Homeಕರ್ನಾಟಕಬೆಂಕಿ ಹಚ್ಚುವ ಕಿಚ್ಚು ರಾಜಕೀಯ ಪ್ರೇರಿತವೇ ಹೊರತು ಜನಪರ ಕಾಳಜಿಯದ್ದಲ್ಲ

ಬೆಂಕಿ ಹಚ್ಚುವ ಕಿಚ್ಚು ರಾಜಕೀಯ ಪ್ರೇರಿತವೇ ಹೊರತು ಜನಪರ ಕಾಳಜಿಯದ್ದಲ್ಲ

- Advertisement -
- Advertisement -

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಒಂದು ಬಸ್ ನಿಂತಿದೆ. ಅದು ಎಲ್ಲಾ ಬಸ್‍ಗಳಿಗಿಂತಲೂ ವಿಭಿನ್ನವಾಗಿದೆ. ಆ ಬಸ್‍ನಲ್ಲಿ ಯಾವ ಪ್ರಯಾಣಿಕರೂ ಪ್ರಯಾಣ ಮಾಡಲಾರರು, ಯಾವ ಚಾಲಕರೂ ಮುಂದೆ ಓಡಿಸಲಾರರು. ಆ ಬಸ್ ನೋಡಿದರೆ ಎಂತವರೂ ವಿಷಾಧ ವ್ಯಕ್ತಪಡಿಸದೇ ಇರಲಾರರು. ಅದು ತನ್ನ ಸುತ್ತ ನಾಲ್ಕಾರು ಬ್ಯಾನರ್‍ಗಳನ್ನು ಹೊತ್ತು ನಿಂತಿದೆ. “ನನ್ನ ಯಾವ ತಪ್ಪಿಗೆ ಈ ಶಿಕ್ಷೆ? ತಪ್ಪೇ ಇಲ್ಲದ ಸೇವೆಗೆ ಕಲ್ಲಿನೇಟು, ಬೆಂಕಿಯ ಸ್ಪರ್ಶ. ಇದು ನ್ಯಾಯವೇ?”, “ಲಕ್ಷಾಂತರ ಜನರಿಗೆ ಸೇವೆ ಒದಗಿಸುತ್ತೇನೆ, ನನ್ನ ಯಾವ ತಪ್ಪಿಗೆ ಈ ಘೋರ ಶಿಕ್ಷೆ” ಎಂಬ ಮೊದಲಾದ ವಾಕ್ಯಗಳು ಆ ಬ್ಯಾನರ್‍ಗಳಲ್ಲಿವೆ. ಅಂದರೆ ಆ ಬಸ್‍ಗೆ ಬೆಂಕಿ ಹಚ್ಚಿ ಸುಟ್ಟು ಕರಕಲು ಮಾಡಲಾಗಿದೆ. ಸುಟ್ಟವರು ಯಾರು?

ಸರ್ಕಾರಿ ಬಸ್‍ಗಳು, ಸರ್ಕಾರದ ಕಟ್ಟಡಗಳಂತ ಸರ್ಕಾರಕ್ಕೆ ಸಂಬಂಧಿಸಿದ ಆಸ್ತಿಗಳು ಸಾರ್ವಜನಿಕರ ಆಸ್ತಿಗಳಲ್ಲವೇ? ಅವುಗಳನ್ನು ರಕ್ಷಿಸಿ ಉಳಿಸಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಲ್ಲವೇ? ಹೌದು ಇದೆಲ್ಲವೂ ಸತ್ಯ, ಉಳಿಸಿ ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಹಾಗಾದರೆ ಬಸ್‍ಗಳಿಗೆ ಬೆಂಕಿ ಹಚ್ಚಿದವರಾರು ಎಂಬ ಪ್ರಶ್ನೆಗೆ ತಟ್ ಬರುವ ಉತ್ತರ ಹೋರಾಟಗಾರರು ಎಂಬುದು. ಬೆಂಕಿ ಹಚ್ಚುವ ಆ ಹೋರಾಟಗಾರರು ಯಾರು?

