Homeಕರ್ನಾಟಕಬೆಂಕಿ ಹಚ್ಚುವ ಕಿಚ್ಚು ರಾಜಕೀಯ ಪ್ರೇರಿತವೇ ಹೊರತು ಜನಪರ ಕಾಳಜಿಯದ್ದಲ್ಲ

ಬೆಂಕಿ ಹಚ್ಚುವ ಕಿಚ್ಚು ರಾಜಕೀಯ ಪ್ರೇರಿತವೇ ಹೊರತು ಜನಪರ ಕಾಳಜಿಯದ್ದಲ್ಲ

- Advertisement -
- Advertisement -

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಒಂದು ಬಸ್ ನಿಂತಿದೆ. ಅದು ಎಲ್ಲಾ ಬಸ್‍ಗಳಿಗಿಂತಲೂ ವಿಭಿನ್ನವಾಗಿದೆ. ಆ ಬಸ್‍ನಲ್ಲಿ ಯಾವ ಪ್ರಯಾಣಿಕರೂ ಪ್ರಯಾಣ ಮಾಡಲಾರರು, ಯಾವ ಚಾಲಕರೂ ಮುಂದೆ ಓಡಿಸಲಾರರು. ಆ ಬಸ್ ನೋಡಿದರೆ ಎಂತವರೂ ವಿಷಾಧ ವ್ಯಕ್ತಪಡಿಸದೇ ಇರಲಾರರು. ಅದು ತನ್ನ ಸುತ್ತ ನಾಲ್ಕಾರು ಬ್ಯಾನರ್‍ಗಳನ್ನು ಹೊತ್ತು ನಿಂತಿದೆ. “ನನ್ನ ಯಾವ ತಪ್ಪಿಗೆ ಈ ಶಿಕ್ಷೆ? ತಪ್ಪೇ ಇಲ್ಲದ ಸೇವೆಗೆ ಕಲ್ಲಿನೇಟು, ಬೆಂಕಿಯ ಸ್ಪರ್ಶ. ಇದು ನ್ಯಾಯವೇ?”, “ಲಕ್ಷಾಂತರ ಜನರಿಗೆ ಸೇವೆ ಒದಗಿಸುತ್ತೇನೆ, ನನ್ನ ಯಾವ ತಪ್ಪಿಗೆ ಈ ಘೋರ ಶಿಕ್ಷೆ” ಎಂಬ ಮೊದಲಾದ ವಾಕ್ಯಗಳು ಆ ಬ್ಯಾನರ್‍ಗಳಲ್ಲಿವೆ. ಅಂದರೆ ಆ ಬಸ್‍ಗೆ ಬೆಂಕಿ ಹಚ್ಚಿ ಸುಟ್ಟು ಕರಕಲು ಮಾಡಲಾಗಿದೆ. ಸುಟ್ಟವರು ಯಾರು?

ಸರ್ಕಾರಿ ಬಸ್‍ಗಳು, ಸರ್ಕಾರದ ಕಟ್ಟಡಗಳಂತ ಸರ್ಕಾರಕ್ಕೆ ಸಂಬಂಧಿಸಿದ ಆಸ್ತಿಗಳು ಸಾರ್ವಜನಿಕರ ಆಸ್ತಿಗಳಲ್ಲವೇ? ಅವುಗಳನ್ನು ರಕ್ಷಿಸಿ ಉಳಿಸಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಲ್ಲವೇ? ಹೌದು ಇದೆಲ್ಲವೂ ಸತ್ಯ, ಉಳಿಸಿ ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಹಾಗಾದರೆ ಬಸ್‍ಗಳಿಗೆ ಬೆಂಕಿ ಹಚ್ಚಿದವರಾರು ಎಂಬ ಪ್ರಶ್ನೆಗೆ ತಟ್ ಬರುವ ಉತ್ತರ ಹೋರಾಟಗಾರರು ಎಂಬುದು. ಬೆಂಕಿ ಹಚ್ಚುವ ಆ ಹೋರಾಟಗಾರರು ಯಾರು?

