Homeಪುಸ್ತಕ ವಿಮರ್ಶೆವೋಲ್ಗಾ ಗಂಗಾ ರಾಹುಲ ಸಾಂಕೃತ್ಯಾಯನ

ವೋಲ್ಗಾ ಗಂಗಾ ರಾಹುಲ ಸಾಂಕೃತ್ಯಾಯನ

- Advertisement -
- Advertisement -

“ಮಾನವ ಸಮಾಜ ಒಮ್ಮೆಲೇ ಇಂದಿನ ಪರಿಸ್ಥಿತಿಗೆ ತಲುಪಲಿಲ್ಲ. ಈ ಸ್ಥಿತಿಗೆ ತಲುಪಬೇಕಾದರೆ ಅದು ಅನೇಕಾನೇಕ ಸಂಘರ್ಷಗಳನ್ನು ಎದುರಿಸಬೇಕಾಯಿತು” ಎಂದೇ ಪ್ರಾರಂಭವಾಗುವ ಈ ಕೃತಿ ಕತೆಗಳೆಂದು ಕರೆಯಿಸಿಕೊಳ್ಳುವ ಮಾನವ ಸಮಾಜದ ಇತಿಹಾಸದ ಭಿತ್ತಿ ಚಿತ್ರಗಳು.

ಇಪ್ಪತ್ತು ಕತೆಗಳ ಸಂಕಲನ.
ಇಂದು ನಾವು ಕಾಣುತ್ತಿರುವಂತೆ ಸಮಾಜವಿರಲಿ, ಕುಟುಂಬವೂ ಇರಲಿಲ್ಲ ಮತ್ತು ಕುಟುಂಬದ ಸದಸ್ಯರ ಸಂಬಂಧವೂ ಇರಲಿಲ್ಲ. ತಾಯಿ, ಮಗು, ಸೋದರ, ಸೋದರಿಯರ ಇಂದಿನ ಶಿಷ್ಟ ಸಂಬಂಧದ ಕನ್ನಡಕದಿಂದ ಅಂದಿನ ನಮ್ಮ ಪೂರ್ವಜರ ನೈಸರ್ಗಿಕ ವರ್ತನೆಗಳನ್ನು ನೋಡಿದರೆ, ಅಶ್ಲೀಲವೆಂದೋ, ಅಕ್ರಮವೆಂದೋ, ಅಸಭ್ಯವೆಂದೋ ತುಚ್ಛೀಕರಿಸಬಹುದು. ಆದರೆ ಸಮಾಜದ ವ್ಯವಸ್ಥೆಯು ವಿಕಸಿತವಾದಂತೆ, ಕುಟುಂಬವೂ, ಅದರ ಸದಸ್ಯರ ಸಂಬಂಧಗಳ ರೂಪುರೇಷೆಗಳೂ ವಿಕಸಿತಗೊಳ್ಳುತ್ತಾ ಬಂತು ಎಂಬುದನ್ನು ನಿರಾಕರಿಸಲಾಗದು. ಮಾನವನ ಸಾಮಾಜಿಕ ಮತ್ತು ಸಾಂಸ್ಕೃತಿಕ ಇತಿಹಾಸಗಳ ಸಿಕ್ಕ ತುಣುಕುಗಳನ್ನು ಕತೆಗಳ ರೂಪದಲ್ಲಿ ಕಟ್ಟಿಕೊಡುವ ಸಾಂಕೃತ್ಯಾಯನ ಬಹುದೊಡ್ಡ ಪಂಡಿತರು.

ತುಂಡುತುಂಡಾಗಿ ಸಿಕ್ಕಿರುವ ಇತಿಹಾಸದ ದಾಖಲೆಗಳನ್ನು ಜೋಡಿಸುವ ಕೊಂಡಿಗಳನ್ನು ಕಲ್ಪಿಸಿರುವ ಕತೆಗಾರನ ಕಲ್ಪನಾಶಕ್ತಿಗಿಂತ ಕಾಣದಿರುವ ಇತಿಹಾಸದ ಗ್ರಹಿಕೆ ತೋರುತ್ತದೆ.

ನಿಶಾ, ಮೊದಲ ಕತೆ. ವೋಲ್ಗಾ ನದಿಯ ತಟದಲ್ಲಿ ಕ್ರಿ.ಪೂ.600ರ ಜೀವನವನ್ನು ತೆರೆದಿಡುತ್ತದೆ.

