Homeಕರ್ನಾಟಕಬೆಂಕಿ ಹಚ್ಚುವ ಕಿಚ್ಚು ರಾಜಕೀಯ ಪ್ರೇರಿತವೇ ಹೊರತು ಜನಪರ ಕಾಳಜಿಯದ್ದಲ್ಲ

ಬೆಂಕಿ ಹಚ್ಚುವ ಕಿಚ್ಚು ರಾಜಕೀಯ ಪ್ರೇರಿತವೇ ಹೊರತು ಜನಪರ ಕಾಳಜಿಯದ್ದಲ್ಲ

- Advertisement -
- Advertisement -

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಒಂದು ಬಸ್ ನಿಂತಿದೆ. ಅದು ಎಲ್ಲಾ ಬಸ್‍ಗಳಿಗಿಂತಲೂ ವಿಭಿನ್ನವಾಗಿದೆ. ಆ ಬಸ್‍ನಲ್ಲಿ ಯಾವ ಪ್ರಯಾಣಿಕರೂ ಪ್ರಯಾಣ ಮಾಡಲಾರರು, ಯಾವ ಚಾಲಕರೂ ಮುಂದೆ ಓಡಿಸಲಾರರು. ಆ ಬಸ್ ನೋಡಿದರೆ ಎಂತವರೂ ವಿಷಾಧ ವ್ಯಕ್ತಪಡಿಸದೇ ಇರಲಾರರು. ಅದು ತನ್ನ ಸುತ್ತ ನಾಲ್ಕಾರು ಬ್ಯಾನರ್‍ಗಳನ್ನು ಹೊತ್ತು ನಿಂತಿದೆ. “ನನ್ನ ಯಾವ ತಪ್ಪಿಗೆ ಈ ಶಿಕ್ಷೆ? ತಪ್ಪೇ ಇಲ್ಲದ ಸೇವೆಗೆ ಕಲ್ಲಿನೇಟು, ಬೆಂಕಿಯ ಸ್ಪರ್ಶ. ಇದು ನ್ಯಾಯವೇ?”, “ಲಕ್ಷಾಂತರ ಜನರಿಗೆ ಸೇವೆ ಒದಗಿಸುತ್ತೇನೆ, ನನ್ನ ಯಾವ ತಪ್ಪಿಗೆ ಈ ಘೋರ ಶಿಕ್ಷೆ” ಎಂಬ ಮೊದಲಾದ ವಾಕ್ಯಗಳು ಆ ಬ್ಯಾನರ್‍ಗಳಲ್ಲಿವೆ. ಅಂದರೆ ಆ ಬಸ್‍ಗೆ ಬೆಂಕಿ ಹಚ್ಚಿ ಸುಟ್ಟು ಕರಕಲು ಮಾಡಲಾಗಿದೆ. ಸುಟ್ಟವರು ಯಾರು?

ಸರ್ಕಾರಿ ಬಸ್‍ಗಳು, ಸರ್ಕಾರದ ಕಟ್ಟಡಗಳಂತ ಸರ್ಕಾರಕ್ಕೆ ಸಂಬಂಧಿಸಿದ ಆಸ್ತಿಗಳು ಸಾರ್ವಜನಿಕರ ಆಸ್ತಿಗಳಲ್ಲವೇ? ಅವುಗಳನ್ನು ರಕ್ಷಿಸಿ ಉಳಿಸಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಲ್ಲವೇ? ಹೌದು ಇದೆಲ್ಲವೂ ಸತ್ಯ, ಉಳಿಸಿ ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಹಾಗಾದರೆ ಬಸ್‍ಗಳಿಗೆ ಬೆಂಕಿ ಹಚ್ಚಿದವರಾರು ಎಂಬ ಪ್ರಶ್ನೆಗೆ ತಟ್ ಬರುವ ಉತ್ತರ ಹೋರಾಟಗಾರರು ಎಂಬುದು. ಬೆಂಕಿ ಹಚ್ಚುವ ಆ ಹೋರಾಟಗಾರರು ಯಾರು?

