Homeಪುಸ್ತಕ ವಿಮರ್ಶೆವೋಲ್ಗಾ ಗಂಗಾ ರಾಹುಲ ಸಾಂಕೃತ್ಯಾಯನ

ವೋಲ್ಗಾ ಗಂಗಾ ರಾಹುಲ ಸಾಂಕೃತ್ಯಾಯನ

- Advertisement -
- Advertisement -

“ಮಾನವ ಸಮಾಜ ಒಮ್ಮೆಲೇ ಇಂದಿನ ಪರಿಸ್ಥಿತಿಗೆ ತಲುಪಲಿಲ್ಲ. ಈ ಸ್ಥಿತಿಗೆ ತಲುಪಬೇಕಾದರೆ ಅದು ಅನೇಕಾನೇಕ ಸಂಘರ್ಷಗಳನ್ನು ಎದುರಿಸಬೇಕಾಯಿತು” ಎಂದೇ ಪ್ರಾರಂಭವಾಗುವ ಈ ಕೃತಿ ಕತೆಗಳೆಂದು ಕರೆಯಿಸಿಕೊಳ್ಳುವ ಮಾನವ ಸಮಾಜದ ಇತಿಹಾಸದ ಭಿತ್ತಿ ಚಿತ್ರಗಳು.

ಇಪ್ಪತ್ತು ಕತೆಗಳ ಸಂಕಲನ.
ಇಂದು ನಾವು ಕಾಣುತ್ತಿರುವಂತೆ ಸಮಾಜವಿರಲಿ, ಕುಟುಂಬವೂ ಇರಲಿಲ್ಲ ಮತ್ತು ಕುಟುಂಬದ ಸದಸ್ಯರ ಸಂಬಂಧವೂ ಇರಲಿಲ್ಲ. ತಾಯಿ, ಮಗು, ಸೋದರ, ಸೋದರಿಯರ ಇಂದಿನ ಶಿಷ್ಟ ಸಂಬಂಧದ ಕನ್ನಡಕದಿಂದ ಅಂದಿನ ನಮ್ಮ ಪೂರ್ವಜರ ನೈಸರ್ಗಿಕ ವರ್ತನೆಗಳನ್ನು ನೋಡಿದರೆ, ಅಶ್ಲೀಲವೆಂದೋ, ಅಕ್ರಮವೆಂದೋ, ಅಸಭ್ಯವೆಂದೋ ತುಚ್ಛೀಕರಿಸಬಹುದು. ಆದರೆ ಸಮಾಜದ ವ್ಯವಸ್ಥೆಯು ವಿಕಸಿತವಾದಂತೆ, ಕುಟುಂಬವೂ, ಅದರ ಸದಸ್ಯರ ಸಂಬಂಧಗಳ ರೂಪುರೇಷೆಗಳೂ ವಿಕಸಿತಗೊಳ್ಳುತ್ತಾ ಬಂತು ಎಂಬುದನ್ನು ನಿರಾಕರಿಸಲಾಗದು. ಮಾನವನ ಸಾಮಾಜಿಕ ಮತ್ತು ಸಾಂಸ್ಕೃತಿಕ ಇತಿಹಾಸಗಳ ಸಿಕ್ಕ ತುಣುಕುಗಳನ್ನು ಕತೆಗಳ ರೂಪದಲ್ಲಿ ಕಟ್ಟಿಕೊಡುವ ಸಾಂಕೃತ್ಯಾಯನ ಬಹುದೊಡ್ಡ ಪಂಡಿತರು.

ತುಂಡುತುಂಡಾಗಿ ಸಿಕ್ಕಿರುವ ಇತಿಹಾಸದ ದಾಖಲೆಗಳನ್ನು ಜೋಡಿಸುವ ಕೊಂಡಿಗಳನ್ನು ಕಲ್ಪಿಸಿರುವ ಕತೆಗಾರನ ಕಲ್ಪನಾಶಕ್ತಿಗಿಂತ ಕಾಣದಿರುವ ಇತಿಹಾಸದ ಗ್ರಹಿಕೆ ತೋರುತ್ತದೆ.

ನಿಶಾ, ಮೊದಲ ಕತೆ. ವೋಲ್ಗಾ ನದಿಯ ತಟದಲ್ಲಿ ಕ್ರಿ.ಪೂ.600ರ ಜೀವನವನ್ನು ತೆರೆದಿಡುತ್ತದೆ.