ಹಾಗೆಯೇ ವೇದ, ಬ್ರಾಹ್ಮಣ, ಉಪನಿಷತ್ತುಗಳನ್ನೆಲ್ಲಾ ಜಾಲಾಡುವ ಸಾಂಕೃತ್ಯಾಯನ ವಿವಿಧ ಭೂಭಾಗಗಳಲ್ಲಿ ಮಾನವನ ವಿವಿಧ ಜನಾಂಗಗಳು ಬಾಳಿರುವ ರೀತಿಗಳನ್ನು, ಎದುರಿಸಿರುವ ಸಂಘರ್ಷಗಳನ್ನು ಮತ್ತು ಅಳವಡಿಸಿಕೊಂಡಿರುವ ವ್ಯವಸ್ಥೆಗಳನ್ನು ಕಥಿಸುತ್ತಾರೆ.
1942ರಲ್ಲಿ ಸಾಂಕೃತ್ಯಾಯನ ಬರೆದ ಈ ಕೃತಿಗೆ ಸನಾತನಿಗಳು ಕೆಂಡಕಾರಿದ್ದರು. ಬಹುವಾಗಿ ನಿಂದಿಸಿದ್ದರು. ಆದರೆ ಈ ಕೃತಿಯನ್ನು ಸಮರ್ಥಿಸಲು ಅಥವಾ ಖಂಡಿಸಲು ಯಾರಿಗಾದರೂ ಆಳವಾದ ಅಧ್ಯಯನವಿರಬೇಕು. ಏಕೆಂದರೆ ಇವರ ಅಗಾಧ ಓದಿನ ಹಿನ್ನೆಲೆ ಮತ್ತು ಅಧ್ಯಯನ ವ್ಯಾಪ್ತಿಯನ್ನು ನಗ್ನವಾದಿ ವೇದನಿಂದಕ ಎಂದು ದೂಷಿಸಿದರೆ ಅದೊಂದು ಪೂರ್ವಾಗ್ರಹ ಪೀಡಿತ ಮನಸ್ಕರ ಅಸಹನೆಯ ಪ್ರದರ್ಶನವಷ್ಟೇ ಆಗುತ್ತದೆ.

ಬರಿಯ ಗ್ರಂಥಾಧ್ಯಯನ ಮಾತ್ರವಲ್ಲದೇ ತಾವೇ ಅಲೆದಾಟದಲ್ಲಿ ತೊಡಗಿದ್ದರ ಪರಿಣಾಮ ಜೀವನವಿಧಾನ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳು ವೋಲ್ಗಾ ಗಂಗಾದಲ್ಲಿ ಹರಳುಗಟ್ಟಿದೆ. ಇತಿಹಾಸ, ತತ್ವಶಾಸ್ತ್ರ, ವಿಜ್ಞಾನ, ರಾಜನೀತಿ, ಸಂಸ್ಕೃತಿ, ಸಮಾಜ ವಿಜ್ಞಾನ ಎಲ್ಲವೂ ಕತೆಗಳ ತಳಪಾಯಗಳೇ. ಹಾಗಾಗಿ ತಿಳಿವಳಿಕೆಯ ಕೊರತೆಗಳು ಕತೆಗಳನ್ನು ಕ್ಲಿಷ್ಟಗೊಳಿಸುತ್ತವೆ. ತಲೆಬಾಲ ಅರ್ಥವಾಗದೇ ಹೋಗಬಹುದು. ಏಕೆಂದರೆ ಇಂದಿನ ಸಮಾಜದ ಕನ್ನಡಕದಿಂದ ನೋಡಲಾಗುವುದಿಲ್ಲವಲ್ಲ!

ಈ ಲೇಖನದ ಉದ್ದೇಶ ಅವರ ಕತೆಗಳಲ್ಲಿರುವ ಅಂಶಗಳನ್ನು ಚರ್ಚಿಸುವುದಾಗಲಿ, ವಿಷಯಗಳನ್ನು ಮುಂದಿಡುವುದಾಗಲಿ ಅಲ್ಲ. ಬರಿದೇ ಪ್ರವೇಶಿಕೆಯನ್ನು ಒದಗಿಸುವುದಕ್ಕೆ. ಕತೆಗಳ ನಾಟಕೀಯತೆಯನ್ನು ಊಹಿತಸತ್ಯ (ಹೈಪೋತಿಸೀಸ್) ರೀತಿಯಲ್ಲಿ ಗ್ರಹಿಸಬೇಕಾಗಿರುವ ಮುನ್ನೆಚ್ಚರಿಕೆಯನ್ನು ಹೊಂದುವುದಕ್ಕೆ.

ವಿಶ್ವದ 7500 ವರ್ಷಗಳ ಇತಿಹಾಸದಲ್ಲಿ ಮಾನವನ ತುಳಿದಿಟ್ಟ ಭಾವನೆಗಳ ಹಾಗೂ ಕಲ್ಪನೆಗಳ ಸುಂದರ ಕತೆಗಳ ರೂಪದ ಈ ಪುಸ್ತಕ ನವಕರ್ನಾಟಕದಲ್ಲಿ ಸಿಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...