ಜನರ ಪರವಾಗಿ, ಜನರ ಕಷ್ಟ-ನಷ್ಟಗಳ ಜೊತೆನಿಂತು, ದೇಶದ ಸಮಸ್ಯೆಗಳ ವಿರುದ್ಧ ಹೋರಾಟ ಮಾಡುವ ಯಾವ ಹೋರಾಟಗಾರರೂ, ಸಂಘಟನೆಯೂ ಬೆಂಕಿ ಹಚ್ಚಲಾರರು. ಏಕೆಂದರೆ ಅದು ದೇಶದ ಆಸ್ತಿ, ಅದನ್ನು ನಾಶ ಮಾಡುವುದು ನಮ್ಮ ಆಸ್ತಿಯನ್ನು ನಾವೇ ಹಾಳುಮಾಡಿದಂತೆ ಎಂಬುದನ್ನು ಅವರು ಅರಿತಿರುತ್ತಾರೆ. ಕರ್ನಾಟಕದಲ್ಲಿ ಬಸ್‍ಗಳಿಗೆ ಬೆಂಕಿ, ಕಲ್ಲು ತೂರಾಟ ಮುಂದಾದ ಹಾನಿಮಾಡುವ ಪ್ರಕರಣಗಳು ಹೆಚ್ಚಾಗಿ ಸದ್ದು ಮಾಡುವುದು ಕಾವೇರಿ ನೀರು ಹೋರಾಟದ ಸಂದರ್ಭದಲ್ಲಿ, ಆ ಹೋರಾಟದಲ್ಲಿ ಸಾರ್ವಜನಿಕ ಆಸ್ತಿಯನ್ನು ನಾಶಮಾಡುವವರು ಯಾರು. ರೈತರ ಪರ ಸದಾ ಚಳುವಳಿಯನ್ನು ಮುನ್ನಡೆಸುತ್ತಿರುವ ರೈತಸಂಘ, ಮೊದಲಾದ ಸಂಘಟನೆಗಳು ಸಾರ್ವಜನಿಕ ಆಸ್ತಿಯನ್ನು ನಾಶ ಮಾಡುವುದಿಲ್ಲ. ದಿನನಿತ್ಯ ಜನರ ಸಂಕಷ್ಟಗಳ ಪರ ಹೋರಾಟ ಮಾಡುವ ಸಂಘಟನೆಗಳು ಅಂದು ಬೆಂಕಿ ಹಚ್ಚಲು ಬರುವುದಿಲ್ಲ. ಅವು ಶಾಂತ ರೀತಿಯಲ್ಲಿ ಹೋರಾಟ ನಡೆಸುತ್ತಿರುತ್ತವೆ.

ಬೆಂಕಿ ಹಚ್ಚುವ ಹುಚ್ಚು ಉಮೇದಿಗೆ ಒಳಗಾಗುವುದು ಯಾವ ಜೀವಪರ ಕಾಳಜಿಯೂ ಇಲ್ಲದ, ರಾಜಕೀಯ ಪುಡಾರಿತನ ಮಾಡಿಕೊಂಡಿರುವ ಚೇಲಾಗಳಲ್ಲದೆ ಮತ್ತಾರಾಗಿರಲು ಸಾಧ್ಯ. ಏಕೆಂದರೆ ಬೆಂಕಿ ಹಚ್ಚಿದಾಕ್ಷಣ ಸಮಸ್ಯೆಗಳು ಬಗೆಹರಿದುಬಿಡುವುದಿಲ್ಲ.. ಆದೂ ಯಾರು ಯಾರದ್ದೋ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಉದ್ದೆರಶದಿಂದ ಇಂತಹ ಕೃತ್ಯಕ್ಕೆ ಕೈ ಹಾಕುತ್ತಾರೆ.

ಈ ರೀತಿ ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾಳು ಮಾಡುವುದರಿಂದ ಅದರ ನಷ್ಟ ಅನುಭವಿಸಬೇಕಾದವರೂ ಕೂಡ ನಾವೇ ಅನ್ನುವುದನ್ನು ಮರೆಯಬಾರದು. ಅವೆಲ್ಲವೂ ಪ್ರತಿಯೊಬ್ಬ ಜನಸಾಮಾನ್ಯರ ತೆರಿಗೆ ಹಣದಿಂದ ಕೊಂಡುತಂದ ಆಸ್ತಿಗಳು. ಅವುಗಳನ್ನು ನಾಶ ಮಾಡಿದಷ್ಟೂ ಮತ್ತೆ ನಮ್ಮ ತೆರಿಗೆ ಹಣಕ್ಕೆ ಸರ್ಕಾರ ಕೈ ಹಾಕುತ್ತದೆ ಎಂಬ ಎಚ್ಚರಿಕೆ ಇರಬೇಕು.

