HomeಮುಖಪುಟAIDMK ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ ವಿ.ಕೆ ಶಶಿಕಲಾ

AIDMK ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ ವಿ.ಕೆ ಶಶಿಕಲಾ

- Advertisement -
- Advertisement -

ಅಕ್ರಮ ಆಸ್ತಿ ಗಳಿಕೆಯ ಪ್ರಕರಣದಲ್ಲಿ ಜೈಲಿನಲ್ಲಿದ್ದ ದಿ. ಜಯಲಲಿತಾ ಆಪ್ತೆ ವಿ.ಕೆ ಶಶಿಕಲಾ ಕಳೆದ ತಿಂಗಳು ಬಿಡುಗಡೆಯಾಗಿದ್ದು, ಈಗ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇಟ್ರ ಕಳಗಂ (AIDMK) ಪಕ್ಷದ ಉನ್ನತ ಹುದ್ದೆಗಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಜೈಲಿಗೆ ತೆರಳುವ ಮೊದಲು, ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ತನ್ನ ಬೆಂಬಲಿಗ ಪಳಿನಿಸ್ವಾಮಿ (ಇಪಿಎಸ್) ಅವರನ್ನು ಆಯ್ಕೆ ಮಾಡಿದ್ದರು ಆದರೆ ಅವರ ಅನುಪಸ್ಥಿತಿಯಲ್ಲಿ ಇಪಿಎಸ್, ಶಶಿಕಲಾ ಅವರ ನಾಯಕತ್ವದ ವಿರುದ್ಧ ದಂಗೆ ಎದ್ದಿದ್ದ ಪನ್ನೀರ್‌ಸೆಲ್ವಂ (ಒಪಿಎಸ್) ಜೊತೆ ಹೊಂದಾಣಿಕೆ ಮಾಡಿಕೊಂಡರು. ಇಪಿಎಸ್ ಮತ್ತು ಒಪಿಎಸ್ ಇಬ್ಬರೂ ಸೇರಿ ಶಶಿಕಲಾರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮತ್ತು ಪಕ್ಷದಿಂದ ಉಚ್ಛಾಟಿಸಿದ್ದರು.) ಪಕ್ಷದಲ್ಲಿ ತನಗೆ ಉನ್ನತ ಹುದ್ದೆ ನೀಡಬೇಕು ಎಂದು ಶಶಿಕಲಾ ಕೋರ್ಟ್ ಮೆಟ್ಟಿಲೇರಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಶಶಿಕಲಾ ಅವರನ್ನು ವಜಾಗೊಳಿಸಲಾಗಿತ್ತು. ಇದಕ್ಕಾಗಿ ಇ ಪಳನಿಸಾಮಿ ಮತ್ತು ಒ ಪನ್ನೀರ್‌ಸೆಲ್ವಂ ಪಕ್ಷದ ಜನರಲ್ ಕೌನ್ಸಿಲ್ ಸಭೆ ಕರೆದಿದ್ದರು. ಇದರ ವಿರುದ್ಧ 2017 ರಲ್ಲಿ ಚೆನ್ನೈ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈಗ ಇದರ ತುರ್ತು ವಿಚಾರಣೆ ಮಾಡುವಂತೆ ಕೋರಿ ಮತ್ತೊಂದು ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ. ಮಾರ್ಚ್ 15 ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತ ಸಹಾಯಕರಾದ 66 ವರ್ಷದ ಶಶಿಕಲಾ, ಜಯಲಲಿತಾ ಅವರ ಮರಣದ ನಂತರ ಪಕ್ಷದ ಮುಖ್ಯಸ್ಥರಾದರು. ಆದರೆ ಭ್ರಷ್ಟಾಚಾರ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಒಳಗಾದರು, ಇದರಿಂದ ಮುಖ್ಯಮಂತ್ರಿ ಹುದ್ದೆ ಕೈತಪ್ಪಿ ಹೋಗಿತ್ತು.

ಇದನ್ನೂ ಓದಿ: ಪೆರಿಯಾರ್ ನೆಲದಲ್ಲಿ ನಡೆಯದ ಬಿಜೆಪಿ ಪ್ರಯೋಗ; ಮಾಜಿ ಐಎಎಸ್ ಸಸಿಕಾಂತ್ ಸೆಂಥಿಲ್ ಸಂದರ್ಶನ

ಜೈಲಿಗೆ ತೆರಳುವ ಮೊದಲು, ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ತನ್ನ ಬೆಂಬಲಿಗ ಪಳಿನಿಸ್ವಾಮಿ (ಇಪಿಎಸ್) ಅವರನ್ನು ಆಯ್ಕೆ ಮಾಡಿದ್ದರು ಆದರೆ ಅವರ ಅನುಪಸ್ಥಿತಿಯಲ್ಲಿ ಇಪಿಎಸ್, ಶಶಿಕಲಾ ಅವರ ನಾಯಕತ್ವದ ವಿರುದ್ಧ ದಂಗೆ ಎದ್ದಿದ್ದ ಪನ್ನೀರ್‌ಸೆಲ್ವಂ (ಒಪಿಎಸ್) ಜೊತೆ ಹೊಂದಾಣಿಕೆ ಮಾಡಿಕೊಂಡರು. ಇಪಿಎಸ್ ಮತ್ತು ಒಪಿಎಸ್ ಇಬ್ಬರೂ ಸೇರಿ ಶಶಿಕಲಾರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮತ್ತು ಪಕ್ಷದಿಂದ ಉಚ್ಛಾಟಿಸಿದ್ದರು.

