Homeಕರ್ನಾಟಕಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ - ಆರೋಪ

ಕಾರ್ಮಿಕರಿಗೆ ಪಡಿತರ ವಿತರಿಸುತ್ತಿದ್ದ ಸ್ವರಾಜ್ ಅಭಿಯಾನದ ಕಾರ್ಯಕರ್ತರ ಮೇಲೆ RSS ಬೆಂಬಲಿಗರಿಂದ ಹಲ್ಲೆ – ಆರೋಪ

- Advertisement -
- Advertisement -

ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್‌ ಭೂಷಣ್‌ ಅವರು ಸ್ಥಾಪಿಸಿರುವ ಸ್ವರಾಜ್ ಅಭಿಯಾನ್‌ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನಲ್ಲಿ ಲಾಕ್‌ಡೌನ್‌ನಿಂದ ಸಂತ್ರಸ್ತರಾದ ಕಾರ್ಮಿಕರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸುವಾಗ ಆರ್‌ಎಸ್‌ಎಸ್ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ಜರುಗಿದೆ.

ಕಳೆದ ವಾರ ಏಪ್ರಿಲ್ 04 ರಂದು ಬೆಂಗಳೂರಿನ ದಾಸರಹಳ್ಳಿಯಲ್ಲಿ ಕೊರೊನಾ ಲಾಕ್‌ಡೌನ್ ಮಧ್ಯೆ ಪರಿಹಾರ ಸಾಮಗ್ರಿಗಳನ್ನು ವಿತರಿಸುವಾಗ ಈ ಘಟನೆ ನಡೆದಿದೆ. ಅಪರಿಚಿತ ಜನರು ಸ್ವರಾಜ್ ಅಭಿಯಾನದ ಕಾರ್ಯಕರ್ತೆಯಾದ ಝರೀನ್ ತಾಜ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು “ದಿ ಹಿಂದೂ” ವರದಿ ಮಾಡಿದೆ. ದಾಳಿಕೋರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಎಂದು ತಾಜ್ ಆರೋಪಿಸಿದ್ದಾರೆ.

ಈ ಘಟನೆಯಲ್ಲಿ ಅವರ ಮಗ ಮತ್ತು ಅವನ ಸ್ನೇಹಿತ ಸೇರಿದಂತೆ ನಾಲ್ವರು ಕುಟುಂಬ ಸದಸ್ಯರು ಗಾಯಗೊಂಡಿದ್ದಾರೆ ಎಂದು ತಾಜ್ ಹೇಳಿದ್ದಾರೆ. “ಆರೋಗ್ಯ ಇಲಾಖೆಯು ಪರಿಶೀಲನೆ ನಡೆಸಿ ಇದನ್ನು ಸುರಕ್ಷಿತವೆಂದು ಪ್ರಮಾಣಗೊಳಿಸುವವರೆಗೂ ಪಡಿತರವನ್ನು ವಿತರಿಸಲು ಬಿಡುವುದಿಲ್ಲ ಎಂದು ಧಮಕಿ ಹಾಕಿದ ಆರ್‌ಎಸ್‌ಎಸ್‌ ಕಾರ್ಯಕರ್ತರು ನಾವು ಉದ್ದೇಶಪೂರ್ವಕವಾಗಿ ವೈರಸ್ ಹರಡುತ್ತಿದ್ದೇವೆ ಎಂದು ನಿಂದಿಸಿದ್ದಾರೆ” ಎಂದು ತಾಜ್ ಕಿಡಿಕಾರಿದ್ದಾರೆ. ದಾಳಿ ಮಾಡಿದ ನಂತರ ನಮ್ಮ ಮೇಲೆಯೇ ಪಡಿತರ ವಿತರಿಸುವಾಗ ಸಾಮಾಜಿಕ ಅಂತರವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ದೂರು ಸಹ ದಾಖಲಿಸಿದ್ದಾರೆ ಎಂದು ತಾಜ್‌ ತಿಳಿಸಿದ್ದಾರೆ.

ಈ ಬಗ್ಗೆ ಸ್ವರಾಜ್ ಅಭಿಯಾನ ಮುಖ್ಯಸ್ಥರಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ಹಲ್ಲೆಗೊಳಗಾದವರನ್ನು ಝರೀನ್ ತಾಜ್ ಅವರ ಪುತ್ರ ಹಾಗೂ ಸ್ವರಾಜ್ ಅಭಿಯಾನದ ಬೆಂಗಳೂರು ಜಿಲ್ಲಾ ಕಾರ್ಯದರ್ಶಿಯಾದ ಸೈಯದ್ ತಬ್ರೆಜ್, ಕಿರಣ್, ಜುನೈದ್, ರಿಯಾಜ್, ಫಿರೋಜ್ ಮತ್ತು ಅಮ್ಜದ್ ಎಂದು ಗುರುತಿಸಲಾಗಿದೆ.