ಜನರ ಪರವಾಗಿ, ಜನರ ಕಷ್ಟ-ನಷ್ಟಗಳ ಜೊತೆನಿಂತು, ದೇಶದ ಸಮಸ್ಯೆಗಳ ವಿರುದ್ಧ ಹೋರಾಟ ಮಾಡುವ ಯಾವ ಹೋರಾಟಗಾರರೂ, ಸಂಘಟನೆಯೂ ಬೆಂಕಿ ಹಚ್ಚಲಾರರು. ಏಕೆಂದರೆ ಅದು ದೇಶದ ಆಸ್ತಿ, ಅದನ್ನು ನಾಶ ಮಾಡುವುದು ನಮ್ಮ ಆಸ್ತಿಯನ್ನು ನಾವೇ ಹಾಳುಮಾಡಿದಂತೆ ಎಂಬುದನ್ನು ಅವರು ಅರಿತಿರುತ್ತಾರೆ. ಕರ್ನಾಟಕದಲ್ಲಿ ಬಸ್‍ಗಳಿಗೆ ಬೆಂಕಿ, ಕಲ್ಲು ತೂರಾಟ ಮುಂದಾದ ಹಾನಿಮಾಡುವ ಪ್ರಕರಣಗಳು ಹೆಚ್ಚಾಗಿ ಸದ್ದು ಮಾಡುವುದು ಕಾವೇರಿ ನೀರು ಹೋರಾಟದ ಸಂದರ್ಭದಲ್ಲಿ, ಆ ಹೋರಾಟದಲ್ಲಿ ಸಾರ್ವಜನಿಕ ಆಸ್ತಿಯನ್ನು ನಾಶಮಾಡುವವರು ಯಾರು. ರೈತರ ಪರ ಸದಾ ಚಳುವಳಿಯನ್ನು ಮುನ್ನಡೆಸುತ್ತಿರುವ ರೈತಸಂಘ, ಮೊದಲಾದ ಸಂಘಟನೆಗಳು ಸಾರ್ವಜನಿಕ ಆಸ್ತಿಯನ್ನು ನಾಶ ಮಾಡುವುದಿಲ್ಲ. ದಿನನಿತ್ಯ ಜನರ ಸಂಕಷ್ಟಗಳ ಪರ ಹೋರಾಟ ಮಾಡುವ ಸಂಘಟನೆಗಳು ಅಂದು ಬೆಂಕಿ ಹಚ್ಚಲು ಬರುವುದಿಲ್ಲ. ಅವು ಶಾಂತ ರೀತಿಯಲ್ಲಿ ಹೋರಾಟ ನಡೆಸುತ್ತಿರುತ್ತವೆ.

ಬೆಂಕಿ ಹಚ್ಚುವ ಹುಚ್ಚು ಉಮೇದಿಗೆ ಒಳಗಾಗುವುದು ಯಾವ ಜೀವಪರ ಕಾಳಜಿಯೂ ಇಲ್ಲದ, ರಾಜಕೀಯ ಪುಡಾರಿತನ ಮಾಡಿಕೊಂಡಿರುವ ಚೇಲಾಗಳಲ್ಲದೆ ಮತ್ತಾರಾಗಿರಲು ಸಾಧ್ಯ. ಏಕೆಂದರೆ ಬೆಂಕಿ ಹಚ್ಚಿದಾಕ್ಷಣ ಸಮಸ್ಯೆಗಳು ಬಗೆಹರಿದುಬಿಡುವುದಿಲ್ಲ.. ಆದೂ ಯಾರು ಯಾರದ್ದೋ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಉದ್ದೆರಶದಿಂದ ಇಂತಹ ಕೃತ್ಯಕ್ಕೆ ಕೈ ಹಾಕುತ್ತಾರೆ.

ಈ ರೀತಿ ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾಳು ಮಾಡುವುದರಿಂದ ಅದರ ನಷ್ಟ ಅನುಭವಿಸಬೇಕಾದವರೂ ಕೂಡ ನಾವೇ ಅನ್ನುವುದನ್ನು ಮರೆಯಬಾರದು. ಅವೆಲ್ಲವೂ ಪ್ರತಿಯೊಬ್ಬ ಜನಸಾಮಾನ್ಯರ ತೆರಿಗೆ ಹಣದಿಂದ ಕೊಂಡುತಂದ ಆಸ್ತಿಗಳು. ಅವುಗಳನ್ನು ನಾಶ ಮಾಡಿದಷ್ಟೂ ಮತ್ತೆ ನಮ್ಮ ತೆರಿಗೆ ಹಣಕ್ಕೆ ಸರ್ಕಾರ ಕೈ ಹಾಕುತ್ತದೆ ಎಂಬ ಎಚ್ಚರಿಕೆ ಇರಬೇಕು.