ಹಾಗೆಯೇ ವೇದ, ಬ್ರಾಹ್ಮಣ, ಉಪನಿಷತ್ತುಗಳನ್ನೆಲ್ಲಾ ಜಾಲಾಡುವ ಸಾಂಕೃತ್ಯಾಯನ ವಿವಿಧ ಭೂಭಾಗಗಳಲ್ಲಿ ಮಾನವನ ವಿವಿಧ ಜನಾಂಗಗಳು ಬಾಳಿರುವ ರೀತಿಗಳನ್ನು, ಎದುರಿಸಿರುವ ಸಂಘರ್ಷಗಳನ್ನು ಮತ್ತು ಅಳವಡಿಸಿಕೊಂಡಿರುವ ವ್ಯವಸ್ಥೆಗಳನ್ನು ಕಥಿಸುತ್ತಾರೆ.
1942ರಲ್ಲಿ ಸಾಂಕೃತ್ಯಾಯನ ಬರೆದ ಈ ಕೃತಿಗೆ ಸನಾತನಿಗಳು ಕೆಂಡಕಾರಿದ್ದರು. ಬಹುವಾಗಿ ನಿಂದಿಸಿದ್ದರು. ಆದರೆ ಈ ಕೃತಿಯನ್ನು ಸಮರ್ಥಿಸಲು ಅಥವಾ ಖಂಡಿಸಲು ಯಾರಿಗಾದರೂ ಆಳವಾದ ಅಧ್ಯಯನವಿರಬೇಕು. ಏಕೆಂದರೆ ಇವರ ಅಗಾಧ ಓದಿನ ಹಿನ್ನೆಲೆ ಮತ್ತು ಅಧ್ಯಯನ ವ್ಯಾಪ್ತಿಯನ್ನು ನಗ್ನವಾದಿ ವೇದನಿಂದಕ ಎಂದು ದೂಷಿಸಿದರೆ ಅದೊಂದು ಪೂರ್ವಾಗ್ರಹ ಪೀಡಿತ ಮನಸ್ಕರ ಅಸಹನೆಯ ಪ್ರದರ್ಶನವಷ್ಟೇ ಆಗುತ್ತದೆ.

ಬರಿಯ ಗ್ರಂಥಾಧ್ಯಯನ ಮಾತ್ರವಲ್ಲದೇ ತಾವೇ ಅಲೆದಾಟದಲ್ಲಿ ತೊಡಗಿದ್ದರ ಪರಿಣಾಮ ಜೀವನವಿಧಾನ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳು ವೋಲ್ಗಾ ಗಂಗಾದಲ್ಲಿ ಹರಳುಗಟ್ಟಿದೆ. ಇತಿಹಾಸ, ತತ್ವಶಾಸ್ತ್ರ, ವಿಜ್ಞಾನ, ರಾಜನೀತಿ, ಸಂಸ್ಕೃತಿ, ಸಮಾಜ ವಿಜ್ಞಾನ ಎಲ್ಲವೂ ಕತೆಗಳ ತಳಪಾಯಗಳೇ. ಹಾಗಾಗಿ ತಿಳಿವಳಿಕೆಯ ಕೊರತೆಗಳು ಕತೆಗಳನ್ನು ಕ್ಲಿಷ್ಟಗೊಳಿಸುತ್ತವೆ. ತಲೆಬಾಲ ಅರ್ಥವಾಗದೇ ಹೋಗಬಹುದು. ಏಕೆಂದರೆ ಇಂದಿನ ಸಮಾಜದ ಕನ್ನಡಕದಿಂದ ನೋಡಲಾಗುವುದಿಲ್ಲವಲ್ಲ!

ಈ ಲೇಖನದ ಉದ್ದೇಶ ಅವರ ಕತೆಗಳಲ್ಲಿರುವ ಅಂಶಗಳನ್ನು ಚರ್ಚಿಸುವುದಾಗಲಿ, ವಿಷಯಗಳನ್ನು ಮುಂದಿಡುವುದಾಗಲಿ ಅಲ್ಲ. ಬರಿದೇ ಪ್ರವೇಶಿಕೆಯನ್ನು ಒದಗಿಸುವುದಕ್ಕೆ. ಕತೆಗಳ ನಾಟಕೀಯತೆಯನ್ನು ಊಹಿತಸತ್ಯ (ಹೈಪೋತಿಸೀಸ್) ರೀತಿಯಲ್ಲಿ ಗ್ರಹಿಸಬೇಕಾಗಿರುವ ಮುನ್ನೆಚ್ಚರಿಕೆಯನ್ನು ಹೊಂದುವುದಕ್ಕೆ.

ವಿಶ್ವದ 7500 ವರ್ಷಗಳ ಇತಿಹಾಸದಲ್ಲಿ ಮಾನವನ ತುಳಿದಿಟ್ಟ ಭಾವನೆಗಳ ಹಾಗೂ ಕಲ್ಪನೆಗಳ ಸುಂದರ ಕತೆಗಳ ರೂಪದ ಈ ಪುಸ್ತಕ ನವಕರ್ನಾಟಕದಲ್ಲಿ ಸಿಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...