Homeಕರ್ನಾಟಕಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ - ಆರೋಪ

ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ

- Advertisement -
- Advertisement -

ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್‌ ಭೂಷಣ್‌ ಅವರು ಸ್ಥಾಪಿಸಿರುವ ಸ್ವರಾಜ್ ಅಭಿಯಾನ್‌ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನಲ್ಲಿ ಲಾಕ್‌ಡೌನ್‌ನಿಂದ ಸಂತ್ರಸ್ತರಾದ ಕಾರ್ಮಿಕರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸುವಾಗ ಆರ್‌ಎಸ್‌ಎಸ್ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ಜರುಗಿದೆ.

ಕಳೆದ ವಾರ ಏಪ್ರಿಲ್ 04 ರಂದು ಬೆಂಗಳೂರಿನ ದಾಸರಹಳ್ಳಿಯಲ್ಲಿ ಕೊರೊನಾ ಲಾಕ್‌ಡೌನ್ ಮಧ್ಯೆ ಪರಿಹಾರ ಸಾಮಗ್ರಿಗಳನ್ನು ವಿತರಿಸುವಾಗ ಈ ಘಟನೆ ನಡೆದಿದೆ. ಅಪರಿಚಿತ ಜನರು ಸ್ವರಾಜ್ ಅಭಿಯಾನದ ಕಾರ್ಯಕರ್ತೆಯಾದ ಝರೀನ್ ತಾಜ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು “ದಿ ಹಿಂದೂ” ವರದಿ ಮಾಡಿದೆ. ದಾಳಿಕೋರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಎಂದು ತಾಜ್ ಆರೋಪಿಸಿದ್ದಾರೆ.

ಈ ಘಟನೆಯಲ್ಲಿ ಅವರ ಮಗ ಮತ್ತು ಅವನ ಸ್ನೇಹಿತ ಸೇರಿದಂತೆ ನಾಲ್ವರು ಕುಟುಂಬ ಸದಸ್ಯರು ಗಾಯಗೊಂಡಿದ್ದಾರೆ ಎಂದು ತಾಜ್ ಹೇಳಿದ್ದಾರೆ. “ಆರೋಗ್ಯ ಇಲಾಖೆಯು ಪರಿಶೀಲನೆ ನಡೆಸಿ ಇದನ್ನು ಸುರಕ್ಷಿತವೆಂದು ಪ್ರಮಾಣಗೊಳಿಸುವವರೆಗೂ ಪಡಿತರವನ್ನು ವಿತರಿಸಲು ಬಿಡುವುದಿಲ್ಲ ಎಂದು ಧಮಕಿ ಹಾಕಿದ ಆರ್‌ಎಸ್‌ಎಸ್‌ ಕಾರ್ಯಕರ್ತರು ನಾವು ಉದ್ದೇಶಪೂರ್ವಕವಾಗಿ ವೈರಸ್ ಹರಡುತ್ತಿದ್ದೇವೆ ಎಂದು ನಿಂದಿಸಿದ್ದಾರೆ” ಎಂದು ತಾಜ್ ಕಿಡಿಕಾರಿದ್ದಾರೆ. ದಾಳಿ ಮಾಡಿದ ನಂತರ ನಮ್ಮ ಮೇಲೆಯೇ ಪಡಿತರ ವಿತರಿಸುವಾಗ ಸಾಮಾಜಿಕ ಅಂತರವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ದೂರು ಸಹ ದಾಖಲಿಸಿದ್ದಾರೆ ಎಂದು ತಾಜ್‌ ತಿಳಿಸಿದ್ದಾರೆ.

ಈ ಬಗ್ಗೆ ಸ್ವರಾಜ್ ಅಭಿಯಾನ ಮುಖ್ಯಸ್ಥರಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ಹಲ್ಲೆಗೊಳಗಾದವರನ್ನು ಝರೀನ್ ತಾಜ್ ಅವರ ಪುತ್ರ ಹಾಗೂ ಸ್ವರಾಜ್ ಅಭಿಯಾನದ ಬೆಂಗಳೂರು ಜಿಲ್ಲಾ ಕಾರ್ಯದರ್ಶಿಯಾದ ಸೈಯದ್ ತಬ್ರೆಜ್, ಕಿರಣ್, ಜುನೈದ್, ರಿಯಾಜ್, ಫಿರೋಜ್ ಮತ್ತು ಅಮ್ಜದ್ ಎಂದು ಗುರುತಿಸಲಾಗಿದೆ.

