Homeಕರ್ನಾಟಕಬೆಂಕಿ ಹಚ್ಚುವ ಕಿಚ್ಚು ರಾಜಕೀಯ ಪ್ರೇರಿತವೇ ಹೊರತು ಜನಪರ ಕಾಳಜಿಯದ್ದಲ್ಲ

ಬೆಂಕಿ ಹಚ್ಚುವ ಕಿಚ್ಚು ರಾಜಕೀಯ ಪ್ರೇರಿತವೇ ಹೊರತು ಜನಪರ ಕಾಳಜಿಯದ್ದಲ್ಲ

- Advertisement -
- Advertisement -

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಒಂದು ಬಸ್ ನಿಂತಿದೆ. ಅದು ಎಲ್ಲಾ ಬಸ್‍ಗಳಿಗಿಂತಲೂ ವಿಭಿನ್ನವಾಗಿದೆ. ಆ ಬಸ್‍ನಲ್ಲಿ ಯಾವ ಪ್ರಯಾಣಿಕರೂ ಪ್ರಯಾಣ ಮಾಡಲಾರರು, ಯಾವ ಚಾಲಕರೂ ಮುಂದೆ ಓಡಿಸಲಾರರು. ಆ ಬಸ್ ನೋಡಿದರೆ ಎಂತವರೂ ವಿಷಾಧ ವ್ಯಕ್ತಪಡಿಸದೇ ಇರಲಾರರು. ಅದು ತನ್ನ ಸುತ್ತ ನಾಲ್ಕಾರು ಬ್ಯಾನರ್‍ಗಳನ್ನು ಹೊತ್ತು ನಿಂತಿದೆ. “ನನ್ನ ಯಾವ ತಪ್ಪಿಗೆ ಈ ಶಿಕ್ಷೆ? ತಪ್ಪೇ ಇಲ್ಲದ ಸೇವೆಗೆ ಕಲ್ಲಿನೇಟು, ಬೆಂಕಿಯ ಸ್ಪರ್ಶ. ಇದು ನ್ಯಾಯವೇ?”, “ಲಕ್ಷಾಂತರ ಜನರಿಗೆ ಸೇವೆ ಒದಗಿಸುತ್ತೇನೆ, ನನ್ನ ಯಾವ ತಪ್ಪಿಗೆ ಈ ಘೋರ ಶಿಕ್ಷೆ” ಎಂಬ ಮೊದಲಾದ ವಾಕ್ಯಗಳು ಆ ಬ್ಯಾನರ್‍ಗಳಲ್ಲಿವೆ. ಅಂದರೆ ಆ ಬಸ್‍ಗೆ ಬೆಂಕಿ ಹಚ್ಚಿ ಸುಟ್ಟು ಕರಕಲು ಮಾಡಲಾಗಿದೆ. ಸುಟ್ಟವರು ಯಾರು?

ಸರ್ಕಾರಿ ಬಸ್‍ಗಳು, ಸರ್ಕಾರದ ಕಟ್ಟಡಗಳಂತ ಸರ್ಕಾರಕ್ಕೆ ಸಂಬಂಧಿಸಿದ ಆಸ್ತಿಗಳು ಸಾರ್ವಜನಿಕರ ಆಸ್ತಿಗಳಲ್ಲವೇ? ಅವುಗಳನ್ನು ರಕ್ಷಿಸಿ ಉಳಿಸಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಲ್ಲವೇ? ಹೌದು ಇದೆಲ್ಲವೂ ಸತ್ಯ, ಉಳಿಸಿ ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಹಾಗಾದರೆ ಬಸ್‍ಗಳಿಗೆ ಬೆಂಕಿ ಹಚ್ಚಿದವರಾರು ಎಂಬ ಪ್ರಶ್ನೆಗೆ ತಟ್ ಬರುವ ಉತ್ತರ ಹೋರಾಟಗಾರರು ಎಂಬುದು. ಬೆಂಕಿ ಹಚ್ಚುವ ಆ ಹೋರಾಟಗಾರರು ಯಾರು?

