Homeಪುಸ್ತಕ ವಿಮರ್ಶೆವೋಲ್ಗಾ ಗಂಗಾ ರಾಹುಲ ಸಾಂಕೃತ್ಯಾಯನ

ವೋಲ್ಗಾ ಗಂಗಾ ರಾಹುಲ ಸಾಂಕೃತ್ಯಾಯನ

- Advertisement -
- Advertisement -

“ಮಾನವ ಸಮಾಜ ಒಮ್ಮೆಲೇ ಇಂದಿನ ಪರಿಸ್ಥಿತಿಗೆ ತಲುಪಲಿಲ್ಲ. ಈ ಸ್ಥಿತಿಗೆ ತಲುಪಬೇಕಾದರೆ ಅದು ಅನೇಕಾನೇಕ ಸಂಘರ್ಷಗಳನ್ನು ಎದುರಿಸಬೇಕಾಯಿತು” ಎಂದೇ ಪ್ರಾರಂಭವಾಗುವ ಈ ಕೃತಿ ಕತೆಗಳೆಂದು ಕರೆಯಿಸಿಕೊಳ್ಳುವ ಮಾನವ ಸಮಾಜದ ಇತಿಹಾಸದ ಭಿತ್ತಿ ಚಿತ್ರಗಳು.

ಇಪ್ಪತ್ತು ಕತೆಗಳ ಸಂಕಲನ.
ಇಂದು ನಾವು ಕಾಣುತ್ತಿರುವಂತೆ ಸಮಾಜವಿರಲಿ, ಕುಟುಂಬವೂ ಇರಲಿಲ್ಲ ಮತ್ತು ಕುಟುಂಬದ ಸದಸ್ಯರ ಸಂಬಂಧವೂ ಇರಲಿಲ್ಲ. ತಾಯಿ, ಮಗು, ಸೋದರ, ಸೋದರಿಯರ ಇಂದಿನ ಶಿಷ್ಟ ಸಂಬಂಧದ ಕನ್ನಡಕದಿಂದ ಅಂದಿನ ನಮ್ಮ ಪೂರ್ವಜರ ನೈಸರ್ಗಿಕ ವರ್ತನೆಗಳನ್ನು ನೋಡಿದರೆ, ಅಶ್ಲೀಲವೆಂದೋ, ಅಕ್ರಮವೆಂದೋ, ಅಸಭ್ಯವೆಂದೋ ತುಚ್ಛೀಕರಿಸಬಹುದು. ಆದರೆ ಸಮಾಜದ ವ್ಯವಸ್ಥೆಯು ವಿಕಸಿತವಾದಂತೆ, ಕುಟುಂಬವೂ, ಅದರ ಸದಸ್ಯರ ಸಂಬಂಧಗಳ ರೂಪುರೇಷೆಗಳೂ ವಿಕಸಿತಗೊಳ್ಳುತ್ತಾ ಬಂತು ಎಂಬುದನ್ನು ನಿರಾಕರಿಸಲಾಗದು. ಮಾನವನ ಸಾಮಾಜಿಕ ಮತ್ತು ಸಾಂಸ್ಕೃತಿಕ ಇತಿಹಾಸಗಳ ಸಿಕ್ಕ ತುಣುಕುಗಳನ್ನು ಕತೆಗಳ ರೂಪದಲ್ಲಿ ಕಟ್ಟಿಕೊಡುವ ಸಾಂಕೃತ್ಯಾಯನ ಬಹುದೊಡ್ಡ ಪಂಡಿತರು.

ತುಂಡುತುಂಡಾಗಿ ಸಿಕ್ಕಿರುವ ಇತಿಹಾಸದ ದಾಖಲೆಗಳನ್ನು ಜೋಡಿಸುವ ಕೊಂಡಿಗಳನ್ನು ಕಲ್ಪಿಸಿರುವ ಕತೆಗಾರನ ಕಲ್ಪನಾಶಕ್ತಿಗಿಂತ ಕಾಣದಿರುವ ಇತಿಹಾಸದ ಗ್ರಹಿಕೆ ತೋರುತ್ತದೆ.

ನಿಶಾ, ಮೊದಲ ಕತೆ. ವೋಲ್ಗಾ ನದಿಯ ತಟದಲ್ಲಿ ಕ್ರಿ.ಪೂ.600ರ ಜೀವನವನ್ನು ತೆರೆದಿಡುತ್ತದೆ.