ಈ ಕುರಿತು ಝರಿನಾ ತಾಜ್‌ರವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಂದಕ್ಕೆ ಇಂತಹ ಅಡೆತಡೆಗಳು ನಡೆಯದಂತೆ ಕ್ರಮಕೈಗೊಳ್ಳುತ್ತೇವೆ ಎಂದು ಪೋಲಿಸರು ಭರವಸೆ ನೀಡಿದ್ದರು, ಆದರೆ ಸೋಮವಾರವೂ ಸಹ ಅವರು ಪಡಿತರವನ್ನು ವಿತರಿಸುವಾಗ, ಏಪ್ರಿಲ್ 4 ರಂದು ಎದುರಿಸಿದವರಿಗಿಂತ ಭಿನ್ನವಾದ ಆರು ಜನರ ಗುಂಪು ಕ್ರಿಕೆಟ್ ಬ್ಯಾಟ್ ಗಳಿಂದ ಹಲ್ಲೆ ಮಾಡಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಮತ್ತೊಂದು ದೂರು ನೀಡಲು ಹೋದರೆ ಪೊಲೀಸರು ರಾಜಿ ಮಾಡಿಕೊಳ್ಳಿ ಎಂದು ಒತ್ತಡ ಮಾಡುತ್ತಿದ್ದಾರೆ ಅವರು ಆರೋಪಿಸಿದ್ದಾರೆ.

“ನಮ್ಮಲ್ಲಿ ಐದು ಜನರು ತೀವ್ರವಾಗಿ ಗಾಯಗೊಂಡಿದ್ದೇವೆ, ನಾವು ಹಸಿದವರಿಗೆ ಸಹಾಯ ಮಾಡಲು ಬಯಸುವುದು ತಪ್ಪೇ?” ಎಂದು ತಾಜ್ ಹೇಳಿದ್ದಾರೆ.

“ಮುಸ್ಲಿಮರು ಪಡಿತರದಲ್ಲಿ ವಿಷವನ್ನು ನೀಡುತ್ತಿದ್ದಾರೆ, ನೀವು ಇಲ್ಲಿ ಆಹಾರವನ್ನು ತಲುಪಿಸುವಂತಿಲ್ಲ, ಕೂಡಲೆ ನೀವು ಕೊಳೆಗೇರಿ ಬಿಟ್ಟು ಬೇರೆಡೆಗೆ ಹೋಗಬೇಕು” ಎಂದು ಹಲ್ಲೆ ನಡೆಸಿದವರು ಹೇಳಿದ್ದಾರೆ ಎಂದು ತಾಜ್ ಆರೋಪಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಶಾಂಪುರದ ಡಾ.ಅಂಬೇಡ್ಕರ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಕೋಮು ದ್ವೇಷವನ್ನು ಹರಡುವ ಯಾರೊಬ್ಬನ್ನೂ ಪೊಲೀಸರು ಸಹಿಸುವುದಿಲ್ಲ ಎಂದು ಬೆಂಗಳೂರು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಭೀಮಾಶಂಕರ್ ಗುಳೆದ್‌ ಹೇಳಿದ್ದಾರೆ. ಈ ವಿಷಯದಲ್ಲಿ ಪ್ರಕರಣ ದಾಖಲಿಸಿ ಮತ್ತು ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ. ಇದನ್ನು ಮೊದಲು ಏಕೆ ಮಾಡಲಾಗಿಲ್ಲ ಎಂದು ಪ್ರಶ್ನಿಸಿದಾಗ, ಸಂತ್ರಸ್ತರು ಪ್ರಕರಣ ದಾಖಲಿಸಲು ಬಯಸಿರಲಿಲ್ಲ ಎಂದು ಗುಳೆದ್‌ ಹೇಳಿದ್ದಾರೆ.

ಕಳೆದ ವಾರ, ಮುಸ್ಲಿಂ ಸಮುದಾಯದ ನಿಯೋಗವು, ಎಲ್ಲಾ ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದ್ವೇಷದ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡುವಂತೆ, ಮಹಾನಿರ್ದೇಶಕರು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಪ್ರವೀಣ್ ಸೂದ್ ಅವರಿಗೆ ಮನವಿ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...