ಈ ಕುರಿತು ಝರಿನಾ ತಾಜ್‌ರವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಂದಕ್ಕೆ ಇಂತಹ ಅಡೆತಡೆಗಳು ನಡೆಯದಂತೆ ಕ್ರಮಕೈಗೊಳ್ಳುತ್ತೇವೆ ಎಂದು ಪೋಲಿಸರು ಭರವಸೆ ನೀಡಿದ್ದರು, ಆದರೆ ಸೋಮವಾರವೂ ಸಹ ಅವರು ಪಡಿತರವನ್ನು ವಿತರಿಸುವಾಗ, ಏಪ್ರಿಲ್ 4 ರಂದು ಎದುರಿಸಿದವರಿಗಿಂತ ಭಿನ್ನವಾದ ಆರು ಜನರ ಗುಂಪು ಕ್ರಿಕೆಟ್ ಬ್ಯಾಟ್ ಗಳಿಂದ ಹಲ್ಲೆ ಮಾಡಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಮತ್ತೊಂದು ದೂರು ನೀಡಲು ಹೋದರೆ ಪೊಲೀಸರು ರಾಜಿ ಮಾಡಿಕೊಳ್ಳಿ ಎಂದು ಒತ್ತಡ ಮಾಡುತ್ತಿದ್ದಾರೆ ಅವರು ಆರೋಪಿಸಿದ್ದಾರೆ.

“ನಮ್ಮಲ್ಲಿ ಐದು ಜನರು ತೀವ್ರವಾಗಿ ಗಾಯಗೊಂಡಿದ್ದೇವೆ, ನಾವು ಹಸಿದವರಿಗೆ ಸಹಾಯ ಮಾಡಲು ಬಯಸುವುದು ತಪ್ಪೇ?” ಎಂದು ತಾಜ್ ಹೇಳಿದ್ದಾರೆ.

“ಮುಸ್ಲಿಮರು ಪಡಿತರದಲ್ಲಿ ವಿಷವನ್ನು ನೀಡುತ್ತಿದ್ದಾರೆ, ನೀವು ಇಲ್ಲಿ ಆಹಾರವನ್ನು ತಲುಪಿಸುವಂತಿಲ್ಲ, ಕೂಡಲೆ ನೀವು ಕೊಳೆಗೇರಿ ಬಿಟ್ಟು ಬೇರೆಡೆಗೆ ಹೋಗಬೇಕು” ಎಂದು ಹಲ್ಲೆ ನಡೆಸಿದವರು ಹೇಳಿದ್ದಾರೆ ಎಂದು ತಾಜ್ ಆರೋಪಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಶಾಂಪುರದ ಡಾ.ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಕೋಮು ದ್ವೇಷವನ್ನು ಹರಡುವ ಯಾರೊಬ್ಬನ್ನೂ ಪೊಲೀಸರು ಸಹಿಸುವುದಿಲ್ಲ ಎಂದು ಬೆಂಗಳೂರು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಭೀಮಾಶಂಕರ್ ಗುಳೆದ್‌ ಹೇಳಿದ್ದಾರೆ. ಈ ವಿಷಯದಲ್ಲಿ ಪ್ರಕರಣ ದಾಖಲಿಸಿ ಮತ್ತು ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ. ಇದನ್ನು ಮೊದಲು ಏಕೆ ಮಾಡಲಾಗಿಲ್ಲ ಎಂದು ಪ್ರಶ್ನಿಸಿದಾಗ, ಸಂತ್ರಸ್ತರು ಪ್ರಕರಣ ದಾಖಲಿಸಲು ಬಯಸಿರಲಿಲ್ಲ ಎಂದು ಗುಳೆದ್‌ ಹೇಳಿದ್ದಾರೆ.

ಕಳೆದ ವಾರ, ಮುಸ್ಲಿಂ ಸಮುದಾಯದ ನಿಯೋಗವು, ಎಲ್ಲಾ ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದ್ವೇಷದ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡುವಂತೆ, ಮಹಾನಿರ್ದೇಶಕರು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಪ್ರವೀಣ್ ಸೂದ್ ಅವರಿಗೆ ಮನವಿ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...