ಇನ್ನು ಸರ್ಕಾರಗಳು ಕೂಡ ಇಂತವುಗಳನ್ನು ನಿಗ್ರಹಿಸಲು ಕೇವಲ ಕಾನೂನುಗಳನ್ನು ತಂದರೆ ಸಾಲದು. ಜನರು  ಹಾಗೆ ಮಾಡುವುದರಿಂದ ಸರ್ಕಾರ ಮತ್ತು ಮಾಧ್ಯಮಗಳ ಗಮನಸೆಳೆಯಬಹುದು ಎಂದು ಭಾವಿಸಿದ್ದಾರೆ. ಕೆಲ ಟಿ.ವಿ ಮಾಧ್ಯಮಗಳಂತೂ ಹೋರಾಟ ಪ್ರತಿಭಟನೆ ಎಂದರೆ ಬಸ್‍ಗೆ ಕಲ್ಲು ಹೊಡೆಯುವುದು, ಬೆಂಕಿ ಹಚ್ಚುವುದು ಮಾತ್ರವೇ ಎಂಬಂತೆ ಮತ್ತಷ್ಟು ಜನರನ್ನು ಉದ್ರೇಕಿಸುತ್ತವೆ. ಹಾಗಾಗಿ ಸರ್ಕಾರಗಳು ತಮ್ಮ ನೀತಿ ಮತ್ತು ತೀರ್ಮಾನಗಳನ್ನು ತೆಗೆದುಕೊಳ್ಳುವಾಗ ಜನರನ್ನು ಒಳಗೊಂಡು ಅವರ ಅಭಿಪ್ರಾಯ ತೆಗೆದುಕೊಳ್ಳುವುದು ಮುಖ್ಯ..

ಎಲ್ಲಕ್ಕಿಂತ ಮುಖ್ಯವಾಗಿ ಜನರ ಪ್ರತಿಭಟನೆಗಳನ್ನು, ಅವರ ನೋವುಗಳನ್ನು ಸಾವಧಾನದಿಂದ ಕೇಳಿಸಿಕೊಳ್ಳುವ, ಪ್ರತಿಕ್ರಿಯಿಸುವ ಮನಸ್ಥಿತಿಯನ್ನು ಸರ್ಕಾರಗಳು ಹೊಂದಬೇಕು. ಅದು ಎಷ್ಟೇ ಚಿಕ್ಕ ಪ್ರತಿಭಟನೆಯಾದರೂ ಅದರ ಉದ್ದೇಶವನ್ನು ಸರ್ಕಾರಗಳು ಅರ್ಥಮಾಡಿಕೊಂಡರೆ ಆಗ ಜನರು ಸಹ ಹಿಂಸಾತ್ಮಕ ಪ್ರತಿಭಟನೆಗಳ ಮಾರ್ಗ ತುಳಿಯುವುದಿಲ್ಲ. ಆದರೆ ಸರ್ಕಾರಗಳೇ ಇಂತಹ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡುತ್ತಿರುವುದರಿಂದ ಇಂತಹ ಕ್ರೌರ್ಯಗಳು ಇನ್ನೂ ಹೆಚ್ಚಾಗುತ್ತಿವೆ.

ಸರ್ಕಾರ ಮತ್ತು ಜನಸಾಮಾನ್ಯರು ಇಬ್ಬರು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು. ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಹಾಗೆಯೇ ನಮ್ಮ ಪರಿಸರವನ್ನು ಸ್ವಚ್ಛ ಮತ್ತು ಸುಂದರವಾಗಿಟ್ಟುಕೊಳ್ಳಬೇಕು. ಆಗ ನಾವು ಮಾದರಿ ರಾಜ್ಯವಾಗಲು ಸಾಧ್ಯ..

ಸುಟ್ಟು ಕರಕಲಾದ ಬಸನ್ನು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮೆಜೆಸ್ಟಿಕ್‍ಗೆ ತಂದು ನಿಲ್ಲಿಸಿ ಅದರ ಮೇಲೆ ಬ್ಯಾನರ್ ಹಾಕಿ ಸಾರ್ವಜನಿಕ ಪ್ರದರ್ಶನಕ್ಕಿಟ್ಟಿದ್ದಾರೆ. ಇದನ್ನು ನೋಡಿದ ಜನರಿಗೆ ಅರ್ಥವಾಗಲಿ ಎಂದು.. ಈಗಲಾದರೂ ಎಚ್ಚೆತ್ತುಕೊಳ್ಳೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...