Homeಕರ್ನಾಟಕಬೆಂಕಿ ಹಚ್ಚುವ ಕಿಚ್ಚು ರಾಜಕೀಯ ಪ್ರೇರಿತವೇ ಹೊರತು ಜನಪರ ಕಾಳಜಿಯದ್ದಲ್ಲ

ಬೆಂಕಿ ಹಚ್ಚುವ ಕಿಚ್ಚು ರಾಜಕೀಯ ಪ್ರೇರಿತವೇ ಹೊರತು ಜನಪರ ಕಾಳಜಿಯದ್ದಲ್ಲ

- Advertisement -
- Advertisement -

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಒಂದು ಬಸ್ ನಿಂತಿದೆ. ಅದು ಎಲ್ಲಾ ಬಸ್‍ಗಳಿಗಿಂತಲೂ ವಿಭಿನ್ನವಾಗಿದೆ. ಆ ಬಸ್‍ನಲ್ಲಿ ಯಾವ ಪ್ರಯಾಣಿಕರೂ ಪ್ರಯಾಣ ಮಾಡಲಾರರು, ಯಾವ ಚಾಲಕರೂ ಮುಂದೆ ಓಡಿಸಲಾರರು. ಆ ಬಸ್ ನೋಡಿದರೆ ಎಂತವರೂ ವಿಷಾಧ ವ್ಯಕ್ತಪಡಿಸದೇ ಇರಲಾರರು. ಅದು ತನ್ನ ಸುತ್ತ ನಾಲ್ಕಾರು ಬ್ಯಾನರ್‍ಗಳನ್ನು ಹೊತ್ತು ನಿಂತಿದೆ. “ನನ್ನ ಯಾವ ತಪ್ಪಿಗೆ ಈ ಶಿಕ್ಷೆ? ತಪ್ಪೇ ಇಲ್ಲದ ಸೇವೆಗೆ ಕಲ್ಲಿನೇಟು, ಬೆಂಕಿಯ ಸ್ಪರ್ಶ. ಇದು ನ್ಯಾಯವೇ?”, “ಲಕ್ಷಾಂತರ ಜನರಿಗೆ ಸೇವೆ ಒದಗಿಸುತ್ತೇನೆ, ನನ್ನ ಯಾವ ತಪ್ಪಿಗೆ ಈ ಘೋರ ಶಿಕ್ಷೆ” ಎಂಬ ಮೊದಲಾದ ವಾಕ್ಯಗಳು ಆ ಬ್ಯಾನರ್‍ಗಳಲ್ಲಿವೆ. ಅಂದರೆ ಆ ಬಸ್‍ಗೆ ಬೆಂಕಿ ಹಚ್ಚಿ ಸುಟ್ಟು ಕರಕಲು ಮಾಡಲಾಗಿದೆ. ಸುಟ್ಟವರು ಯಾರು?

ಸರ್ಕಾರಿ ಬಸ್‍ಗಳು, ಸರ್ಕಾರದ ಕಟ್ಟಡಗಳಂತ ಸರ್ಕಾರಕ್ಕೆ ಸಂಬಂಧಿಸಿದ ಆಸ್ತಿಗಳು ಸಾರ್ವಜನಿಕರ ಆಸ್ತಿಗಳಲ್ಲವೇ? ಅವುಗಳನ್ನು ರಕ್ಷಿಸಿ ಉಳಿಸಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಲ್ಲವೇ? ಹೌದು ಇದೆಲ್ಲವೂ ಸತ್ಯ, ಉಳಿಸಿ ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಹಾಗಾದರೆ ಬಸ್‍ಗಳಿಗೆ ಬೆಂಕಿ ಹಚ್ಚಿದವರಾರು ಎಂಬ ಪ್ರಶ್ನೆಗೆ ತಟ್ ಬರುವ ಉತ್ತರ ಹೋರಾಟಗಾರರು ಎಂಬುದು. ಬೆಂಕಿ ಹಚ್ಚುವ ಆ ಹೋರಾಟಗಾರರು ಯಾರು?