ಈಗ ಶಶಿಕಲಾ ಜೈಲಿನಿಂದ ಮರಳಿ ಬಂದಿದ್ದು, ತಮಿಳುನಾಡು ರಾಜಕೀಯದಲ್ಲಿ ಪ್ರಮುಖ ಪಾತ್ರವಹಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇನ್ನೇನು ತಮಿಳುನಾಡಿನ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಲಿದ್ದು, ಕೆಲವೆ ತಿಂಗಳಿನಲ್ಲಿ ಮತದಾನ ನಡೆಯಲಿದೆ. ಹಾಗಾಗಿ ತಮಿಳುನಾಡಿನಲ್ಲಿ ರಾಜಕೀಯ ಮಹತ್ವವುಳ್ಳ ಹಲವು ಘಟನೆಗಳು ಸಂಭವಿಸುತ್ತಿವೆ.

ವರ್ಚಸ್ವಿ ಮತ್ತು ಶಕ್ತಿಯುತ ಜಯಲಲಿತಾ ಅವರ ಮರಣದ ನಂತರ ತನ್ನ ನಾಯಕತ್ವದ ನಿರ್ವಾತದಿಂದ ಎಂದೂ ಚೇತರಿಸಿಕೊಳ್ಳದ ಪಕ್ಷದಲ್ಲಿ ಈಗ ಶಶಿಕಲಾ ಕುತೂಹಲ, ಪ್ರಕ್ಷುಬ್ಧತೆ, ಗೊಂದಲಗಳ ಹೆಚ್ಚಳಕ್ಕೆ ಕಾರಣರಾಗಿದ್ದಾರೆ.

ಮುಖ್ಯಮಂತ್ರಿ ಜನವರಿಯಲ್ಲಿ ಬಿಜೆಪಿ ನಾಯಕತ್ವದ ಸಭೆಯ ನಂತರ, ಶಶಿಕಲಾ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದರು. ಆದರೆ ಶಶಿಕಲಾ ಹಿಂದಿರುಗಿದಾಗಿನಿಂದ, ತನ್ನ ಮಾಜಿ ಮಾರ್ಗದರ್ಶಕಿ ಶಶಿಕಲಾ ಕುರಿತು ಯಾವ ಟೀಕೆ ಮಾಡದೇ ಮೌನವಾಗಿದ್ದಾರೆ. ಆದರೆ ಶಶಿಕಲಾ ಸೋದರಳಿಯ ಟಿಟಿವಿ ದಿನಕರನ್ ಅವರನ್ನು ಮಾತ್ರ ಗುರಿಯಾಗಿಸಿ ಸಿಎಂ ಇಪಿಎಸ್ ಟೀಕೆ ಮಾಡುತ್ತಿದ್ದಾರೆ. ಜಯಲಲಿತಾ ಅವರನ್ನು “ಅಮ್ಮ” ಎಂದು ಕರೆಯುತ್ತಿದ್ದ ಎಐಎಡಿಎಂಕೆ ಕಾರ್ಯಕರ್ತರು ಶಶಿಕಲಾರನ್ನು “ಚಿನ್ನಮ್ಮ (ಚಿಕ್ಕಮ್ಮ)” ಎಂದು ಕರೆಯುತ್ತಾರೆ. ಈ ಚಿನ್ನಮ್ಮನೊಂದಿಗೆ ಸಿಎಂ ಪಳಿನಿಸ್ವಾಮಿ ಹೊಂದಾಣಿಕೆ ಮಾಡಿಕೊಳ್ಳಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಪಕ್ಷದ ವಿರೋಧವಿದ್ದರೂ ಕೂಡ, ತಾನು ಹೋದಲ್ಲೆಲ್ಲಾ ಎಐಎಡಿಎಂಕೆ ಧ್ವಜವನ್ನು ತಮ್ಮ ಕಾರಿನ ಮೇಲೆ ಹಾರಿಸುವ ಮೂಲಕ ಶಶಿಕಲಾ ತಮ್ಮ ಉದ್ದೇಶಗಳನ್ನು ಸ್ಪಷ್ಟಪಡಿಸಿದ್ದಾರೆ.
2017 ರಲ್ಲಿ ಚುನಾವಣಾ ಆಯೋಗವು ಇಪಿಎಸ್-ಒಪಿಎಸ್ ಬಣಕ್ಕೆ ನೀಡಿದ್ದ ಎಐಎಡಿಎಂಕೆ ಪಕ್ಷದ ಎರಡು ಎಲೆಗಳ ಚಿಹ್ನೆ ಮತ್ತು ಹೆಸರನ್ನು ಪಡೆಯಲು ಶಶಿಕಲಾ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಶಶಿಕಲಾ ಮೇಲೆ ಈ ಹಿಂದೆ ಇಡಿ ದಾಳಿ ಮಾಡಿಸಿದ್ದ ಬಿಜೆಪಿ ಶಶಿಕಲಾ ಎಐಎಡಿಎಂಕೆಗೆ ಸೇರುವುದನ್ನು ಸದ್ಯ ವಿರೋಧಿಸುತ್ತಿದೆ.


ಇದನ್ನೂ ಓದಿ: ತಪ್ಪು ಮಾಡದೆ ಜೈಲಿನಲ್ಲಿದ್ದಾರೆ: ದಿಶಾ ರವಿಯನ್ನು ಬೆಂಬಲಿಸಿದ ಪತ್ರಕರ್ತೆ ಪ್ರಿಯಾ ರಮಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...