ಜನರ ಪರವಾಗಿ, ಜನರ ಕಷ್ಟ-ನಷ್ಟಗಳ ಜೊತೆನಿಂತು, ದೇಶದ ಸಮಸ್ಯೆಗಳ ವಿರುದ್ಧ ಹೋರಾಟ ಮಾಡುವ ಯಾವ ಹೋರಾಟಗಾರರೂ, ಸಂಘಟನೆಯೂ ಬೆಂಕಿ ಹಚ್ಚಲಾರರು. ಏಕೆಂದರೆ ಅದು ದೇಶದ ಆಸ್ತಿ, ಅದನ್ನು ನಾಶ ಮಾಡುವುದು ನಮ್ಮ ಆಸ್ತಿಯನ್ನು ನಾವೇ ಹಾಳುಮಾಡಿದಂತೆ ಎಂಬುದನ್ನು ಅವರು ಅರಿತಿರುತ್ತಾರೆ. ಕರ್ನಾಟಕದಲ್ಲಿ ಬಸ್‍ಗಳಿಗೆ ಬೆಂಕಿ, ಕಲ್ಲು ತೂರಾಟ ಮುಂದಾದ ಹಾನಿಮಾಡುವ ಪ್ರಕರಣಗಳು ಹೆಚ್ಚಾಗಿ ಸದ್ದು ಮಾಡುವುದು ಕಾವೇರಿ ನೀರು ಹೋರಾಟದ ಸಂದರ್ಭದಲ್ಲಿ, ಆ ಹೋರಾಟದಲ್ಲಿ ಸಾರ್ವಜನಿಕ ಆಸ್ತಿಯನ್ನು ನಾಶಮಾಡುವವರು ಯಾರು. ರೈತರ ಪರ ಸದಾ ಚಳುವಳಿಯನ್ನು ಮುನ್ನಡೆಸುತ್ತಿರುವ ರೈತಸಂಘ, ಮೊದಲಾದ ಸಂಘಟನೆಗಳು ಸಾರ್ವಜನಿಕ ಆಸ್ತಿಯನ್ನು ನಾಶ ಮಾಡುವುದಿಲ್ಲ. ದಿನನಿತ್ಯ ಜನರ ಸಂಕಷ್ಟಗಳ ಪರ ಹೋರಾಟ ಮಾಡುವ ಸಂಘಟನೆಗಳು ಅಂದು ಬೆಂಕಿ ಹಚ್ಚಲು ಬರುವುದಿಲ್ಲ. ಅವು ಶಾಂತ ರೀತಿಯಲ್ಲಿ ಹೋರಾಟ ನಡೆಸುತ್ತಿರುತ್ತವೆ.

ಬೆಂಕಿ ಹಚ್ಚುವ ಹುಚ್ಚು ಉಮೇದಿಗೆ ಒಳಗಾಗುವುದು ಯಾವ ಜೀವಪರ ಕಾಳಜಿಯೂ ಇಲ್ಲದ, ರಾಜಕೀಯ ಪುಡಾರಿತನ ಮಾಡಿಕೊಂಡಿರುವ ಚೇಲಾಗಳಲ್ಲದೆ ಮತ್ತಾರಾಗಿರಲು ಸಾಧ್ಯ. ಏಕೆಂದರೆ ಬೆಂಕಿ ಹಚ್ಚಿದಾಕ್ಷಣ ಸಮಸ್ಯೆಗಳು ಬಗೆಹರಿದುಬಿಡುವುದಿಲ್ಲ.. ಆದೂ ಯಾರು ಯಾರದ್ದೋ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಉದ್ದೆರಶದಿಂದ ಇಂತಹ ಕೃತ್ಯಕ್ಕೆ ಕೈ ಹಾಕುತ್ತಾರೆ.

ಈ ರೀತಿ ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾಳು ಮಾಡುವುದರಿಂದ ಅದರ ನಷ್ಟ ಅನುಭವಿಸಬೇಕಾದವರೂ ಕೂಡ ನಾವೇ ಅನ್ನುವುದನ್ನು ಮರೆಯಬಾರದು. ಅವೆಲ್ಲವೂ ಪ್ರತಿಯೊಬ್ಬ ಜನಸಾಮಾನ್ಯರ ತೆರಿಗೆ ಹಣದಿಂದ ಕೊಂಡುತಂದ ಆಸ್ತಿಗಳು. ಅವುಗಳನ್ನು ನಾಶ ಮಾಡಿದಷ್ಟೂ ಮತ್ತೆ ನಮ್ಮ ತೆರಿಗೆ ಹಣಕ್ಕೆ ಸರ್ಕಾರ ಕೈ ಹಾಕುತ್ತದೆ ಎಂಬ ಎಚ್ಚರಿಕೆ ಇರಬೇಕು.