ಜನರ ಪರವಾಗಿ, ಜನರ ಕಷ್ಟ-ನಷ್ಟಗಳ ಜೊತೆನಿಂತು, ದೇಶದ ಸಮಸ್ಯೆಗಳ ವಿರುದ್ಧ ಹೋರಾಟ ಮಾಡುವ ಯಾವ ಹೋರಾಟಗಾರರೂ, ಸಂಘಟನೆಯೂ ಬೆಂಕಿ ಹಚ್ಚಲಾರರು. ಏಕೆಂದರೆ ಅದು ದೇಶದ ಆಸ್ತಿ, ಅದನ್ನು ನಾಶ ಮಾಡುವುದು ನಮ್ಮ ಆಸ್ತಿಯನ್ನು ನಾವೇ ಹಾಳುಮಾಡಿದಂತೆ ಎಂಬುದನ್ನು ಅವರು ಅರಿತಿರುತ್ತಾರೆ. ಕರ್ನಾಟಕದಲ್ಲಿ ಬಸ್‍ಗಳಿಗೆ ಬೆಂಕಿ, ಕಲ್ಲು ತೂರಾಟ ಮುಂದಾದ ಹಾನಿಮಾಡುವ ಪ್ರಕರಣಗಳು ಹೆಚ್ಚಾಗಿ ಸದ್ದು ಮಾಡುವುದು ಕಾವೇರಿ ನೀರು ಹೋರಾಟದ ಸಂದರ್ಭದಲ್ಲಿ, ಆ ಹೋರಾಟದಲ್ಲಿ ಸಾರ್ವಜನಿಕ ಆಸ್ತಿಯನ್ನು ನಾಶಮಾಡುವವರು ಯಾರು. ರೈತರ ಪರ ಸದಾ ಚಳುವಳಿಯನ್ನು ಮುನ್ನಡೆಸುತ್ತಿರುವ ರೈತಸಂಘ, ಮೊದಲಾದ ಸಂಘಟನೆಗಳು ಸಾರ್ವಜನಿಕ ಆಸ್ತಿಯನ್ನು ನಾಶ ಮಾಡುವುದಿಲ್ಲ. ದಿನನಿತ್ಯ ಜನರ ಸಂಕಷ್ಟಗಳ ಪರ ಹೋರಾಟ ಮಾಡುವ ಸಂಘಟನೆಗಳು ಅಂದು ಬೆಂಕಿ ಹಚ್ಚಲು ಬರುವುದಿಲ್ಲ. ಅವು ಶಾಂತ ರೀತಿಯಲ್ಲಿ ಹೋರಾಟ ನಡೆಸುತ್ತಿರುತ್ತವೆ.

ಬೆಂಕಿ ಹಚ್ಚುವ ಹುಚ್ಚು ಉಮೇದಿಗೆ ಒಳಗಾಗುವುದು ಯಾವ ಜೀವಪರ ಕಾಳಜಿಯೂ ಇಲ್ಲದ, ರಾಜಕೀಯ ಪುಡಾರಿತನ ಮಾಡಿಕೊಂಡಿರುವ ಚೇಲಾಗಳಲ್ಲದೆ ಮತ್ತಾರಾಗಿರಲು ಸಾಧ್ಯ. ಏಕೆಂದರೆ ಬೆಂಕಿ ಹಚ್ಚಿದಾಕ್ಷಣ ಸಮಸ್ಯೆಗಳು ಬಗೆಹರಿದುಬಿಡುವುದಿಲ್ಲ.. ಆದೂ ಯಾರು ಯಾರದ್ದೋ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಉದ್ದೆರಶದಿಂದ ಇಂತಹ ಕೃತ್ಯಕ್ಕೆ ಕೈ ಹಾಕುತ್ತಾರೆ.

ಈ ರೀತಿ ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾಳು ಮಾಡುವುದರಿಂದ ಅದರ ನಷ್ಟ ಅನುಭವಿಸಬೇಕಾದವರೂ ಕೂಡ ನಾವೇ ಅನ್ನುವುದನ್ನು ಮರೆಯಬಾರದು. ಅವೆಲ್ಲವೂ ಪ್ರತಿಯೊಬ್ಬ ಜನಸಾಮಾನ್ಯರ ತೆರಿಗೆ ಹಣದಿಂದ ಕೊಂಡುತಂದ ಆಸ್ತಿಗಳು. ಅವುಗಳನ್ನು ನಾಶ ಮಾಡಿದಷ್ಟೂ ಮತ್ತೆ ನಮ್ಮ ತೆರಿಗೆ ಹಣಕ್ಕೆ ಸರ್ಕಾರ ಕೈ ಹಾಕುತ್ತದೆ ಎಂಬ ಎಚ್ಚರಿಕೆ ಇರಬೇಕು.