ಜನರ ಪರವಾಗಿ, ಜನರ ಕಷ್ಟ-ನಷ್ಟಗಳ ಜೊತೆನಿಂತು, ದೇಶದ ಸಮಸ್ಯೆಗಳ ವಿರುದ್ಧ ಹೋರಾಟ ಮಾಡುವ ಯಾವ ಹೋರಾಟಗಾರರೂ, ಸಂಘಟನೆಯೂ ಬೆಂಕಿ ಹಚ್ಚಲಾರರು. ಏಕೆಂದರೆ ಅದು ದೇಶದ ಆಸ್ತಿ, ಅದನ್ನು ನಾಶ ಮಾಡುವುದು ನಮ್ಮ ಆಸ್ತಿಯನ್ನು ನಾವೇ ಹಾಳುಮಾಡಿದಂತೆ ಎಂಬುದನ್ನು ಅವರು ಅರಿತಿರುತ್ತಾರೆ. ಕರ್ನಾಟಕದಲ್ಲಿ ಬಸ್‍ಗಳಿಗೆ ಬೆಂಕಿ, ಕಲ್ಲು ತೂರಾಟ ಮುಂದಾದ ಹಾನಿಮಾಡುವ ಪ್ರಕರಣಗಳು ಹೆಚ್ಚಾಗಿ ಸದ್ದು ಮಾಡುವುದು ಕಾವೇರಿ ನೀರು ಹೋರಾಟದ ಸಂದರ್ಭದಲ್ಲಿ, ಆ ಹೋರಾಟದಲ್ಲಿ ಸಾರ್ವಜನಿಕ ಆಸ್ತಿಯನ್ನು ನಾಶಮಾಡುವವರು ಯಾರು. ರೈತರ ಪರ ಸದಾ ಚಳುವಳಿಯನ್ನು ಮುನ್ನಡೆಸುತ್ತಿರುವ ರೈತಸಂಘ, ಮೊದಲಾದ ಸಂಘಟನೆಗಳು ಸಾರ್ವಜನಿಕ ಆಸ್ತಿಯನ್ನು ನಾಶ ಮಾಡುವುದಿಲ್ಲ. ದಿನನಿತ್ಯ ಜನರ ಸಂಕಷ್ಟಗಳ ಪರ ಹೋರಾಟ ಮಾಡುವ ಸಂಘಟನೆಗಳು ಅಂದು ಬೆಂಕಿ ಹಚ್ಚಲು ಬರುವುದಿಲ್ಲ. ಅವು ಶಾಂತ ರೀತಿಯಲ್ಲಿ ಹೋರಾಟ ನಡೆಸುತ್ತಿರುತ್ತವೆ.

ಬೆಂಕಿ ಹಚ್ಚುವ ಹುಚ್ಚು ಉಮೇದಿಗೆ ಒಳಗಾಗುವುದು ಯಾವ ಜೀವಪರ ಕಾಳಜಿಯೂ ಇಲ್ಲದ, ರಾಜಕೀಯ ಪುಡಾರಿತನ ಮಾಡಿಕೊಂಡಿರುವ ಚೇಲಾಗಳಲ್ಲದೆ ಮತ್ತಾರಾಗಿರಲು ಸಾಧ್ಯ. ಏಕೆಂದರೆ ಬೆಂಕಿ ಹಚ್ಚಿದಾಕ್ಷಣ ಸಮಸ್ಯೆಗಳು ಬಗೆಹರಿದುಬಿಡುವುದಿಲ್ಲ.. ಆದೂ ಯಾರು ಯಾರದ್ದೋ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಉದ್ದೆರಶದಿಂದ ಇಂತಹ ಕೃತ್ಯಕ್ಕೆ ಕೈ ಹಾಕುತ್ತಾರೆ.

ಈ ರೀತಿ ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾಳು ಮಾಡುವುದರಿಂದ ಅದರ ನಷ್ಟ ಅನುಭವಿಸಬೇಕಾದವರೂ ಕೂಡ ನಾವೇ ಅನ್ನುವುದನ್ನು ಮರೆಯಬಾರದು. ಅವೆಲ್ಲವೂ ಪ್ರತಿಯೊಬ್ಬ ಜನಸಾಮಾನ್ಯರ ತೆರಿಗೆ ಹಣದಿಂದ ಕೊಂಡುತಂದ ಆಸ್ತಿಗಳು. ಅವುಗಳನ್ನು ನಾಶ ಮಾಡಿದಷ್ಟೂ ಮತ್ತೆ ನಮ್ಮ ತೆರಿಗೆ ಹಣಕ್ಕೆ ಸರ್ಕಾರ ಕೈ ಹಾಕುತ್ತದೆ ಎಂಬ ಎಚ್ಚರಿಕೆ ಇರಬೇಕು.