ಇನ್ನು ಸರ್ಕಾರಗಳು ಕೂಡ ಇಂತವುಗಳನ್ನು ನಿಗ್ರಹಿಸಲು ಕೇವಲ ಕಾನೂನುಗಳನ್ನು ತಂದರೆ ಸಾಲದು. ಜನರು  ಹಾಗೆ ಮಾಡುವುದರಿಂದ ಸರ್ಕಾರ ಮತ್ತು ಮಾಧ್ಯಮಗಳ ಗಮನಸೆಳೆಯಬಹುದು ಎಂದು ಭಾವಿಸಿದ್ದಾರೆ. ಕೆಲ ಟಿ.ವಿ ಮಾಧ್ಯಮಗಳಂತೂ ಹೋರಾಟ ಪ್ರತಿಭಟನೆ ಎಂದರೆ ಬಸ್‍ಗೆ ಕಲ್ಲು ಹೊಡೆಯುವುದು, ಬೆಂಕಿ ಹಚ್ಚುವುದು ಮಾತ್ರವೇ ಎಂಬಂತೆ ಮತ್ತಷ್ಟು ಜನರನ್ನು ಉದ್ರೇಕಿಸುತ್ತವೆ. ಹಾಗಾಗಿ ಸರ್ಕಾರಗಳು ತಮ್ಮ ನೀತಿ ಮತ್ತು ತೀರ್ಮಾನಗಳನ್ನು ತೆಗೆದುಕೊಳ್ಳುವಾಗ ಜನರನ್ನು ಒಳಗೊಂಡು ಅವರ ಅಭಿಪ್ರಾಯ ತೆಗೆದುಕೊಳ್ಳುವುದು ಮುಖ್ಯ..

ಎಲ್ಲಕ್ಕಿಂತ ಮುಖ್ಯವಾಗಿ ಜನರ ಪ್ರತಿಭಟನೆಗಳನ್ನು, ಅವರ ನೋವುಗಳನ್ನು ಸಾವಧಾನದಿಂದ ಕೇಳಿಸಿಕೊಳ್ಳುವ, ಪ್ರತಿಕ್ರಿಯಿಸುವ ಮನಸ್ಥಿತಿಯನ್ನು ಸರ್ಕಾರಗಳು ಹೊಂದಬೇಕು. ಅದು ಎಷ್ಟೇ ಚಿಕ್ಕ ಪ್ರತಿಭಟನೆಯಾದರೂ ಅದರ ಉದ್ದೇಶವನ್ನು ಸರ್ಕಾರಗಳು ಅರ್ಥಮಾಡಿಕೊಂಡರೆ ಆಗ ಜನರು ಸಹ ಹಿಂಸಾತ್ಮಕ ಪ್ರತಿಭಟನೆಗಳ ಮಾರ್ಗ ತುಳಿಯುವುದಿಲ್ಲ. ಆದರೆ ಸರ್ಕಾರಗಳೇ ಇಂತಹ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡುತ್ತಿರುವುದರಿಂದ ಇಂತಹ ಕ್ರೌರ್ಯಗಳು ಇನ್ನೂ ಹೆಚ್ಚಾಗುತ್ತಿವೆ.

ಸರ್ಕಾರ ಮತ್ತು ಜನಸಾಮಾನ್ಯರು ಇಬ್ಬರು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು. ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಹಾಗೆಯೇ ನಮ್ಮ ಪರಿಸರವನ್ನು ಸ್ವಚ್ಛ ಮತ್ತು ಸುಂದರವಾಗಿಟ್ಟುಕೊಳ್ಳಬೇಕು. ಆಗ ನಾವು ಮಾದರಿ ರಾಜ್ಯವಾಗಲು ಸಾಧ್ಯ..

ಸುಟ್ಟು ಕರಕಲಾದ ಬಸನ್ನು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮೆಜೆಸ್ಟಿಕ್‍ಗೆ ತಂದು ನಿಲ್ಲಿಸಿ ಅದರ ಮೇಲೆ ಬ್ಯಾನರ್ ಹಾಕಿ ಸಾರ್ವಜನಿಕ ಪ್ರದರ್ಶನಕ್ಕಿಟ್ಟಿದ್ದಾರೆ. ಇದನ್ನು ನೋಡಿದ ಜನರಿಗೆ ಅರ್ಥವಾಗಲಿ ಎಂದು.. ಈಗಲಾದರೂ ಎಚ್ಚೆತ್ತುಕೊಳ್ಳೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...