಶಶಿಕಲಾ ಹಿಂದಿರುಗಿದಾಗಿನಿಂದ, ತನ್ನ ಮಾಜಿ ಮಾರ್ಗದರ್ಶಕಿ ಶಶಿಕಲಾ ಕುರಿತು ಯಾವ ಟೀಕೆ ಮಾಡದೇ ಮೌನವಾಗಿದ್ದಾರೆ. ಆದರೆ ಶಶಿಕಲಾ ಸೋದರಳಿಯ ಟಿಟಿವಿ ದಿನಕರನ್ ಅವರನ್ನು ಮಾತ್ರ ಗುರಿಯಾಗಿಸಿ ಸಿಎಂ ಇಪಿಎಸ್ ಟೀಕೆ ಮಾಡುತ್ತಿದ್ದಾರೆ. ಜಯಲಲಿತಾ ಅವರನ್ನು “ಅಮ್ಮ” ಎಂದು ಕರೆಯುತ್ತಿದ್ದ ಎಐಎಡಿಎಂಕೆ ಕಾರ್ಯಕರ್ತರು ಶಶಿಕಲಾರನ್ನು “ಚಿನ್ನಮ್ಮ (ಚಿಕ್ಕಮ್ಮ)” ಎಂದು ಕರೆಯುತ್ತಾರೆ. ಈ ಚಿನ್ನಮ್ಮನೊಂದಿಗೆ ಸಿಎಂ ಪಳಿನಿಸ್ವಾಮಿ ಹೊಂದಾಣಿಕೆ ಮಾಡಿಕೊಳ್ಳಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಪಕ್ಷದ ವಿರೋಧವಿದ್ದರೂ ಕೂಡ, ತಾನು ಹೋದಲ್ಲೆಲ್ಲಾ ಎಐಎಡಿಎಂಕೆ ಧ್ವಜವನ್ನು ತಮ್ಮ ಕಾರಿನ ಮೇಲೆ ಹಾರಿಸುವ ಮೂಲಕ ಶಶಿಕಲಾ ತಮ್ಮ ಉದ್ದೇಶಗಳನ್ನು ಸ್ಪಷ್ಟಪಡಿಸಿದ್ದಾರೆ.
2017 ರಲ್ಲಿ ಚುನಾವಣಾ ಆಯೋಗವು ಇಪಿಎಸ್-ಒಪಿಎಸ್ ಬಣಕ್ಕೆ ನೀಡಿದ್ದ ಎಐಎಡಿಎಂಕೆ ಪಕ್ಷದ ಎರಡು ಎಲೆಗಳ ಚಿಹ್ನೆ ಮತ್ತು ಹೆಸರನ್ನು ಪಡೆಯಲು ಶಶಿಕಲಾ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಶಶಿಕಲಾ ಮೇಲೆ ಈ ಹಿಂದೆ ಇಡಿ ದಾಳಿ ಮಾಡಿಸಿದ್ದ ಬಿಜೆಪಿ ಶಶಿಕಲಾ ಎಐಎಡಿಎಂಕೆಗೆ ಸೇರುವುದನ್ನು ಸದ್ಯ ವಿರೋಧಿಸುತ್ತಿದೆ.


ಇದನ್ನೂ ಓದಿ: ತಪ್ಪು ಮಾಡದೆ ಜೈಲಿನಲ್ಲಿದ್ದಾರೆ: ದಿಶಾ ರವಿಯನ್ನು ಬೆಂಬಲಿಸಿದ ಪತ್ರಕರ್ತೆ ಪ್ರಿಯಾ ರಮಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....