ಇನ್ನು ಸರ್ಕಾರಗಳು ಕೂಡ ಇಂತವುಗಳನ್ನು ನಿಗ್ರಹಿಸಲು ಕೇವಲ ಕಾನೂನುಗಳನ್ನು ತಂದರೆ ಸಾಲದು. ಜನರು  ಹಾಗೆ ಮಾಡುವುದರಿಂದ ಸರ್ಕಾರ ಮತ್ತು ಮಾಧ್ಯಮಗಳ ಗಮನಸೆಳೆಯಬಹುದು ಎಂದು ಭಾವಿಸಿದ್ದಾರೆ. ಕೆಲ ಟಿ.ವಿ ಮಾಧ್ಯಮಗಳಂತೂ ಹೋರಾಟ ಪ್ರತಿಭಟನೆ ಎಂದರೆ ಬಸ್‍ಗೆ ಕಲ್ಲು ಹೊಡೆಯುವುದು, ಬೆಂಕಿ ಹಚ್ಚುವುದು ಮಾತ್ರವೇ ಎಂಬಂತೆ ಮತ್ತಷ್ಟು ಜನರನ್ನು ಉದ್ರೇಕಿಸುತ್ತವೆ. ಹಾಗಾಗಿ ಸರ್ಕಾರಗಳು ತಮ್ಮ ನೀತಿ ಮತ್ತು ತೀರ್ಮಾನಗಳನ್ನು ತೆಗೆದುಕೊಳ್ಳುವಾಗ ಜನರನ್ನು ಒಳಗೊಂಡು ಅವರ ಅಭಿಪ್ರಾಯ ತೆಗೆದುಕೊಳ್ಳುವುದು ಮುಖ್ಯ..

ಎಲ್ಲಕ್ಕಿಂತ ಮುಖ್ಯವಾಗಿ ಜನರ ಪ್ರತಿಭಟನೆಗಳನ್ನು, ಅವರ ನೋವುಗಳನ್ನು ಸಾವಧಾನದಿಂದ ಕೇಳಿಸಿಕೊಳ್ಳುವ, ಪ್ರತಿಕ್ರಿಯಿಸುವ ಮನಸ್ಥಿತಿಯನ್ನು ಸರ್ಕಾರಗಳು ಹೊಂದಬೇಕು. ಅದು ಎಷ್ಟೇ ಚಿಕ್ಕ ಪ್ರತಿಭಟನೆಯಾದರೂ ಅದರ ಉದ್ದೇಶವನ್ನು ಸರ್ಕಾರಗಳು ಅರ್ಥಮಾಡಿಕೊಂಡರೆ ಆಗ ಜನರು ಸಹ ಹಿಂಸಾತ್ಮಕ ಪ್ರತಿಭಟನೆಗಳ ಮಾರ್ಗ ತುಳಿಯುವುದಿಲ್ಲ. ಆದರೆ ಸರ್ಕಾರಗಳೇ ಇಂತಹ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡುತ್ತಿರುವುದರಿಂದ ಇಂತಹ ಕ್ರೌರ್ಯಗಳು ಇನ್ನೂ ಹೆಚ್ಚಾಗುತ್ತಿವೆ.

ಸರ್ಕಾರ ಮತ್ತು ಜನಸಾಮಾನ್ಯರು ಇಬ್ಬರು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು. ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಹಾಗೆಯೇ ನಮ್ಮ ಪರಿಸರವನ್ನು ಸ್ವಚ್ಛ ಮತ್ತು ಸುಂದರವಾಗಿಟ್ಟುಕೊಳ್ಳಬೇಕು. ಆಗ ನಾವು ಮಾದರಿ ರಾಜ್ಯವಾಗಲು ಸಾಧ್ಯ..

ಸುಟ್ಟು ಕರಕಲಾದ ಬಸನ್ನು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮೆಜೆಸ್ಟಿಕ್‍ಗೆ ತಂದು ನಿಲ್ಲಿಸಿ ಅದರ ಮೇಲೆ ಬ್ಯಾನರ್ ಹಾಕಿ ಸಾರ್ವಜನಿಕ ಪ್ರದರ್ಶನಕ್ಕಿಟ್ಟಿದ್ದಾರೆ. ಇದನ್ನು ನೋಡಿದ ಜನರಿಗೆ ಅರ್ಥವಾಗಲಿ ಎಂದು.. ಈಗಲಾದರೂ ಎಚ್ಚೆತ್ತುಕೊಳ್ಳೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...