ಹಾಗೆಯೇ ವೇದ, ಬ್ರಾಹ್ಮಣ, ಉಪನಿಷತ್ತುಗಳನ್ನೆಲ್ಲಾ ಜಾಲಾಡುವ ಸಾಂಕೃತ್ಯಾಯನ ವಿವಿಧ ಭೂಭಾಗಗಳಲ್ಲಿ ಮಾನವನ ವಿವಿಧ ಜನಾಂಗಗಳು ಬಾಳಿರುವ ರೀತಿಗಳನ್ನು, ಎದುರಿಸಿರುವ ಸಂಘರ್ಷಗಳನ್ನು ಮತ್ತು ಅಳವಡಿಸಿಕೊಂಡಿರುವ ವ್ಯವಸ್ಥೆಗಳನ್ನು ಕಥಿಸುತ್ತಾರೆ.
1942ರಲ್ಲಿ ಸಾಂಕೃತ್ಯಾಯನ ಬರೆದ ಈ ಕೃತಿಗೆ ಸನಾತನಿಗಳು ಕೆಂಡಕಾರಿದ್ದರು. ಬಹುವಾಗಿ ನಿಂದಿಸಿದ್ದರು. ಆದರೆ ಈ ಕೃತಿಯನ್ನು ಸಮರ್ಥಿಸಲು ಅಥವಾ ಖಂಡಿಸಲು ಯಾರಿಗಾದರೂ ಆಳವಾದ ಅಧ್ಯಯನವಿರಬೇಕು. ಏಕೆಂದರೆ ಇವರ ಅಗಾಧ ಓದಿನ ಹಿನ್ನೆಲೆ ಮತ್ತು ಅಧ್ಯಯನ ವ್ಯಾಪ್ತಿಯನ್ನು ನಗ್ನವಾದಿ ವೇದನಿಂದಕ ಎಂದು ದೂಷಿಸಿದರೆ ಅದೊಂದು ಪೂರ್ವಾಗ್ರಹ ಪೀಡಿತ ಮನಸ್ಕರ ಅಸಹನೆಯ ಪ್ರದರ್ಶನವಷ್ಟೇ ಆಗುತ್ತದೆ.

ಬರಿಯ ಗ್ರಂಥಾಧ್ಯಯನ ಮಾತ್ರವಲ್ಲದೇ ತಾವೇ ಅಲೆದಾಟದಲ್ಲಿ ತೊಡಗಿದ್ದರ ಪರಿಣಾಮ ಜೀವನವಿಧಾನ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳು ವೋಲ್ಗಾ ಗಂಗಾದಲ್ಲಿ ಹರಳುಗಟ್ಟಿದೆ. ಇತಿಹಾಸ, ತತ್ವಶಾಸ್ತ್ರ, ವಿಜ್ಞಾನ, ರಾಜನೀತಿ, ಸಂಸ್ಕೃತಿ, ಸಮಾಜ ವಿಜ್ಞಾನ ಎಲ್ಲವೂ ಕತೆಗಳ ತಳಪಾಯಗಳೇ. ಹಾಗಾಗಿ ತಿಳಿವಳಿಕೆಯ ಕೊರತೆಗಳು ಕತೆಗಳನ್ನು ಕ್ಲಿಷ್ಟಗೊಳಿಸುತ್ತವೆ. ತಲೆಬಾಲ ಅರ್ಥವಾಗದೇ ಹೋಗಬಹುದು. ಏಕೆಂದರೆ ಇಂದಿನ ಸಮಾಜದ ಕನ್ನಡಕದಿಂದ ನೋಡಲಾಗುವುದಿಲ್ಲವಲ್ಲ!

ಈ ಲೇಖನದ ಉದ್ದೇಶ ಅವರ ಕತೆಗಳಲ್ಲಿರುವ ಅಂಶಗಳನ್ನು ಚರ್ಚಿಸುವುದಾಗಲಿ, ವಿಷಯಗಳನ್ನು ಮುಂದಿಡುವುದಾಗಲಿ ಅಲ್ಲ. ಬರಿದೇ ಪ್ರವೇಶಿಕೆಯನ್ನು ಒದಗಿಸುವುದಕ್ಕೆ. ಕತೆಗಳ ನಾಟಕೀಯತೆಯನ್ನು ಊಹಿತಸತ್ಯ (ಹೈಪೋತಿಸೀಸ್) ರೀತಿಯಲ್ಲಿ ಗ್ರಹಿಸಬೇಕಾಗಿರುವ ಮುನ್ನೆಚ್ಚರಿಕೆಯನ್ನು ಹೊಂದುವುದಕ್ಕೆ.

ವಿಶ್ವದ 7500 ವರ್ಷಗಳ ಇತಿಹಾಸದಲ್ಲಿ ಮಾನವನ ತುಳಿದಿಟ್ಟ ಭಾವನೆಗಳ ಹಾಗೂ ಕಲ್ಪನೆಗಳ ಸುಂದರ ಕತೆಗಳ ರೂಪದ ಈ ಪುಸ್ತಕ ನವಕರ್ನಾಟಕದಲ್ಲಿ ಸಿಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...