ಇನ್ನು ಸರ್ಕಾರಗಳು ಕೂಡ ಇಂತವುಗಳನ್ನು ನಿಗ್ರಹಿಸಲು ಕೇವಲ ಕಾನೂನುಗಳನ್ನು ತಂದರೆ ಸಾಲದು. ಜನರು  ಹಾಗೆ ಮಾಡುವುದರಿಂದ ಸರ್ಕಾರ ಮತ್ತು ಮಾಧ್ಯಮಗಳ ಗಮನಸೆಳೆಯಬಹುದು ಎಂದು ಭಾವಿಸಿದ್ದಾರೆ. ಕೆಲ ಟಿ.ವಿ ಮಾಧ್ಯಮಗಳಂತೂ ಹೋರಾಟ ಪ್ರತಿಭಟನೆ ಎಂದರೆ ಬಸ್‍ಗೆ ಕಲ್ಲು ಹೊಡೆಯುವುದು, ಬೆಂಕಿ ಹಚ್ಚುವುದು ಮಾತ್ರವೇ ಎಂಬಂತೆ ಮತ್ತಷ್ಟು ಜನರನ್ನು ಉದ್ರೇಕಿಸುತ್ತವೆ. ಹಾಗಾಗಿ ಸರ್ಕಾರಗಳು ತಮ್ಮ ನೀತಿ ಮತ್ತು ತೀರ್ಮಾನಗಳನ್ನು ತೆಗೆದುಕೊಳ್ಳುವಾಗ ಜನರನ್ನು ಒಳಗೊಂಡು ಅವರ ಅಭಿಪ್ರಾಯ ತೆಗೆದುಕೊಳ್ಳುವುದು ಮುಖ್ಯ..

ಎಲ್ಲಕ್ಕಿಂತ ಮುಖ್ಯವಾಗಿ ಜನರ ಪ್ರತಿಭಟನೆಗಳನ್ನು, ಅವರ ನೋವುಗಳನ್ನು ಸಾವಧಾನದಿಂದ ಕೇಳಿಸಿಕೊಳ್ಳುವ, ಪ್ರತಿಕ್ರಿಯಿಸುವ ಮನಸ್ಥಿತಿಯನ್ನು ಸರ್ಕಾರಗಳು ಹೊಂದಬೇಕು. ಅದು ಎಷ್ಟೇ ಚಿಕ್ಕ ಪ್ರತಿಭಟನೆಯಾದರೂ ಅದರ ಉದ್ದೇಶವನ್ನು ಸರ್ಕಾರಗಳು ಅರ್ಥಮಾಡಿಕೊಂಡರೆ ಆಗ ಜನರು ಸಹ ಹಿಂಸಾತ್ಮಕ ಪ್ರತಿಭಟನೆಗಳ ಮಾರ್ಗ ತುಳಿಯುವುದಿಲ್ಲ. ಆದರೆ ಸರ್ಕಾರಗಳೇ ಇಂತಹ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡುತ್ತಿರುವುದರಿಂದ ಇಂತಹ ಕ್ರೌರ್ಯಗಳು ಇನ್ನೂ ಹೆಚ್ಚಾಗುತ್ತಿವೆ.

ಸರ್ಕಾರ ಮತ್ತು ಜನಸಾಮಾನ್ಯರು ಇಬ್ಬರು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು. ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಹಾಗೆಯೇ ನಮ್ಮ ಪರಿಸರವನ್ನು ಸ್ವಚ್ಛ ಮತ್ತು ಸುಂದರವಾಗಿಟ್ಟುಕೊಳ್ಳಬೇಕು. ಆಗ ನಾವು ಮಾದರಿ ರಾಜ್ಯವಾಗಲು ಸಾಧ್ಯ..

ಸುಟ್ಟು ಕರಕಲಾದ ಬಸನ್ನು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮೆಜೆಸ್ಟಿಕ್‍ಗೆ ತಂದು ನಿಲ್ಲಿಸಿ ಅದರ ಮೇಲೆ ಬ್ಯಾನರ್ ಹಾಕಿ ಸಾರ್ವಜನಿಕ ಪ್ರದರ್ಶನಕ್ಕಿಟ್ಟಿದ್ದಾರೆ. ಇದನ್ನು ನೋಡಿದ ಜನರಿಗೆ ಅರ್ಥವಾಗಲಿ ಎಂದು.. ಈಗಲಾದರೂ ಎಚ್ಚೆತ್ತುಕೊಳ್ಳೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...