ಇನ್ನು ಸರ್ಕಾರಗಳು ಕೂಡ ಇಂತವುಗಳನ್ನು ನಿಗ್ರಹಿಸಲು ಕೇವಲ ಕಾನೂನುಗಳನ್ನು ತಂದರೆ ಸಾಲದು. ಜನರು  ಹಾಗೆ ಮಾಡುವುದರಿಂದ ಸರ್ಕಾರ ಮತ್ತು ಮಾಧ್ಯಮಗಳ ಗಮನಸೆಳೆಯಬಹುದು ಎಂದು ಭಾವಿಸಿದ್ದಾರೆ. ಕೆಲ ಟಿ.ವಿ ಮಾಧ್ಯಮಗಳಂತೂ ಹೋರಾಟ ಪ್ರತಿಭಟನೆ ಎಂದರೆ ಬಸ್‍ಗೆ ಕಲ್ಲು ಹೊಡೆಯುವುದು, ಬೆಂಕಿ ಹಚ್ಚುವುದು ಮಾತ್ರವೇ ಎಂಬಂತೆ ಮತ್ತಷ್ಟು ಜನರನ್ನು ಉದ್ರೇಕಿಸುತ್ತವೆ. ಹಾಗಾಗಿ ಸರ್ಕಾರಗಳು ತಮ್ಮ ನೀತಿ ಮತ್ತು ತೀರ್ಮಾನಗಳನ್ನು ತೆಗೆದುಕೊಳ್ಳುವಾಗ ಜನರನ್ನು ಒಳಗೊಂಡು ಅವರ ಅಭಿಪ್ರಾಯ ತೆಗೆದುಕೊಳ್ಳುವುದು ಮುಖ್ಯ..

ಎಲ್ಲಕ್ಕಿಂತ ಮುಖ್ಯವಾಗಿ ಜನರ ಪ್ರತಿಭಟನೆಗಳನ್ನು, ಅವರ ನೋವುಗಳನ್ನು ಸಾವಧಾನದಿಂದ ಕೇಳಿಸಿಕೊಳ್ಳುವ, ಪ್ರತಿಕ್ರಿಯಿಸುವ ಮನಸ್ಥಿತಿಯನ್ನು ಸರ್ಕಾರಗಳು ಹೊಂದಬೇಕು. ಅದು ಎಷ್ಟೇ ಚಿಕ್ಕ ಪ್ರತಿಭಟನೆಯಾದರೂ ಅದರ ಉದ್ದೇಶವನ್ನು ಸರ್ಕಾರಗಳು ಅರ್ಥಮಾಡಿಕೊಂಡರೆ ಆಗ ಜನರು ಸಹ ಹಿಂಸಾತ್ಮಕ ಪ್ರತಿಭಟನೆಗಳ ಮಾರ್ಗ ತುಳಿಯುವುದಿಲ್ಲ. ಆದರೆ ಸರ್ಕಾರಗಳೇ ಇಂತಹ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡುತ್ತಿರುವುದರಿಂದ ಇಂತಹ ಕ್ರೌರ್ಯಗಳು ಇನ್ನೂ ಹೆಚ್ಚಾಗುತ್ತಿವೆ.

ಸರ್ಕಾರ ಮತ್ತು ಜನಸಾಮಾನ್ಯರು ಇಬ್ಬರು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು. ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಹಾಗೆಯೇ ನಮ್ಮ ಪರಿಸರವನ್ನು ಸ್ವಚ್ಛ ಮತ್ತು ಸುಂದರವಾಗಿಟ್ಟುಕೊಳ್ಳಬೇಕು. ಆಗ ನಾವು ಮಾದರಿ ರಾಜ್ಯವಾಗಲು ಸಾಧ್ಯ..

ಸುಟ್ಟು ಕರಕಲಾದ ಬಸನ್ನು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮೆಜೆಸ್ಟಿಕ್‍ಗೆ ತಂದು ನಿಲ್ಲಿಸಿ ಅದರ ಮೇಲೆ ಬ್ಯಾನರ್ ಹಾಕಿ ಸಾರ್ವಜನಿಕ ಪ್ರದರ್ಶನಕ್ಕಿಟ್ಟಿದ್ದಾರೆ. ಇದನ್ನು ನೋಡಿದ ಜನರಿಗೆ ಅರ್ಥವಾಗಲಿ ಎಂದು.. ಈಗಲಾದರೂ ಎಚ್ಚೆತ್ತುಕೊಳ್ಳೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...